Homeಮುಖಪುಟಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ: ನಿರ್ಭಯ ಪ್ರಕರಣದ ನಂತರ ನ್ಯಾ. ವರ್ಮಾ ಸಮಿತಿ ವರದಿ ಏನು ಹೇಳುತ್ತದೆ?

ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ.

- Advertisement -
- Advertisement -

ಲೈಂಗಿಕ ಅಪರಾಧಗಳಿಗೆ ಸಂಬಂಧಿಸಿದ ಕಾನೂನುಗಳಿಗೆ ತಿದ್ದುಪಡಿಗಳನ್ನು ಸೂಚಿಸಲು ರಚಿಸಲಾಗಿದ್ದ ನ್ಯಾಯಮೂರ್ತಿ ವರ್ಮಾ ಸಮಿತಿಯು ತನ್ನ ವರದಿಯನ್ನು ಗೃಹಖಾತೆಗೆ ಸಲ್ಲಿಸಿದೆ.

ದೆಹಲಿಯಲ್ಲಿ 23 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯ ಮೇಲೆ 2012ರ ಡಿಸೆಂಬರಿನಲ್ಲಿ ನಡೆದ ಕ್ರೂರವಾದ ಸಾಮೂಹಿಕ ಅತ್ಯಾಚಾರದ ಬಳಿಕ ಕಾನೂನುಗಳಿಗೆ ತಿದ್ದುಪಡಿ ಸೂಚಿಸಲು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟಿನ ಮಾಜಿ ಪ್ರಧಾನ ನ್ಯಾಯಾಧೀಶ ಜೆ.ಎಸ್. ವರ್ಮಾ ಅವರ ನೇತೃತ್ವದಲ್ಲಿ ಮೂರು ಸದಸ್ಯರ ಈ ಸಮಿತಿಯನ್ನು ನೇಮಿಸಿತ್ತು.

ವಿದ್ಯಾರ್ಥಿನಿಯ ಮೇಲಿನ ಆ ಲೈಂಗಿಕ ದಾಳಿಯು ದೇಶದಾದ್ಯಂತ ಜನರನ್ನು ರೊಚ್ಚಿಗೆಬ್ಬಿಸಿತ್ತಲ್ಲದೆ, ಅತ್ಯಾಚಾರಿಗಳನ್ನು ಶಿಕ್ಷಿಸಲು ಇನ್ನೂ ಕಠಿಣವಾದ ಕಾನೂನುಗಳನ್ನು ರೂಪಿಸುವಂತೆ ಒತ್ತಾಯಿಸಿ ಪ್ರತಿಭಟನೆಗಳನ್ನು ಹುಟ್ಟುಹಾಕಿತ್ತು.

ನಾನಾ ಮಹಿಳಾ ಗುಂಪುಗಳು, ನ್ಯಾಯವೇತ್ತರು ಹಾಗೂ ಇನ್ನಿತರ ವೇದಿಕೆಗಳಿಂದ ವರ್ಮಾ ಸಮಿತಿಗೆ 80,000 ಸಲಹೆಗಳು ಬಂದಿದ್ದವು. ಸಮಿತಿಯು ವೈವಾಹಿಕ ರೇಪ್ ಬಗ್ಗೆ ಸಹ ಚರ್ಚೆ ಕೈಗೆತ್ತಿಕೊಂಡಿತ್ತು.

ವರದಿಯ ಮುಖ್ಯಾಂಶಗಳು:
ಅ) ಮಹಿಳೆಯರನ್ನು ವಿವಸ್ತ್ರ (ನಗ್ನ)ಗೊಳಿಸುವುದು, (ರಹಸ್ಯವಾಗಿ) ಮಹಿಳೆಯರ ಗುಪ್ತಾಂಗಗಳನ್ನು ನೋಡಿ ಅಥವಾ ಮೈಥುನ ನೋಡಿ ಸುಖಪಡುವುದು, ಮಹಿಳೆಯರ ಹಿಂದೆಮುಂದೆ ಸುತ್ತುತ್ತಾ ಕಿರುಕುಳ ಉಂಟುಮಾಡುವುದು, ವೇಶ್ಯಾವಾಟಿಕೆಗೆ ಹೆಣ್ಣುಗಳ ಮಾರಾಟ – ಇವುಗಳನ್ನು ಸಮಿತಿಯ ಶಿಫಾರಸುಗಳಲ್ಲಿ ಹೊಸ ಅಪರಾಧಗಳನ್ನಾಗಿ ಸೇರ್ಪಡೆ ಮಾಡಲಾಗಿದೆ ಹಾಗೂ ಶಿಕ್ಷೆಯನ್ನು ಇನ್ನೂ ಕಠಿಣಗೊಳಿಸುವಂತೆ ಸಲಹೆ ಮಾಡಲಾಗಿದೆ.

ಆ) ಅತ್ಯಾಚಾರಕ್ಕೊಳಗಾದ ವ್ಯಕ್ತಿ ಅದರ ಪರಿಣಾಮವಾಗಿ ಸತ್ತರೆ ಅಥವಾ ಸಸ್ಯಸದೃಶ ಬದುಕು ನೂಕುವಂಥ ಸ್ಥಿತಿಗೆ (ವೆಜಿಟೇಟಿವ್ ಸ್ಟೇಟ್‌ಗೆ) ತಳ್ಳಲ್ಪಟ್ಟರೆ ಅಪರಾಧಿಗೆ 20 ವರ್ಷದ ಜೈಲು ಶಿಕ್ಷೆ ಹಾಗೂ ಸಾಮೂಹಿಕ ಅತ್ಯಾಚಾರಕ್ಕೆ ಜೀವಾವಧಿ ಶಿಕ್ಷೆ ವಿಧಿಸಲು ಸಮಿತಿ ಸಲಹೆ ಮಾಡಿದೆ. ಸಾಮೂಹಿಕ ಅತ್ಯಾಚಾರದ ಪರಿಣಾಮವಾಗಿ ಮಹಿಳೆ ಸಾವಿಗೀಡಾದರೆ ಅತ್ಯಾಚಾರಿಗಳಿಗೆ ಜೀವಾವಧಿ ಜೈಲು ಶಿಕ್ಷೆ ವಿಧಿಸಲು ಸಲಹೆ ನೀಡಲಾಗಿದೆ.

ಈಗಿರುವ ಕಾನೂನು ಪ್ರಕಾರ ಈ ಶಿಕ್ಷೆ ಕನಿಷ್ಠ 7 ವರ್ಷದಿಂದ ಗರಿಷ್ಠ ಜೀವಾವಧಿಯದಾಗಿತ್ತು. ಫಾಶಿ ಶಿಕ್ಷೆಯೊಂದು(ಗಲ್ಲಿಗೇರಿಸುವುದು) ‘ತಿರೋಗಾಮಿ ಹೆಜ್ಜೆ’ (ಹಿಂಚಲನೆ) ಮತ್ತು ಅದು ‘ಅಪರಾಧಕ್ಕೆ ತಡೆಯೊಡ್ಡುವ ಪರಿಣಾಮ ಉಂಟುಮಾಡಲಾರದು’ ಎಂಬ ಕಾರಣಕ್ಕಾಗಿ ವರ್ಮಾ ಸಮಿತಿಯು ಅತ್ಯಾಚಾರಕ್ಕೆ ಫಾಶಿ ಶಿಕ್ಷೆಯನ್ನು ಶಿಫಾರಸು ಮಾಡಿಲ್ಲ.

ಇ) ಮಹಿಳೆಯ ಆತ್ಮರಕ್ಷಣೆಯ ಹಕ್ಕನ್ನು ಕುರಿತ ಭಾರತೀಯ ದಂಡಸಂಹಿತೆಯ ಸೆಕ್ಷನ್ 100ಕ್ಕೆ ತಿದ್ದುಪಡಿ ಮಾಡುವಂತೆ ಸಮಿತಿ ಶಿಫಾರಸು ಮಾಡಿದೆ. ಆತ್ಮರಕ್ಷಣೆಯ ಹಕ್ಕಿನ ಚಲಾವಣೆಯಿಂದ ಸಾವು ಉಂಟಾದರೂ ಈ ಸೆಕ್ಷನ್ ಅದಕ್ಕೆ ಅನ್ವಯಿಸಬೇಕು ಎನ್ನುತ್ತದೆ ಶಿಫಾರಸು.

ಈ) ರಾಸಾಯನಿಕ ವಿಧಾನದಿಂದ ಅತ್ಯಾಚಾರಿಗಳ ಪುರುಷತ್ವ ಹರಣಗೊಳಿಸುವ ಶಿಕ್ಷೆ ನೀಡುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತದೆ ಹಾಗೂ ದೇಹಕ್ಕೆ ಊನ ಮಾಡುವುದನ್ನು ನಮ್ಮ ಸಂವಿಧಾನ ಸಮ್ಮತಿಸುವುದಿಲ್ಲ ಎನ್ನುವ ಕಾರಣಕ್ಕೆ ಸಮಿತಿ ಆ ಶಿಕ್ಷೆಯ ಸಲಹೆಯನ್ನು ತಿರಸ್ಕರಿಸಿದೆ.

ಉ) ವೈವಾಹಿಕ ಅತ್ಯಾಚಾರದ ಬಗ್ಗೆ ಹಾಗೂ ಹೋರಾಟದ (“ಗಲಭೆಗ್ರಸ್ತ”) ಪ್ರದೇಶಗಳಲ್ಲಿ ಮಹಿಳೆಯರ ಸುರಕ್ಷತೆ ಬಗ್ಗೆ ಕೂಡ ಸಮಿತಿ ಚರ್ಚಿಸಿದೆ; ‘ಸಶಸ್ತ್ರ ಬಲಗಳ ವಿಶೇಷಾಧಿಕಾರ ಕಾಯ್ದೆ’ (AFSPA)ಯನ್ನು ಸಶಸ್ತ್ರ ಪಡೆಗಳವರು ಮಹಿಳೆಯರನ್ನು ಲೈಂಗಿಕವಾಗಿ ಶೋಷಿಸಲು ದುರ್ಬಳಕೆ ಮಾಡಿಕೊಳ್ಳಲು ಸಾಧ್ಯವಿರುವುದರಿಂದ ಆ ಕಾಯ್ದೆಯನ್ನು ಪುನರ್ ವಿಮರ್ಶಿಸಬೇಕೆಂದು ಸಮಿತಿ ಶಿಫಾರಸು ಮಾಡಿದೆ.

ಊ) ಸಾಂವಿಧಾನಿಕ ಪರಿಹಾರದ ಮಾರ್ಗದ ಮೂಲಕ ಮೂಲಭೂತ ಹಕ್ಕುಗಳ ರಕ್ಷಣೆಯು ನ್ಯಾಯಾಂಗದ ಪ್ರಧಾನ ಜವಾಬ್ದಾರಿಯಾಗಿದೆ ಎಂದು ಸಮಿತಿ ಹೇಳಿದೆ. ಭಾರತದ ಪ್ರಧಾನ ನ್ಯಾಯಾಧೀಶರು ಯಾವುದೇ ಪ್ರಕರಣವನ್ನು ತಾವಾಗಿಯೇ ವಿಚಾರಣೆಗೆ ಎತ್ತಿಕೊಳ್ಳಬಹುದು (ಸುವೋ ಮೋಟು ಕಾಗ್ನಿಜನ್ಸ್); ಸಾಮಾಜಿಕ ಕಾರ್ಯಕರ್ತರು ಈ ನಿಟ್ಟಿನಲ್ಲಿ ಕೋರ್ಟಿಗೆ ನೆರವಾಗಬೇಕು. ಪ್ರತಿಯೊಂದು ರಾಜ್ಯದ ಹೈಕೋರ್ಟುಗಳ ಮುಖ್ಯ ನ್ಯಾಯಾಧೀಶರುಗಳು ಬಾಲ ರಕ್ಷಣಾ ಗೃಹಗಳ ನಿರ್ವಹಣೆ, ಮೇಲ್ವಿಚಾರಣೆ ಮಾಡಲು ಆ ಕ್ಷೇತ್ರದ ತಜ್ಞರ ಸಲಹೆಗಳ ಮೇರೆಗೆ ಸೂಕ್ತವಾದ ಯಂತ್ರಾಂಗವನ್ನು ರೂಪಿಸಬೇಕು ಎಂದೂ ಶಿಫಾರಸು ಮಾಡಿದೆ.

ಇದನ್ನೂ ಓದಿ: ಅತ್ಯಾಚಾರವನ್ನು ತಡೆಗಟ್ಟಲು ಸಾಧ್ಯ! ತಡೆಗಟ್ಟಲೇಬೇಕು! ಅದರ ಮೂಲಬೇರುಗಳನ್ನು ಅರಿತಾಗ ಮಾತ್ರ…

ಋ) ದೇಶದಲ್ಲಿ ಯಾವುದೇ ವೈಯಕ್ತಿಕ ಕಾನೂನಿನ (ಪರ್ಸನಲ್ ಲಾ) ಮೇರೆಗೆ ನಡೆಯುವ ಎಲ್ಲಾ ಮದುವೆಗಳನ್ನೂ ಒಬ್ಬ ಮ್ಯಾಜಿಸ್ಟ್ರೇಟರ ಸಮ್ಮುಖದಲ್ಲಿ ನೊಂದಾವಣೆ ಮಾಡಿಸಲೇಬೇಕು. ಆ ಮದುವೆಯಲ್ಲಿ ವರದಕ್ಷಿಣೆಯ ಡಿಮ್ಯಾಂಡ್ ಇರಲಿಲ್ಲ ಹಾಗೂ ವಧೂವರರಿಬ್ಬರ ಸಂಪೂರ್ಣ, ಸ್ವತಂತ್ರ ಒಪ್ಪಿಗೆಯ ಮೇರೆಗೆ ಮದುವೆ ನಡೆಯುತ್ತಿದೆ ಎಂಬುದನ್ನು ಮ್ಯಾಜಿಸ್ಟ್ರೇಟರು ಖಾತ್ರಿಪಡಿಸಿಕೊಳ್ಳಬೇಕು ಎಂದೂ ಸಮಿತಿ ಶಿಫಾರಸು ಮಾಡಿದೆ.

ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗಿರುವ ಮಹಿಳೆಯ ವೈದ್ಯಕೀಯ ಪರೀಕ್ಷೆಯನ್ನು ಸ್ತ್ರೀ ರೋಗ ಮತ್ತು ಮನೋವೈದ್ಯಕೀಯ ಕ್ಷೇತ್ರಗಳಲ್ಲಿನ ಜಾಗತಿಕ ಖ್ಯಾತಿಯ ತಜ್ಞರು ಶಿಫಾರಸು ಮಾಡಿರುವ ಅತ್ಯುತ್ತಮ ವಿಧಾನಗಳ ಮೂಲಕ ನಡೆಸಬೇಕು ಎಂದು ಶಿಫಾರಸು ಮಾಡಲಾಗಿದೆ.

ಎ) ಅಪ್ರಾಪ್ತ ವಯಸ್ಸಿನ ಮಕ್ಕಳ ಮಾರಾಟ ಜಾಲವನ್ನು ಒಂದು ತೀವ್ರವಾದ ಅಪರಾಧವೆಂದು ಪರಿಗಣಿಸಬೇಕು ಹಾಗೂ ಅದಕ್ಕೆ ಕಠಿಣ ಶಿಕ್ಷೆ ನೀಡಬೇಕು. ಶಿಕ್ಷೆಯು ಏಳು ವರ್ಷಗಳಿಗಿಂತ ಕಡಿಮೆ ಇರಬಾರದು, ಹತ್ತು ವರ್ಷಗಳವರೆಗೂ ಹೆಚ್ಚಬಹುದು ಎಂದು ಸಮಿತಿ ಶಿಫಾರಸು ಮಾಡಿದೆ.

ಏ) ತನಿಖಾ ಸಂಸ್ಥೆಗಳು ಚುನಾಯಿತ ಸದಸ್ಯರ ಮೇಲೆ ಅಥವಾ ಚುನಾವಣಾ ಅಭ್ಯರ್ಥಿಯ ಮೇಲೆ ಹಾಕಿದ ಚಾರ್ಜ್ ಶೀಟನ್ನು ನ್ಯಾಯಾಲಯವು ವಿಚಾರಣೆಗೆ ಪರಿಗಣಿಸಿದ್ದರೆ ಅಂಥ ಸದಸ್ಯರ ಅಧಿಕಾರ ರದ್ದಾಗಬೇಕು ಹಾಗೂ ಅಂಥ ಅಭ್ಯರ್ಥಿಗೆ ನಾಮಪತ್ರ ಸಲ್ಲಿಸದಂತೆ ನಿಷೇಧ ಹೇರಬೇಕು ಎಂಬ ಸಲಹೆಯನ್ನು ಸಹ ಮಾಡಲಾಗಿದೆ.

ಕೃಪೆ: ಹೇಮಲತಾರವರು ಸಂಪಾದಿಸಿರುವ “ಅತ್ಯಾಚಾರ ಬರ್ಬರತೆಯ ಬೇರುಗಳೆಲ್ಲಿ?” ಪುಸ್ತಕದಿಂದ ಈ ಲೇಖನವನ್ನು ಆಯ್ದುಕೊಳ್ಳಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...