Homeಮುಖಪುಟ‘ಯಾವ ದಾಳಿಯು ದೃಢತೆಯನ್ನು ಮುರಿಯದು’ - ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ಮುಖ್ಯಮಂತ್ರಿಯ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ವರದಿಯಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಂದಿಗ್ರಾಮದ ದೇವಾಲಯವೊಂದರ ಹೊರಗೆ ನಾಲ್ಕೈದು ಜನರ ಗುಂಪಿನಿಂದ ಹಲ್ಲೆ ನಡೆದಿದೆ ಎಂದು ಬುಧವಾರ ರಾತ್ರಿ ವರದಿಯಾಗಿದೆ. ಇದೀಗ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳು ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದೆ ಎಂದು ವರದಿ ನೀಡಿದೆ. ಅಷ್ಟೇ ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

“ಮಮತಾ ಬ್ಯಾನರ್ಜಿಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲೇನಲ್ಲ. ಮುಂಚೆಯೂ ರೈತರ ಪರ ನಿಂತಿದ್ದಕ್ಕಾಗಿ ಈ ಐತಿಹಾಸಿಕ ಸ್ಥಳದಲ್ಲಿ ಅವರ ಮೇಲೆ ದಾಳಿ ಮಾಡಲಾಗಿತ್ತು. ಆದರೆ ಯಾವುದೂ ಅವರ ದೃಡತೆಯನ್ನು ಮುರಿಯುವುದಿಲ್ಲ. ಅವರು ನಿಮ್ಮ ಪ್ರಬಲ ಧ್ವನಿಯಾಗಿ ಮುಂದುವರಿಯುತ್ತಾರೆ” ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಇದನ್ನೂ ಓದಿ: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಈಗಾಗಲೇ ಸ್ಥಾನ ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ. ಅವರು ಪ್ರಭಾವಿ ಅಲ್ಪಸಂಖ್ಯಾತ ಮುಖಂಡ ಅಬ್ಬಾಸ್ ಸಿದ್ದೀಕ್ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ನೊಂದಿಗೆ ಸಂಪರ್ಕದಲ್ಲಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತಿ. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆಲ್ಲಲಿಲ್ಲ.

2019 ರ ಚುನಾವಣೆಯಲ್ಲಿ ಬಿಜೆಪಿಯ ಗಣನೀಯ ಸಾಧನೆಯ ನಂತರ ಹಲವಾರು ಟಿಎಂಸಿ ನಾಯಕರು ಬಿಜೆಪಿಗೆ ಸೇರಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...