Homeಮುಖಪುಟ‘ಯಾವ ದಾಳಿಯು ದೃಢತೆಯನ್ನು ಮುರಿಯದು’ - ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

‘ಯಾವ ದಾಳಿಯು ದೃಢತೆಯನ್ನು ಮುರಿಯದು’ – ಮಮತಾ ಮೇಲಿನ ದಾಳಿಗೆ ಟಿಎಂಸಿ ಪ್ರತಿಕ್ರಿಯೆ

ಮುಖ್ಯಮಂತ್ರಿಯ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ವರದಿಯಾಗಿದೆ.

- Advertisement -
- Advertisement -

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ನಂದಿಗ್ರಾಮದ ದೇವಾಲಯವೊಂದರ ಹೊರಗೆ ನಾಲ್ಕೈದು ಜನರ ಗುಂಪಿನಿಂದ ಹಲ್ಲೆ ನಡೆದಿದೆ ಎಂದು ಬುಧವಾರ ರಾತ್ರಿ ವರದಿಯಾಗಿದೆ. ಇದೀಗ ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳು ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದೆ ಎಂದು ವರದಿ ನೀಡಿದೆ. ಅಷ್ಟೇ ಅಲ್ಲದೆ ಅವರ ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿದೆ.

“ಮಮತಾ ಬ್ಯಾನರ್ಜಿಯ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವುದು ಇದೇ ಮೊದಲೇನಲ್ಲ. ಮುಂಚೆಯೂ ರೈತರ ಪರ ನಿಂತಿದ್ದಕ್ಕಾಗಿ ಈ ಐತಿಹಾಸಿಕ ಸ್ಥಳದಲ್ಲಿ ಅವರ ಮೇಲೆ ದಾಳಿ ಮಾಡಲಾಗಿತ್ತು. ಆದರೆ ಯಾವುದೂ ಅವರ ದೃಡತೆಯನ್ನು ಮುರಿಯುವುದಿಲ್ಲ. ಅವರು ನಿಮ್ಮ ಪ್ರಬಲ ಧ್ವನಿಯಾಗಿ ಮುಂದುವರಿಯುತ್ತಾರೆ” ಎಂದು ಪಕ್ಷದ ಅಧಿಕೃತ ಹೇಳಿಕೆ ತಿಳಿಸಿದೆ.

ಇದನ್ನೂ ಓದಿ: ಪ.ಬಂಗಾಳ: ನಾಮಪತ್ರ ಸಲ್ಲಿಸಿ ಹಿಂದಿರುಗುತ್ತಿದ್ದ ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ!

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಈ ಘಟನೆ ಸಂಭವಿಸಿದೆ. ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಈ ಬಾರಿ ಪಶ್ಚಿಮ ಬಂಗಾಳವು ಟಿಎಂಸಿ, ಕಾಂಗ್ರೆಸ್-ಎಡ ಮೈತ್ರಿ ಮತ್ತು ಬಿಜೆಪಿ ಪಕ್ಷಗಳ ತ್ರಿಕೋನ ಸ್ಪರ್ಧೆಗೆ ಸಾಕ್ಷಿಯಾಗಲಿದೆ. 294 ಸದಸ್ಯರ ಪಶ್ಚಿಮ ಬಂಗಾಳ ವಿಧಾನಸಭೆಗೆ ಮಾರ್ಚ್ 27 ರಿಂದ ಎಂಟು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಅಂತಿಮ ಸುತ್ತಿನ ಮತದಾನ ಏಪ್ರಿಲ್ 29 ರಿಂದ ನಡೆಯಲಿದೆ. ಮತ ಎಣಿಕೆ ಮೇ 2 ರಂದು ನಡೆಯಲಿದೆ.

ಇದನ್ನೂ ಓದಿ: ಮಾ. 26ಕ್ಕೆ ಸಂಪೂರ್ಣ ಭಾರತ್ ಬಂದ್ – ಹೋರಾಟನಿರತ ರೈತರ ಕರೆ

ಮಮತಾ ಬ್ಯಾನರ್ಜಿ ಸತತ ಮೂರನೇ ಅವಧಿಗೆ ಅಧಿಕಾರಕ್ಕೇರಲು ಪ್ರಯತ್ನಿಸುತ್ತಿದ್ದರೆ, ಬಿಜೆಪಿಯು 200 ಸ್ಥಾನಗಳನ್ನು ಗೆಲ್ಲುವ ಗುರಿಯನ್ನು ಹೊಂದಿದೆ. ಕಾಂಗ್ರೆಸ್ ಮತ್ತು ಎಡಪಂಥೀಯರು ಚುನಾವಣೆಗೆ ಮೈತ್ರಿ ಮಾಡಿಕೊಂಡಿದ್ದು, ಈಗಾಗಲೇ ಸ್ಥಾನ ಹಂಚಿಕೆಯನ್ನು ಅಂತಿಮಗೊಳಿಸಿದ್ದಾರೆ. ಅವರು ಪ್ರಭಾವಿ ಅಲ್ಪಸಂಖ್ಯಾತ ಮುಖಂಡ ಅಬ್ಬಾಸ್ ಸಿದ್ದೀಕ್ ಅವರ ಇಂಡಿಯನ್ ಸೆಕ್ಯುಲರ್ ಫ್ರಂಟ್ (ಐಎಸ್ಎಫ್) ನೊಂದಿಗೆ ಸಂಪರ್ಕದಲ್ಲಿದ್ದಾರೆ.

2016 ರಲ್ಲಿ, ಕಾಂಗ್ರೆಸ್ 44 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದರೆ, ಎಡರಂಗವು 33 ಸ್ಥಾನಗಳನ್ನು ಗಳಿಸಿತ್ತಿ. ಆಡಳಿತಾರೂಢ ಟಿಎಂಸಿ 211 ಸ್ಥಾನಗಳನ್ನು ಮತ್ತು ಬಿಜೆಪಿ 3 ಸ್ಥಾನಗಳನ್ನು ಗೆದ್ದಿದ್ದವು.

2019 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 18 ಸ್ಥಾನಗಳನ್ನು ಗೆದ್ದಿದ್ದು ಮತ್ತು ಟಿಎಂಸಿಯ ಸಂಸದ ಸ್ಥಾನವು 22 ಕ್ಕೆ ಇಳಿದಿದೆ. ಪಶ್ಚಿಮ ಬಂಗಾಳದ ಒಟ್ಟು 42 ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಎರಡು ಸ್ಥಾನಗಳನ್ನು ಗೆದ್ದಿದ್ದರೆ, ಎಡಪಂಥೀಯರು ಒಂದೂ ಸ್ಥಾನವನ್ನು ಗೆಲ್ಲಲಿಲ್ಲ.

2019 ರ ಚುನಾವಣೆಯಲ್ಲಿ ಬಿಜೆಪಿಯ ಗಣನೀಯ ಸಾಧನೆಯ ನಂತರ ಹಲವಾರು ಟಿಎಂಸಿ ನಾಯಕರು ಬಿಜೆಪಿಗೆ ಸೇರಿದ್ದಾರೆ.

ಇದನ್ನೂ ಓದಿ: ಟೈಟಾನಿಕ್ ಚಲನಚಿತ್ರ ನೋಡಿದ್ದೀರಾ?- ಲಸಿಕೆ ಆದ್ಯತೆಯ ಬಗ್ಗೆ ಬಾಂಬೆ ಹೈಕೋರ್ಟ್ ಹೇಳಿದ್ದೇನು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...