Homeಕರ್ನಾಟಕದಲಿತರು, ಹಿಂದುಳಿದವರು ಬಿಜೆಪಿ- ಆರ್‌ಎಸ್‌ಎಸ್‌ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿಎಂ ಸಿದ್ದರಾಮಯ್ಯ

ದಲಿತರು, ಹಿಂದುಳಿದವರು ಬಿಜೆಪಿ- ಆರ್‌ಎಸ್‌ಎಸ್‌ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು : ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಹಿಂದುಳಿದವರು-ದಲಿತರು ತಮ್ಮ ವಿರೋಧಿಗಳಾದ ಬಿಜೆಪಿ, ಆರ್‌ಎಸ್‌ಎಸ್‌, ಎಬಿವಿಪಿ ಸೇರ್ತಾರಲ್ಲಾ ಇವರಿಗೆ ಏನು ಹೇಳೋದು. ಬಿಜೆಪಿ-ಆರ್‌ಎಸ್ಎಸ್‌ ಸಿದ್ಧಾಂತ ಹಿಂದುಳಿದವರ ಶತ್ರು ಎಂದು ಗೊತ್ತಿದ್ದೂ, ಹೋಗಿ ಹೋಗಿ ಅಲ್ಲಿಗೇ ಸೇರ್ತಾರಲ್ಲ ಇದಕ್ಕೆ ಏನು ಮಾಡೋದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.

ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಬುಧವಾರ (ನವೆಂಬರ್ 19) ಆಯೋಜಿಸಿದ್ದ, ಎಲ್.ಜಿ ಹಾವನೂರು ವರದಿಯ ಸುವರ್ಣ ಮಹೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ದೇವರು, ಧರ್ಮದ ಹೆಸರಲ್ಲಿ ಸಾಯ್ತಾ ಇರೋರೆಲ್ಲಾ ನಮ್ಮ ಹಿಂದುಳಿದವರೇ. ಸ್ವಾರ್ಥಕ್ಕಾಗಿ ಬಿಜೆಪಿ-ಆರ್‌ಎಸ್‌ಎಸ್‌ ಸೇರಿ ಇವರೇ ಮೂಲ ಆರ್‌ಎಸ್‌ಎಸ್‌ನವರಿಗಿಂತ, ಇವರೇ ಹೆಡ್ಗೇವಾರ್ ರೀತಿ ಮಾತಾಡ್ತಾರೆ ಸಿಎಂ ವ್ಯಂಗ್ಯವಾಡಿದರು.

ಹಾವನೂರು ವರದಿಯನ್ನು ದೇವರಾಜ ಅರಸರು ಹಿಂದುಳಿದವರ ಬೈಬಲ್ ಎಂದು ಕರೆದಿದ್ದಾರೆ. ಸುಪ್ರೀಂ ಕೋರ್ಟ್ ಕೂಡ ಹಾವನೂರು ವರದಿಯನ್ನು ಅಪಾರವಾಗಿ ಮೆಚ್ಚಿಕೊಂಡಿದೆ ಎಂದರು.

ಸಾಮಾನ್ಯ ಹಳ್ಳಿಯ ಪರಿಶಿಷ್ಟ ಕುಟುಂಬದಲ್ಲಿ ಹುಟ್ಟಿದ ಹಾವನೂರು ಅವರು ವಿದ್ಯಾರ್ಥಿ ದೆಸೆಯಲ್ಲೇ ಪ್ರತಿಭಟನೆ ಮಾಡುವ ಗುಣ ಹೊಂದಿದ್ದರು. ಹಾವನೂರು ಅವತ್ತು ಈ ಜಾತಿಯ ಮೊದಲ ವಕೀಲರಾಗಿದ್ದರು ಎಂದು ಸ್ಮರಿಸಿದರು.

ನಾನು ಹಣಕಾಸು ಮಂತ್ರಿಯಾದಾಗ, “ಈ ಸಿದ್ದರಾಮಯ್ಯಂಗೆ ನೂರು ಕುರಿ ಎಣಿಸೋಕೆ ಬರಲ್ಲ ಬಜೆಟ್ ಮಂಡಿಸ್ತಾರಾ” ಎಂದು ಪತ್ರಿಕೆಯೊಂದರಲ್ಲಿ ಬರೆದಿದ್ದರು. ಇದನ್ನು ನಾನು ಸವಾಲಾಗಿ ಸ್ವೀಕರಿಸಿದೆ. 16 ಬಜೆಟ್ ಮಂಡಿಸಿದೆ. 17ನೇ ಬಜೆಟನ್ನೂ ಮಂಡಿಸುತ್ತೇನೆ. ನನಗೆ ಅವಕಾಶ ಸಿಕ್ಕಿದ್ದರಿಂದ ನಾನು ಇಷ್ಟೆಲ್ಲಾ ಮಾಡಲು ಸಾಧ್ಯವಾಯಿತು. ಅವಕಾಶ ಸಿಗದಿದ್ದರೆ ನನ್ನಿಂದ ಇದನ್ನು ಮಾಡಲು ಸಾಧ್ಯವಿರಲಿಲ್ಲ. ಆದ್ದರಿಂದ ದಮನಿತ ಜಾತಿಗಳಿಗೆ ಅವಕಾಶ ಮುಖ್ಯ ಎಂದರು.

ಬೇಡರ ಜಾತಿಯಲ್ಲಿ ಜನಿಸಿದ ಹಾವನೂರು ಅವರು ತಮ್ಮ ಸಾಮರ್ಥ್ಯ ತೋರಿಸಿದ್ದಾರೆ. ಪ್ರತಿಭೆ ಯಾರ ಸ್ವತ್ತೂ ಅಲ್ಲ. ಅವಕಾಶ ಸಿಕ್ಕಾಗ ಹೊರಗೆ ಬರುತ್ತದೆ ಎಂದು ಹೇಳಿದರು.

ನಾನು 1991ರಲ್ಲಿ ಲೋಕಸಭೆಗೆ ಸ್ಪರ್ಧಿಸಿ ಸೋತಿದ್ದೆ. ಆಗ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದೆ. ನನ್ನ ಅರ್ಜಿ ಪರವಾಗಿ ಹಾವನೂರು ಅವರು ವಾದಿಸಿದ್ದರು. ಆ ಸಂದರ್ಭದಲ್ಲಿ ನನಗೆ ಹಾವನೂರು ಅವರ ಜೊತೆ ಆತ್ಮೀಯತೆ ಬೆಳೆದಿತ್ತು ಎಂದು ಸ್ಮರಿಸಿದರು.

ಎಲ್ಲಿಯವರೆಗೂ ಜಾತಿ ವ್ಯವಸ್ಥೆ ಇರುತ್ತದೋ, ಅಲ್ಲಿಯವರೆಗೂ ಮೀಸಲಾತಿ ಇರಬೇಕು ಎನ್ನುವುದು ಡಾ.ಬಿ.ಆರ್ ಅಂಬೇಡ್ಕರ್ ಅವರ ಮಾತಾಗಿತ್ತು. ನಮ್ಮಲ್ಲಿ ಶಿಕ್ಷಣ ಪ್ರಮಾಣ ಶೇಕಡ 68ರಷ್ಟಿದ್ದರೂ ಜಾತಿ ವ್ಯವಸ್ಥೆ ಇನ್ನಷ್ಟು ಗಟ್ಟಿಯಾಗುತ್ತಿದೆ. ಜಾತಿ ವ್ಯವಸ್ಥೆಯಿಂದ ಅನುಕೂಲ ಮಾಡಿಕೊಂಡವರು ಈ ವ್ಯವಸ್ಥೆಯನ್ನು ಗಟ್ಟಿಗೊಳಿಸುತ್ತಿದ್ದರೆ, ಹಿಂದುಳಿದವರು ಇನ್ನೂ ಗುಲಾಮಗಿರಿ ಮನಸ್ಥಿತಿಯಿಂದ ಹೊರಗೆ ಬಂದಿಲ್ಲ. ಪ್ರಬಲ ಜಾತಿಯ ಬಡವರನ್ನೂ ಬಹುವಚನದಿಂದ ಕರೆಯುವುದು, ಕೆಳ ಜಾತಿಯ ಶ್ರೀಮಂತರನ್ನು ಏಕವಚನದಲ್ಲಿ ಕರೆಯುವುದೇ ಗುಲಾಮಿ ಮನಸ್ಥಿತಿಯ ಸಂಕೇತ ಎಂದರು.

ವಿದ್ಯಾವಂತರು ವಿದ್ಯೆ ಪಡೆದಷ್ಟೂ ಮೌಡ್ಯವನ್ನು ಹೆಚ್ಚೆಚ್ಚು ನಂಬುತ್ತಾರೆ. ಬಡತನಕ್ಕೆ ಹಣೆಬರಹ ಕಾರಣ ಎಂದು ನಂಬುವವರು ಇನ್ನೂ ಇದ್ದಾರೆ. ಹಿಂದುಳಿದ ವರ್ಗಗಳ ವಿದ್ಯಾವಂತರೂ ಮೌಡ್ಯವನ್ನು ನಂಬುತ್ತಾರೆ ಎಂದು ಹೇಳಿದರು.

ಬುದ್ದ, ಬಸವಣ್ಣ, ಅಂಬೇಡ್ಕರ್ ಅವರೆಲ್ಲಾ ಬಂದು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದರು. ಇವರು ಹೋರಾಡಿದಾಗ ಜಾತಿ ವ್ಯವಸ್ಥೆ ಸಡಿಲ ಆದಂತೆ ಕಾಣುತ್ತದೆ. ಆದರೆ, ಬಳಿಕ ಮತ್ತೆ ಗಟ್ಟಿಯಾಗುತ್ತದೆ. ಜಾತಿ ವ್ಯವಸ್ಥೆ ಮಾತ್ರ ಹೋಗುತ್ತಿಲ್ಲ. ಅದಕ್ಕೇ ಆರ್ಥಿಕ, ಸಾಮಜಿಕ ಅಸಮಾನತೆಗೆ ತುತ್ತಾಗಿರುವ ಜನರೇ ಸ್ವಾತಂತ್ರ್ಯ ಸೌಧವನ್ನು ದ್ವಂಸ ಮಾಡುತ್ತಾರೆ ಎಂದು ಅಂಬೇಡ್ಕರ್ ಅವರು ಎಚ್ಚರಿಸಿದ್ದನ್ನು ನಾವು ಮರೆಯಬಾರದು ಎಂದರು.

ಮೀಸಲಾತಿ ಮಿತಿ ಶೇ.75ಕ್ಕೆ ಹೆಚ್ಚಿಸಲೂ ಸಿದ್ಧ: ಸಿಎಂ ಸಿದ್ದರಾಮಯ್ಯ

ನಮ್ಮ ಸರ್ಕಾರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ವರದಿಯನ್ನು ಒಪ್ಪಿಕೊಂಡು ಜಾರಿ ಮಾಡಲು ಸಿದ್ಧವಿದೆ. ಮೀಸಲಾತಿ ಪ್ರಮಾಣವನ್ನು ಶೇ 70-75ಕ್ಕೆ ಹೆಚ್ಚಿಸುವ ಬಗ್ಗೆಯೂ ಆಸಕ್ತಿ ಹೊಂದಿದೆ. ನನ್ನ ಕೊನೆ ಉಸಿರು ಇರುವವರೆಗೂ, ನಾನು ರಾಜಕಾರಣದಲ್ಲಿ ಇರುವವರೆಗೂ ಸಾಮಾಜಿಕ ನ್ಯಾಯದ ಪರವಾಗಿ ಇರುತ್ತೇನೆ ಎಂದು ಸಿಎಂ ಸ್ಪಷ್ಟಪಡಿಸಿದರು.

ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು

ರಾಹುಲ್ ಗಾಂಧಿಯವರಿಗೆ ಸೈದ್ಧಾಂತಿಕ ಬದ್ಧತೆ ಇದ್ದಿದ್ದರಿಂದಲೇ ಜಾತಿ ಗಣತಿಗೆ ಒತ್ತಡ ಹೇರಿದರು. ಮೊನ್ನೆ ನನಗೂ “ಏನಾಯ್ತು ನಿಮ್ಮ ಗಣತಿ” ಎಂದು ಕೇಳಿದರು. ರಾಹುಲ್ ಗಾಂಧಿಯವರಿಗೆ ಸ್ಪಷ್ಟತೆ ಇರುವುದರಿಂದಲೇ ಅವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಿ ಜಾತಿ ಗಣತಿ ನಡೆಸುವಂತೆ ಮಾಡಿದ್ದಾರೆ. ನಮ್ಮ ಸರ್ಕಾರ ಕೂಡ ಈ ಗಣತಿಯನ್ನು ಒಪ್ಪಿಕೊಂಡು ಜಾರಿ‌ಮಾಡಲು ಬದ್ದವಾಗಿದೆ ಎಂದರು.

ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದ ಸಿಎಂ

ತಮ್ಮ ಭಾಷಣದ ನಡುವೆ ಮುಖ್ಯಮಂತ್ರಿಗಳು ಮನುಸ್ಮೃತಿಯ ಶೂದ್ರ ವಿರೋಧಿ ಅಧ್ಯಾಯಗಳನ್ನು ಓದಿದರು. ಶೂದ್ರ ಸಮುದಾಯವನ್ನು ನಾಯಿಗೆ ಹೋಲಿಸಿ ತಾರತಮ್ಯ ಆಚರಿಸುವ ಶ್ಲೋಕಗಳನ್ನು ಓದಿ, ನೀವೆಲ್ಲಾ ಮನುಸ್ಮೃತಿ ಓದಿ ಜಾತಿ ತಾರತಮ್ಯದ ಪ್ರಮಾಣವನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...