Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...