Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...