Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಶಾಂತಿ ಸಭೆಯಲ್ಲಿ ಪೊಲೀಸ್ ಅಧಿಕಾರಿಯಿಂದ ಇಸ್ಲಾಮೋಫೋಬಿಕ್ ಹೇಳಿಕೆ : ತೀವ್ರ ಆಕ್ರೋಶ

ಈದುಲ್ ಫಿತರ್ (ರಂಝಾನ್) ಹಬ್ಬಕ್ಕೆ ಪೂರ್ವಭಾವಿಯಾಗಿ ನಡೆದ 'ಶಾಂತಿ ಸಭೆ'ಯಲ್ಲಿ ಪೊಲೀಸ್ ಅಧಿಕಾರಿಯೊಬ್ಬರು 'ಇಸ್ಲಾಮೋಫೋಬಿಕ್' ಹೇಳಿಕೆ ನೀಡಿರುವುದು ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ಅಧಿಕಾರಿಯ ಹೇಳಿಕೆ ರಾಜಕೀಯ ನಾಯಕರು...

ಮಧ್ಯಪ್ರಾಚ್ಯ ಉದ್ವಿಗ್ನತೆ: ಲೆಬನಾನ್‌ನಲ್ಲಿ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ದಾಳಿ: ವೈದ್ಯರು, ದಾದಿಯರು ಸೇರಿ 12 ಮಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿರುವ ಆರೋಗ್ಯ ಕೇಂದ್ರದ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ 12 ವೈದ್ಯಕೀಯ ಕಾರ್ಯಕರ್ತರು ಸಾವನ್ನಪ್ಪಿದ್ದಾರೆ ಎಂದು ಲೆಬನಾನಿನ ಸಾರ್ವಜನಿಕ ಆರೋಗ್ಯ ಸಚಿವಾಲಯ ವರದಿ ಮಾಡಿದೆ.  ಲೆಬನಾನ್‌ನಾದ್ಯಂತ ಇಸ್ರೇಲಿ ದಾಳಿಯಲ್ಲಿ ಈವರೆಗೂ 103 ಮಕ್ಕಳು...

ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಒಳಮೀಸಲಾತಿ ಪರ ತೀರ್ಮಾನಕ್ಕೆ ಎಲ್ಲರೂ ಸಹಕರಿಸಿ: ಒಳಮೀಸಲಾತಿ ಹೋರಾಟ ಸಮಿತಿ ಮನವಿ

ಬೆಂಗಳೂರು: ಒಳಮೀಸಲಾತಿ ಜಾರಿ ಮಾಡುವ ಪ್ರಕ್ರಿಯೆಯು ಕೊನೆಯ ಹಂತಕ್ಕೆ ತಲುಪಿದ್ದು, ಇದನ್ನು ಸುಲಲಿತವಾಗಿ ಬಗೆಹರಿಸಿ ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಆಗ್ರಹಿಸಿ ಇಂದು (14 ಮಾರ್ಚ್)‌ ನಗರದ ಪ್ರೆಸ್‌ ಕ್ಲಬ್‌ನಲ್ಲಿ ಒಳಮೀಸಲಾತಿ ಹೋರಾಟಗಾರರು...

ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ; ರೋಸ್ಟರ್ ಮೀಸಲು ಕ್ರಮ ಉಲ್ಲಂಘನೆ ಆರೋಪ: ನ್ಯಾಯಾಂಗ ತನಿಖೆಗೆ ಆಗ್ರಹ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿರುವ Central University of Karnataka ದಲ್ಲಿ ಬೋಧಕ ಹುದ್ದೆಗಳ ನೇಮಕಾತಿಯಲ್ಲಿ ಮೀಸಲು ಕ್ರಮ ಉಲ್ಲಂಘನೆ ಹಾಗೂ ಅಕ್ರಮ ನೇಮಕಾತಿಗಳು ನಡೆದಿವೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ...

ಸಂಭಾಲ್ | ಮಸೀದಿಯಲ್ಲಿ ನಮಾಝ್ ಮಾಡುವವರ ಸಂಖ್ಯೆ ಮಿತಿಗೊಳಿಸಲು ಸಾಧ್ಯವಿಲ್ಲ; ಕಾನೂನು ಸುವ್ಯವಸ್ಥೆ ಕಾಪಾಡಲು ಆಗದಿದ್ದರೆ ರಾಜೀನಾಮೆ ನೀಡಿ: ಅಧಿಕಾರಿಗಳಿಗೆ ಅಲಹಾಬಾದ್ ಹೈಕೋರ್ಟ್ ತರಾಟೆ

ಸಂಭಾಲ್ ಜಿಲ್ಲೆಯ ಮಸೀದಿಯೊಂದರಲ್ಲಿ ರಂಝಾನ್ ಸಮಯದಲ್ಲಿ ನಮಾಝ್ ಮಾಡುವವರ ಸಂಖ್ಯೆಯನ್ನು ಮಿತಿಗೊಳಿಸುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರವನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರದ ಜವಾಬ್ದಾರಿ ಎಂದಿದೆ. ಫೆಬ್ರವರಿ 27ರಂದು...

ಇರಾನ್ ‘ಭಯೋತ್ಪಾದಕ ಆಡಳಿತ’ ಎಂದು ಕರೆದ NDTV ಹಿರಿಯ ಸಂಪಾದಕ: ವ್ಯಾಪಕ ಟೀಕೆಯ ನಂತರ ಪೋಸ್ಟ್ ಡಿಲಿಟ್ 

ಹೊಸದಿಲ್ಲಿ: ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧದಿಂದಾಗಿ ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಭಾರತದ ಮುಖ್ಯ ಮಾಧ್ಯಮ ಸಂಸ್ಥೆ NDTV ಹಿರಿಯ ಸಂಪಾದಕ ಆದಿತ್ಯ ರಾಜ್ ಕೌಲ್ ಅವರು ಇರಾನ್ “ಭಯೋತ್ಪಾದಕ...

ಎಲ್‌ಪಿಜಿ ಬಿಕ್ಕಟ್ಟು: ಹೋಟೆಲ್ ಮಾಲೀಕರಿಗೆ ವಿದ್ಯುತ್ ಒಲೆಗಳನ್ನು ಬಳಸಲು ಸೂಚಿಸಿದ ಸಚಿವ ಕೆ.ಎಚ್. ​​ಮುನಿಯಪ್ಪ

ಬೆಂಗಳೂರು: ಪಶ್ಚಿಮ ಏಷ್ಯಾ ಸಂಘರ್ಷದ ಪ್ರಭಾವ ಭಾರತೀಯರ ಅಡುಗೆ ಮನೆಯನ್ನು ಪ್ರವೇಶಿಸಿದ್ದು, ಎಲ್‌ಪಿಜಿ  ಬಿಕ್ಕಟ್ಟಿನಿಂದ ನಾಗರೀಕರು, ಸೇರಿದಂತೆ ಹೋಟೆಲ್ ಉಧ್ಯಮ ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಈ ನಡುವೆ ಯುದ್ಧದ ಪರಿಣಾಮ ಭಾರತದ ಮೇಲೆ...

ಹೋರಾಟಗಾರ ಸೋನಮ್ ವಾಂಗ್ಚುಕ್ ಬಂಧನ ರದ್ದುಗೊಳಿಸಿದ ಕೇಂದ್ರ

ಲಡಾಖ್‌ನಲ್ಲಿ ಶಾಂತಿಯನ್ನು ಮರುಸ್ಥಾಪಿಸಲು ಮತ್ತು ಮಾತುಕತೆಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವ ಉದ್ದೇಶದಿಂದ, ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (ಎನ್‌ಎಸ್‌ಎ) ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಹಿಂಪಡೆದಿದೆ ಎಂದು ವರದಿಯಾಗಿದೆ. ಸರ್ಕಾರ...

‘ಭಾರತವನ್ನು ಬೆದರಿಸುವಲ್ಲಿ ತಿಂಗಳುಗಟ್ಟಲೆ ಕಳೆದ ಅಮೆರಿಕ ಈಗ ಜಗತ್ತನ್ನ ಬೇಡಿಕೊಳ್ಳುತ್ತಿದೆ’: ರಷ್ಯಾದ ತೈಲ ವಿಚಾರದ ಕುರಿತು ಇರಾನ್ ಟೀಕೆ

ಟೆಹ್ರಾನ್: ರಷ್ಯಾದ ತೈಲದ ವಿಷಯದಲ್ಲಿ ಅಮೆರಿಕವು ದ್ವಿಮುಖ ನೀತಿಯನ್ನು ಅನುಸರಿಸುತ್ತಿದೆ ಎಂದು ಇರಾನ್ ಶನಿವಾರ ಆರೋಪಿಸಿದೆ. ವಾಷಿಂಗ್ಟನ್ ಈಗ ಒತ್ತಡ ಮತ್ತು ನಿರ್ಬಂಧಗಳ ಮೂಲಕ ನಿರ್ಬಂಧಿಸಲು ಪ್ರಯತ್ನಿಸಿದ ಅದೇ ಕಚ್ಚಾ ತೈಲವನ್ನು ಖರೀದಿಸಲು...

ಗಾಝಾ ನರಮೇಧ : ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ಇಸ್ರೇಲ್‌ ಪರ ಅಮೆರಿಕ ವಕಾಲತ್ತು

ಗಾಝಾ ನರಮೇಧಕ್ಕೆ ಸಂಬಂಧಿಸಿದಂತೆ ಇಸ್ರೇಲ್ ವಿರುದ್ದ ಅಂತಾರಾಷ್ಟ್ರೀಯ ನ್ಯಾಯಾಲಯದಲ್ಲಿ ದಕ್ಷಿಣ ಆಫ್ರಿಕಾ ಹೂಡಿರುವ ಪ್ರಕರಣದಲ್ಲಿ ಅಮೆರಿಕ ಸೇರಿದಂತೆ ಕೆಲ ರಾಷ್ಟ್ರಗಳು ಮಧ್ಯ ಪ್ರವೇಶಿಸಿದ್ದು, ಇಸ್ರೇಲ್ ಪರ ವಕಾಲತ್ತು ವಹಿಸಲು ಮುಂದಾಗಿವೆ ಎಂದು ವರದಿಯಾಗಿದೆ. ದಿ...