Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...