Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...