Homeಮುಖಪುಟಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

ಹೊಸ ವೈರಸ್‌ಗಳ ಹುಟ್ಟಿಗೆ ಕಾರಣವೇನು? ಇವುಗಳ ಮುಂದೆ ಮಾನವ ಬಲಹೀನನೆ?

- Advertisement -
- Advertisement -

ಹೊಸ ಕೊರೊನಾ ವೈರಾಣು ಇಡೀ ಜಗತ್ತನ್ನೇ ಸ್ತಬ್ಧಗೊಳಿಸಿದೆ. ಈ ಹಿಂದೆ ಝೀಕಾ, ಎಬೊಲಾ, ಸಾರ್ಸ್‌ನಂತ ವೈರಾಣುಗಳು ನಡುಕ ಹುಟ್ಟಿಸಿ ಹೋಗಿದ್ದವು. ಮನುಷ್ಯರ ಸಾಧನೆ, ನಾಗರಿಕತೆ, ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರು, ʼನಿರ್ಜೀವಿʼ ವೈರಸ್‌ ಒಂದು ಇದನ್ನೆಲ್ಲಾ ಬುಡಮೇಲು ಮಾಡುತ್ತಿದೆ ಎನ್ನುವ ಪ್ರಶ್ನೆ ಕಾಡುವಂತಾಗಿದೆ. ನಾವು ಇಷ್ಟು ಬಲಹೀನ ಮತ್ತು ದುರ್ಬಲರೇ ಎನ್ನುವಂತಾಗಿದೆ. ಅನೇಕ ಬಾರಿ ನಮ್ಮ ಹೆಗ್ಗಳಿಕೆಯ ಯಶಸ್ಸು ಕಲ್ಲಿನ ಮೇಲೆ ಬರೆದದ್ದಲ್ಲ ಮರಳಿನ ಮೇಲೆ ಎನ್ನುವುದುಂಟು. ಯಾವಾಗ ಬೇಕಾದರು ಅಳಿಸಿ ಹೋಗಬಹುದು.

ಇದೇ ಸಂದರ್ಭದಲ್ಲಿ ಹೊಸ ಹೊಸ ಮಾರಕ ರೋಗಾಣುಗಳ ಹುಟ್ಟಿಗೆ ಕಾರಣವಾದರೂ ಏನು ಎನ್ನುವ ಪ್ರಶ್ನೆ ಹುಟ್ಟುತ್ತದೆ. ನಾವು ಕುಳಿತಿರುವ ಮರದ ಕೊಂಬೆಯನ್ನು ನಾವು ಕಡೆಯುತ್ತಿದ್ದೇವಾ? ಸೂಫಿ ಸಂತ ರೂಮಿ ಒಂದೆಡೆ ಹೀಗೆನ್ನುತ್ತಾನೆ “ಕೊನೆಗೂ ನನ್ನ ಶತ್ರು ನನಗೆ ಸಿಕ್ಕ, ನಾನೇ ಅವನು”. ಪರಿಸರ ಮತ್ತು ಪೃಕೃತಿ ಸಮತೋಲನ ಎಲ್ಲ ಜೀವಜಗತ್ತಿಗೆ ಆಧಾರ. ಪರಸ್ಪರ ಒಂದನ್ನೊಂದು ಅವಲಂಬಿಸಿ ಹೊಸೆದು ಹೆಣೆದು ಬದುಕುವ ಬಗೆ. ಎಲ್ಲವನ್ನು ಸಮಗ್ರವಾಗಿ ನೋಡುವ ಚಿಂತನೆ ನಮ್ಮಲ್ಲಿ ಬಹಳ ಕಡಿಮೆಯಾಗುತ್ತಿದೆ.

ಸೂಕ್ಷ್ಮ ಜೀವಿಯನ್ನು ಇರುವೆಯಲ್ಲಿ, ಇರುವೆಯನ್ನು ಮರದಲ್ಲಿ, ಮರವನ್ನು ಕಾಡಿನಲ್ಲಿ, ಕಾಡನ್ನು ಪೃಕೃತಿಯಲ್ಲಿ, ಪೃಕೃತಿಯನ್ನು ವಿಶ್ವದಲ್ಲಿ ಬೆರೆತಿರುವುದನ್ನು ಪರಿಸರ ವಿಜ್ಞಾನ ತೋರಿಸಿಕೊಡುತ್ತಿದೆ. ಈ ಮೂಲ ಬೆಸುಗೆಯನ್ನು ತುಂಡರಿಸುವುದರಿಂದ ಹೊಸ ರೋಗಾಣುಗಳು ಅಥವಾ ಸಾಧು ಜೀವಿಗಳು ಕ್ರೂರ ಜೀವಿಗಳಾಗುವುದು ಸಾಧ್ಯ.

ಲೈಮ್‌ ಕಾಯಿಲೆ

ಕಾಡಿನಲ್ಲಿರುವ ಉಣ್ಣೆಯಿಂದ ನಮ್ಮಲ್ಲಿ ಮಂಗನಕಾಯಿಲೆ, ಅದೇರೀತಿ ಬೇರೆ ಬೇರೆ ದೇಶಗಳಲ್ಲಿ ಇನ್ನೊಂದು ಜಾತಿಯ ಉಣ್ಣೆಯಿಂದ ಲೈಮ್‌ ಕಾಯಿಲೆ (lyme disease) ಎನ್ನುವ ಮಾರಕ ಕಾಯಿಲೆ ಇದೆ. ಮಂಗನಕಾಯಿಲೆಯ ವೈರಾಣು, ಅದಕ್ಕೆ ಲಸಿಕೆ ಬಗ್ಗೆ ಈಗ ಸಾಕಷ್ಟು ತಿಳಿದಿದ್ದರು, ಅದರ ಹುಟ್ಟು ಮತ್ತು ಹರಿವು ಇನ್ನು ನಿಗೂಢವಾಗಿದೆ.  ಇದೇ ರೀತಿಯ ಉಣ್ಣೆಯಿಂದ ಬರುವ ಲೈಮ್‌ ಕಾಯಿಲೆಯ ಬಗ್ಗೆ ಕೆಲವು ಅಧ್ಯಯನಗಳಿಂದ ಹೊಸ ಪ್ರಾಕೃತಿಕ ಸಂಬಂಧಗಳು ಹೊರಬಿದ್ದಿವೆ. ಈ ಉಣ್ಣೆ ಬದುಕಲು ಮತ್ತು ಹೇರಳವಾಗಿ ಸಂತಾನೋತ್ಪತ್ತಿ ಮಾಡಲು ಇಲಿಗಳ ರಕ್ತ ಬೇಕು. ಇಲಿಗಳ ಸಂತತಿ ಹೆಚ್ಚಿದ್ದರೆ ಉಣ್ಣೆಯ ಸಂತತಿ ಹೆಚ್ಚುತ್ತದೆ. ಪಾಶ್ಚಾತ್ಯ ದೇಶಗಳಲ್ಲಿ ಇಲಿಗಳನ್ನು ತಿನ್ನುವ ನರಿಗಳಿವೆ. ಆದರೆ ನರಿ ಬೇಟೆ ಪಾಶ್ಚಾತ್ಯರಲ್ಲಿ ಮೋಜಿನ ಆಟ. ಎಲ್ಲಿ ನರಿ ಸಂಖ್ಯೆ ಕಡಿಮೆಯಾಗುತ್ತದೆಯೋ ಅಲ್ಲಿ ಇಲಿ ಸಂಖ್ಯೆ ಹೆಚ್ಚಾಗುತ್ತದೆ. ಎಲ್ಲಿ ಇಲಿ ಹೆಚ್ಚಾಗುತ್ತದೆಯೋ ಉಣ್ಣೆಯೂ ಹೆಚ್ಚಾಗಿ ಮಾರಣಾಂತಿಕ ಲೈಮ್‌ ಕಾಯಿಲೆ ಹೆಚ್ಚಾಗುವ ಸಾಧ್ಯತೆಯನ್ನು ಸಂಶೋಧನೆಗಳು ತಿಳಿಸಿವೆ.

ಇತ್ತೀಚೆಗೆ ಮಲೇರಿಯಾ ರಹಿತ ಕಾಫಿ ಎನ್ನುವ ಸುದ್ದಿಯಾಯಿತು. ಇದಕ್ಕೆ ಕಾರಣ ಕಾಡು ನಾಶಮಾಡಿ, ಕಾಫಿ ಬೆಳೆದಾಗ ಕಾಡಿನ ಸೊಳ್ಳೆ ಊರಿಗೆ ಬಂದು ಮಲೇರಿಯಾ ಕಾಯಿಲೆ ಹರಡುವುದು. ಹಾಗೆಯೇ ಕಾಡು ನಾಶವಾದಾಗ ಸೊಳ್ಳೆ ತಿನ್ನುವ ಕಪ್ಪೆ ನಾಶವಾಗುವುದು ಕಾರಣ. ಇದಕ್ಕೆ ಕಾಡನ್ನು ಉಳಿಸಿಕೊಂಡು ಬೆಳೆದ ಕಾಫಿಯನ್ನು ಮಲೇರಿಯಾ ಮುಕ್ತ ಕಾಫಿ ಎನ್ನುವುದಾಗಿದೆ. ಹಿಂದೊಮ್ಮೆ ಡಾಲ್ಡಾ ಎಣ್ಣೆ ಒರಾಂಗುಟನ್‌ನನ್ನು ಕೊಲ್ಲುತ್ತದೆ ಎನ್ನುವ ಸುದ್ದಿ ಬಂದಿತ್ತು. ಕಾರಣ ಡಾಲ್ಡಾ ಮಾಡಲು ಕಾಡು ಕಡಿದು ತಾಳೆ ಎಣ್ಣೆ ಬೆಳೆಯಬೇಕಾಗುತ್ತದೆ. ಬಾರ್ನಿಯೊ ಕಾಡು ಒರಾಂಗುಟನ್‌ ಬದುಕುವ ತಾಣ. ಅಲ್ಲಿ ಕಾಡನ್ನು ಕಡೆದು ಅಥವಾ ಬೆಂಕಿ ಹಚ್ಚಿ ಸರ್ವನಾಶ ಮಾಡಿ ತಾಳೆ ಬೆಳೆದಾಗ ಜೀವ ಸಂಕುಲ ನಾಶವಾಗುತ್ತದೆ.

ಎಲ್‌ ನಿನ್ಯೊ (El nino), ಲಾ ನಿನ್ಯಾ( La nina) ಜಾಗತಿಕ ತಾಪಮಾನದಿಂದ ಉಂಟಾಗಿರುವ ಸಾಗರದ ಪ್ರಕ್ರಿಯೆ. ಇದರಿಂದ ಪ್ರಕೃತಿಯಲ್ಲಿ ಅನೇಕ ಏರು ಪೇರುಗಳನ್ನು ಕಾಣಬಹುದು. ಅದೇ ರೀತಿ ಇಂಡಿಯನ್‌ ಓಶನ್‌ ಡೈಪೊಲ್‌ ಎನ್ನುವ ಸಾಗರ ತಾಪಮಾನದ ಅಲೆಗಳಿಂದ ಇತ್ತಿಚೆಗೆ ಆಸ್ಟ್ರೇಲಿಯಾ ಖಂಡಕ್ಕೆ ಬೆಂಕಿ ಬಿದ್ದದ್ದು ಹೊರ ನೋಟಕ್ಕೆ ಕಾಣುವ ಕಾರ್ಯಕಾರಣ ಸಂಬಂಧಗಳನ್ನು ಬುಡಮೇಲು ಮಾಡುತ್ತದೆ.

ಎಲ್‌ ನಿನ್ಯೊ
ಲಾ ನಿನ್ಯಾ

ಬಾವಲಿಯಲ್ಲಿ ಅನೇಕ ರೀತಿಯ ಕರೊನಾದಂತಹ ವೈರಾಣುಗಳು ಮನೆಮಾಡಿವೆ. ಪರಸ್ಪರ ಹೊಂದಿಕೊಂಡು ಬಾವಲಿಯ ಜೊತೆ ಬದುಕುತ್ತಿವೆ. ಹೀಗಾಗಿ ಬಾವಲಿಗೆ ಮಾತ್ರ ಕ್ಯಾನ್ಸರ್‌ ಬರುವುದಿಲ್ಲ ಎನ್ನುವುದು ಒಂದು ರೋಚಕ ಸಂಗತಿಯೇ. ಆದರೆ ಬಾವಲಿಯ ಪ್ರಕೃತಿ ತಾಣವನ್ನು ಉಲ್ಲಂಘಿಸಿದಾಗ ಅತ್ತಿಂದತ್ತ ವೈರಾಣುಗಳು ಕಾಲಿಟ್ಟಲ್ಲಿ ಮನುಕುಲಕೆ ನಡುಕ ಉಂಟಾಗುತ್ತದೆ. ಮುಂದೆ ನಮ್ಮ ವಿಜ್ಞಾನ ಹೆಚ್ಚು ಹೆಚ್ಚು ಇಂತಹ ಬೆಸುಗೆಯ ಬಗ್ಗೆ ಬೆಳಕು ಚೆಲ್ಲಬೇಕಾಗಿದೆ. ಫ್ರಾನ್ಸಿಸ್‌ ಬೇಕನ್‌ ಬಹಳ ವರ್ಷಗಳ ಹಿಂದೆ ಪ್ರಕೃತಿಯನ್ನು ನಿಯಂತ್ರಿಸುವುದು ಅದನ್ನು ವಿಧೇಯಿಸುವುದರಿಂದ ಮಾತ್ರ ಸಾಧ್ಯ ಎಂದಿದ್ದ. (Nature to be commanded must be obeyed)

(ಲೇಖಕರು ಚಿಂತಕರು ಮತ್ತು ಬರಹಗಾರರು.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...