Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...