Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...