Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...