Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...