Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...