Homeಮುಖಪುಟ‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

‘ಎಲ್‌ಕೆಜಿ ಮಗು’ ಎಂದು ಅಪಹಾಸ್ಯ ಮಾಡಿದ್ದಕ್ಕೆ ದೇಶದ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ಹೇಳಿದ್ದೇನು?

- Advertisement -
- Advertisement -

‘ಎಲ್‌ಕೆಜಿ ಮಕ್ಕಳನ್ನು ಮೇಯರ್‌ ಮಾಡಲಾಗಿದೆ’ ಎಂದು ಬಿಜೆಪಿ ಕೌನ್ಸಿಲರ್‌ ನೀಡಿದ್ದ ಹೇಳಿಕೆಗೆ ಮತ್ತು ತನ್ನನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡುವ ಜನರಿಗೆ, ದೇಶದ ಅತ್ಯಂತ ಕಿರಿಯ ಮೇಯರ್‌‌ ಆರ್ಯ ರಾಜೇಂದ್ರನ್ ತಕ್ಕುದಾದ ತಿರುಗೇಟು ನೀಡಿದ್ದಾರೆ. ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದು ಹಲವಾರು ಜನರು ‘ಆರ್ಯ’ ಅವರನ್ನು ಅಭಿನಂದಿಸಿದ್ದಾರೆ.

“ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಕಾರ್ಯನಿರ್ವಹಿಸಲು ನನಗೆ ಗೊತ್ತು. ನನ್ನ ಪಕ್ವತೆಯನ್ನು ಅಳೆಯಲು ಬರಬೇಡಿ. ಅಂತಹ ಒಂದು ವ್ಯವಸ್ಥೆಯಲ್ಲೇ ನಾನು ಬೆಳೆದು ಬಂದಿದ್ದೇನೆ, ಅದರ ಬಗ್ಗೆ ನನಗೆ ಹೆಮ್ಮೆಯಿದೆ” ಎಂದು ಅವರು ಖಾರವಾಗಿ ಹೇಳಿದ್ದಾರೆ.

ಇದನ್ನೂ ಓದಿ: ದೇಶದ ಅತಿ ಕಿರಿಯ ಮೇಯರ್ ಆಗಿ ಕೇರಳ ಸಿಪಿಎಂನ ಆರ್ಯ ರಾಜೇಂದ್ರನ್ ಪ್ರಮಾಣ ವಚನ

ತನ್ನ 21ನೇ ವಯಸ್ಸಿನಲ್ಲಿ ತಿರುವನಂತಪುರಂ ಮೇಯರ್ ಆಗಿ ದೇಶದ ಅತ್ಯಂತ ಕಿರಿಯ ಮೇಯರ್‌ ಎಂಬ ಕೀರ್ತಿಗೆ ಪಾತ್ರರಾಗಿದ್ದ ಆರ್ಯ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಬೆಂಬಲಿಗರು ನಿರಂತರವಾಗಿ ಅಪಹಾಸ್ಯ ಮಾಡುತ್ತಲೆ ಬಂದಿದ್ದಾರೆ. ಇತ್ತೀಚೆಗೆ ಬಿಜೆಪಿ ಕೌನ್ಸಿಲರ್ ಕರಮನ ಅಜಿತ್ ಅವರು ಕೂಡಾ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಇದೆ ರೀತಿ ಬರೆದಿದ್ದರು.

ಅವರು ತನ್ನ ಫೇಸ್‌‌ಬುಕ್‌ನಲ್ಲಿ, “ಜನರ ತೆರಿಗೆ ಹಣವನ್ನು ಬಳಸಿಕೊಂಡು ಖರೀದಿಸುವ ಲಕ್ಷಾಂತರ ಮೌಲ್ಯದ ವಸ್ತುಗಳನ್ನು ಮೇಯರ್‌ ಕುರ್ಚಿಯಲ್ಲಿ ಕುಳಿತು ಆಟವಾಡುತ್ತಾ ‘ಎಕೆಜಿ ಕೇಂದ್ರದ ಎಲ್‌ಕೆಜಿ ಮಕ್ಕಳು’ ನಾಶಪಡಿಸಬಾರದು” ಎಂದು ಹೇಳಿದ್ದರು.

‘ಎಕೆಜಿ ಕೇಂದ್ರ’ ಎಂದರೆ ಮಾಕ್ರ್ಸ್‌ವಾದಿ ಕಮ್ಯುನಿಸ್ಟ್ ಪಾರ್ಟಿ‌ ಆಫ್ ಇಂಡಿಯಾದ ಕೇರಳದ ಪ್ರಧಾನ ಕಚೇರಿಯಾಗಿದೆ.

ಅಷ್ಟಕ್ಕೆ ನಿಲ್ಲಿಸದ ಕೌನ್ಸಿಲರ್, “ಕಾರ್ಪೊರೇಷನ್ ಮಕ್ಕಳ ಉದ್ಯಾನವನವಲ್ಲ. ಇದು ಜನರ ಹಣವನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾದ ಸ್ಥಳವಾಗಿದೆ ಎಂದು ನಾನು ವಿನಮ್ರವಾಗಿ ನೆನಪಿಸುತ್ತೇನೆ” ಎಂದು ಹೇಳಿದ್ದರು.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಡಲು ನರ್ಸ್‌ ಆಗಿ ಬದಲಾದ ಮುಂಬೈ ಮೇಯರ್‌: ಭಾರೀ ಮೆಚ್ಚುಗೆ

ಇದಕ್ಕೆ ಕೌನ್ಸಿಲ್ ಸಭೆಯ ಸಂದರ್ಭದಲ್ಲಿ ಉತ್ತರಿಸಿದ ಮೇಯರ್ ಆರ್ಯ ರಾಜೇಂದ್ರನ್, “ನಾನು ನಿಮಗೆ ಒಂದು ವಿಷಯ ಹೇಳುತ್ತೇನೆ. ಕಳೆದ ಆರು ತಿಂಗಳಿನಿಂದ ಅನೇಕ ಟೀಕೆಗಳು ಬಂದಿವೆ. ಈ ಸಭೆಯಲ್ಲಿ ಸಮರ್ಥನೀಯವಾದ ಯಾವ ವಿಷಯವನ್ನಾದರೂ ಹೇಳಬಹುದು. ಆದರೆ ನೀವೆಲ್ಲರೂ ನನ್ನ ವಯಸ್ಸಿನ ಬಗ್ಗೆ, ಪ್ರಭುದ್ದತೆಯ ಬಗ್ಗೆ ಅನೇಕ ಬಾರಿ ವೈಯಕ್ತಿಕವಾಗಿ ಟೀಕಿಸಿದ್ದೀರಿ. ನಾನು ಕೂಡಾ ಇಷ್ಟು ದಿನ ಅದಕ್ಕೆ ಉತ್ತರಿಸಿರಲಿಲ್ಲ, ಆದರೆ ಈಗ ಅದಕ್ಕೆ ಪ್ರತ್ಯುತ್ತರ ನೀಡಲೆ ಬೇಕಾದ ಕಾಲ ಬಂದಿದೆ

ಇಲ್ಲಿನ ಕೆಲವು ಸದಸ್ಯರು ಇಂತಹ ಟೀಕೆಗಳನ್ನು ಮಾಡಿದ್ದಾರೆ. ನಾನು ನಿಮಗೆ ಸ್ಪಷ್ಟವಾಗಿ ಹೇಳುತ್ತೇನೆ, ನಾನು ಈ ವಯಸ್ಸಿನಲ್ಲಿ ಮೇಯರ್ ಆಗಿದ್ದರೆ, ಅದಕ್ಕೆ ತಕ್ಕಂತೆ ಹೇಗೆ ಕೆಲಸ ಮಾಡಬೇಕೆಂದು ನನಗೆ ತಿಳಿದಿದೆ. ಅಂತಹ ವ್ಯವಸ್ಥೆಯ ಮೂಲಕ ನಾನು ಬೆಳೆದಿದ್ದೇನೆ ಎಂದು ನಾನು ಹೆಮ್ಮೆಯಿಂದ ಹೇಳಬಲ್ಲೆ” ಎಂದು ಅವರು ತಿಳಿಸಿದ್ದಾರೆ.

ರಾಜಕೀಯ ಚರ್ಚೆಯಗಳ ಬಗ್ಗೆ ಮೇಯರ್ ರಾಜೇಂದ್ರನ್ ಮಾತನಾಡುತ್ತಿರುವಾಗ, ಎದುರಾಳಿ ಪಕ್ಷದ ಸದಸ್ಯರು ಬೊಬ್ಬೆ ಹಾಕುತ್ತಲೆ ಇದ್ದರು. ಆದರೆ ಆರ್ಯ ಅವರು ತಮ್ಮ ಮಾತನ್ನು ನಿಲ್ಲಿಸದೆ ಮಾತನಾಡಿದ್ದಾರೆ. ಕೌನ್ಸಿಲರ್‌‌ ಅಜಿತ್‌ ಅವರ ಫೇಸ್ಬುಕ್‌ ಪೋಸ್ಟ್‌ಗೆ ಬಂದ ಆಕ್ಷೇಪಾರ್ಹ‌ ಕಾಮೆಂಟ್‌‌‌ಗಳನ್ನು ಕೂಡಾ ಉಲ್ಲೇಖಿಸಿದ್ದಾರೆ.

“ಯಾರು ಫೇಸ್‌ಬುಕ್ ಮತ್ತು ವಾಟ್ಸಪ್‌ನಲ್ಲಿ ಅಪಪ್ರಚಾರದ ಕಾಮೆಂಟ್‌ಗಳನ್ನು ಮಾಡುತ್ತಾರೆಯೊ ಆಗ ಈ ಮೇಯರ್‌ ಕೂಡಾ ತಮ್ಮ ಮನೆಯಲ್ಲಿರುವ ಸಹೋದರಿಯರು ಮತ್ತು ತಾಯಂದಿರಂತೆಯೆ ಎಂದು ನೆನಪಿರಲಿ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಮೆರಿಕಾದ ಈ ಪಟ್ಟಣದ ಮೇಯರ್‌ ಫ್ರೆಂಚ್ ಬುಲ್‌ಡಾಗ್!

ಮೇಯರ್ ಆರ್ಯ ರಾಜೇಂದ್ರನ್ ತನ್ನ ಮಾತಿನ ಕೊನೆಯಲ್ಲಿ, “ಯಾರು ಮಹಿಳೆಯನ್ನು ಅವಮಾನಿಸುತ್ತಾರೋ ಅದು ತುಂಬಾ ಕೆಟ್ಟ ವಿಷಯ. ಅದು ಯಾವ ಪಕ್ಷವಾದರೂ ಸರಿ. ನೀವು ಯಾವುದನ್ನು ಕೊಡುತ್ತೀರೊ ಅದನ್ನೆ ಮರಳಿ ಪಡೆಯುತ್ತೀರಿ ಎಂಬುವುದನ್ನು ನೀವು ಮೊದಲು ಅರ್ಥಮಾಡಿಕೊಳ್ಳಬೇಕು” ಎಂದು ಹೇಳಿದ್ದಾರೆ.

ಆರ್ಯ ರಾಜೇಂದ್ರನ್ ಅವರ ದಿಟ್ಟ ಪ್ರತ್ಯುತ್ತರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ಶ್ಲಾಘನೆ ವ್ಯಕ್ತವಾಗಿದ್ದು, ಪ್ರಸ್ತುತ ವೈರಲ್‌ ಆಗಿದೆ.

ಇದನ್ನೂ ಓದಿ: 86 ಮೇಯರ್‌‌/ಅಧ್ಯಕ್ಷ ಸ್ಥಾನಗಳಲ್ಲಿ 52 ಹುದ್ದೆಗಳನ್ನು ಮಹಿಳೆಯರಿಗೆ ಮೀಸಲಿಟ್ಟ ‘ಜಗನ್‌’ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...