Homeಕರ್ನಾಟಕಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಈ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಚುನಾವಣೆ ವೇಳೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರು. ಆದರೆ ಈಗ 200 ಯೂನಿಟ್ ಒಳಗೆ ಬಳಸಿದರೆ ಮಾತ್ರ ಉಚಿತ ಎನ್ನುತ್ತಿದ್ದಾರೆ. ಈಗ ಸಿಎಂ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ಕೊಡುವುದಾಗಿ ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯೂನಿಟ್ ವ್ಯತ್ಯಾಸವಾಗುತ್ತದೆ.‌ ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ಸಿದ್ದರಾಮಯ್ಯ ಅವರದ್ದು ಚುನಾವಣೆ ಮೊದಲು ಒಂದು ಮಾತು ಈಗ ಒಂದು ಮಾತು. ಅನ್ನಭಾಗ್ಯ ಯೋಜನೆ ಜಾರಿಯಲ್ಲೂ ಸ್ಪಷ್ಟತೆ ಇಲ್ಲ. ಮೊದಲು ನಾವೇ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಆಹಾರ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಉಚಿತ ಅಕ್ಕಿಯನ್ನೂ ಬಳಸಿಕೊಂಡು ತಮ್ಮ ಕ್ರೆಡಿಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಿದೆ. 10 ಕೆಜಿಯಲ್ಲಿ ರಾಗಿ, ಜೋಳ ಸೇರಿದೆಯಾ, ಇಲ್ಲಾ ಹೆಚ್ಚುವರಿ ಕೊಡ್ತಾರಾ?” ಎಂದು ಪ್ರಶ್ನಿಸಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ದೋಖಾ ಇದೆ. ವಿಶೇಷವಾಗಿ ಬಡವರ ಮನೆಯಲ್ಲಿ ಹಿರಿಯ ಮಹಿಳೆಯರಿರುತ್ತಾರೆ. ಆನ್‌ಲೈನ್ ಅರ್ಜಿ ಹಾಕಲು ಹೇಳಿ ಅವರಿಗೆ ಯೋಜನೆ ಲಾಭ ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಎಲ್ಲ ಪಂಚಾಯತಿಗಳಲ್ಲಿ ಪಿಡಿಒಗಳಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಿ ಕೊಡಬೇಕಿತ್ತು. ಅರ್ಜಿ ಹಾಕಲು ಒಂದು ತಿಂಗಳು, ಪ್ರಕ್ರಿಯೆ ಮಾಡಲು ಒಂದು ತಿಂಗಳು ಕಾಲಹರಣ ಮಾಡುವ ಲೆಕ್ಕ ಇದರಲ್ಲಿ ಅಡಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

“ರಾಜ್ಯ ಸರ್ಕಾರವೇ ಎಲ್ಲರ ಮನೆಗಳಿಗೆ ಹೋಗಿ ಮಾಹಿತಿ ಪಡೆದು ಯೋಜನೆ ಜಾರಿ ಮಾಡಬೇಕು. ಇನ್ನು ಎಸಿ ಬಸ್ಸು, ಲಗ್ಜುರಿ ಬಸ್ ಇಲ್ಲ ಅಂತ ಹೇಳಿದ್ದಾರೆ. ಕೆಂಪು ಬಸ್ ಮಾತ್ರ ಗ್ಯಾರಂಟಿ ಅಂತ ಆಯಿತು. ಯುವ ನಿಧಿ ಯೋಜನೆಯನ್ನು 2022-23 ಪಾಸಾದ ಡಿಗ್ರಿ ಹೋಲ್ಡರ್ಸ್‌ಗೆ ಕೊಡುವುದಾಗಿ ಹೇಳುತ್ತಾರೆ. ಡಿಗ್ರಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಹೀಗಾಗಿ ಹೆಚ್ಚಿನ ನಿರುದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ಮತ್ತೆ ಈ ಯೋಜನೆಗಳ ಜಾರಿಗೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ಹೇಳಿಲ್ಲ” ಎಂದಿದ್ದಾರೆ.

“ಸರ್ಕಾರ ಹೆಚ್ಚಿನ ಆದಾಯ ತರದೇ ಇರುವ ಹಣವನ್ನೇ ಖರ್ಚು ಮಾಡಿದರೆ, ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡದೇ ಹೋದರೆ, ಆರ್ಥಿಕ ಹೊರೆ ಬೀಳಲಿದೆ. ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಇವರು ತಾವು ಮಾಡುವ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಅವರು ಮಾತಿಗೆ ತಪ್ಪಿದ್ದಾರೆ‌. ಹೇಳುವುದೊಂದು ಮಾಡುವುದೊಂದು ಮಾಡಿದ್ದಾರೆ. ರಾಜ್ಯದ ಜನತೆ ಇದೆಲ್ಲವನ್ನು ಗಮನಿಸುತ್ತಿದೆ. ರಾಜ್ಯದ ಜನರ ನಿರೀಕ್ಷೆಗಳು ಹುಸಿಯಾಗಿವೆ. ಒಟ್ಟಿನಲ್ಲಿ ರಾಜ್ಯದ ಜನರ ತೆರಿಗೆ ಹಣ ಅಭಿವೃದ್ದಿ ಯೋಜನೆಗೆ ಖರ್ಚಾಗಲಿ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...