Homeಕರ್ನಾಟಕಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

ಗ್ಯಾರಂಟಿ ಜಾರಿಯ ಕುರಿತು ಮಾಜಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

- Advertisement -
- Advertisement -

ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳ ಕುರಿತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರತಿಕ್ರಿಯೆ ನೀಡಿದ್ದು, “ಈ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

ಬೆಂಗಳೂರಿನ ತಮ್ಮ ಸರ್ಕಾರಿ ನಿವಾಸದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, “ಚುನಾವಣೆ ವೇಳೆ ಪ್ರತಿ ಮನೆಗೂ 200 ಯೂನಿಟ್ ಉಚಿತ ವಿದ್ಯುತ್ ಎಂದು ಹೇಳಿದ್ದರು. ಆದರೆ ಈಗ 200 ಯೂನಿಟ್ ಒಳಗೆ ಬಳಸಿದರೆ ಮಾತ್ರ ಉಚಿತ ಎನ್ನುತ್ತಿದ್ದಾರೆ. ಈಗ ಸಿಎಂ ವಾರ್ಷಿಕ ಸರಾಸರಿ ಲೆಕ್ಕ ಹಾಕಿ ಉಚಿತ ಕೊಡುವುದಾಗಿ ಹೇಳುತ್ತಾರೆ. ಇದು ಇವರ ಹಿಡನ್ ಅಜೆಂಡಾ ಆಗಿದೆ. ಇದರಿಂದ ಸರಾಸರಿ 120 ರಿಂದ 125 ಯೂನಿಟ್ ವ್ಯತ್ಯಾಸವಾಗುತ್ತದೆ.‌ ಸರಾಸರಿ ಬಳಕೆ ಲೆಕ್ಕ ಹಾಕುವುದು ಹಿಡನ್ ಅಜೆಂಡಾ. ಇವರು ಗ್ಯಾರಂಟಿಯಲ್ಲಿ ದೋಖಾ ಮಾಡುತ್ತಿದ್ದಾರೆ” ಎಂದು ಟೀಕಿಸಿದ್ದಾರೆ.

“ಸಿದ್ದರಾಮಯ್ಯ ಅವರದ್ದು ಚುನಾವಣೆ ಮೊದಲು ಒಂದು ಮಾತು ಈಗ ಒಂದು ಮಾತು. ಅನ್ನಭಾಗ್ಯ ಯೋಜನೆ ಜಾರಿಯಲ್ಲೂ ಸ್ಪಷ್ಟತೆ ಇಲ್ಲ. ಮೊದಲು ನಾವೇ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಆಹಾರ ಧಾನ್ಯ ಕೊಡುತ್ತೇವೆ ಎಂದಿದ್ದಾರೆ. ಹಾಗೆಯೇ ಕೇಂದ್ರ ಸರ್ಕಾರದ ಉಚಿತ ಅಕ್ಕಿಯನ್ನೂ ಬಳಸಿಕೊಂಡು ತಮ್ಮ ಕ್ರೆಡಿಟ್ ಹೆಚ್ಚಿಸಿಕೊಳ್ಳುತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ರಾಜ್ಯದ ಜನರನ್ನ ಯಾಮಾರಿಸುವ ಕೆಲಸ ಮಾಡುತ್ತಿದೆ. 10 ಕೆಜಿಯಲ್ಲಿ ರಾಗಿ, ಜೋಳ ಸೇರಿದೆಯಾ, ಇಲ್ಲಾ ಹೆಚ್ಚುವರಿ ಕೊಡ್ತಾರಾ?” ಎಂದು ಪ್ರಶ್ನಿಸಿದ್ದಾರೆ.

“ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ದೋಖಾ ಇದೆ. ವಿಶೇಷವಾಗಿ ಬಡವರ ಮನೆಯಲ್ಲಿ ಹಿರಿಯ ಮಹಿಳೆಯರಿರುತ್ತಾರೆ. ಆನ್‌ಲೈನ್ ಅರ್ಜಿ ಹಾಕಲು ಹೇಳಿ ಅವರಿಗೆ ಯೋಜನೆ ಲಾಭ ಸಿಗದಂತೆ ಮಾಡುವ ಹುನ್ನಾರ ಅಡಗಿದೆ. ಎಲ್ಲ ಪಂಚಾಯತಿಗಳಲ್ಲಿ ಪಿಡಿಒಗಳಿದ್ದಾರೆ. ಅವರ ಮೂಲಕ ಮಾಹಿತಿ ಸಂಗ್ರಹಿಸಿ ಕೊಡಬೇಕಿತ್ತು. ಅರ್ಜಿ ಹಾಕಲು ಒಂದು ತಿಂಗಳು, ಪ್ರಕ್ರಿಯೆ ಮಾಡಲು ಒಂದು ತಿಂಗಳು ಕಾಲಹರಣ ಮಾಡುವ ಲೆಕ್ಕ ಇದರಲ್ಲಿ ಅಡಗಿದೆ” ಎಂದು ತಿಳಿಸಿದ್ದಾರೆ.

ಇದನ್ನೂ ಓದಿರಿ: ಹೆಚ್ಚಿನ ಕಂಡಿಷನ್‌ಗಳಿಲ್ಲದೆ ಐದು ಗ್ಯಾರಂಟಿಗಳನ್ನು ಘೋಷಿಸಿದ ಸಿದ್ದರಾಮಯ್ಯ

“ರಾಜ್ಯ ಸರ್ಕಾರವೇ ಎಲ್ಲರ ಮನೆಗಳಿಗೆ ಹೋಗಿ ಮಾಹಿತಿ ಪಡೆದು ಯೋಜನೆ ಜಾರಿ ಮಾಡಬೇಕು. ಇನ್ನು ಎಸಿ ಬಸ್ಸು, ಲಗ್ಜುರಿ ಬಸ್ ಇಲ್ಲ ಅಂತ ಹೇಳಿದ್ದಾರೆ. ಕೆಂಪು ಬಸ್ ಮಾತ್ರ ಗ್ಯಾರಂಟಿ ಅಂತ ಆಯಿತು. ಯುವ ನಿಧಿ ಯೋಜನೆಯನ್ನು 2022-23 ಪಾಸಾದ ಡಿಗ್ರಿ ಹೋಲ್ಡರ್ಸ್‌ಗೆ ಕೊಡುವುದಾಗಿ ಹೇಳುತ್ತಾರೆ. ಡಿಗ್ರಿ ಮುಗಿಸಿ ಹೆಚ್ಚಿನ ವಿದ್ಯಾಭ್ಯಾಸಕ್ಕೆ ತೆರಳುತ್ತಾರೆ. ಹೀಗಾಗಿ ಹೆಚ್ಚಿನ ನಿರುದ್ಯೋಗಿಗಳಿಗೆ ಅನುಕೂಲ ಆಗುವುದಿಲ್ಲ. ಮತ್ತೆ ಈ ಯೋಜನೆಗಳ ಜಾರಿಗೆ ಎಷ್ಟು ಖರ್ಚಾಗುತ್ತದೆ ಎನ್ನುವುದನ್ನು ಹೇಳಿಲ್ಲ” ಎಂದಿದ್ದಾರೆ.

“ಸರ್ಕಾರ ಹೆಚ್ಚಿನ ಆದಾಯ ತರದೇ ಇರುವ ಹಣವನ್ನೇ ಖರ್ಚು ಮಾಡಿದರೆ, ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದೆ. ನಮ್ಮ ರಾಜ್ಯ ಅತಿ ಹೆಚ್ಚು ತೆರಿಗೆ ಸಂಗ್ರಹಿಸುವ ರಾಜ್ಯವಾಗಿದೆ. ಈಗಿರುವ ಆರ್ಥಿಕ ಪರಿಸ್ಥಿತಿ ಸರಿಯಾಗಿ ನಿರ್ವಹಣೆ ಮಾಡದೇ ಹೋದರೆ, ಆರ್ಥಿಕ ಹೊರೆ ಬೀಳಲಿದೆ. ಇವರು ಯಾವ ರೀತಿಯ ಸಾಲ ಪಡೆಯುತ್ತಾರೆ ಎನ್ನುವುದು ಸ್ಪಷ್ಟವಾಗಬೇಕು” ಎಂದು ಆಗ್ರಹಿಸಿದ್ದಾರೆ.

“ಇವರು ತಾವು ಮಾಡುವ ಯೋಜನೆಗಳಿಂದ ರಾಜ್ಯವನ್ನು ಆರ್ಥಿಕ ಸಂಕಷ್ಟಕ್ಕೆ ನೂಕುವ ಕೆಲಸ ಮಾಡಬಾರದು. ಅವರು ಮಾತಿಗೆ ತಪ್ಪಿದ್ದಾರೆ‌. ಹೇಳುವುದೊಂದು ಮಾಡುವುದೊಂದು ಮಾಡಿದ್ದಾರೆ. ರಾಜ್ಯದ ಜನತೆ ಇದೆಲ್ಲವನ್ನು ಗಮನಿಸುತ್ತಿದೆ. ರಾಜ್ಯದ ಜನರ ನಿರೀಕ್ಷೆಗಳು ಹುಸಿಯಾಗಿವೆ. ಒಟ್ಟಿನಲ್ಲಿ ರಾಜ್ಯದ ಜನರ ತೆರಿಗೆ ಹಣ ಅಭಿವೃದ್ದಿ ಯೋಜನೆಗೆ ಖರ್ಚಾಗಲಿ” ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...