Homeಮುಖಪುಟಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?

ಬೆಂಬಲಿಗರಿಗೆ ಆಸ್ಪತ್ರೆಯಿಂದಲೇ ವಿಡಿಯೊ ಸಂದೇಶ: ಮಮತಾ ಬ್ಯಾನರ್ಜಿ ಹೇಳಿದ್ದೇನು?

- Advertisement -
- Advertisement -

ನಂದಿಗ್ರಾಮದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಮೇಲೆ ಬುಧವಾರ ಹಲ್ಲೆ ನಡೆದಿದ್ದು, ಇದನ್ನು ವಿರೋಧಿಸಿ ಪಶ್ಚಿಮ ಬಂಗಾಳದಲ್ಲಿ ಪ್ರತಿಭಟನೆಗಳು ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಅವರು ಗುರುವಾರ (ಇಂದು) ರಾಜ್ಯದ ಜನರಿಗೆ ಮತ್ತು ಪಕ್ಷದ ಕಾರ್ಯಕರ್ತರಿಗೆ ವಿಡಿಯೋ ಸಂದೇಶ ರವಾನಿಸಿದ್ದಾರೆ.

ಮುಂಬರುವ ವಿಧಾನಸಭಾ ಚುನಾವಣೆಗೆ ನಂದಿಗ್ರಾಮದಲ್ಲಿ ನಾಮಪತ್ರ ಸಲ್ಲಿಸಿದ ಕೆಲವೇ ಗಂಟೆಗಳ ಅಂತರದಲ್ಲಿ ಅವರ ಮೇಲೆ ದಾಳಿ ಸಂಭವಿಸಿದೆ ಎನ್ನಲಾಗಿದೆ. ಪ್ರಾಥಮಿಕ ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಅವರ ಎಡ ಪಾದದ ಮೂಳೆಗೆ ತೀವ್ರವಾದ ಗಾಯಗಳಾಗಿದ್ದು, ಬಲ ಭುಜ, ಮುಂದೋಳು ಮತ್ತು ಕುತ್ತಿಗೆಗೂ ಗಾಯಗಳಾಗಿದೆ ಎಂದು ಸರ್ಕಾರಿ ಎಸ್‌ಎಸ್‌ಕೆಎಂ ಆಸ್ಪತ್ರೆಯ ಹಿರಿಯ ವೈದ್ಯರು ತಿಳಿಸಿದ್ದಾರೆಂದು ಪಿಟಿಐ ವರದಿ ಮಾಡಿತ್ತು.

ಇದನ್ನೂ ಓದಿ: ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಚುನಾವಣಾ ಆಯೋಗಕ್ಕೆ ದೂರು ನೀಡಲು ಮುಂದಾದ ಬಿಜೆಪಿ

ಇದೀಗ ಆಸ್ಪತ್ರೆಯಿಂದಲೆ ಅವರ ವಿಡಿಯೋ ಸಂದೇಶವನ್ನು ಅವರ ಪಕ್ಷದ ಟ್ವಿಟರ್‌ ಖಾತೆ ಬಿಡುಗಡೆ ಮಾಡಿದೆ. ಅದರಲ್ಲಿ ಮಮತಾ, “ನಾನು ನಿನ್ನೆ ತೀವ್ರವಾಗಿ ಗಾಯಗೊಂಡಿದ್ದೇನೆ ಎಂಬುದು ನಿಜ. ನನ್ನ ಕೈ, ಕಾಲಿನಲ್ಲಿ ಇನ್ನೂ ನೋವು, ಗಾಯಗಳಿವೆ. ನಿನ್ನೆ, ನನ್ನ ತಲೆ ಮತ್ತು ಎದೆಯಲ್ಲಿ ನೋವು ಕಾಣಿಸಿಕೊಂಡಿತ್ತು. ಆ ಸಮಯದಲ್ಲಿ ನಾನು ಪ್ರಾರ್ಥನೆ ಸಲ್ಲಿಸುತ್ತಿದ್ದೆ. ನನ್ನನ್ನು ಜೋರಾಗಿ ತಳ್ಳಲಾಗಿತ್ತು ಮತ್ತು ಇದರಿಂದಾಗಿ ಕಾಲು ಕಾರಿನಲ್ಲಿ ಸಿಲುಕಿಕೊಂಡಿತ್ತು” ಎಂದು ಮಮತಾ ವೀಡಿಯೊದಲ್ಲಿ ಹೇಳಿದ್ದಾರೆ.

“ಪ್ರತಿಯೊಬ್ಬರೂ ಶಾಂತವಾಗಿರಲು ಮತ್ತು ಸಂಯಮದಿಂದ ವರ್ತಿಸುವಂತೆ ವಿನಂತಿಸುತ್ತಿದ್ದೇನೆ. ಇತರರಿಗೆ ತೊಂದರೆಯಾಗುವಂತೆ ಏನನ್ನೂ ಮಾಡಬೇಡಿ. ಇನ್ನೂ ಎರಡು ಮೂರು ದಿನಗಳಲ್ಲಿ ನನ್ನ ಕೆಲಸಕ್ಕೆ ಮರಳಬಹುದು ಎಂದು ಆಶಿಸುತ್ತೇನೆ. ಕೆಲಸ ಮಾಡಲು ಸ್ವಲ್ಪ ಸಮಸ್ಯೆ ಇದ್ದರೂ ಅದನ್ನು ನಾನು ನಿಭಾಯಿಸುತ್ತೇವೆ. ಯಾವುದೆ ಸಭೆಗಳನ್ನು ರದ್ದು ಮಾಡುವುದಿಲ್ಲ. ಆದರೆ ಬಹುಶಃ ನಾನು ಸ್ವಲ್ಪ ಸಮಯದವರೆಗೆ ಗಾಲಿಕುರ್ಚಿಯಲ್ಲಿ ಉಳಿಯಬೇಕಾಗುತ್ತದೆ. ದಯವಿಟ್ಟು ನನ್ನೊಂದಿಗೆ ಸಹಕರಿಸಿ” ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಇದನ್ನೂ ಓದಿ: ಖಾಲಿ ಗೋಡೌನ್‌ಗೆ ಸರ್ಕಾರದಿಂದ ಆರೂವರೆ ಕೋಟಿ ಬಾಡಿಗೆ ಪಡೆದ ಅದಾನಿ! 

ಮುಖ್ಯಮಂತ್ರಿಯ ಮೇಲಿನ ದಾಳಿಯನ್ನು ವಿರೋಧಿಸಿ ಪಕ್ಷದ ಕಾರ್ಯಕರ್ತರು ಸೀಲ್ಡಾ-ಹಸ್ನಾಬಾದ್ ಮಾರ್ಗದ ಕಡಂಬಗಚಿ ನಿಲ್ದಾಣದ ಬಳಿ ರೈಲುಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ.

ಮಮತಾ ಗುರುವಾರ ಆಸ್ಪತ್ರೆಯಲ್ಲಿದ್ದ ಕಾರಣ, ಪಕ್ಷವು ತನ್ನ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡಿದೆ. ಅವರು ಕಾಲಿಘಾಟ್‌ನ ತಮ್ಮ ಮನೆಗೆ ಹಿಂತಿರುಗಿದ ನಂತರ, ಪ್ರಣಾಳಿಕೆಯನ್ನು ಬಿಡುಗಡೆ ಮಾಡಲಾಗುವುದು ಎಂದು ಪಕ್ಷವು ತಿಳಿಸಿದೆ.

ಘಟನೆ ಕುರಿತು ಚುನಾವಣಾ ಆಯೋಗ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ ಅಲ್ಲಾಪನ್ ಬಂಡ್ಯೋಪಾಧ್ಯಾಯ, ಅದರ ಸಾಮಾನ್ಯ ವೀಕ್ಷಕ ಅಜಯ್ ನಾಯಕ್ ಮತ್ತು ವಿಶೇಷ ಪೊಲೀಸ್ ವೀಕ್ಷಕ ವಿವೇಕ್ ದುಬೆ ಅವರಿಂದ ವರದಿ ಕೋರಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಏಪ್ರಿಲ್ 1 ರಂದು ನಂದಿಗ್ರಾಮದಲ್ಲಿ ಎರಡನೇ ಹಂತದ ಚುನಾವಣೆ ನಡೆಯಲಿದ್ದು, ಮಾರ್ಚ್ 27 ರಿಂದ ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ಮತದಾನ ಪ್ರಾರಂಭವಾಗುತ್ತದೆ. ಮೇ 2 ರಂದು ಮತ ಎಣಿಕೆ ನಡೆಯಲಿದೆ.

ಇದನ್ನೂ ಓದಿ: UAPA ಪ್ರಕರಣಗಳಲ್ಲಿ ತೀವ್ರ ಹೆಚ್ಚಳ: ಐದು ವರ್ಷಗಳಲ್ಲಿ 5,128 ಪ್ರಕರಣ- 7,050 ಜನರ ಬಂಧನ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...