Homeಮುಖಪುಟಇಂದಿನ ಚುನಾವಣಾ ಭಾಷಣದಲ್ಲಿ ಮೋದಿ, ಶಾ ಮತ್ತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

ಇಂದಿನ ಚುನಾವಣಾ ಭಾಷಣದಲ್ಲಿ ಮೋದಿ, ಶಾ ಮತ್ತು ಪ್ರಿಯಾಂಕಾ ಗಾಂಧಿ ಹೇಳಿದ್ದೇನು?

- Advertisement -
- Advertisement -

ಚುನಾವಣೆ ನಡೆಯಲಿರುವ ಐದೂ ರಾಜ್ಯಗಳಲ್ಲಿ ಇಂದು ಭಾನುವಾರ ಜೋರಾದ ಪ್ರಚಾರ ನಡೆದಿದೆ. ಅಮಿತ್ ಶಾ, ಮೋದಿ ಮತ್ತು ಪ್ರಿಯಾಂಕಾ ಗಾಂಧಿ ಭಾಷಣ ಮಾಡಿದ್ದಾರೆ. ಇಲ್ಲಿ ಯಾರು ಏನು ಹೇಳಿದರು ಎಂಬುದನ್ನು ನೋಡೋಣ.

ಸಿಎಎ, ಎನ್‌ಪಿಆರ್, ಎನ್‌ಸಿಆರ್‌ಗಳ ಬಗ್ಗೆ ಸದಾ ಗೊಂದಲದ ಹೇಳಿಕೆ ನೀಡುತ್ತಲೇ ಬಂದ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದ ಎಗ್ರಾದಲ್ಲಿ ನಡೆದ ರ‍್ಯಾಲಿಯಲ್ಲಿ, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಐದು ವರ್ಷಗಳಲ್ಲಿ ತಮ್ಮ ಪಕ್ಷವು ಎಲ್ಲಾ “ಒಳನುಸುಳಿದವರನ್ನು” ಹೊರಹಾಕಲಿದೆ ಎಂದು ಪ್ರತಿಜ್ಞೆ ಮಾಡಿದ್ದಾರೆ!

ಅಮಿತ್ ಶಾ ಅವರು ಇಂದು ಕೋಲ್ಕತ್ತಾದಲ್ಲಿ ನಡೆಯುವ ರ‍್ಯಾಲಿಯಲ್ಲಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

****

ಅಸ್ಸಾಂನ ಬೊಕಾಖಾಟ್‌ನಲ್ಲಿ ನಡೆದ ಬಿಜೆಪಿ ರ‍್ಯಾಲಿಯ ಸಂದರ್ಭದಲ್ಲಿ ಪ್ರತಿಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, ಕೇಂದ್ರ ಮತ್ತು ಅಸ್ಸಾಂ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಿರ್ಲಕ್ಷ್ಯ ಮತ್ತು ಭ್ರಷ್ಟಾಚಾರವು ಡಬಲ್ ಆಗಿತ್ತು ಎಂದು ಹೇಳಿದರು. ಈಗ ಬಿಜೆಪಿ ಅಧಿಕಾರದಲ್ಲಿದೆ, ರಾಜ್ಯದಲ್ಲಿ ಬೆಳವಣಿಗೆ “ದ್ವಿಗುಣಗೊಂಡಿದೆ” ಎಂದು ಬೆನ್ನು ತಟ್ಟಿಕೊಂಡರು.

ಇಂದು ಪ್ರಧಾನಿ ಪಶ್ಚಿಮ ಬಂಗಾಳದ ಬಮಕುರಾದಲ್ಲಿ ಇನ್ನೊಂದು ರ‍್ಯಾಲಿ ಉದ್ದೇಶಿಸಿ ಮಾತನಾಡಲಿದ್ದಾರೆ.

***

ದಿಶಾ ರವಿ ಟ್ವೀಟ್ ಬಗ್ಗೆ ಪ್ರಧಾನಿ ದುಃಖಿತರಾಗಿದ್ದಾರೆ, ಆದರೆ ಅಸ್ಸಾಂನ ಪ್ರವಾಹ, ಸಿಎಎ ಬಗ್ಗೆ ಅಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಟೀಕಿಸಿದ್ದಾರೆ.

ಅಸ್ಸಾಂನ ಜೋರ್ಹತ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಅವರು, “22 ವರ್ಷದ ಪರಿಸರ ಕಾರ್ಯಕರ್ತೆ ದಿಶಾ ರವಿ ಅವರ ಟ್ವೀಟ್ ಬಗ್ಗೆ ಪ್ರಧಾನಿ ಬೇಸರ ವ್ಯಕ್ತಪಡಿಸಿದ್ದಾರೆ, ಆದರೆ ಅಸ್ಸಾಂನಲ್ಲಿನ ಪ್ರವಾಹದ ಬಗ್ಗೆ ಅದೇ ಭಾವನೆಯನ್ನು ಹಂಚಿಕೊಂಡಿಲ್ಲ ಮತ್ತು ಸಿಎಎ ಪ್ರಭಾವ, ದುಷ್ಪರಿಣಾಮದ ಬಗ್ಗೆಯೂ ಮಾತನಾಡುತ್ತಿಲ್ಲ” ಎಂದಿದ್ದಾರೆ.

‘ಪ್ರಧಾನಿ ಎಂದಾದರೂ ಚಹಾ ತೋಟಕ್ಕೆ ಭೇಟಿ ನೀಡಿದ್ದರಾ’ ಎಂದು ಪ್ರಿಯಾಂಕಾ ಗಾಂಧಿ ಅಸ್ಸಾಂನಲ್ಲಿ ಕೇಳಿದ್ದಾರೆ. ಚಹಾ ತೋಟದ ಕಾರ್ಮಿಕರ ಸಂಕಷ್ಟ ಬಗೆಹರಿಸುವ ಯತ್ನವನ್ನು ಪ್ರಧಾನಿ ಮಾಡಲೇ ಎಂದು ಕೇಳಿದ್ದಾರೆ.


ಇದನ್ನೂ ಓದಿ: ಎಲ್ಲೆಲ್ಲೋ ಬಟ್ಟೆಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಬಿಜೆಪಿ ನಾಯಕರಿಗಾಗಿ ಬಟ್ಟೆ ಖರೀದಿ- ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...