Homeಮುಖಪುಟ‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?

‘ಜಲಸಮಾಧಿ’ ಆಗುತ್ತೇನೆ ಎಂದಿದ್ದ ಪರಮಹಂಸ ಆಚಾರ್ಯ ಮಾಡಿದ್ದೇನು?

- Advertisement -
- Advertisement -

ಅಕ್ಟೋಬರ್ 2 ರೊಳಗೆ ಭಾರತವನ್ನು ‘ಹಿಂದೂ ರಾಷ್ಟ್ರ’ ಎಂದು ಘೋಷಿಸದಿದ್ದರೆ ಸರಯೂ ನದಿಯಲ್ಲಿ ‘ಜಲಸಮಾಧಿ’ ಆಗುವುದಾಗಿ ಬೆದರಿಕೆ ಒಡ್ಡಿದ್ದ, ಪರಮಹಂಸ ಆಚಾರ್ಯ ಅವರನ್ನು ಉತ್ತರ ಪ್ರದೇಶ ಸರ್ಕಾರ ಅವರನ್ನು ಗೃಹ ಬಂಧನದಲ್ಲಿ ಇಟ್ಟಿದೆ. ಆಡಳಿತವು ತನ್ನನ್ನು ಬಿಡುಗಡೆ ಮಾಡಿದರೆ ತಾನು ಜಲಸಮಾಧಿ ಆಗುವುದಾಗಿ ಮಾಧ್ಯಮಗಳಿಗೆ ಅವರು ಹೇಳಿದ್ದಾರೆ.

ಪರಮಹಂಸ ಅವರನ್ನು ಹಿಂದೂ ಮಹಾಸಭಾ ಕೂಡಾ ಬೆಂಬಲಿಸಿದ್ದು, ಅಕ್ಟೋಬರ್ 2 ರಂದು ಒಂದು ಲಕ್ಷ ಕಾರ್ಯಕರ್ತರು ಅಯೋಧ್ಯೆಯ ಸರಯೂ ನದಿಯಲ್ಲಿ ಜಲಸಮಾಧಿ ಆಗುತ್ತೇವೆ ಎಂದು ಹೇಳಿದ್ದರು. ಹೀಗಾಗಿ ಸ್ಥಳದಲ್ಲಿ ಭಾರೀ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ‘ಅಕ್ಟೋಬರ್‌ 2 ರೊಳಗೆ ದೇಶವನ್ನು ಹಿಂದೂ ರಾಷ್ಟ್ರ ಎಂದು ಘೋಷಿಸದಿದ್ದರೆ ಜಲಸಮಾಧಿ ಆಗುತ್ತೇನೆ’: ಪರಮಹಂಸ ಆಚಾರ್ಯ

ಬೆಳಿಗ್ಗೆಯಿಂದಲೇ ಆಶ್ರಮದಲ್ಲಿ ಹೋಮ-ಹವನಗಳನ್ನು ಮಾಡಿದ್ದ ಪರಮಹಂಸ ಅವರು, ಹನ್ನೆರೆಡು ಗಂಟೆಗೆ ಜಲಸಮಾಧಿ ಆಗುವುದಾಗಿ ಹೇಳಿದ್ದರು. ಅದರೊಳಗೆ ಒಕ್ಕೂಟ ಸರ್ಕಾರದ ಪ್ರತಿನಿಧಿ ತನ್ನ ಬೇಡಿಕೆಯ ಬಗ್ಗೆ ಆಸ್ವಾಸನೆ ನೀಡುತ್ತಾರೆ ಎಂದು ನನಗೆ ಭರವಸೆ ಇದೆ ಎಂದು ತಿಳಿಸಿದ್ದರು.

ಆದರೆ ಪೊಲೀಸರು ಅವರನ್ನು ಗೃಹ ಬಂಧನದಲ್ಲಿ ಇಟ್ಟಿದ್ದರು. ಈ ಬಗ್ಗೆ ಪ್ರತಿಕ್ರಿಸಿದ ಅವರು, “ನಾನು ಜಲಸಮಾಧಿ ಆಗುತ್ತೇನೆ ಎಂದು ಸರ್ಕಾರ ನನ್ನನ್ನು ಗೃಹ ಬಂಧನದಲ್ಲಿ ಇಟ್ಟಿದೆ. ಬಿಡುಗಡೆ ಮಾಡಿದರೆ ತಾನು ಜಲ ಸಮಾಧಿ ಆಗುತ್ತೇನೆ. ಆದರೂ ನಾನು ಸರಯೂ ನದಿಯಿಂದ ನೀರನ್ನು ತಂದಿದ್ದೇನೆ. ಹನ್ನೆರೆಡು ಗಂಟೆಗೆ ಇದರಲ್ಲಿ ಮೂಗು ಮುಳುಗಿಸಿ ಜಲಸಮಾಧಿ ಆಗುತ್ತೇನೆ. ಭಗವಂತನ ಇಚ್ಛೆ ಇದ್ದರೆ ಇದರಲ್ಲಿ ಸಫಲನಾಗುತ್ತೇನೆ” ಎಂದು ಸಣ್ಣ ನೀರಿನ ಕ್ಯಾನ್‌ ಅನ್ನು ಮಾಧ್ಯಮಗಳಿಗೆ ತೋರಿಸಿದ್ದಾರೆ!.

ಆದರೆ ಸರ್ಕಾರ ಅವರ ಗೃಹ ಬಂಧನವನ್ನು ಮುಂದುವರೆಸಿದೆ. ಬಗ್ಗೆ ಮತ್ತೆ ಮಾಧ್ಯಮಗಳಿಗೆ ಹೇಳಿಕೆ ನೀಡಿದ ಪರಮಹಂಸ ಅವರು, “ಸರ್ಕಾರ ನನ್ನನ್ನು 1 ವರ್ಷ ಗೃಹಬಂಧನದಲ್ಲಿರಿಸಿದರೂ, ನಾನು ಹೊರಬಂದ ತಕ್ಷಣ ಜಲಸಮಾಧಿ ಆಗುತ್ತೇನೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೋದಿ 2.1: ಹಿಂದೂ ರಾಷ್ಟ್ರೀಯವಾದದ ವಿಜೃಂಭಣೆಯೇ ಮೋದಿ ಸರ್ಕಾರದ ಸಾಧನೆ!

ಈ ನಡುವೆ ಪರಮಹಂಸ ಅವರನ್ನು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗುತ್ತಿದೆ.

 

ಪರಮಹಂಸ ಅವರು, ಭಾರತದಲ್ಲಿ ವಾಸಿಸುತ್ತಿರುವ ಎಲ್ಲಾ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ರಾಷ್ಟ್ರೀಯತೆಯನ್ನು ಅಧೀಕೃತವಾಗಿ ಕೊನೆಗೊಳಿಸಬೇಕು ಎಂದು ಕೂಡಾ ಒಕ್ಕೂಟ ಸರ್ಕಾರವನ್ನು ಒತ್ತಾಯಿಸಿದ್ದರು.

ಇದನ್ನೂ ಓದಿ: ‘ಹಿಂದೂ ರಾಷ್ಟ್ರದಲ್ಲಿ ದಲಿತ-ಶೂದ್ರರಿಗೆ ಮತದಾನದ ಹಕ್ಕಿರುತ್ತದೆಯೇ?’

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...