Homeಮುಖಪುಟವಲಸೆ ಕಾರ್ಮಿಕರಿಗಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮಾಡಿದ್ದೆನು? ಸುಪ್ರೀಂ ಪ್ರಶ್ನೆ

ವಲಸೆ ಕಾರ್ಮಿಕರಿಗಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮಾಡಿದ್ದೆನು? ಸುಪ್ರೀಂ ಪ್ರಶ್ನೆ

ಕಳೆದೆರಡು ದಿನಗಳಿಂದ ಶ್ರಮಿಕ್‌ ಟ್ರೈನ್‌ಗಳಲ್ಲಿ ಪ್ರಯಾಣಿಸುತ್ತಿರುವ ಕನಿಷ್ಠ 09 ಮಂದಿ ವಲಸೆ ಕಾರ್ಮಿಕರು ಅನ್ನ ನೀರಿಲ್ಲದೇ ಸಾವನಪ್ಪಿದ್ದಾರೆ. ಬಿಹಾರದ ಮುಝಾಫರ್‌ಪುರದ ರೈಲ್ವೆ ನಿಲ್ದಾಣದಲ್ಲಿ ಸತ್ತಿರುವ ತಾಯಿಯನ್ನು ಮಗುವೊಂದು ಎಬ್ಬಿಸಲು ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ. 

- Advertisement -
- Advertisement -

ಪ್ರತಿ ದಿನವೂ ವಲಸೆ ಕಾರ್ಮಿಕರ ಬವಣೆ, ಹಸಿವು, ಸಾವು ನೋವಿನ ವರದಿಗಳು ದಾಖಲಾಗುತ್ತಿದ್ದು ಈ ಕುರಿತು ಸ್ವಯಂ ಪ್ರೇರಿತ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಜನರಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿದ್ದೇನು ಎಂದು ಪ್ರಶ್ನಿಸಿದೆ.

ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿಂದೆ ಇದೇ ಸುಪ್ರೀಂ ಕೋರ್ಟ್‌ ರೈಲುಹಳಿಗಳಲ್ಲಿ ಮಲಗಿ ಸಾವನಪ್ಪಿದ ಕಾರ್ಮಿಕರ ಬಗ್ಗೆ ಮಾತನಾಡುತ್ತಾ “ಜನರನ್ನು ರೈಲು ಹಳಿಗಳ ಮೇಲೆ ಮಲಗದಂತೆ ತಡೆಯಲಾಗುವುದಿಲ್ಲ. ಜನರು ನಡೆದಯಂತೆ ತಡೆಯಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿತ್ತು.

ಈ ಬಗ್ಗೆ ಮದ್ರಾಸ್‌ ಹೈಕೋರ್ಟ್‌, ಆಂಧ್ರ ಪ್ರದೇಶದ ಹೈಕೋರ್ಟ್‌‌ಗಳು ಸುಪ್ರೀಂ ಕೋರ್ಟ್ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದವು. ಆನಂತರವಷ್ಟೇ ಸುಪ್ರೀಂ ಕೋರ್ಟ್‌ ವಲಸೆ ಕಾರ್ಮಿಕರಿಗಾಗುತ್ತಿರುವ ಅನ್ಯಾಯಗಳ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೊಂಡಿತ್ತು.

ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸುಪ್ರೀಂ ಕೋರ್ಟ್ ಈ ಬಗ್ಗೆ ಸಂಪೂರ್ಣವಾಗಿ ತೃಪ್ತಿಪಟ್ಟಿತ್ತು” ಎಂದು ತುಷಾರ್‌ ಮೆಹ್ತಾರವರು ಸರ್ಕಾರದ ಪರವಾಗಿ ವರದಿ ಒಪ್ಪಿಸಿದರು.

ಅಲ್ಲದೆ ಕೇಂದ್ರವು “ನಿರಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು” ಎಂದು ನ್ಯಾಯಾಲಯಕ್ಕೆ ತಿಳಿಸಿದೆ … ಯಾರು ಇಂದು ಪ್ರಶ್ನಿಸುತ್ತಿದ್ದಾರೆ ವಲಸಿಗರಿಗೆ ಅವರ ಕೊಡುಗೆ ಏನು ಎಂಬುದರ ಕುರಿತು ಅಫಿಡವಿಟ್‌ಗಳನ್ನು ಸಲ್ಲಿಸಲಿ ಎಂದು ಕೇಂದ್ರ ತಿಳಿಸಿದೆ.

ಕಳೆದೆರಡು ದಿನಗಳಿಂದ ಶ್ರಮಿಕ್‌ ಟ್ರೈನ್‌ಗಳಲ್ಲಿ ಪ್ರಯಾಣಿಸುತ್ತಿರುವ ಕನಿಷ್ಠ 09 ಮಂದಿ ವಲಸೆ ಕಾರ್ಮಿಕರು ಅನ್ನ ನೀರಿಲ್ಲದೇ ಸಾವನಪ್ಪಿದ್ದಾರೆ. ಬಿಹಾರದ ಮುಝಾಫರ್‌ಪುರದ ರೈಲ್ವೆ ನಿಲ್ದಾಣದಲ್ಲಿ ಸತ್ತಿರುವ ತಾಯಿಯನ್ನು ಮಗುವೊಂದು ಎಬ್ಬಿಸಲು ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

“ವಲಸಿಗರಿಗೆ ಮೊದಲ ಸಮಸ್ಯೆ ಸಾರಿಗೆಯಾಗಿದೆ. ನೋಂದಣಿಯಾದ ನಂತರವೂ ಅವರು ವಾರಗಳವರೆಗೆ ಕಾಯುತ್ತಿದ್ದಾರೆ. ಈ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆಯೇ? ಇಲ್ಲದಿದ್ದರೆ ಅವರ ಹಣವನ್ನು ರಾಜ್ಯವು ಹೇಗೆ ಪಾವತಿಸುತ್ತಿದೆ” ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. “ಎಲ್ಲರನ್ನೂ ಒಂದೇ ಸಮಯದಲ್ಲಿ ಸಾಗಿಸಲು ಸಾಧ್ಯವಿಲ್ಲ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಅವರು ಸಾರಿಗೆ ಪಡೆಯುವವರೆಗೆ ಅವರಿಗೆ ಸರ್ಕಾರಗಳು ಆಹಾರ ಮತ್ತು ಆಶ್ರಯವನ್ನು ನೀಡಬೇಕು” ಎಂದು ನ್ಯಾಯಾಲಯ ಹೇಳಿದೆ.

ಆದರೆ ಈಗಿರುವ ಪರಿಸ್ಥಿತಿಯನ್ನು ಅಭೂತಪೂರ್ವವಾಗಿದೆ ಎಂದಿರುವ ಕೇಂದ್ರ ಸರ್ಕಾರ, ಮೇ 1 ರಂದು ವಿಶೇಷ ರೈಲು ಸೇವೆ ಪ್ರಾರಂಭವಾದಾಗಿನಿಂದ ಸುಮಾರು 91 ಲಕ್ಷ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಸಾಗಿಸಲಾಗಿದೆ ಎಂದು ಹೇಳಿದೆ. ಕೊನೆಯ ದಿನಗಳಲ್ಲಿ, ರೈಲ್ವೆ ಅವರಿಗೆ 84 ಲಕ್ಷ ಊಟವನ್ನು ಒದಗಿಸಿದೆ ಎಂದು ಸರ್ಕಾರ ಹೇಳಿದೆ. ಅಲ್ಲದೇ ಪ್ರತಿಯೊಬ್ಬ ವಲಸೆ ಕಾರ್ಮಿಕನು ತನ್ನೂರು ತಲುಪುವವರೆಗೂ ರೈಲು ಸೇವೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದೆ.

ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡೂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಸಿಕ್ಕಿಕೊಂಡಿರುವ ವಲಸಿಗರಿಗೆ ತಕ್ಷಣ ಪರಿಹಾರ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, ಅವರಿಗೆ ಪರಿಹಾರ ಒದಗಿಸಲು ಕೈಗೊಂಡ ಕ್ರಮಗಳ ಬಗ್ಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸಬೇಕು ಎಂದು ಹೇಳಿದೆ.

ಈ ಕುರಿತು ಈವರೆಗೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರ ಮನವಿಗಳು ಸೇರಿವೆ.


ಇದನ್ನೂ ಓದಿ ; ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...