Homeಮುಖಪುಟವಲಸೆ ಕಾರ್ಮಿಕರಿಗಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮಾಡಿದ್ದೆನು? ಸುಪ್ರೀಂ ಪ್ರಶ್ನೆ

ವಲಸೆ ಕಾರ್ಮಿಕರಿಗಾಗಿ ರಾಜ್ಯ, ಕೇಂದ್ರ ಸರ್ಕಾರಗಳು ಮಾಡಿದ್ದೆನು? ಸುಪ್ರೀಂ ಪ್ರಶ್ನೆ

ಕಳೆದೆರಡು ದಿನಗಳಿಂದ ಶ್ರಮಿಕ್‌ ಟ್ರೈನ್‌ಗಳಲ್ಲಿ ಪ್ರಯಾಣಿಸುತ್ತಿರುವ ಕನಿಷ್ಠ 09 ಮಂದಿ ವಲಸೆ ಕಾರ್ಮಿಕರು ಅನ್ನ ನೀರಿಲ್ಲದೇ ಸಾವನಪ್ಪಿದ್ದಾರೆ. ಬಿಹಾರದ ಮುಝಾಫರ್‌ಪುರದ ರೈಲ್ವೆ ನಿಲ್ದಾಣದಲ್ಲಿ ಸತ್ತಿರುವ ತಾಯಿಯನ್ನು ಮಗುವೊಂದು ಎಬ್ಬಿಸಲು ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ. 

- Advertisement -
- Advertisement -

ಪ್ರತಿ ದಿನವೂ ವಲಸೆ ಕಾರ್ಮಿಕರ ಬವಣೆ, ಹಸಿವು, ಸಾವು ನೋವಿನ ವರದಿಗಳು ದಾಖಲಾಗುತ್ತಿದ್ದು ಈ ಕುರಿತು ಸ್ವಯಂ ಪ್ರೇರಿತ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ ಜನರಿಗೆ ಸಹಾಯ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮಾಡಿದ್ದೇನು ಎಂದು ಪ್ರಶ್ನಿಸಿದೆ.

ಸರ್ಕಾರವನ್ನು ಪ್ರತಿನಿಧಿಸಿದ್ದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಮೂರು ನ್ಯಾಯಾಧೀಶರ ಪೀಠದಿಂದ ಕನಿಷ್ಠ 50 ಪ್ರಶ್ನೆಗಳನ್ನು ಕೇಳಿದ್ದು ವಲಸೆ ಕಾಮಿಕರ ವಿಚಾರದಲ್ಲಿ ಸರ್ಕಾರಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದೆ.

ಈ ಹಿಂದೆ ಇದೇ ಸುಪ್ರೀಂ ಕೋರ್ಟ್‌ ರೈಲುಹಳಿಗಳಲ್ಲಿ ಮಲಗಿ ಸಾವನಪ್ಪಿದ ಕಾರ್ಮಿಕರ ಬಗ್ಗೆ ಮಾತನಾಡುತ್ತಾ “ಜನರನ್ನು ರೈಲು ಹಳಿಗಳ ಮೇಲೆ ಮಲಗದಂತೆ ತಡೆಯಲಾಗುವುದಿಲ್ಲ. ಜನರು ನಡೆದಯಂತೆ ತಡೆಯಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿತ್ತು.

ಈ ಬಗ್ಗೆ ಮದ್ರಾಸ್‌ ಹೈಕೋರ್ಟ್‌, ಆಂಧ್ರ ಪ್ರದೇಶದ ಹೈಕೋರ್ಟ್‌‌ಗಳು ಸುಪ್ರೀಂ ಕೋರ್ಟ್ ಬಗ್ಗೆಯೇ ಅಸಮಾಧಾನ ವ್ಯಕ್ತಪಡಿಸಿದ್ದವು. ಆನಂತರವಷ್ಟೇ ಸುಪ್ರೀಂ ಕೋರ್ಟ್‌ ವಲಸೆ ಕಾರ್ಮಿಕರಿಗಾಗುತ್ತಿರುವ ಅನ್ಯಾಯಗಳ ಬಗ್ಗೆ ಸ್ವಯಂ ಪ್ರೇರಿತ ವಿಚಾರಣೆ ಕೈಗೊಂಡಿತ್ತು.

ರೈಲುಗಳು ಓಡುತ್ತವೆ, ವಲಸಿಗರನ್ನು ಸಾಗಿಸುತ್ತವೆ ಮತ್ತು ಊಟವನ್ನು ಒದಗಿಸಲಾಗಿದೆ. ಕೇಂದ್ರವು “ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ಸುಪ್ರೀಂ ಕೋರ್ಟ್ ಈ ಬಗ್ಗೆ ಸಂಪೂರ್ಣವಾಗಿ ತೃಪ್ತಿಪಟ್ಟಿತ್ತು” ಎಂದು ತುಷಾರ್‌ ಮೆಹ್ತಾರವರು ಸರ್ಕಾರದ ಪರವಾಗಿ ವರದಿ ಒಪ್ಪಿಸಿದರು.

ಅಲ್ಲದೆ ಕೇಂದ್ರವು “ನಿರಾಶವಾದಿಗಳು ಈ ವಿಷಯವನ್ನು ರಾಜಕೀಯ ಭಾಷಣಗಳಿಗೆ ವೇದಿಕೆಯನ್ನಾಗಿ ಮಾಡಿಕೊಳ್ಳಲು ಅವಕಾಶ ನೀಡಬಾರದು” ಎಂದು ನ್ಯಾಯಾಲಯಕ್ಕೆ ತಿಳಿಸಿದೆ … ಯಾರು ಇಂದು ಪ್ರಶ್ನಿಸುತ್ತಿದ್ದಾರೆ ವಲಸಿಗರಿಗೆ ಅವರ ಕೊಡುಗೆ ಏನು ಎಂಬುದರ ಕುರಿತು ಅಫಿಡವಿಟ್‌ಗಳನ್ನು ಸಲ್ಲಿಸಲಿ ಎಂದು ಕೇಂದ್ರ ತಿಳಿಸಿದೆ.

ಕಳೆದೆರಡು ದಿನಗಳಿಂದ ಶ್ರಮಿಕ್‌ ಟ್ರೈನ್‌ಗಳಲ್ಲಿ ಪ್ರಯಾಣಿಸುತ್ತಿರುವ ಕನಿಷ್ಠ 09 ಮಂದಿ ವಲಸೆ ಕಾರ್ಮಿಕರು ಅನ್ನ ನೀರಿಲ್ಲದೇ ಸಾವನಪ್ಪಿದ್ದಾರೆ. ಬಿಹಾರದ ಮುಝಾಫರ್‌ಪುರದ ರೈಲ್ವೆ ನಿಲ್ದಾಣದಲ್ಲಿ ಸತ್ತಿರುವ ತಾಯಿಯನ್ನು ಮಗುವೊಂದು ಎಬ್ಬಿಸಲು ಪ್ರಯತ್ನಿಸುತ್ತಿರುವ ಹೃದಯ ವಿದ್ರಾವಕ ವಿಡಿಯೋ ವೈರಲ್ ಆಗಿದೆ.

ಬಿಹಾರದ ಮುಜಾಫರ್ ಪುರದ ರೈಲ್ವೆ ನಿಲ್ದಾಣದಲ್ಲಿ ಈ ಮಗು ತನ್ನ ತಾಯಿಯೊಂದಿಗೆ ಆಟವಾಡುತ್ತಿದೆ. ಆದರೆ ತನ್ನ ತಾಯಿ ಸಾವನಪ್ಪಿದ್ದಾಳೆ ಎಂಬ ಅರಿವು ಅದಕ್ಕಿಲ್ಲ…ಆಕೆ ನಾಲ್ಕು ದಿನಗಳಿಂದ ಹಸಿವು, ಬಾಯಾರಿಕೆ ತಾಳಲಾರದೇ ಮೃತಪಟ್ಟಿದ್ದಾಳೆ. ಆ ಮಕ್ಕಳ ಮುಂದಿನ ಕಥೆಯೇನು?ಈ ಪರಿಸ್ಥಿತಿ ಯಾರಿಗೂ ಬರಬಾರದು..ವಿಡಿಯೋ: ಪತ್ರಕರ್ತ ಕವೀಶ್ ಟ್ವಿಟ್ಟರ್ ನಿಂದ…

Posted by Naanu Gauri on Wednesday, May 27, 2020

“ವಲಸಿಗರಿಗೆ ಮೊದಲ ಸಮಸ್ಯೆ ಸಾರಿಗೆಯಾಗಿದೆ. ನೋಂದಣಿಯಾದ ನಂತರವೂ ಅವರು ವಾರಗಳವರೆಗೆ ಕಾಯುತ್ತಿದ್ದಾರೆ. ಈ ಜನರಿಂದ ಹಣ ವಸೂಲಿ ಮಾಡಲಾಗುತ್ತಿದೆಯೇ? ಇಲ್ಲದಿದ್ದರೆ ಅವರ ಹಣವನ್ನು ರಾಜ್ಯವು ಹೇಗೆ ಪಾವತಿಸುತ್ತಿದೆ” ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. “ಎಲ್ಲರನ್ನೂ ಒಂದೇ ಸಮಯದಲ್ಲಿ ಸಾಗಿಸಲು ಸಾಧ್ಯವಿಲ್ಲ ಎಂದು ನಾವು ಒಪ್ಪಿಕೊಳ್ಳುತ್ತೇವೆ. ಆದರೆ ಅವರು ಸಾರಿಗೆ ಪಡೆಯುವವರೆಗೆ ಅವರಿಗೆ ಸರ್ಕಾರಗಳು ಆಹಾರ ಮತ್ತು ಆಶ್ರಯವನ್ನು ನೀಡಬೇಕು” ಎಂದು ನ್ಯಾಯಾಲಯ ಹೇಳಿದೆ.

ಆದರೆ ಈಗಿರುವ ಪರಿಸ್ಥಿತಿಯನ್ನು ಅಭೂತಪೂರ್ವವಾಗಿದೆ ಎಂದಿರುವ ಕೇಂದ್ರ ಸರ್ಕಾರ, ಮೇ 1 ರಂದು ವಿಶೇಷ ರೈಲು ಸೇವೆ ಪ್ರಾರಂಭವಾದಾಗಿನಿಂದ ಸುಮಾರು 91 ಲಕ್ಷ ವಲಸಿಗರನ್ನು ತಮ್ಮ ರಾಜ್ಯಗಳಿಗೆ ಸಾಗಿಸಲಾಗಿದೆ ಎಂದು ಹೇಳಿದೆ. ಕೊನೆಯ ದಿನಗಳಲ್ಲಿ, ರೈಲ್ವೆ ಅವರಿಗೆ 84 ಲಕ್ಷ ಊಟವನ್ನು ಒದಗಿಸಿದೆ ಎಂದು ಸರ್ಕಾರ ಹೇಳಿದೆ. ಅಲ್ಲದೇ ಪ್ರತಿಯೊಬ್ಬ ವಲಸೆ ಕಾರ್ಮಿಕನು ತನ್ನೂರು ತಲುಪುವವರೆಗೂ ರೈಲು ಸೇವೆಯನ್ನು ನಿಲ್ಲಿಸುವುದಿಲ್ಲ ಎಂದು ಹೇಳಿದೆ.

ವಲಸೆ ಕಾರ್ಮಿಕರ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎರಡೂ ಅಸಮರ್ಪಕವಾಗಿ ಕಾರ್ಯನಿರ್ವಹಿಸಿವೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿತ್ತು.

ಸಿಕ್ಕಿಕೊಂಡಿರುವ ವಲಸಿಗರಿಗೆ ತಕ್ಷಣ ಪರಿಹಾರ ನೀಡುವಂತೆ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಕ್ಕೆ ನಿರ್ದೇಶನ ನೀಡಿದ ನ್ಯಾಯಾಲಯ, ಅವರಿಗೆ ಪರಿಹಾರ ಒದಗಿಸಲು ಕೈಗೊಂಡ ಕ್ರಮಗಳ ಬಗ್ಗೆ ತಮ್ಮ ಅಫಿಡವಿಟ್‌ಗಳನ್ನು ಸಲ್ಲಿಸಬೇಕು ಎಂದು ಹೇಳಿದೆ.

ಈ ಕುರಿತು ಈವರೆಗೆ ಹಲವಾರು ಅರ್ಜಿಗಳನ್ನು ಸಲ್ಲಿಸಲಾಗಿದ್ದು, ಇದರಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಅವರ ಮನವಿಗಳು ಸೇರಿವೆ.


ಇದನ್ನೂ ಓದಿ ; ಶ್ರಮಿಕ್ ರೈಲುಗಳಲ್ಲಿ ಕಳೆದ 48 ಗಂಟೆಗಳಲ್ಲಿ 9 ವಲಸೆ ಕಾರ್ಮಿಕರು ಮೃತ : ಕೇಂದ್ರದ ವಿರುದ್ಧ ಆಕ್ರೋಶ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...

ವಾರಣಾಸಿಯಲ್ಲಿ ಆಚರಿಸುವ ಪ್ರಸಿದ್ಧ ‘ಭಸ್ಮ ಹೋಳಿ’ಗೆ ಸಂಸ್ಕೃತ ವಿದ್ವಾಂಸರು ಮತ್ತು ಕಾಶಿ ವಿದ್ವತ್ ಪರಿಷತ್ ವಿರೋಧ 

ವಾರಣಾಸಿ (ಉತ್ತರ ಪ್ರದೇಶ): ನಗರದ ಸ್ಮಶಾನ ಭೂಮಿಗಳಾದ ಮಣಿಕರ್ಣಿಕಾ ಮತ್ತು ಹರಿಶ್ಚಂದ್ರ ಘಾಟ್‌ಗಳಲ್ಲಿ 'ಮಸಾನೆ ಕಿ ಹೋ ಲಿ ' ನುಡಿಸುವ ಸಂಪ್ರದಾಯವನ್ನು ಸಂಸ್ಕೃತ ವಿದ್ವಾಂಸರು ಮತ್ತು ಹಿಂದೂ ಧರ್ಮಗ್ರಂಥಗಳ ತಜ್ಞರ ಪರಿಷತ್ತು...

ಮುಸ್ಲಿಮರೆಂದು ತಿಳಿದು ಮಹಿಳೆಯರಿಗೆ ವಿತರಿಸಿದ್ದ ಕಂಬಳಿ ವಾಪಸ್ ಪಡೆದ ಬಿಜೆಪಿ ಮಾಜಿ ಸಂಸದ

ಬಿಜೆಪಿಯ ಮಾಜಿ ಸಂಸದ ಸುಖ್‌ವೀರ್ ಸಿಂಗ್ ಜೌನ್‌ಪುರಿಯಾ ಅವರು, ಮುಸ್ಲಿಮರೆಂದು ಗೊತ್ತಾದ ಬಳಿಕ ಮಹಿಳೆಯರಿಗೆ ವಿತರಿಸಿದ್ದ ಕಂಬಳಿಯನ್ನು ವಾಪಸ್ ಪಡೆದಿದ್ದಾರೆ ಎಂದು ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಟಿಕರಾಮ್ ಜುಲ್ಲಿ ಭಾನುವಾರ...

ಜೆಎನ್‌ಯು: ಎಡಪಂಥೀಯ ವಿದ್ಯಾರ್ಥಿ ಸಂಘಟನೆ ಮತ್ತು ಎಬಿವಿಪಿ ನಡುವೆ ಘರ್ಷಣೆ: ಉದ್ವಿಗ್ನತೆ  

ಸೋಮವಾರ ಮುಂಜಾನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಎಡಪಂಥೀಯ ಮತ್ತು ಬಲಪಂಥೀಯ ವಿದ್ಯಾರ್ಥಿ ಗುಂಪುಗಳು ಪರಸ್ಪರ ಹಿಂಸಾಚಾರವನ್ನು ಬಿಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ ನಂತರ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ (ಜೆಎನ್‌ಯು) ಆವರಣದಲ್ಲಿ ಉದ್ವಿಗ್ನತೆ ಉಂಟಾಗಿದೆ.  ಸೋಮವಾರ ಬೆಳಗಿನ...

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...