Homeಕರ್ನಾಟಕಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಎಂದು ಸ್ವಪಕ್ಷ ನಾಯಕರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಪ್ರತಾಪ್ ಸಿಂಹ್ ಅವರು, ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

‘ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

”ಬಿ.ಎಸ್.ಯಡಿಯೂರಪ್ಪ ತುಂಬಾ ಪ್ರಯತ್ನ ಮಾಡಿ ಸರ್ಕಾರ ತಂದರು. ಬಿ.ಎಸ್​​.ಯಡಿಯೂರಪ್ಪ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಬಿ.ಎಸ್.ಯಡಿಯೂರಪ್ಪ ಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೊವಿಡ್​ ವೇಳೆ ಜನರ ಪ್ರಾಣ ಉಳಿಸಲು BSY ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ” ಎಂದು ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಾಪ್ ​​ಸಿಂಹ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ಇಷ್ಟೊಂದು ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ?’: ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ತನಿಖೆಯಾಗಲಿ

ಮುಂದುವರೆದು, ”ಕಾಂಗ್ರೆಸ್ ಪ್ರತಿಪಕ್ಷದಲ್ಲಿದ್ದಾಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್ ಮತ್ತು ಬಿಟ್‌ಕಾಯಿನ್ ಹಗರಣದಂತಹ ವಿಷಯಗಳಲ್ಲಿ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಆದರೆ, ನಮ್ಮ ನಾಯಕರು ಅರ್ಕಾವತಿ ಬಡಾವಣೆಯಲ್ಲಿನ ಭೂ ಡಿನೋಟಿಫಿಕೇಷನ್ ಹಗರಣದ ಬಗ್ಗೆ ತನಿಖೆ ಮಾಡಲು ಮುಂದಾಗಲೇ ಇಲ್ಲ” ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಅರ್ಕಾವತಿ ಬಡಾವಣೆಯಲ್ಲಿನ ಜಮೀನು ಡಿನೋಟಿಫಿಕೇಷನ್ ಆರೋಪ ಆಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿಬಂದಿತ್ತು. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುವುದಾಗಿ ಆಡಳಿತಾರೂಢ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದರೂ ಅದನ್ನು ವಿಧಾನಸಭೆಯಲ್ಲಿ ಮಂಡಿಸಲೇ ಇಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೀವು ( ಕಾಂಗ್ರೆಸ್‌ ನಾಯಕರು ) ಬಿಜೆಪಿ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ, ಬಿಜೆಪಿ ಸರ್ಕಾರದ ವಿರುದ್ಧ ನೀವು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಿ” ಎಂದೂ ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಬಿಲ್‌ಗಳನ್ನು ತೆರವುಗೊಳಿಸಲು ಶೇ. 40 ಕಮಿಷನ್ ಕೇಳಿದ ಆರೋಪದ ಬಗ್ಗೆ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ ಪಿಎಸ್‌ಐ ನೇಮಕಾತಿ ಮತ್ತು ಬಿಟ್‌ಕಾಯಿನ್ ಹಗರಣಗಳ ಬಗ್ಗೆಯೂ ತನಿಖೆಯಾಗಲಿ” ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ತಿರುಗೇಟು

ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ‘ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ನನಗೆ ಹೊಂದಾಣಿಕೆ ರಾಜಕಾರಣದ ಅವಶ್ಯಕತೆಯೂ‌ ಇಲ್ಲ’ ಎಂದು ಸ್ಪಷ್ಟೀಕರಣ ನೀಡಿದರು.

”ಬೇರೆ ಪಕ್ಷಗಳ ನಾಯಕರನ್ನು ರಾಜಕೀಯದಲ್ಲಿ ಭೇಟಿ ಮಾಡುವುದು ಸರ್ವೇ ಸಾಮಾನ್ಯ. ಎಲ್ಲ ಪಕ್ಷಗಳಲ್ಲೂ, ಎಲ್ಲರಿಗೂ ಸ್ನೇಹಿತರಿದ್ದಾರೆ. ಪ್ರತಾಪ್ ಸಿಂಹ ಅವರು ದಾಖಲೆಗಳನ್ನು ನೋಡಿ ಮಾತಾಡಬೇಕು. ಸಿದ್ದರಾಮಯ್ಯ ವಿರುದ್ಧ ಐದು ಪ್ರಕರಣಗಳನ್ನು ಫೈಲ್​ ಮಾಡಿ ದೂರು ದಾಖಲಿಸಿದ್ದೇವೆ. ಈ ಐದೂ ಪ್ರಕರಣಗಳಲ್ಲೂ ಅವರೇ ಆರೋಪಿ. ಅಲ್ಲದೆ 60 ಪ್ರಕರಣಗಳನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವರ್ಗಾಯಿಸಿದ್ದೆವು ಎಂದು ಪ್ರತಾಪ್ ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...

ವಿಜಯ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ ಜಯ: ತಮಿಳುನಾಡು ಗೋಹತ್ಯೆ ನಿಷೇಧದ ಹೈಕೋರ್ಟ್ ಆದೇಶಕ್ಕೆ ತಡೆ

ತಮಿಳುನಾಡಿನಲ್ಲಿ ಹಸು ಮತ್ತು ಕರುಗಳ ಹತ್ಯೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ನಿಷೇಧಿಸಿ ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಸೋಮವಾರ ತಡೆ ನೀಡಿದೆ. ಮುಖ್ಯಮಂತ್ರಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (TVK)...

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...