Homeಕರ್ನಾಟಕಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಎಂದು ಸ್ವಪಕ್ಷ ನಾಯಕರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಪ್ರತಾಪ್ ಸಿಂಹ್ ಅವರು, ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

‘ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

”ಬಿ.ಎಸ್.ಯಡಿಯೂರಪ್ಪ ತುಂಬಾ ಪ್ರಯತ್ನ ಮಾಡಿ ಸರ್ಕಾರ ತಂದರು. ಬಿ.ಎಸ್​​.ಯಡಿಯೂರಪ್ಪ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಬಿ.ಎಸ್.ಯಡಿಯೂರಪ್ಪ ಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೊವಿಡ್​ ವೇಳೆ ಜನರ ಪ್ರಾಣ ಉಳಿಸಲು BSY ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ” ಎಂದು ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಾಪ್ ​​ಸಿಂಹ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ಇಷ್ಟೊಂದು ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ?’: ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ತನಿಖೆಯಾಗಲಿ

ಮುಂದುವರೆದು, ”ಕಾಂಗ್ರೆಸ್ ಪ್ರತಿಪಕ್ಷದಲ್ಲಿದ್ದಾಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್ ಮತ್ತು ಬಿಟ್‌ಕಾಯಿನ್ ಹಗರಣದಂತಹ ವಿಷಯಗಳಲ್ಲಿ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಆದರೆ, ನಮ್ಮ ನಾಯಕರು ಅರ್ಕಾವತಿ ಬಡಾವಣೆಯಲ್ಲಿನ ಭೂ ಡಿನೋಟಿಫಿಕೇಷನ್ ಹಗರಣದ ಬಗ್ಗೆ ತನಿಖೆ ಮಾಡಲು ಮುಂದಾಗಲೇ ಇಲ್ಲ” ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಅರ್ಕಾವತಿ ಬಡಾವಣೆಯಲ್ಲಿನ ಜಮೀನು ಡಿನೋಟಿಫಿಕೇಷನ್ ಆರೋಪ ಆಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿಬಂದಿತ್ತು. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುವುದಾಗಿ ಆಡಳಿತಾರೂಢ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದರೂ ಅದನ್ನು ವಿಧಾನಸಭೆಯಲ್ಲಿ ಮಂಡಿಸಲೇ ಇಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೀವು ( ಕಾಂಗ್ರೆಸ್‌ ನಾಯಕರು ) ಬಿಜೆಪಿ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ, ಬಿಜೆಪಿ ಸರ್ಕಾರದ ವಿರುದ್ಧ ನೀವು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಿ” ಎಂದೂ ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಬಿಲ್‌ಗಳನ್ನು ತೆರವುಗೊಳಿಸಲು ಶೇ. 40 ಕಮಿಷನ್ ಕೇಳಿದ ಆರೋಪದ ಬಗ್ಗೆ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ ಪಿಎಸ್‌ಐ ನೇಮಕಾತಿ ಮತ್ತು ಬಿಟ್‌ಕಾಯಿನ್ ಹಗರಣಗಳ ಬಗ್ಗೆಯೂ ತನಿಖೆಯಾಗಲಿ” ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ತಿರುಗೇಟು

ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ‘ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ನನಗೆ ಹೊಂದಾಣಿಕೆ ರಾಜಕಾರಣದ ಅವಶ್ಯಕತೆಯೂ‌ ಇಲ್ಲ’ ಎಂದು ಸ್ಪಷ್ಟೀಕರಣ ನೀಡಿದರು.

”ಬೇರೆ ಪಕ್ಷಗಳ ನಾಯಕರನ್ನು ರಾಜಕೀಯದಲ್ಲಿ ಭೇಟಿ ಮಾಡುವುದು ಸರ್ವೇ ಸಾಮಾನ್ಯ. ಎಲ್ಲ ಪಕ್ಷಗಳಲ್ಲೂ, ಎಲ್ಲರಿಗೂ ಸ್ನೇಹಿತರಿದ್ದಾರೆ. ಪ್ರತಾಪ್ ಸಿಂಹ ಅವರು ದಾಖಲೆಗಳನ್ನು ನೋಡಿ ಮಾತಾಡಬೇಕು. ಸಿದ್ದರಾಮಯ್ಯ ವಿರುದ್ಧ ಐದು ಪ್ರಕರಣಗಳನ್ನು ಫೈಲ್​ ಮಾಡಿ ದೂರು ದಾಖಲಿಸಿದ್ದೇವೆ. ಈ ಐದೂ ಪ್ರಕರಣಗಳಲ್ಲೂ ಅವರೇ ಆರೋಪಿ. ಅಲ್ಲದೆ 60 ಪ್ರಕರಣಗಳನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವರ್ಗಾಯಿಸಿದ್ದೆವು ಎಂದು ಪ್ರತಾಪ್ ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...