Homeಕರ್ನಾಟಕಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಎಂದು ಸ್ವಪಕ್ಷ ನಾಯಕರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಪ್ರತಾಪ್ ಸಿಂಹ್ ಅವರು, ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

‘ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

”ಬಿ.ಎಸ್.ಯಡಿಯೂರಪ್ಪ ತುಂಬಾ ಪ್ರಯತ್ನ ಮಾಡಿ ಸರ್ಕಾರ ತಂದರು. ಬಿ.ಎಸ್​​.ಯಡಿಯೂರಪ್ಪ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಬಿ.ಎಸ್.ಯಡಿಯೂರಪ್ಪ ಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೊವಿಡ್​ ವೇಳೆ ಜನರ ಪ್ರಾಣ ಉಳಿಸಲು BSY ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ” ಎಂದು ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಾಪ್ ​​ಸಿಂಹ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ಇಷ್ಟೊಂದು ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ?’: ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ತನಿಖೆಯಾಗಲಿ

ಮುಂದುವರೆದು, ”ಕಾಂಗ್ರೆಸ್ ಪ್ರತಿಪಕ್ಷದಲ್ಲಿದ್ದಾಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್ ಮತ್ತು ಬಿಟ್‌ಕಾಯಿನ್ ಹಗರಣದಂತಹ ವಿಷಯಗಳಲ್ಲಿ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಆದರೆ, ನಮ್ಮ ನಾಯಕರು ಅರ್ಕಾವತಿ ಬಡಾವಣೆಯಲ್ಲಿನ ಭೂ ಡಿನೋಟಿಫಿಕೇಷನ್ ಹಗರಣದ ಬಗ್ಗೆ ತನಿಖೆ ಮಾಡಲು ಮುಂದಾಗಲೇ ಇಲ್ಲ” ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಅರ್ಕಾವತಿ ಬಡಾವಣೆಯಲ್ಲಿನ ಜಮೀನು ಡಿನೋಟಿಫಿಕೇಷನ್ ಆರೋಪ ಆಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿಬಂದಿತ್ತು. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುವುದಾಗಿ ಆಡಳಿತಾರೂಢ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದರೂ ಅದನ್ನು ವಿಧಾನಸಭೆಯಲ್ಲಿ ಮಂಡಿಸಲೇ ಇಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೀವು ( ಕಾಂಗ್ರೆಸ್‌ ನಾಯಕರು ) ಬಿಜೆಪಿ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ, ಬಿಜೆಪಿ ಸರ್ಕಾರದ ವಿರುದ್ಧ ನೀವು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಿ” ಎಂದೂ ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಬಿಲ್‌ಗಳನ್ನು ತೆರವುಗೊಳಿಸಲು ಶೇ. 40 ಕಮಿಷನ್ ಕೇಳಿದ ಆರೋಪದ ಬಗ್ಗೆ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ ಪಿಎಸ್‌ಐ ನೇಮಕಾತಿ ಮತ್ತು ಬಿಟ್‌ಕಾಯಿನ್ ಹಗರಣಗಳ ಬಗ್ಗೆಯೂ ತನಿಖೆಯಾಗಲಿ” ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ತಿರುಗೇಟು

ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ‘ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ನನಗೆ ಹೊಂದಾಣಿಕೆ ರಾಜಕಾರಣದ ಅವಶ್ಯಕತೆಯೂ‌ ಇಲ್ಲ’ ಎಂದು ಸ್ಪಷ್ಟೀಕರಣ ನೀಡಿದರು.

”ಬೇರೆ ಪಕ್ಷಗಳ ನಾಯಕರನ್ನು ರಾಜಕೀಯದಲ್ಲಿ ಭೇಟಿ ಮಾಡುವುದು ಸರ್ವೇ ಸಾಮಾನ್ಯ. ಎಲ್ಲ ಪಕ್ಷಗಳಲ್ಲೂ, ಎಲ್ಲರಿಗೂ ಸ್ನೇಹಿತರಿದ್ದಾರೆ. ಪ್ರತಾಪ್ ಸಿಂಹ ಅವರು ದಾಖಲೆಗಳನ್ನು ನೋಡಿ ಮಾತಾಡಬೇಕು. ಸಿದ್ದರಾಮಯ್ಯ ವಿರುದ್ಧ ಐದು ಪ್ರಕರಣಗಳನ್ನು ಫೈಲ್​ ಮಾಡಿ ದೂರು ದಾಖಲಿಸಿದ್ದೇವೆ. ಈ ಐದೂ ಪ್ರಕರಣಗಳಲ್ಲೂ ಅವರೇ ಆರೋಪಿ. ಅಲ್ಲದೆ 60 ಪ್ರಕರಣಗಳನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವರ್ಗಾಯಿಸಿದ್ದೆವು ಎಂದು ಪ್ರತಾಪ್ ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...