Homeಕರ್ನಾಟಕಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು?: ಬೊಮ್ಮಾಯಿ ವಿರುದ್ಧ ಪ್ರತಾಪ್ ಸಿಂಹ ವಾಗ್ದಾಳಿ

- Advertisement -
- Advertisement -

ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಎಂದು ಸ್ವಪಕ್ಷ ನಾಯಕರಾದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಮೈಸೂರು ಸಂಸದ ಪ್ರತಾಪ್ ಸಿಂಹ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ಪ್ರತಾಪ್ ಸಿಂಹ್ ಅವರು, ಬಿಜೆಪಿಯ ಕೆಲವು ನಾಯಕರು ಕಾಂಗ್ರೆಸ್ ನಾಯಕರ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದರು.

‘ಹೊಂದಾಣಿಕೆ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ’ ಎಂದು ಹಿಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದಾರೆ.

”ಬಿ.ಎಸ್.ಯಡಿಯೂರಪ್ಪ ತುಂಬಾ ಪ್ರಯತ್ನ ಮಾಡಿ ಸರ್ಕಾರ ತಂದರು. ಬಿ.ಎಸ್​​.ಯಡಿಯೂರಪ್ಪ ಸಿಎಂ ಆದ ಕೂಡಲೇ ಪ್ರವಾಹ ಬಂದಿತ್ತು. ಬಿ.ಎಸ್.ಯಡಿಯೂರಪ್ಪ ಒಬ್ಬರೇ ಪ್ರವಾಹ ಪರಿಸ್ಥಿತಿ ನಿಭಾಯಿಸಿದರು. ಕೊವಿಡ್​ ವೇಳೆ ಜನರ ಪ್ರಾಣ ಉಳಿಸಲು BSY ಸರ್ಕಾರ ಪ್ರಯತ್ನಿಸಿತು. ಕಷ್ಟದ ಸಂದರ್ಭದಲ್ಲಿ ಯಡಿಯೂರಪ್ಪ ರಾಜ್ಯವನ್ನು ಕಾಪಾಡಿದರು. ಬಿ.ಎಸ್. ಯಡಿಯೂರಪ್ಪ ಬಳಿಕ ಅಧಿಕಾರಕ್ಕೆ ಬಂದವರು ಮಾಡಿದ್ದೇನು? ಬಿಎಸ್​​ವೈರಿಂದ ಅಧಿಕಾರ ಪಡೆದ ಅತಿರಥ ಮಹಾರಥರು ಮಾಡಿದ್ದೇನು? ಕಾರ್ಯಕರ್ತರ ಇಚ್ಛೆಗೆ ತಕ್ಕಂತೆ ನಡೆದು ಕೊಂಡರಾ? ಪ್ರವೀಣ್ ನೆಟ್ಟಾರು, ಹರ್ಷ ಕೊಲೆಯಾದಾಗ ಸೂಕ್ತ ಕ್ರಮ ಕೈಗೊಳ್ಳಲಿಲ್ಲ. ಮತ್ತೆ ಅಧಿಕಾರಕ್ಕೆ ತರಬೇಕೆಂಬ ಉತ್ಸಾಹ ಅವರಲ್ಲಿ ಯಾಕೆ ಕಾಣಲಿಲ್ಲ? ಜನರ ಆಕ್ರೋಶ, ಕಾರ್ಯಕರ್ತರ ನೋವಿಗೆ ನಾನು ಧ್ವನಿಯಾಗಿದ್ದೇನೆ” ಎಂದು ಮಾಜಿ ಸಿಎಂ ಬೊಮ್ಮಾಯಿ ವಿರುದ್ಧ ಪ್ರತಾಪ್ ​​ಸಿಂಹ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ: ‘ಇಷ್ಟೊಂದು ಸುಳ್ಳು ಹೇಳುವುದನ್ನು ಮೋದಿಯವರಿಂದ ಕಲಿತಿರಾ?’: ಬೊಮ್ಮಾಯಿಗೆ ಕಾಂಗ್ರೆಸ್ ಪ್ರಶ್ನೆ

ಬಿಜೆಪಿ ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ತನಿಖೆಯಾಗಲಿ

ಮುಂದುವರೆದು, ”ಕಾಂಗ್ರೆಸ್ ಪ್ರತಿಪಕ್ಷದಲ್ಲಿದ್ದಾಗ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಹಗರಣ, 40 ಪರ್ಸೆಂಟ್‌ ಕಮಿಷನ್ ಮತ್ತು ಬಿಟ್‌ಕಾಯಿನ್ ಹಗರಣದಂತಹ ವಿಷಯಗಳಲ್ಲಿ ಆಗಿನ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು. ಆದರೆ, ನಮ್ಮ ನಾಯಕರು ಅರ್ಕಾವತಿ ಬಡಾವಣೆಯಲ್ಲಿನ ಭೂ ಡಿನೋಟಿಫಿಕೇಷನ್ ಹಗರಣದ ಬಗ್ಗೆ ತನಿಖೆ ಮಾಡಲು ಮುಂದಾಗಲೇ ಇಲ್ಲ” ಎಂದು ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಅರ್ಕಾವತಿ ಬಡಾವಣೆಯಲ್ಲಿನ ಜಮೀನು ಡಿನೋಟಿಫಿಕೇಷನ್ ಆರೋಪ ಆಗಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಕೇಳಿಬಂದಿತ್ತು. ಕೆಂಪಣ್ಣ ಆಯೋಗದ ವರದಿಯನ್ನು ಬಹಿರಂಗ ಪಡಿಸುವುದಾಗಿ ಆಡಳಿತಾರೂಢ ಬಿಜೆಪಿ ನಾಯಕರು ಬೆದರಿಕೆ ಹಾಕಿದ್ದರೂ ಅದನ್ನು ವಿಧಾನಸಭೆಯಲ್ಲಿ ಮಂಡಿಸಲೇ ಇಲ್ಲ ಎಂದು ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದರು. ಈಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದು ತಿಂಗಳು ಕಳೆದಿದೆ. ನೀವು ( ಕಾಂಗ್ರೆಸ್‌ ನಾಯಕರು ) ಬಿಜೆಪಿ ನಾಯಕರೊಂದಿಗೆ ಹೊಂದಾಣಿಕೆ ರಾಜಕಾರಣ ಮಾಡದಿದ್ದರೆ, ಬಿಜೆಪಿ ಸರ್ಕಾರದ ವಿರುದ್ಧ ನೀವು ಮಾಡಿರುವ ಆರೋಪಗಳ ಬಗ್ಗೆ ತನಿಖೆಗೆ ಆದೇಶಿಸಿ” ಎಂದೂ ಪ್ರತಾಪ್‌ ಸಿಂಹ ಹೇಳಿದ್ದಾರೆ.

”ಬಿಲ್‌ಗಳನ್ನು ತೆರವುಗೊಳಿಸಲು ಶೇ. 40 ಕಮಿಷನ್ ಕೇಳಿದ ಆರೋಪದ ಬಗ್ಗೆ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ. ಅದೇ ರೀತಿ ಪಿಎಸ್‌ಐ ನೇಮಕಾತಿ ಮತ್ತು ಬಿಟ್‌ಕಾಯಿನ್ ಹಗರಣಗಳ ಬಗ್ಗೆಯೂ ತನಿಖೆಯಾಗಲಿ” ಎಂದು ಅವರು ತಿಳಿಸಿದ್ದಾರೆ.

ಬೊಮ್ಮಾಯಿ ತಿರುಗೇಟು

ಸಂಸದ ಪ್ರತಾಪ್ ಸಿಂಹ ಮಾಡಿರುವ ಆರೋಪದ ವಿರುದ್ಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಗರಂ ಆಗಿದ್ದಾರೆ. ‘ನನ್ನ ಬದುಕಿನಲ್ಲಿ ಹೊಂದಾಣಿಕೆ ರಾಜಕಾರಣ ಮಾಡಿಲ್ಲ, ಮುಂದೆ ಮಾಡುವುದೂ ಇಲ್ಲ. ನನಗೆ ಹೊಂದಾಣಿಕೆ ರಾಜಕಾರಣದ ಅವಶ್ಯಕತೆಯೂ‌ ಇಲ್ಲ’ ಎಂದು ಸ್ಪಷ್ಟೀಕರಣ ನೀಡಿದರು.

”ಬೇರೆ ಪಕ್ಷಗಳ ನಾಯಕರನ್ನು ರಾಜಕೀಯದಲ್ಲಿ ಭೇಟಿ ಮಾಡುವುದು ಸರ್ವೇ ಸಾಮಾನ್ಯ. ಎಲ್ಲ ಪಕ್ಷಗಳಲ್ಲೂ, ಎಲ್ಲರಿಗೂ ಸ್ನೇಹಿತರಿದ್ದಾರೆ. ಪ್ರತಾಪ್ ಸಿಂಹ ಅವರು ದಾಖಲೆಗಳನ್ನು ನೋಡಿ ಮಾತಾಡಬೇಕು. ಸಿದ್ದರಾಮಯ್ಯ ವಿರುದ್ಧ ಐದು ಪ್ರಕರಣಗಳನ್ನು ಫೈಲ್​ ಮಾಡಿ ದೂರು ದಾಖಲಿಸಿದ್ದೇವೆ. ಈ ಐದೂ ಪ್ರಕರಣಗಳಲ್ಲೂ ಅವರೇ ಆರೋಪಿ. ಅಲ್ಲದೆ 60 ಪ್ರಕರಣಗಳನ್ನು ಎಸಿಬಿಯಿಂದ ಲೋಕಾಯುಕ್ತಕ್ಕೆ ವರ್ಗಾಯಿಸಿದ್ದೆವು ಎಂದು ಪ್ರತಾಪ್ ಸಿಂಹ ಆರೋಪಕ್ಕೆ ಬೊಮ್ಮಾಯಿ ತಿರುಗೇಟು ನೀಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...