Homeಕರ್ನಾಟಕಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ. ಹಾಗಾಗಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೆ ಆಗಿರುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿಯ ಬಗ್ಗೆ ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಈಗ ಇದು ವಿವಾದಕ್ಕೆ ಕಾರಣವಾಗಿದೆ.

ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, “ಉಮೇಶ್ ಕತ್ತಿ ಮೊನ್ನೆ ಮಾತನಾಡುತ್ತಾ, ಯಡಿಯೂರಪ್ಪ ಏನ್ ಶಿವಮೊಗ್ಗದ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದ್ದರು. ವಿಜಯಪುರಕ್ಕೆ ಬಿಡುಗಡೆಯಾಗಿದ್ದ 125 ಕೋಟಿ ಹಣವನ್ನು ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಎಲ್ಲಾ ಅನುದಾನವನ್ನೂ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಬಹಳ ದಿನ ಯಡಿಯೂರಪ್ಪ ಅಧಿಕಾರದಲ್ಲಿ ಉಳಿಯುವುದಿಲ್ಲ. ಅವರದೂ ಬಂದೈತೆ. ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ

“ವಿಜಯಪುರಕ್ಕೆ ನೀಡಿದ್ದ ಅನುದಾನ ವಾಪಸ್ ಪಡೆದಿದ್ದರೂ ನಾನು ಬಿಡಲ್ಲ. ಹೇಗೆ ತರಬೇಕೋ ನನಗೆ ಗೊತ್ತು. ಬೆಂಗಳೂರಿನವರು ಬಂದು ವಿಜಯಪುರದ ನಮ್ಮ ಮನೆಯ ಮುಂದೆ ನಿಲ್ಲಬೇಕು. ಈಗ ನಾವು ಅವರ ಮನೆಯ ಮುಂದೆ ಹೋಗಿ ನಿಲ್ಲುತ್ತಿದ್ದೇವೆ. ಉತ್ತರ ಕರ್ನಾಟಕದ ಶಾಸಕರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ, ಚಾಮರಾಜನಗರ ಮತ್ತು ಕೋಲಾರದಲ್ಲಿ ಯಾರಾದರೂ ಬಿಜೆಪಿಗೆ ಓಟ್ ಹಾಕ್ತಾರಾ? ಉತ್ತರ ಕರ್ನಾಟಕದವರೇ 100 ಶಾಸಕರನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ. ಆ ಮೇಲೆ ಆ ಕಡೆ 10 ರಿಂದ 15 ಶಾಸಕರು ಆಯ್ಕೆಯಾಗಿರುತ್ತಾರೆ. ಹೀಗಾಗಿ ಮೇಲಿನವರಿಗೂ ಇದು ಗೊತ್ತಾಗಿದೆ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗಿರ್ತಾರೆ. ಪ್ರಧಾನ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ನಂತರ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದೂ ಕೂಡ ಬಹುತೇಕ ಫೈನಲ್ ಆಗಿದೆ” ಎಂದು ಕುರ್ಚಿಯ ಅನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದಾರೆ.

ಇತ್ತೀಚೆಗೆ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಂತಿರುವ ಯತ್ನಾಳ್, ಆಗಾಗ ತಮ್ಮ ಆಕ್ರೋಶವನ್ನು ಹೊರಹಾಕುತ್ತಲೇ ಇರುತ್ತಾರೆ. ತಮಗೆ ಸಿಗಬೇಕಿದ್ದ ಸಚಿವ ಸ್ಥಾನವನ್ನು ಬೇರೆಯವರಿಗೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದು, ಈಗ ವಿಜಯಪುರದ ಅನುದಾನವನ್ನು ಹಿಂಪಡೆದಿರುವುದನ್ನು ಕಾರಣ ಮಾಡಿಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆ.

ಹಾಗಾಗಿ, ರಾಜ್ಯ ಬಿಜೆಪಿ ಪಾಳಯದಲ್ಲಿ ಬಿರುಕುಂಟಾಗಿದೆ ಎಂಬುದನ್ನು ಸ್ಪಷ್ಟವಾಗಿಯೇ ಹೇಳಿದ್ದಾರೆ. ಈಗಾಗಲೇ ಉಪಚುನಾವಣೆಯ ವಿಷಯದಲ್ಲೂ ಬಿಜೆಪಿಯೊಳಗೆ ಮನಸ್ತಾಪ ಆರಂಭವಾಗಿದ್ದು, ಹಲವು ರಾಜಕೀಯ ವಿಶ್ಲೇಷಕರ ಪ್ರಕಾರ, ಯಡಿಯೂರಪ್ಪನವರನ್ನು ಅತೀ ಶೀಘ್ರದಲ್ಲೇ ಕೆಳಗಿಳಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...