Homeಕರ್ನಾಟಕಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಯಡಿಯೂರಪ್ಪನವರ ಕುರ್ಚಿ ಉಳಿಯುವುದಿಲ್ಲ! ಬಿಜೆಪಿ ಶಾಸಕ ಯತ್ನಾಳ್ ಹೇಳಿಕೆ

ಬಿಜೆಪಿ ಹೈಕಮಾಂಡ್‌ಗೂ ಯಡಿಯೂರಪ್ಪನವರು ಸಾಕಾಗಿದ್ದಾರೆ. ಹಾಗಾಗಿ ಮುಂದಿನ ಸಿಎಂ ಉತ್ತರ ಕರ್ನಾಟಕದವರೆ ಆಗಿರುತ್ತಾರೆ ಎಂದು ಯತ್ನಾಳ್ ಹೇಳಿದ್ದಾರೆ.

- Advertisement -
- Advertisement -

ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರ್ಚಿಯ ಬಗ್ಗೆ ಭವಿಷ್ಯ ನುಡಿದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ, “ಯಡಿಯೂರಪ್ಪ ಇನ್ನು ಬಹಳ ದಿನ ಅಧಿಕಾರದಲ್ಲಿ ಉಳಿಯುವುದಿಲ್ಲ” ಎಂದು ಹೇಳಿದ್ದಾರೆ. ಈಗ ಇದು ವಿವಾದಕ್ಕೆ ಕಾರಣವಾಗಿದೆ.

ವಿಜಯಪುರದ ಕಾರ್ಯಕ್ರಮವೊಂದರಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಶಾಸಕರು, “ಉಮೇಶ್ ಕತ್ತಿ ಮೊನ್ನೆ ಮಾತನಾಡುತ್ತಾ, ಯಡಿಯೂರಪ್ಪ ಏನ್ ಶಿವಮೊಗ್ಗದ ಮುಖ್ಯಮಂತ್ರಿಯೋ ಅಥವಾ ಕರ್ನಾಟಕದ ಮುಖ್ಯಮಂತ್ರಿಯೋ ಎಂದು ಪ್ರಶ್ನಿಸಿದ್ದರು. ವಿಜಯಪುರಕ್ಕೆ ಬಿಡುಗಡೆಯಾಗಿದ್ದ 125 ಕೋಟಿ ಹಣವನ್ನು ಹಿಂದಕ್ಕೆ ಪಡೆದಿದ್ದಾರೆ. ಸಿಎಂ ಎಲ್ಲಾ ಅನುದಾನವನ್ನೂ ಶಿವಮೊಗ್ಗಕ್ಕೆ ಒಯ್ಯುತ್ತಿದ್ದಾರೆ. ಇನ್ನೇನು ಬಹಳ ದಿನ ಯಡಿಯೂರಪ್ಪ ಅಧಿಕಾರದಲ್ಲಿ ಉಳಿಯುವುದಿಲ್ಲ. ಅವರದೂ ಬಂದೈತೆ. ಮೇಲಿನವರಿಗೂ ಅವರು ಸಾಕಾಗಿದ್ದಾರೆ. ಯಡಿಯೂರಪ್ಪನವರ ನಂತರ ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿಯಾಗಲಿದ್ದಾರೆ” ಎಂದು ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ’ಮಿಸ್ಟರ್‌ ಯಡಿಯೂರಪ್ಪ ನೀವು ಪ್ರಜಾಪ್ರಭುತ್ವವಾದಿಯಲ್ಲ, ಸರ್ವಾಧಿಕಾರಿ’!: ಕೋಡಿಹಳ್ಳಿ ಚಂದ್ರಶೇಖರ್ ಸಂದರ್ಶನ

“ವಿಜಯಪುರಕ್ಕೆ ನೀಡಿದ್ದ ಅನುದಾನ ವಾಪಸ್ ಪಡೆದಿದ್ದರೂ ನಾನು ಬಿಡಲ್ಲ. ಹೇಗೆ ತರಬೇಕೋ ನನಗೆ ಗೊತ್ತು. ಬೆಂಗಳೂರಿನವರು ಬಂದು ವಿಜಯಪುರದ ನಮ್ಮ ಮನೆಯ ಮುಂದೆ ನಿಲ್ಲಬೇಕು. ಈಗ ನಾವು ಅವರ ಮನೆಯ ಮುಂದೆ ಹೋಗಿ ನಿಲ್ಲುತ್ತಿದ್ದೇವೆ. ಉತ್ತರ ಕರ್ನಾಟಕದ ಶಾಸಕರಿಂದಲೇ ಬಿಜೆಪಿಯವರು ಮುಖ್ಯಮಂತ್ರಿಯಾಗಲಿದ್ದಾರೆ. ಮಂಡ್ಯ, ಚಾಮರಾಜನಗರ ಮತ್ತು ಕೋಲಾರದಲ್ಲಿ ಯಾರಾದರೂ ಬಿಜೆಪಿಗೆ ಓಟ್ ಹಾಕ್ತಾರಾ? ಉತ್ತರ ಕರ್ನಾಟಕದವರೇ 100 ಶಾಸಕರನ್ನು ಆಯ್ಕೆ ಮಾಡಿ ಕಳುಹಿಸುತ್ತಾರೆ. ಆ ಮೇಲೆ ಆ ಕಡೆ 10 ರಿಂದ 15 ಶಾಸಕರು ಆಯ್ಕೆಯಾಗಿರುತ್ತಾರೆ. ಹೀಗಾಗಿ ಮೇಲಿನವರಿಗೂ ಇದು ಗೊತ್ತಾಗಿದೆ. ಮುಂದಿನ ಉತ್ತರಾಧಿಕಾರಿ ಉತ್ತರ ಕರ್ನಾಟಕದವರೇ ಆಗಿರ್ತಾರೆ. ಪ್ರಧಾನ ಮಂತ್ರಿಗಳ ಮನಸ್ಸಿನಲ್ಲಿ ಈ ವಿಚಾರ ಬಂದಿದೆ. ಯಡಿಯೂರಪ್ಪ ನಂತರ ಉತ್ತರ ಕರ್ನಾಟಕವದವರಿಗೆ ಸಿಎಂ ಮಾಡೋಣ ಎಂದಿದ್ದಾರೆ. ಅದೂ ಕೂಡ ಬಹುತೇಕ ಫೈನಲ್ ಆಗಿದೆ” ಎಂದು ಕುರ್ಚಿಯ ಅನಿರ್ದಿಷ್ಟತೆಯ ಬಗ್ಗೆ ವಿವರಿಸಿದ್ದಾರೆ.

ಇತ್ತೀಚೆಗೆ ಯಡಿಯೂರಪ್ಪ ಅವರ ಮೇಲೆ ಮುನಿಸಿಕೊಂಡಂತಿರುವ ಯತ್ನಾಳ್, ಆಗಾಗ ತಮ್ಮ ಆಕ್ರೋಶವನ್ನು ಹೊರಹಾಕುತ್ತಲೇ ಇರುತ್ತಾರೆ. ತಮಗೆ ಸಿಗಬೇಕಿದ್ದ ಸಚಿವ ಸ್ಥಾನವನ್ನು ಬೇರೆಯವರಿಗೆ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದು, ಈಗ ವಿಜಯಪುರದ ಅನುದಾನವನ್ನು ಹಿಂಪಡೆದಿರುವುದನ್ನು ಕಾರಣ ಮಾಡಿಕೊಂಡು ಈ ರೀತಿ ಹೇಳಿಕೆ ನೀಡಿದ್ದಾರೆ.

ಹಾಗಾಗಿ, ರಾಜ್ಯ ಬಿಜೆಪಿ ಪಾಳಯದಲ್ಲಿ ಬಿರುಕುಂಟಾಗಿದೆ ಎಂಬುದನ್ನು ಸ್ಪಷ್ಟವಾಗಿಯೇ ಹೇಳಿದ್ದಾರೆ. ಈಗಾಗಲೇ ಉಪಚುನಾವಣೆಯ ವಿಷಯದಲ್ಲೂ ಬಿಜೆಪಿಯೊಳಗೆ ಮನಸ್ತಾಪ ಆರಂಭವಾಗಿದ್ದು, ಹಲವು ರಾಜಕೀಯ ವಿಶ್ಲೇಷಕರ ಪ್ರಕಾರ, ಯಡಿಯೂರಪ್ಪನವರನ್ನು ಅತೀ ಶೀಘ್ರದಲ್ಲೇ ಕೆಳಗಿಳಿಸುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ – ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....