Homeಮುಖಪುಟದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ಅವರಿಗೆ ಜಾಮೀನು ನೀಡುವ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಅಭಿವ್ಯಕ್ತಿ ಸ್ವಾತಂತ್ರ್ಯ, ಅಸಮ್ಮತಿ, ಭಿನ್ನಧ್ವನಿಯ ಹಕ್ಕುಗಳ ಕುರಿತು ಹಲವು ಉಲ್ಲೇಖಗಳನ್ನು ಮಾಡಿದ್ದಾರೆ.

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ನಡೆದ “ಟೂಲ್‌ಕಿಟ್” ಪ್ರಕರಣದಲ್ಲಿ ಬೆಂಗಳೂರಿನಿಂದ ಬಂಧಿಸಲ್ಪಟ್ಟ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿ ನ್ಯಾಯಾಲಯವು ಅವಳ ಜಾಮೀನು ನೀಡುವಾಗ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದೇಶದಲ್ಲಿ ಭಿನ್ನಾಭಿಪ್ರಾಯದ ಹಕ್ಕಿನ ಪರವಾಗಿ ಬಲವಾದ ಹೇಳಿಕೆಗಳನ್ನು ನೀಡಿದೆ.

ಪ್ರಕರಣದಲ್ಲಿ ನ್ಯಾಯಾಧೀಶರ ಉಲ್ಲೇಖಗಳು ಇಲ್ಲಿವೆ

  • ಜಾಮೀನು ಮನವಿಗೆ ದೆಹಲಿ ಪೊಲೀಸರ ವಿರೋಧವು ಕೇವಲ ಅಲಂಕಾರಿಕವಾಗಿದೆ ಎಂದು ತೋರುತ್ತದೆ… ದಾಖಲೆಯಲ್ಲಿ ಲಭ್ಯವಿರುವ ಅಲ್ಪ ಮತ್ತು ಹುರುಳೇ ಇಲ್ಲದ ಸೂಕ್ಷ್ಮ ಪುರಾವೆಗಳನ್ನು ಗಮನಿಸಿದರೆ, 22 ವರ್ಷದ ಯುವತಿಯ ವಿರುದ್ಧ ‘ಜಾಮೀನು’ ಎಂಬ ಸಾಮಾನ್ಯ ನಿಯಮವನ್ನು ಉಲ್ಲಂಘಿಸಲು ಯಾವುದೇ ಸ್ಪಷ್ಟವಾದ ಕಾರಣಗಳು ಕಂಡುಬಂದಿಲ್ಲ.
  • ಸಂಪೂರ್ಣವಾಗಿ ಯಾವುದೇ ಕ್ರಿಮಿನಲ್ ಕಳಂಕವಿಲ್ಲದ, ಸಮಾಜದಲ್ಲಿ ಸುಭದ್ರ ಸ್ಥಾನಮಾನವನ್ನು ಹೊಂದಿರುವ ಯುವತಿಯನ್ನು ಮತ್ತೆ ಜೈಲಿಗೆ ಕಳುಹಿಸಲು ಯಾವುದೇ ಕಾರಣಗಳು ಕಾಣುತ್ತಿಲ್ಲ.
  • ಆರೋಪಿಗಳು ಪೊಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸಂಸ್ಥಾಪಕರೊಂದಿಗೆ ಸೇರಿ ಜನವರಿ 26 ರಂದು ಹಿಂಸಾಚಾರ ಹುಟ್ಟುಹಾಕಲು ಪ್ರಯತ್ನಿಸಿದ್ದಾರೆ ಅಥವಾ ಅದಕ್ಕಾಗಿ ಟೂಲ್ಕಿಟ್ ಹಂಚಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಇಲ್ಲದೆ ಇರುವುದರಿಂದ, ಅವರು ಪ್ರತ್ಯೇಕತಾವಾದಿ ಪ್ರವೃತ್ತಿಯನ್ನು ಅಥವಾ ಗಣರಾಜ್ಯೋತ್ಸವದಂದು ಉಂಟಾದ ಹಿಂಸಾಚಾರವನ್ನು ಬೆಂಬಲಿಸಿದರು ಎಂಬುದನ್ನು ಒಪ್ಪಲಾಗದು.

ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು

  • ಅವರು ಕಾನೂನುಗಳನ್ನು ವಿರೋಧಿಸಲು ಬೇಕಾಗಿ ಜನರೊಂದಿಗೆ ಒಂದು ವೇದಿಕೆಯನ್ನು ಹಂಚಿಕೊಂಡಿದ್ದಾರೆ ಅಷ್ಟೇ.
  • ಜನವರಿ 26 ರ ಹಿಂಸಾಚಾರದ ದುಷ್ಕರ್ಮಿಗಳು ಮತ್ತು ಪಿಜೆಎಫ್ ಹಾಗೂ ಆರೋಪಿಗಳ ನಡುಬಿನ ಸಂಪರ್ಕವಿರುವ ಯಾವ ಸಾಕ್ಷ್ಯಾಧಾರಗಳೂ ಕೂಡಾ ಇಲ್ಲ. “ಟೂಲ್ಕಿಟ್”ನಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ನೆರವಾಗುವ ಕರೆಯನ್ನು ನೀಡಿಲ್ಲ.
  • ಯಾವುದೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ನಾಗರಿಕರು ಸರ್ಕಾರದ ಆತ್ಮಸಾಕ್ಷಿಯ ಪಾಲಕರು. ಸರ್ಕಾರದ ನೀತಿಗಳನ್ನು ಒಪ್ಪುವುದಿಲ್ಲ ಎಂದ ಮಾತ್ರಕ್ಕೆ ಅವರನ್ನು ಜೈಲಲಿನಲ್ಲಿ ಇಡಲಾಗುವುದಿಲ್ಲ.
  • ನಮ್ಮ ಸಂವಿಧಾನದ ಕರ್ತೃರು ಸಹ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ ಭಿನ್ನತೆಗೆ ಸರಿಯಾದ ಗೌರವವನ್ನು ನೀಡಿದರು.
  • ಭಿನ್ನಾಭಿಪ್ರಾಯದ ಹಕ್ಕನ್ನು ಭಾರತದ ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ದೃಢವಾಗಿ ಪ್ರತಿಪಾದಿಸಲಾಗಿದೆ.
  • ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಜಾಗತಿಕ ಬೆಂಬಲ ಪಡೆಯು ಹಕ್ಕನ್ನು ಒಳಗೊಂಡಿದೆ.
  • ವಿಚಾರ ವಿನಿಮಯಕ್ಕೆ ಯಾವುದೇ ಭೌಗೋಳಿಕ ಅಡೆತಡೆಗಳು ಇಲ್ಲ. ಕಾನೂನು ಚೌಕಟ್ಟಿನೊಳಗಡೆ ವಿದೇಶದಲ್ಲಿರುವವರೊಂದಿಗೂ ವಿಚಾರ ವಿನಿಮಯ ಮಾಡುವುದು ನಾಗರಿಕರ ಮೂಲಭೂತ ಹಕ್ಕಾಗಿದೆ.

ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...