Homeಮುಖಪುಟದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ರವಿ ಜಾಮೀನು ವಿಚಾರಣೆಯಲ್ಲಿ ಕೋರ್ಟ್ ಹೇಳಿದ್ದೇನು? 10 ಅಂಶಗಳು

ದಿಶಾ ಅವರಿಗೆ ಜಾಮೀನು ನೀಡುವ ಪ್ರಕ್ರಿಯೆಯಲ್ಲಿ ನ್ಯಾಯಾಧೀಶರು ಅಭಿವ್ಯಕ್ತಿ ಸ್ವಾತಂತ್ರ್ಯ, ಅಸಮ್ಮತಿ, ಭಿನ್ನಧ್ವನಿಯ ಹಕ್ಕುಗಳ ಕುರಿತು ಹಲವು ಉಲ್ಲೇಖಗಳನ್ನು ಮಾಡಿದ್ದಾರೆ.

- Advertisement -
- Advertisement -

ಈ ತಿಂಗಳ ಆರಂಭದಲ್ಲಿ ನಡೆದ “ಟೂಲ್‌ಕಿಟ್” ಪ್ರಕರಣದಲ್ಲಿ ಬೆಂಗಳೂರಿನಿಂದ ಬಂಧಿಸಲ್ಪಟ್ಟ 21 ವರ್ಷದ ಪರಿಸರ ಹೋರಾಟಗಾರ್ತಿ ದಿಶಾ ರವಿ ಅವರಿಗೆ ಜಾಮೀನು ನೀಡಲಾಗಿದೆ. ದೆಹಲಿ ನ್ಯಾಯಾಲಯವು ಅವಳ ಜಾಮೀನು ನೀಡುವಾಗ, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ದೇಶದಲ್ಲಿ ಭಿನ್ನಾಭಿಪ್ರಾಯದ ಹಕ್ಕಿನ ಪರವಾಗಿ ಬಲವಾದ ಹೇಳಿಕೆಗಳನ್ನು ನೀಡಿದೆ.

ಪ್ರಕರಣದಲ್ಲಿ ನ್ಯಾಯಾಧೀಶರ ಉಲ್ಲೇಖಗಳು ಇಲ್ಲಿವೆ

  • ಜಾಮೀನು ಮನವಿಗೆ ದೆಹಲಿ ಪೊಲೀಸರ ವಿರೋಧವು ಕೇವಲ ಅಲಂಕಾರಿಕವಾಗಿದೆ ಎಂದು ತೋರುತ್ತದೆ… ದಾಖಲೆಯಲ್ಲಿ ಲಭ್ಯವಿರುವ ಅಲ್ಪ ಮತ್ತು ಹುರುಳೇ ಇಲ್ಲದ ಸೂಕ್ಷ್ಮ ಪುರಾವೆಗಳನ್ನು ಗಮನಿಸಿದರೆ, 22 ವರ್ಷದ ಯುವತಿಯ ವಿರುದ್ಧ ‘ಜಾಮೀನು’ ಎಂಬ ಸಾಮಾನ್ಯ ನಿಯಮವನ್ನು ಉಲ್ಲಂಘಿಸಲು ಯಾವುದೇ ಸ್ಪಷ್ಟವಾದ ಕಾರಣಗಳು ಕಂಡುಬಂದಿಲ್ಲ.
  • ಸಂಪೂರ್ಣವಾಗಿ ಯಾವುದೇ ಕ್ರಿಮಿನಲ್ ಕಳಂಕವಿಲ್ಲದ, ಸಮಾಜದಲ್ಲಿ ಸುಭದ್ರ ಸ್ಥಾನಮಾನವನ್ನು ಹೊಂದಿರುವ ಯುವತಿಯನ್ನು ಮತ್ತೆ ಜೈಲಿಗೆ ಕಳುಹಿಸಲು ಯಾವುದೇ ಕಾರಣಗಳು ಕಾಣುತ್ತಿಲ್ಲ.
  • ಆರೋಪಿಗಳು ಪೊಯೆಟಿಕ್ ಜಸ್ಟೀಸ್ ಫೌಂಡೇಶನ್‌ನ ಸಂಸ್ಥಾಪಕರೊಂದಿಗೆ ಸೇರಿ ಜನವರಿ 26 ರಂದು ಹಿಂಸಾಚಾರ ಹುಟ್ಟುಹಾಕಲು ಪ್ರಯತ್ನಿಸಿದ್ದಾರೆ ಅಥವಾ ಅದಕ್ಕಾಗಿ ಟೂಲ್ಕಿಟ್ ಹಂಚಿಕೊಂಡಿದ್ದಾರೆ ಎಂಬುದಕ್ಕೆ ಯಾವುದೇ ಪುರಾವೆಗಳು ಇಲ್ಲದೆ ಇರುವುದರಿಂದ, ಅವರು ಪ್ರತ್ಯೇಕತಾವಾದಿ ಪ್ರವೃತ್ತಿಯನ್ನು ಅಥವಾ ಗಣರಾಜ್ಯೋತ್ಸವದಂದು ಉಂಟಾದ ಹಿಂಸಾಚಾರವನ್ನು ಬೆಂಬಲಿಸಿದರು ಎಂಬುದನ್ನು ಒಪ್ಪಲಾಗದು.

ಇದನ್ನೂ ಓದಿ: ಟೂಲ್‌ಕಿಟ್ ಪ್ರಕರಣ: ಪರಿಸರ ಕಾರ್ಯಕರ್ತೆ ದಿಶಾ ರವಿಗೆ ಜಾಮೀನು ಮಂಜೂರು

  • ಅವರು ಕಾನೂನುಗಳನ್ನು ವಿರೋಧಿಸಲು ಬೇಕಾಗಿ ಜನರೊಂದಿಗೆ ಒಂದು ವೇದಿಕೆಯನ್ನು ಹಂಚಿಕೊಂಡಿದ್ದಾರೆ ಅಷ್ಟೇ.
  • ಜನವರಿ 26 ರ ಹಿಂಸಾಚಾರದ ದುಷ್ಕರ್ಮಿಗಳು ಮತ್ತು ಪಿಜೆಎಫ್ ಹಾಗೂ ಆರೋಪಿಗಳ ನಡುಬಿನ ಸಂಪರ್ಕವಿರುವ ಯಾವ ಸಾಕ್ಷ್ಯಾಧಾರಗಳೂ ಕೂಡಾ ಇಲ್ಲ. “ಟೂಲ್ಕಿಟ್”ನಲ್ಲಿ ಯಾವುದೇ ರೀತಿಯ ಹಿಂಸಾಚಾರಕ್ಕೆ ನೆರವಾಗುವ ಕರೆಯನ್ನು ನೀಡಿಲ್ಲ.
  • ಯಾವುದೆ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿನ ನಾಗರಿಕರು ಸರ್ಕಾರದ ಆತ್ಮಸಾಕ್ಷಿಯ ಪಾಲಕರು. ಸರ್ಕಾರದ ನೀತಿಗಳನ್ನು ಒಪ್ಪುವುದಿಲ್ಲ ಎಂದ ಮಾತ್ರಕ್ಕೆ ಅವರನ್ನು ಜೈಲಲಿನಲ್ಲಿ ಇಡಲಾಗುವುದಿಲ್ಲ.
  • ನಮ್ಮ ಸಂವಿಧಾನದ ಕರ್ತೃರು ಸಹ, ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮೂಲಭೂತ ಹಕ್ಕು ಎಂದು ಗುರುತಿಸುವ ಮೂಲಕ ಅಭಿಪ್ರಾಯದ ಭಿನ್ನತೆಗೆ ಸರಿಯಾದ ಗೌರವವನ್ನು ನೀಡಿದರು.
  • ಭಿನ್ನಾಭಿಪ್ರಾಯದ ಹಕ್ಕನ್ನು ಭಾರತದ ಸಂವಿಧಾನದ 19 ನೇ ಪರಿಚ್ಛೇದದ ಅಡಿಯಲ್ಲಿ ದೃಢವಾಗಿ ಪ್ರತಿಪಾದಿಸಲಾಗಿದೆ.
  • ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯವು ಜಾಗತಿಕ ಬೆಂಬಲ ಪಡೆಯು ಹಕ್ಕನ್ನು ಒಳಗೊಂಡಿದೆ.
  • ವಿಚಾರ ವಿನಿಮಯಕ್ಕೆ ಯಾವುದೇ ಭೌಗೋಳಿಕ ಅಡೆತಡೆಗಳು ಇಲ್ಲ. ಕಾನೂನು ಚೌಕಟ್ಟಿನೊಳಗಡೆ ವಿದೇಶದಲ್ಲಿರುವವರೊಂದಿಗೂ ವಿಚಾರ ವಿನಿಮಯ ಮಾಡುವುದು ನಾಗರಿಕರ ಮೂಲಭೂತ ಹಕ್ಕಾಗಿದೆ.

ಇದನ್ನೂ ಓದಿ: ದಿಶಾ ರವಿಯ ಬಂಧನ ಒಂದೇ ಕಲ್ಲಲ್ಲಿ ಮೂರು ಹಕ್ಕಿಗಳನ್ನು ಹೊಡೆದ ಹಾಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...