Homeಮುಖಪುಟಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಹತ್ರಾಸ್ ಸಂತ್ರಸ್ತೆ ತನ್ನ ಅಂತಿಮ ವಿಡಿಯೋದಲ್ಲಿ ಹೇಳಿದ್ದೇನು? ಪೋಸ್ಟ್‌ಮಾರ್ಟಂ ವರದಿ ಸುಳ್ಳೇ?

ಸಂತ್ರಸ್ತೆಯ ಈ ವೀಡಿಯೋ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ತನ್ನ ಮೇಲೆ ಅತ್ಯಾಚಾರ ನಡೆದಿರುವುದಾಗಿ ಸ್ವತಃ ತಾನೇ ಹೇಳಿರುವ ವೀಡಿಯೋ ವೈರಲ್ ಆಗುತ್ತಿದೆ. ಆದರೆ ಪೋಸ್ಟ್‌ಮಾರ್ಟಂ ರಿಪೋರ್ಟ್ ಅತ್ಯಾಚಾರ ನಡೆದಿಲ್ಲ ಎಂದು ಹೇಳುತ್ತದೆ. ಹೆಚ್ಚಿನ ವಿವಿರ ಇಲ್ಲಿದೆ.

- Advertisement -
- Advertisement -

ಹತ್ರಾಸ್ ಸಂತ್ರಸ್ತೆ ಮನಿಷಾ ಅಂತಿಮವಾಗಿ ಮಾತನಾಡಿದ್ದಾಳೆ ಎನ್ನಲಾಗುತ್ತಿರುವ ವಿಡಿಯೋ ಸದ್ಯ ಈಗ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, “ತಾನು ಇಬ್ಬರು ಪುರುಷರಿಂದ ಅತ್ಯಾಚಾರಕ್ಕೆ ಒಳಗಾಗಿದ್ದೇನೆ” ಎಂದು ಹೇಳಿರುವುದು ದಾಖಲಾಗಿದೆ.

“ತನ್ನನ್ನು ಇಬ್ಬರು ಅತ್ಯಾಚಾರ ಮಾಡಿದರು. ನನ್ನ ತಾಯಿ ಬರುವುದನ್ನು ನೋಡಿ ಇನ್ನಿಬ್ಬರು ಓಡಿ ಹೋದರು. ಅವರು ಈ ಮೊದಲೇ ನನ್ನ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿದ್ದರು. ಆದರೆ ಆಗ ನಾನು ತಪ್ಪಿಸಿಕೊಂಡಿದ್ದೆ” ಎಂದು ಹೇಳುತ್ತಾ, ಈ ಪ್ರಕರಣದಲ್ಲಿ ಪೊಲೀಸರು ಬಂಧಿಸಿರುವ 4 ಆರೋಪಿಗಳಲ್ಲಿ ಒಬ್ಬನಾದ ರವಿ ಎಂಬ ಆರೋಪಿಯ ಹೆಸರನ್ನು ಉಲ್ಲೇಖಿಸಿದ್ದಾಳೆ.

ಇದನ್ನೂ ಓದಿ: ಹತ್ರಾಸ್ ಕುರಿತು ನೀವು ದನಿಯೆತ್ತದಿದ್ದರೆ..: ರಮ್ಯಾ ದಿವ್ಯಸ್ಪಂದನ ಮನವಿ ಮಾಡಿದ್ದೇನು?

ಇದನ್ನೂ ಓದಿ: ಹತ್ರಾಸ್ ಅತ್ಯಾಚಾರ: ಕೊಲೆಗೀಡಾದ ಯುವತಿಯ ಪೋಸ್ಟ್‌ಮಾರ್ಟಂ ರಿಪೋರ್ಟ್ ಏನು ಹೇಳುತ್ತಿದೆ?

ಸೆಪ್ಟೆಂಬರ್ 22 ರಂದು ಯುವತಿಯ ಹೇಳಿಕೆಯನ್ನು ರೆಕಾರ್ಡ್ ಮಾಡಿದ್ದ ಸರ್ಕಲ್ ಅಧಿಕಾರಿ ಬ್ರಹ್ಮ್ ಸಿಂಗ್, ಈ ವಿಡಿಯೋ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ಇದನ್ನೂ ಓದಿ: ದಲಿತ ಹೆಣ್ಣುಮಕ್ಕಳ ಮೇಲೆ ಹೆಚ್ಚುತ್ತಿರುವ ದೌರ್ಜನ್ಯ, ಅತ್ಯಾಚಾರದ ಈ ಅಂಕಿ-ಅಂಶಗಳನ್ನು ನೋಡಿ: ನೀವೇ ಪ್ರಶ್ನಿಸಿಕೊಳ್ಳಿ

ಈ ಹೇಳಿಕೆಯನ್ನು ದಾಖಲಿಸಿದ ಸಮಯದಲ್ಲಿ ಯುವತಿ ಚಿಕಿತ್ಸೆ ಪಡೆಯುತ್ತಿದ್ದ ಜವಹರಲಾಲ್ ನೆಹರು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ (JNMC), ಇದನ್ನು ಮರಣದ ಅಂತಿಮ ಹೇಳಿಕೆಯಲ್ಲ ಎಂದು ಹೇಳಿದ್ದು, ಇದನ್ನು ಆಕೆ ವಾರ್ಡ್‌ನಲ್ಲಿದ್ದಾಗ ರೆಕಾರ್ಡ್ ಮಾಡಲಾಗಿದೆ ಎಂದು ಹೇಳಿದೆ.

ಆದರೆ ಇದಕ್ಕೆ ವಿರುದ್ಧವಾಗಿ ಯುವತಿಯ ಪೋಸ್ಟ್‌ಮಾರ್ಟಂ ವರದಿಯಲ್ಲಿ ಅತ್ಯಾಚಾರವೇ ನಡೆದಿಲ್ಲ ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ. ಸಾಮೂಹಿಕ ಅತ್ಯಾಚಾರ ಮತ್ತು ಮಾರಣಾಂತಿಕ ಹಲ್ಲೆಗೊಳಗಾಗಿ ಸಾವನಪ್ಪಿದ ದಲಿತ ಯುವತಿಯ ಪೋಸ್ಟ್‌ಮಾರ್ಟಂ ವರದಿಯ ಪ್ರಕಾರ, “ಕತ್ತು ಹಿಸುಕಲಾಗಿದ್ದು, ಆಕೆಯ ಬೆನ್ನುಮೂಳೆ ಮುರಿದಿತ್ತು” ಎಂದು ತಿಳಿದುಬಂದಿದೆ. ಆದರೆ ಅಂತಿಮ ವರದಿಯಲ್ಲಿ ಅತ್ಯಾಚಾರ ನಡೆದಿರುವುದರ ಬಗ್ಗೆ ಉಲ್ಲೇಖವಿಲ್ಲ!

ದೆಹಲಿ ಆಸ್ಪತ್ರೆ ನೀಡಿರುವ ಪೋಸ್ಟ್‌ಮಾರ್ಟಂ ವರದಿಯಲ್ಲಿ, “ಹಲ್ಲೆ ಮಾಡಿರುವವರು ಆಕೆಯ ಕತ್ತನ್ನು ಹಿಸುಕಲು ಪ್ರಯತ್ನಿಸಿದ್ದಾರೆ. ಆದರೆ ಅದು ಆಕೆಯ ಸಾವಿಗೆ ಕಾರಣವಾಗಿಲ್ಲ. ಬೆನ್ನುಮೂಳೆಗೆ ಬಲವಾದ ಹೊಡೆತ ಬಿದ್ದಿದ್ದರಿಂದ ಆಕೆ ಸಾವನ್ನಪ್ಪಿದ್ದಾಳೆ” ಎಂದು ಉಲ್ಲೇಖಿಸಲಾಗಿದೆ.

ಈಗ ಹತ್ರಾಸ್ ಸಂತ್ರಸ್ತೆ ಹೇಳಿಕೆ ನಿಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದ್ದು, ಸರ್ಕಾರ ಮತ್ತು ಪೊಲೀಸರ ವರ್ತನೆಯ ಮೇಲೆ ಅನುಮಾನ ಸೃಷ್ಟಿಯಾಗುತ್ತಿದೆ. ಈ  ನಿಟ್ಟಿನಲ್ಲಿ ನಮ್ಮ ಮುಂದೆ ಹಲವು ಪ್ರಶ್ನೆಗಳು ಉದ್ಭವಿಸುತ್ತವೆ. ಯುವತಿಯ ಕುಟುಂಬವನ್ನು ದೂರವಿಟ್ಟು, ನಡುರಾತ್ರಿ ಆಕೆಯನ್ನು ಸುಟ್ಟಿದ್ದು? ಏಮ್ಸ್‌ಗೆ ಸೂಚಿಸಿದ್ದರೂ ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಗೆ ದಾಖಲಿಸಿದ್ದು? ಸರ್ಕಾರ ಮತ್ತು ಅಧಿಕಾರಿಗಳ ವರ್ತನೆ? ಕುಟುಂಬಕ್ಕೆ ಗೃಹಬಂಧನ? ಅಧಿಕಾರಿಗಳ ಬೆದರಿಕೆ? ಯುವತಿಯ ಸಹೋದರನ ಹೇಳಿಕೆ? ಮಧ್ಯಮಗಳಿಗೆ ನಿರ್ಬಂಧ? ಮುಂತಾದ ನೂರಾರು ಪ್ರಶ್ನೆಗಳು ಉದ್ಭವಿಸುತ್ತವೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ 20 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸಿಬಿಐಗೆ ತನಿಖೆ ನಡೆಸಲು ವಹಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಶನಿವಾರ ಸಂಜೆ ತಿಳಿಸಿದೆ. ನಿನ್ನೆ ರಾತ್ರಿ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಹತ್ರಾಸ್‌ಗೆ ಭೇಟಿ ನೀಡಿದ ಬೆನ್ನಲ್ಲೇ ಈ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸುವ ಆದೇಶ ಹೊರಬಿದ್ದಿದೆ.


ಇದನ್ನೂ ಓದಿ: ಭಾರತದಲ್ಲಿ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿರುವ ಅತ್ಯಾಚಾರ ಪ್ರಕರಣಗಳು: NCRB

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...