Homeಕರ್ನಾಟಕಅಯೋಧ್ಯೆ ತೀರ್ಪಿನ ಕುರಿತು ರಾಜ್ಯ ನಾಯಕರು ಏನ್‌ ಹೇಳಿದ್ರು..? ಇಲ್ಲಿದೆ ನೋಡಿ...

ಅಯೋಧ್ಯೆ ತೀರ್ಪಿನ ಕುರಿತು ರಾಜ್ಯ ನಾಯಕರು ಏನ್‌ ಹೇಳಿದ್ರು..? ಇಲ್ಲಿದೆ ನೋಡಿ…

- Advertisement -
- Advertisement -

ಅಯೋಧ್ಯೆ ತೀರ್ಪಿನ ಕುರಿತು ರಾಜ್ಯ ನಾಯಕರು.. ಯಾರ್ಯಾರು ಏನ್ ಹೇಳಿದ್ರು ಅನ್ನೋದು ಇಲ್ಲಿದೆ ನೋಡಿ..

ಮಾಜಿ ಸಿಎಂ, ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ಮಾಡಿ, ರಾಮ ಜನ್ಮಭೂಮಿ-ಬಾಬರಿ ಮಸೀದಿ ಭೂವ್ಯಾಜ್ಯದ ಸುಪ್ರೀಂಕೋರ್ಟ್ ತೀರ್ಪನ್ನು ಗೌರವಿಸೋಣ. ಪ್ರಜಾಪ್ರಭುತ್ವದ ಧರ್ಮವಾದ ಸಂವಿಧಾನದ ಮೇಲೆ ಭರವಸೆ ಇಡೋಣ. ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡೋಣ ಎಂದು ಕರೆ ನೀಡಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಟ್ವೀಟ್ ಮಾಡಿ ಐತಿಹಾಸಿಕ ತೀರ್ಪನ್ನು ಸ್ವಾಗತಿಸಿದ್ದಾರೆ. ಇದು ಯಾರೊಬ್ಬರ ಗೆಲುವು ಅಥವಾ ಸೋಲು ಎಂದು ಭಾವಿಸಬೇಡಿ, ಉದ್ವೇಗಕ್ಕೆ ಒಳಗಾಗಬೇಡಿ, ವಿಜೃಂಭಿಸಬೇಡಿ. ಎಲ್ಲರೂ ಸಮಾಜದ ಸಾಮರಸ್ಯ ಕದಡದೆ ಶಾಂತಿ ಕಾಪಾಡೋಣ ಎಂದು ಹೇಳಿದ್ದಾರೆ.

ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿ, ಸುಪ್ರೀಂಕೋರ್ಟ್ ತೀರ್ಪನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ. ದೇಶದ ಜಾತ್ಯತೀತತೆ, ಏಕತೆ, ಸೌಹಾರ್ದತೆ ಕಾಪಾಡಿಕೊಳ್ಳುವುದು ಭಾರತೀಯರ ಜವಾಬ್ದಾರಿ ಎಂದು ಹೇಳಿದೆ.

ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಮಾತನಾಡಿ, ಹಲವು ವರ್ಷಗಳಿಂದ ದೇಶದ ಜನ ಜಾತಿ, ಮತ, ಭೇದ ತೊರೆದು ಐತಿಹಾಸಿಕ ತೀರ್ಪಿಗಾಗಿ ಕಾಯುತ್ತಿದ್ದರು. ಸುಪ್ರೀಂಕೋರ್ಟ್ ನೀಡಿರುವ ಮಹತ್ವದ ತೀರ್ಪು ಸಂತಸ ತಂದಿದೆ. ನೂರಾರು ವರ್ಷಗಳ ಸಂಘರ್ಷಕ್ಕೆ ತೆರೆ ಬಿದ್ದಿದೆ ಎಂದು ಹೇಳಿದರು.

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ರಾಮಜನ್ಮ ಭೂ ವಿವಾದದ ತೀರ್ಪನ್ನು ಎಲ್ಲರೂ ಗೌರವಿಸೋಣ. ಶಾಂತಿ ಮತ್ತು ಅಹಿಂಸೆ ಪ್ರತಿಪಾದಿಸಿದ ದೇಶದ ಸಿದ್ಧಾಂತವನ್ನು ಪಾಲಿಸೋಣ. ನಾವೆಲ್ಲರೂ ಎಂದಿನಂತೆ ಸಾಮರಸ್ಯದಿಂದ ಬದುಕುತ್ತಾ ಅಭಿವೃದ್ಧಿಯ ಕಡೆ ಚಿಂತಿಸೋಣ. ಅನ್ನದಾತನ ಬದುಕು ಕಟ್ಟಲು ಶ್ರಮಿಸೋಣ ಎಂದು ಹೇಳಿದ್ದಾರೆ.

ರಾಜ್ಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ, ಎಲ್ಲರೂ ಸೌಹಾರ್ದತೆ ಕಾಪಾಡೋಣ ಎಂದು ಕರೆ ನೀಡಿದ್ದಾರೆ.

ಸಂಸದೆ ಶೋಭಾ ಕರಂದ್ಲಾಜೆ ಮಾತನಾಡಿ, ಶ್ರೀರಾಮ ಹುಟ್ಟಿದ ಅಯೋಧ್ಯೆಯಲ್ಲಿ ಮಂದಿರ ನಿರ್ಮಾಣವಾಗಬೇಕೆಂಬ ಹೋರಾಟವಿತ್ತು. ಜನ ಜಾತಕ ಪಕ್ಷಿಯಂತೆ ಕಾಯುತ್ತಿದ್ದರು. ಇದೊಂದು ಐತಿಹಾಸಿಕ ತೀರ್ಪು ಎಂದರು.

ಬೃಹತ್ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಅಯೋಧ್ಯೆ ವಿವಾದಕ್ಕೆ ಸಂಬಂಧಿಸಿದ ಸುಪ್ರೀಂಕೋರ್ಟ್ ತೀರ್ಪು ಸ್ವಾಗತಾರ್ಹ. ಇಂದು ಐತಿಹಾಸಿಕ ದಿನ ಎಂದು ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...