Homeಮುಖಪುಟಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

ಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

2008ರ ಮಾಲೆಂಗಾವ್ ಸ್ಫೋಟ ತಡೆಗಟ್ಟಲು ಗುಪ್ತಚರ ಇಲಾಖೆಯ ಕರ್ತವ್ಯದ ಭಾಗವಾಗಿ ಕೈಗೊಂಡ ಕ್ರಮಗೇಳನು? ಆ ಪಿತೂರಿ ಸಭೆಗಳಲ್ಲಿ ಭಾಗವಹಿಸಿದ್ದೇಕೆ ಎಂದು ಪ್ರಕರಣದ ಆರೋಪಿಗಳಲ್ಲೊಬ್ಬರಾದ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್‌ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ ಮಾಡಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ಪೀಠವು 2008 ರ ಜನವರಿ 26 ರಂದು ಭಾಗವಹಿಸಿದ್ದ ಸಭೆಯ ಬಗ್ಗೆ ಪುರೋಹಿತ್ ಅವರನ್ನು ಪ್ರಶ್ನೆ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕಾರ, ಈ ಸಭೆಯನ್ನು ಮುಂಬೈನಲ್ಲಿ ಅಭಿನವ್ ಭಾರತ್ ಎಂಬ ಗುಂಪು ಆಯೋಜಿಸಿತ್ತು ಮತ್ತು ಸ್ಫೋಟದ ಪಿತೂರಿಯನ್ನು ನಡೆಸಲಾಯಿತು. ಸೆಪ್ಟೆಂಬರ್ 29, 2008 ರಂದು ಮಾಲೆಗಾಂವ್‌ನ ಮಸೀದಿಯ ಬಳಿ ನಡೆದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಮುಂದೆ ಏನಾಗಲಿದೆ ಎಂದು ಅವನಿಗೆ ತಿಳಿದಿದ್ದರೆ, ಅದನ್ನು ತಡೆಯಲು ಅವನು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ? ಸಭೆ ಯಾವಾಗ ನಡೆಯಿತು ಮತ್ತು ಯಾವಾಗ ಸ್ಫೋಟ ಸಂಭವಿಸಿತು? ನಡುವಿನ ಅವಧಿಯಲ್ಲಿ ಏನು ಮಾಡುತ್ತಿದ್ದನು? ಎಂಬುದಾಗಿ ನ್ಯಾಯಪೀಠ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಪುರೋಹಿತ್ ಪರ ವಕೀಲ ಶ್ರೀಕಾಂತ್ ಶಿವಾಡೆ, “ಅದು ಕೇವಲ ಸಾಮಾಜಿಕ-ರಾಜಕೀಯ ಸಭೆಯಾಗಿತ್ತು.ಅಲ್ಲಿ ಸ್ಪೋಟದ ಬಗ್ಗೆ ತನ್ನ ಅಧಿಕಾರಿಗಳಿಗೆ ಗುಪ್ತಚರ ಮಾಹಿತಿ ನೀಡಲು ಪುರೋಹಿತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾಲೆಗಾಂವ್ ಸ್ಫೋಟದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಪುರೋಹಿತ್ ವಿರುದ್ಧ ಸ್ಫೋಟ ನಡೆಸಿದ ಆರೋಪವಿಲ್ಲ. ಆ ಸಭೆಯು 2008ರ ಜನವರಿ 26-27 ರಂದು ನಡೆಯಿತು ಮತ್ತು 2008ರ ಸೆಪ್ಟೆಂಬರ್ 29 ರಂದು ಸ್ಫೋಟ ಸಂಭವಿಸಿದೆ” ಎಂದು ಉತ್ತರಿಸಿದರು.

ಪುರೋಹಿತ್ ತನ್ನ ಕರ್ತವ್ಯದ ಭಾಗವಾಗಿಯೇ ಸಭೆಯಲ್ಲಿ ಭಾಗವಹಿಸಿದ್ದರು ಎನ್ನುವುದಕ್ಕೆ ಯಾವುದಾದರೂ ಸಾಕ್ಷಿ ಇದೆಯೇ? ಇದಕ್ಕೆ ಯಾವುದೇ ಲಿಖಿತ ಪತ್ರ ಇಲ್ಲ ಎಂದ ಪುರೋಹಿತ್ ವಕೀಲರು ಮೂಲಗಳಿಂದ ಮಾಹಿತಿ ಆಧರಿಸಿ ಸಭೆಯಲ್ಲಿ ಭಾಗವಹಿಸಿದ್ದಾರೆ. ನಂತರ ಅದರ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪುರೋಹಿತ್ 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ತಮ್ಮನ್ನು ಕೈಬಿಡಬೇಕೆಂದು ಬಾಂಬೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ವಿಚಾರಣೆಗೆ ಸರ್ಕಾರದ ಕಾರ್ಯವಿಧಾನದ ಅನುಮತಿ ನೀಡಿಲ್ಲ ಎಂದು ಅವರು ವಾದಿಸಿದ್ದಾರೆ. ಇದೆಲ್ಲವೂ ವಿಚಾರಣೆಯ ವೇಳೆ ಪರಿಶೀಲನೆಗೊಳಪಡುತ್ತವೆ, ಇದನ್ನು ಹೈಕೋರ್ಟಿಗೆ ಏಕೆ ತಂದೀರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಪುರೋಹಿತ್ ವಕೀಲರು ಯಾವುದೇ ಸಾಕ್ಷಿಯು ಸಹ ಪುರೋಹಿತ್ ಹೆಸರನ್ನು ಉಲ್ಲೇಖಿಸಿಲ್ಲ. ನೂರಕ್ಕೂ ಹೆಚ್ಚು ಸಾಕ್ಷಿಗಳಿದ್ದರೂ ಯಾವುವು ಪುರೋಹಿತ್ ವಿರುದ್ಧವಿಲ್ಲ. ಅಲ್ಲದೆ ಅವರನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳಲಾಗಿದೆ. ಹಾಗಾಗಿ ವಿಚಾರಣಾ ನ್ಯಾಯಲಯದ ಧೀರ್ಘ ವಿಚಾರಣೆಯಿಂದ ಅವರು ಏಕೆ ಬಾಧಿತರಾಗಬೇಕು ಎಂದಿದ್ದಾರೆ.

ನಂತರ ನ್ಯಾಯಾಲಯವು ತನಿಖಾ ಸಂಸ್ಥೆ ಎನ್‌ಐಎಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಸಂದೇಶ್ ಪಾಟೀಲ್ ಅವರನ್ನು ವಿಚಾರಣೆಯ ಹಂತದ ಬಗ್ಗೆ ಕೇಳಿತು. ವಿಚಾರಣಾ ನ್ಯಾಯಾಲಯದ ಮುಂದೆ 159 ಸಾಕ್ಷಿಗಳಿದ್ದು, ಇನ್ನೂ 495 ಮಂದಿಯನ್ನು ಪಟ್ಟಿ ಮಾಡಲಾಗಿದ್ದರೂ, ಇನ್ನೂ 300 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ. ವಿಚಾರಣೆಯನ್ನು ದಿನನಿತ್ಯದ ಆಧಾರದ ಮೇಲೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿತು.

ಸೆಪ್ಟೆಂಬರ್ 29, 2008 ರಂದು, ಮಹಾರಾಷ್ಟ್ರದ ನಾಸಿಕ್ ಬಳಿಯ ಮಾಲೆಗಾಂವ್‌ನಲ್ಲಿರುವ ಶಕೀಲ್ ಗೂಡ್ಸ್ ಟ್ರಾನ್ಸ್‌ಪೋರ್ಟ್ ಕಂಪನಿಯ ಎದುರು ಬಾಂಬ್ ಸ್ಫೋಟ ಸಂಭವಿಸಿದೆ. ಎಲ್ಎಂಎಲ್ ಫ್ರೀಡಮ್ ಮೋಟಾರ್ ಬೈಕ್‌ನಿಂದ ಸ್ಫೋಟಕಗಳನ್ನು ಮಸೀದಿಯೊಂದಕ್ಕೆ ನುಗ್ಗಿಸಲಾಯ್ತು. ಘಟನೆಯಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸ್ಫೋಟದಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ಇನ್ನೂ ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳು ಸ್ಫೋಟಕ್ಕೆ ಸಂಚು ರೂಪಿಸಿದ ಅಭಿನವ್ ಭಾರತ್ ಸಂಘಟನೆಯವರಾಗಿದ್ದಾರೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...