Homeಮುಖಪುಟಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

ಮಾಲೆಗಾಂವ್ ಸ್ಫೋಟ ತಡೆಗಟ್ಟಲು ಏನು ಮಾಡಿದಿರಿ?: ಆರೋಪಿ ಪುರೋಹಿತ್‌ಗೆ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

2008ರ ಮಾಲೆಂಗಾವ್ ಸ್ಫೋಟ ತಡೆಗಟ್ಟಲು ಗುಪ್ತಚರ ಇಲಾಖೆಯ ಕರ್ತವ್ಯದ ಭಾಗವಾಗಿ ಕೈಗೊಂಡ ಕ್ರಮಗೇಳನು? ಆ ಪಿತೂರಿ ಸಭೆಗಳಲ್ಲಿ ಭಾಗವಹಿಸಿದ್ದೇಕೆ ಎಂದು ಪ್ರಕರಣದ ಆರೋಪಿಗಳಲ್ಲೊಬ್ಬರಾದ ಲೆಫ್ಟಿನೆಂಟ್ ಕರ್ನಲ್ ಪುರೋಹಿತ್‌ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ ಮಾಡಿದೆ.

ನ್ಯಾಯಮೂರ್ತಿಗಳಾದ ಎಸ್.ಎಸ್. ಶಿಂಧೆ ಮತ್ತು ಮನೀಶ್ ಪಿಟಾಲೆ ಅವರ ಪೀಠವು 2008 ರ ಜನವರಿ 26 ರಂದು ಭಾಗವಹಿಸಿದ್ದ ಸಭೆಯ ಬಗ್ಗೆ ಪುರೋಹಿತ್ ಅವರನ್ನು ಪ್ರಶ್ನೆ ಮಾಡಿದೆ ಎಂದು ಇಂಡಿಯಾ ಟುಡೆ ವರದಿ ಮಾಡಿದೆ.

ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಪ್ರಕಾರ, ಈ ಸಭೆಯನ್ನು ಮುಂಬೈನಲ್ಲಿ ಅಭಿನವ್ ಭಾರತ್ ಎಂಬ ಗುಂಪು ಆಯೋಜಿಸಿತ್ತು ಮತ್ತು ಸ್ಫೋಟದ ಪಿತೂರಿಯನ್ನು ನಡೆಸಲಾಯಿತು. ಸೆಪ್ಟೆಂಬರ್ 29, 2008 ರಂದು ಮಾಲೆಗಾಂವ್‌ನ ಮಸೀದಿಯ ಬಳಿ ನಡೆದ ಸ್ಫೋಟದಲ್ಲಿ ಆರು ಜನರು ಸಾವನ್ನಪ್ಪಿ, 100 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಮುಂದೆ ಏನಾಗಲಿದೆ ಎಂದು ಅವನಿಗೆ ತಿಳಿದಿದ್ದರೆ, ಅದನ್ನು ತಡೆಯಲು ಅವನು ಯಾವ ಕ್ರಮಗಳನ್ನು ತೆಗೆದುಕೊಂಡಿದ್ದಾರೆ? ಸಭೆ ಯಾವಾಗ ನಡೆಯಿತು ಮತ್ತು ಯಾವಾಗ ಸ್ಫೋಟ ಸಂಭವಿಸಿತು? ನಡುವಿನ ಅವಧಿಯಲ್ಲಿ ಏನು ಮಾಡುತ್ತಿದ್ದನು? ಎಂಬುದಾಗಿ ನ್ಯಾಯಪೀಠ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಪುರೋಹಿತ್ ಪರ ವಕೀಲ ಶ್ರೀಕಾಂತ್ ಶಿವಾಡೆ, “ಅದು ಕೇವಲ ಸಾಮಾಜಿಕ-ರಾಜಕೀಯ ಸಭೆಯಾಗಿತ್ತು.ಅಲ್ಲಿ ಸ್ಪೋಟದ ಬಗ್ಗೆ ತನ್ನ ಅಧಿಕಾರಿಗಳಿಗೆ ಗುಪ್ತಚರ ಮಾಹಿತಿ ನೀಡಲು ಪುರೋಹಿತ್ ಸಭೆಯಲ್ಲಿ ಭಾಗವಹಿಸಿದ್ದರು. ಅಲ್ಲಿ ಮಾಲೆಗಾಂವ್ ಸ್ಫೋಟದ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಪುರೋಹಿತ್ ವಿರುದ್ಧ ಸ್ಫೋಟ ನಡೆಸಿದ ಆರೋಪವಿಲ್ಲ. ಆ ಸಭೆಯು 2008ರ ಜನವರಿ 26-27 ರಂದು ನಡೆಯಿತು ಮತ್ತು 2008ರ ಸೆಪ್ಟೆಂಬರ್ 29 ರಂದು ಸ್ಫೋಟ ಸಂಭವಿಸಿದೆ” ಎಂದು ಉತ್ತರಿಸಿದರು.

ಪುರೋಹಿತ್ ತನ್ನ ಕರ್ತವ್ಯದ ಭಾಗವಾಗಿಯೇ ಸಭೆಯಲ್ಲಿ ಭಾಗವಹಿಸಿದ್ದರು ಎನ್ನುವುದಕ್ಕೆ ಯಾವುದಾದರೂ ಸಾಕ್ಷಿ ಇದೆಯೇ? ಇದಕ್ಕೆ ಯಾವುದೇ ಲಿಖಿತ ಪತ್ರ ಇಲ್ಲ ಎಂದ ಪುರೋಹಿತ್ ವಕೀಲರು ಮೂಲಗಳಿಂದ ಮಾಹಿತಿ ಆಧರಿಸಿ ಸಭೆಯಲ್ಲಿ ಭಾಗವಹಿಸಿದ್ದಾರೆ. ನಂತರ ಅದರ ವರದಿಯನ್ನು ಹಿರಿಯ ಅಧಿಕಾರಿಗಳಿಗೆ ಒಪ್ಪಿಸಿದ್ದಾರೆ ಎಂದು ತಿಳಿಸಿದ್ದಾರೆ.

ಪುರೋಹಿತ್ 2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಿಂದ ತಮ್ಮನ್ನು ಕೈಬಿಡಬೇಕೆಂದು ಬಾಂಬೈ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅವರ ವಿಚಾರಣೆಗೆ ಸರ್ಕಾರದ ಕಾರ್ಯವಿಧಾನದ ಅನುಮತಿ ನೀಡಿಲ್ಲ ಎಂದು ಅವರು ವಾದಿಸಿದ್ದಾರೆ. ಇದೆಲ್ಲವೂ ವಿಚಾರಣೆಯ ವೇಳೆ ಪರಿಶೀಲನೆಗೊಳಪಡುತ್ತವೆ, ಇದನ್ನು ಹೈಕೋರ್ಟಿಗೆ ಏಕೆ ತಂದೀರಿ ಎಂದು ನ್ಯಾಯಾಲಯ ಪ್ರಶ್ನಿಸಿದೆ.

ಇದಕ್ಕೆ ಉತ್ತರಿಸಿದ ಪುರೋಹಿತ್ ವಕೀಲರು ಯಾವುದೇ ಸಾಕ್ಷಿಯು ಸಹ ಪುರೋಹಿತ್ ಹೆಸರನ್ನು ಉಲ್ಲೇಖಿಸಿಲ್ಲ. ನೂರಕ್ಕೂ ಹೆಚ್ಚು ಸಾಕ್ಷಿಗಳಿದ್ದರೂ ಯಾವುವು ಪುರೋಹಿತ್ ವಿರುದ್ಧವಿಲ್ಲ. ಅಲ್ಲದೆ ಅವರನ್ನು ಮತ್ತೆ ಸೇವೆಗೆ ಸೇರಿಸಿಕೊಳ್ಳಲಾಗಿದೆ. ಹಾಗಾಗಿ ವಿಚಾರಣಾ ನ್ಯಾಯಲಯದ ಧೀರ್ಘ ವಿಚಾರಣೆಯಿಂದ ಅವರು ಏಕೆ ಬಾಧಿತರಾಗಬೇಕು ಎಂದಿದ್ದಾರೆ.

ನಂತರ ನ್ಯಾಯಾಲಯವು ತನಿಖಾ ಸಂಸ್ಥೆ ಎನ್‌ಐಎಯನ್ನು ಪ್ರತಿನಿಧಿಸುತ್ತಿದ್ದ ವಕೀಲ ಸಂದೇಶ್ ಪಾಟೀಲ್ ಅವರನ್ನು ವಿಚಾರಣೆಯ ಹಂತದ ಬಗ್ಗೆ ಕೇಳಿತು. ವಿಚಾರಣಾ ನ್ಯಾಯಾಲಯದ ಮುಂದೆ 159 ಸಾಕ್ಷಿಗಳಿದ್ದು, ಇನ್ನೂ 495 ಮಂದಿಯನ್ನು ಪಟ್ಟಿ ಮಾಡಲಾಗಿದ್ದರೂ, ಇನ್ನೂ 300 ಮಂದಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪಾಟೀಲ್ ಹೇಳಿದ್ದಾರೆ. ವಿಚಾರಣೆಯನ್ನು ದಿನನಿತ್ಯದ ಆಧಾರದ ಮೇಲೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ನ್ಯಾಯಾಲಯವು ಮುಂದಿನ ವಿಚಾರಣೆಯನ್ನು ಫೆಬ್ರವರಿ 24ಕ್ಕೆ ಮುಂದೂಡಿತು.

ಸೆಪ್ಟೆಂಬರ್ 29, 2008 ರಂದು, ಮಹಾರಾಷ್ಟ್ರದ ನಾಸಿಕ್ ಬಳಿಯ ಮಾಲೆಗಾಂವ್‌ನಲ್ಲಿರುವ ಶಕೀಲ್ ಗೂಡ್ಸ್ ಟ್ರಾನ್ಸ್‌ಪೋರ್ಟ್ ಕಂಪನಿಯ ಎದುರು ಬಾಂಬ್ ಸ್ಫೋಟ ಸಂಭವಿಸಿದೆ. ಎಲ್ಎಂಎಲ್ ಫ್ರೀಡಮ್ ಮೋಟಾರ್ ಬೈಕ್‌ನಿಂದ ಸ್ಫೋಟಕಗಳನ್ನು ಮಸೀದಿಯೊಂದಕ್ಕೆ ನುಗ್ಗಿಸಲಾಯ್ತು. ಘಟನೆಯಲ್ಲಿ ಒಟ್ಟು ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸ್ಫೋಟದಲ್ಲಿ 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಈ ಪ್ರಕರಣದ ವಿಚಾರಣೆ ಇನ್ನೂ ಮುಂಬೈ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪ್ರಾಸಿಕ್ಯೂಷನ್ ಪ್ರಕಾರ, ಆರೋಪಿಗಳು ಸ್ಫೋಟಕ್ಕೆ ಸಂಚು ರೂಪಿಸಿದ ಅಭಿನವ್ ಭಾರತ್ ಸಂಘಟನೆಯವರಾಗಿದ್ದಾರೆ.


ಇದನ್ನೂ ಓದಿ: ಸಂಸತ್ತಿನಲ್ಲಿ ಮಹುವಾ ಮೊಯಿತ್ರ ಬಿರುಗಾಳಿ ಭಾಷಣ: ಯಾವುದೇ ಕ್ರಮವಿಲ್ಲವೆಂದ ಕೇಂದ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...