Homeಅಂತರಾಷ್ಟ್ರೀಯಚಿಲಿಯಿಂದ ನಾವು ಭಾರತೀಯರು ಕಲಿಯಬೇಕಾಗಿರುವುದು ಏನು?

ಚಿಲಿಯಿಂದ ನಾವು ಭಾರತೀಯರು ಕಲಿಯಬೇಕಾಗಿರುವುದು ಏನು?

- Advertisement -
- Advertisement -

ದಕ್ಷಿಣ ಅಮೆರಿಕದ ಚಿಲಿಯಲ್ಲಿ ಇದೇ ಅಕ್ಟೋಬರ್ ತಿಂಗಳಲ್ಲಿ ಸಾರ್ವಜನಿಕ ಸಾರಿಗೆ ದರ ಹೆಚ್ಚಳದ ವಿರುದ್ಧ ಆರಂಭವಾದ ವಿದ್ಯಾರ್ಥಿ ಪ್ರತಿಭಟನೆಯು ಕೆಲವೇ ದಿನಗಳಲ್ಲಿ ಆಂದೋಲನವಾಗಿ, ನವ ಉದಾರವಾದಿ ದಬ್ಬಾಳಿಕೆ ಮತ್ತು ಪ್ರತಿಗಾಮಿ ಸಂವಿಧಾನವನ್ನೇ ಕಿತ್ತೆಸೆಯುವ ಹಂತಕ್ಕೆ ಬೆಳೆದುಬಿಟ್ಟಿದೆ. ಲ್ಯಾಟಿನ್ ಅಮೆರಿಕಾ ದೇಶಗಳಲ್ಲಿ ನಡೆಯುತ್ತಿರುವ ವಿವಿಧ ಆಂದೋಲನಗಳು ನಮಗೆ ಭಾರತೀಯರಿಗೆ ಪಾಠವಾಗಬೇಕಾಗಿರುವ ಹೊತ್ತಲ್ಲಿ ಚಿಲಿಯಲ್ಲಿ ನಡೆಯುತ್ತಿರುವ ಈ ಆಂದೋಲನದ ಹಿನ್ನೆಲೆ ಕುರಿತು ಸ್ವಲ್ಪ ತಿಳಿಯೋಣ.
***
ಆಕ್ಟೋಬರ್ 2019ರಿಂದ ಚಿಲಿಯಲ್ಲಿ ಒಂದು ಭಾರೀ ಆಂದೋಲನ ನಡೆಯುತ್ತಿದೆ. ಸುಮಾರು 40 ಲಕ್ಷ ಜನರು ಅದರಲ್ಲಿ ಭಾಗವಹಿಸಿ, ದೇಶದ ನವ ಉದಾರೀಕರಣದ ಹಿನ್ನೆಲೆಯಿಂದ ಹೊರಬರಲು ಹೋರಾಡುತ್ತಿದ್ದಾರೆ. ಈ ಪ್ರತಿಭಟನೆಯು ಸಾರ್ವಜನಿಕ ಸಾರಿಗೆ ದರ ಹೆಚ್ಚಳದ ವಿರುದ್ಧ ಸಂಘಟಿತ ಶಾಲಾ ವಿದ್ಯಾರ್ಥಿಗಳ ಗುಂಪೊಂದರ ಪ್ರತಿಭಟನೆಯು ಜನಾಂದೋಲನವಾಗಿ, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ, ಚಿಲಿಯ ದಮನಕಾರಿ ಸಂವಿಧಾನದ ಪತನದ ತನಕ ಬೆಳೆದುನಿಂತಿದೆ.

ಒಂದು ಕಲ್ಯಾಣ ರಾಜ್ಯ (Welfare State) ಆಗಿದ್ದ ಚಿಲಿ ಮಿಲಿಟರಿ ಸರ್ವಾಧಿಕಾರವಾಗಿ ಬದಲಾದ ದೇಶ. 1930ರಲ್ಲಿ ದೇಶದಲ್ಲಿ ಕ್ರಾಂತಿ ಭುಗಿಲೇಳುವ ಭಯದಿಂದ ಪ್ರತಿಷ್ಟಿತ ಆಳುವ ವರ್ಗವು ಆಧುನಿಕ ಕಲ್ಯಾಣ ರಾಜ್ಯ ಮಾದರಿಯ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಆರಂಭಿಸಿತು. ಚಿಲಿಯ ಸರಕಾರ ಒಂದು ಆಧುನಿಕ ಪ್ರಜಾಪ್ರಭುತ್ವವಾಯಿತು. ಆ ಹೊತ್ತಿಗೆ ಚಿಲಿಯಲ್ಲಿ ಸಮಾಜವಾದ ಜನಪ್ರಿಯಗೊಳ್ಳಲು ಆರಂಭವಾಯಿತು.

ಕ್ಯೂಬಾದ ಕ್ರಾಂತಿಯ ಬಳಿಕ ಪಶ್ಚಿಮ ಗೋಳದಲ್ಲಿ ಒಂದು ಸೋವಿಯತ್ ಒಕ್ಕೂಟದ ಮಿತ್ರ ರಾಷ್ಟ್ರ ಸ್ಥಾಪನೆಯಾಯಿತು. ಲ್ಯಾಟಿನ್ ಅಮೆರಿಕದ ಇನ್ನಷ್ಟು ದೇಶಗಳು ಅತ್ತ ವಾಲುವವು ಎಂದು ಯುಎಸ್‌ಎ ಆತಂಕಗೊಂಡಿತು. ಪರಿಣಾಮವಾಗಿ, 1960ರ ದಶಕದಲ್ಲಿ ಅನೇಕ ಪ್ರಜಾಪ್ರಭುತ್ವ ದೇಶಗಳಲ್ಲಿ ಮಿಲಿಟರಿ ಆಡಳಿತಗಳ ಸ್ಥಾಪನೆಯಾಯಿತು. ಇವೆಲ್ಲವೂ ನಡೆದುದು ‘ಮಹಾನ್ ಪ್ರಜಾಪ್ರಭುತ್ವ’ ಎಂದು ಕರೆದುಕೊಳ್ಳುವ ಯುಎಸ್‌ಎ ಪಿತೂರಿ ಮತ್ತು ಬೆಂಬಲದಿಂದ.

ಇದ‍ನ್ನೂ ಓದಿ: ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

ಚಿಲಿಯಲ್ಲಿ ಸಮಾಜವಾದ ವಿರೋಧಿ ಅಭ್ಯರ್ಥಿಗಳಿಗೆ ಯುಎಸ್‌ಎ ಸರಕಾರ ಬೆಂಬಲ ನೀಡಿತು. ಸಮಾಜವಾದಿಗಳು ಒಂದು ಭಾರಿ ಅಪಪ್ರಚಾರ ಅಭಿಯಾನದ ವಿರುದ್ಧ ಕಾದಾಡಬೇಕಾಯಿತು. ಕೊನೆಗೂ 1970ರಲ್ಲಿ, ಹಲವು ವಿಫಲ ಯತ್ನಗಳ ನಂತರ, ಚಿಲಿಯನ್ ಸೋಷಿಯಲಿಸ್ಟ್ ಪಾರ್ಟಿಯ ಸಾಲ್ವದೊರ್ ಗಿಲೆರ್ಮೊ ಅಲ್ಲಂದೆ ಗೊಸೆನ್ಸ್ ಚಿಲಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಆಯ್ಕೆಯಾದ ತಕ್ಷಣ ಅಲ್ಲಂದೆ, ಕನಿಷ್ಟ ವೇತನವನ್ನು ಹೆಚ್ಚಿಸಿದರು, ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಹೆಚ್ಚಿಸಿದರು. ಆರೋಗ್ಯ ಮತ್ತು ಶಿಕ್ಷಣದ ಮೇಲಿನ ವೆಚ್ಚವನ್ನು ಹೆಚ್ಚಿಸಿದರು. ಇದು ಯುಎಸ್‌ಎ ಬಂಡವಾಳಿಗರ, ಆ ಮೂಲಕ ಅಲ್ಲಿನ ಸರಕಾರದ ಕೆಂಗಣ್ಣಿಗೆ ಗುರಿಯಾಯಿತು. ಅಲ್ಲಂದೆ ಜೀವವೇ ಅಪಾಯಕ್ಕೆ ಸಿಲುಕಿತು.

ಮರೆಯಾದ ನಾಯಕರು

ಅಲ್ಲಂದೆಯವರು ಚಿಲಿಯ ಗಣಿಗಾರಿಕೆ ಕ್ಷೇತ್ರವನ್ನು ರಾಷ್ಟ್ರೀಕರಣಗೊಳಿಸಿದಾಗ, ಆ ತನಕ ಚಿಲಿಯಲ್ಲಿ ಹೇರಳವಾಗಿ ದೊರೆಯುವ ತಾಮ್ರವನ್ನು ದೋಚುತ್ತಿದ್ದ ಯುಎಸ್‌ಎಯ ಕಂಪನಿಗಳು ನಷ್ಟ ಅನುಭವಿಸಿದವು. ಅಲ್ಲಂದೆ, ಶಾಂತಿಯುತ ಸಂಸದೀಯ ಹಾದಿಯ ಮೂಲಕ ಸಮಾಜವಾದದ ಸ್ಥಾಪನೆಯನ್ನು ಪ್ರತಿಪಾದಿಸುತ್ತಿದ್ದರು. ಆ ಕಾಲದಲ್ಲಿ ಸಮಾಜವಾದವನ್ನು ಹಿಂಸಾಚಾರದೊಂದಿಗೆ ತಳಕುಹಾಕಿ ಅಪಪ್ರಚಾರ ಮಾಡಲಾಗುತ್ತಿತ್ತು.

ಸಾಲ್ವದರ್ ಅಲ್ಲಂದೆ

ಇದ‍ನ್ನೂ ಓದಿ: ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಕಚೇರಿಯ ಮೇಲೆ ಸಿಬಿಐ ದಾಳಿ

ಈ ಶಾಂತಿಯುತ ಸಮಾಜವಾದದ ಪರಿಕಲ್ಪನೆ ಉಳಿದ ದೇಶಗಳಿಗೂ ಮಾದರಿಯಾಗಿ, ತನ್ನ ಬಂಡವಾಳಕ್ಕೆ ಕುತ್ತು ತರಲಿದೆ ಎಂದು ಭಯಗೊಂಡ ಯುಎಸ್ಎ, ನೇರವಾಗಿ ಚಿಲಿಯ ವ್ಯವಹಾರಗಳಲ್ಲಿ ತಲೆಹಾಕಿತು. ಮುಂದಿನ ಚುನಾವಣೆ ನಡೆಯುವುದಕ್ಕೆ ಬಹಳ ಮುಂಚೆಯೇ ಅಲ್ಲಂದೆ ವಿರೋಧಿ ಅಪಪ್ರಚಾರ ಆರಂಭಿಸಿತು. ಇದು ಚಿಲಿಯಲ್ಲಿ ಧ್ರುವೀಕರಣಕ್ಕೆ ಕಾರಣವಾಯಿತು. ಯುಎಸ್ಎ, ಚಿಲಿಯಲ್ಲಿ ಹಣದುಬ್ಬರ ಹೆಚ್ಚಿಸುವಂತಹ ಆರ್ಥಿಕ ತಂತ್ರಗಳ ಸರಣಿಯನ್ನೇ ಆರಂಭಿಸಿತು.ಅಲ್ಲಂದೆಯವರು ಕನಿಷ್ಟ ವೇತನವನ್ನು ಹೆಚ್ಚಿಸಿದ್ದರೂ, ಸರಾಸರಿ ವೇತನದಲ್ಲಿ ಇಳಿಕೆಯಾಯಿತು.

1973ರಲ್ಲಿ ಸೇನಾನಾಯಕರ ಕೂಟವೊಂದು ಸೇನಾಕ್ರಾಂತಿ ನಡೆಸಿತು. ಅದರ ನಾಯಕ, ಮುಂದೆ ಮರಿಹಿಟ್ಲರ್ ಅನಿಸಿಕೊಂಡ ಅಗಸ್ತೋ ಪಿನೋಷೆ ಅಧಿಕಾರಕ್ಕೆ ಬಂದ. ಅವನೊಂದಿಗೆ ಸಂಧಾನ ನಡೆಸಲು ಒಪ್ಪದ ಅಲ್ಲಂದೆ ಆತ್ಮಹತ್ಯೆ ಮಾಡಿಕೊಂಡರು. ಇದೊಂದು ಸಿಐಎ ಯೋಚಿತ ಹತ್ಯೆ ಎಂದೂ ಹೇಳಲಾಗುತ್ತದೆ. ಈ ಕ್ರಾಂತಿಯಲ್ಲಿ ಯುಎಸ್ಎಯ ನೇರ ಪಾತ್ರ ಇದೆಯೆಂದು ಸಾಬೀತಾಗಿಲ್ಲವಾದರೂ, ಅದರ ಬೆಂಬಲ ಇಲ್ಲದೇ, ಮಿಲಿಟರಿ ನಾಯಕತ್ವವು ಉಳಿಯುವ ಸಾಧ್ಯತೆ ಇರಲಿಲ್ಲ. ಇದಕ್ಕೆ ಸಾಕ್ಷ್ಯ ಹೇಳುವಂತೆ ಪಿನೋಷೆ ಮುಂದೆ ಕೈಗೊಂಡ ಕ್ರಮಗಳು ಯುಎಸ್‌ಎಗೆ ಅನುಕೂಲಕರವಾಗಿದ್ದವು.

ಪಿನೋಷೆ

ಆತ ತ್ವರಿತವಾಗಿ ಅಲ್ಲಂದೆಯವರ  ಸುಧಾರಣೆಗಳನ್ನು ಬದಿಗೆ ಸರಿಸಿ, ಚಿಲಿಯನ್ನು ಒಂದು ಅನಿಯಂತ್ರಿತ ಮಾರುಕಟ್ಟೆ ವ್ಯವಸ್ಥೆಯತ್ತ ನೂಕಿದ. ರಾಷ್ಟ್ರೀಕೃತ ಕೈಗಾರಿಕೆಗಳನ್ನು ಭಾರತದಲ್ಲಿ ಈಗ ನಡೆಯುತ್ತಿರುವಂತೆ ಖಾಸಗೀಕರಣಗೊಳಿಸಿದ. ಕಾರ್ಮಿಕ ಸಂಘಟನೆಗಳನ್ನು, ವಿದ್ಯಾರ್ಥಿಗಳನ್ನು ಚಿತ್ರಹಿಂಸೆ, ಸಾಮೂಹಿಕ ಹತ್ಯಾಕಾಂಡಗಳ ಮೂಲಕ ಹಿಂಸಾತ್ಮಕವಾಗಿ ದಮನಿಸಲಾಯಿತು. ಆತನ ಅತ್ಯಂತ ದೊಡ್ಡ ಫ್ಯಾಸಿಸ್ಟ್ ಕೃತ್ಯ ಎಂದರೆ, ಚಿಲಿಯ ರಾಜಧಾನಿ ಸಾಂತಿಯಾಗೊ ದಿ ಚಿಲಿಯ ‘ಎಸ್ಟೇಡಿಯೋ ನ್ಯಾಸಿಯೋನಲ್’ -ನ್ಯಾಷನಲ್ ಸ್ಟೇಡಿಯಂ-ರಾಷ್ಟ್ರೀಯ ಕ್ರೀಡಾಂಗಣವನ್ನು ಜೈಲು ಶಿಬಿರವನ್ನಾಗಿ ಪರಿವರ್ತಿಸಿದುದು. ಇಲ್ಲಿ ಸಾವಿರಾರು ಅಲ್ಲಂದೆ ಬೆಂಬಲಿಗರನ್ನು ಸರಪಳಿ ತೊಡಿಸಿ ಇರಿಸಲಾಯಿತು. ಅವರಿಗೆ ಚಿತ್ರಹಿಂಸೆ ನೀಡಲಾಯಿತು  ಮತ್ತು ಹತ್ಯೆ ಮಾಡಲಾಯಿತು.

 

ಯುಎಸ್ಎ ಅಂತರರಾಷ್ಟ್ರೀಯವಾಗಿ ಬಾಯ್ಮಾತಿನಲ್ಲಿ ಈ ಆಡಳಿತವನ್ನು ಟೀಕಿಸಿತಾದರೂ ಆರ್ಥಿಕ ಬದಲಾವಣೆಗಳನ್ನು ಬೆಂಬಲಿಸಿ ಖಾಗೀಕರಣದ ದುಷ್ಪರಿಣಾಮಗಳು ತಟ್ಟದಂತೆ ನೋಡಿಕೊಂಡಿತು. ಚಿಲಿಯು ಇದರಿಂದ ಹಣದುಬ್ಬರವನ್ನು ನಿಯಂತ್ರಿಸಲು ಸಾಧ್ಯವಾಯಿತು. ವೇತನಗಳು ಕಡಿಮೆಯಾದರೂ, ಸ್ಥಿರಗೊಂಡವು. ಆದರೆ, ಗ್ರಾಮೀಣ ಪ್ರದೇಶಗಳ ಸಂಕಷ್ಟ ಮುಂದುವರಿದು, ಅವುಗಳ ಅಭಿವೃದ್ಧಿ ಕುಂಠಿತವಾಯಿತು. ಅಸಮಾನತೆ ಹೆಚ್ಚಿತು. ಇದೆಲ್ಲ ಸಾಧ್ಯವಾದುದು ಹೇಗೆಂದರೆ, ಯುಎಸ್ಎ ನಿಯಂತ್ರಿತ ವಿಶ್ವಬ್ಯಾಂಕ್ ಸಾಲದ ಮೂಲಕ! ಇದು ಸಾಲ ಮಾಡಿ ತುಪ್ಪ ತಿಂದಂತಾಯಿತು. ಈ ಸಾಲದ ಪ್ರಮಾಣ ಬಿಕ್ಕಟ್ಟಿನ ಹಂತಕ್ಕೆ ತಲಪಿ ಪಿನೋಷೆಯ ಪತನಕ್ಕೆ ಕಾರಣವಾಯಿತು. 1980ರಲ್ಲಿ ಆತ ಕೆಳಗಿಳಿದು ಒಂದು ಸಮ್ಮಿಶ್ರ ಸರಕಾರ ಸ್ಥಾಪನೆಯಾಯಿತು. ಆಗ ದೇಶದ ಮುಂದಿನ ಸಂವಿಧಾನ ಎನಿಸಿದ ಒಂದು ಆಡಳಿತಾತ್ಮಕ ಚೌಕಟ್ಟನ್ನು ರೂಪಿಸಲಾಯಿತು.

ಹೊಸ ಸಂವಿಧಾನವನ್ನು ರೂಪಿಸಿದವರು ಪಿನೋಷೆಯ ಬೆಂಬಲಿಗರೇ ಆಗಿದ್ದರು. ಅದು ಮಿಲಿಟರಿಗೆ ಬಹಳಷ್ಟು ಅಧಿಕಾರವನ್ನು ಕೊಟ್ಟಿತ್ತು. ಸಂಘಟನೆಯನ್ನು ದೇಶಕ್ಕೆ ಬೆದರಿಕೆ ಎಂದು ಪರಿಗಣಿಸಿತ್ತು. ಚುನಾಯಿತ ಸದನಗಳ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿತ್ತು. ಆದರೂ, ಈ ಸಂವಿಧಾನವನ್ನು ಸೇನಾ ಉಸ್ತುವಾರಿಯಲ್ಲಿ  (ಬೆದರಿಕೆ, ಹಸ್ತಕ್ಷೇಪದಲ್ಲಿ) ನಡೆದ ಜನಮತಗಣನೆಯಲ್ಲಿ ಅಂಗೀಕರಿಸುವಂತೆ ಮಾಡಲಾಯಿತು. ಪರಿಣಾಮವಾಗಿ, ಪಿನೋಷೆ ಮತ್ತೆ ತನ್ನ ಬಲವನ್ನು ಹೆಚ್ಚಿಸಿಕೊಳ್ಳುತ್ತಿದ್ದಂತೆ, ಚಿಲಿಯು ಎಡ-ಮಧ್ಯ ರಾಜಕೀಯ ಗುಂಪುಗಳಲ್ಲಿ ಸಂಘಟಿತವಾಯಿತು. ಈ ಗುಂಪುಗಳು ಜನಮತಗಣನೆಯನ್ನು ವಿರೋಧಿಸುತ್ತಾ, ‘ಕಂಸೆರ್ಟೇಸಿಯೋನ್ ಪೊರ್ ಎಲ್ ನೋ”- ಕ್ಯಾಂಪೇನ್ ಫಾರ್ ನೋ- ‘ಬೇಡ’ ಅಭಿಯಾನದ ಹೆಸರಿನಲ್ಲಿ ಅಧಿಕಾರದಲ್ಲಿ ಪಾಲುದಾರರಾದವು.

1989ರಲ್ಲಿ ಈ ಕೂಟ ಪಿನೋಷೆಯನ್ನು ಸೋಲಿಸಿತು. 2010ರ ತನಕ ಪ್ರಬಲ ಶಕ್ತಿಯಾಗಿ ಉಳಿಯಿತು. ಆದು ಸಂವಿಧಾನದಲ್ಲಿ ಹಲವು ತಿದ್ದುಪಡಿಗಳನ್ನು ತಂದರೂ, ಹಿಂದಿನ ನವ ಉದಾರವಾದಿ/ಮಿಲಿಟರಿ ಚೌಕಟ್ಟು ಹಾಗೆಯೇ ಉಳಿಯಿತು. ಇದು ತೀವ್ರವಾದ ಅಸಮಾನತೆಗೆ ಕಾರಣವಾಗಿ, ಜನರು ನಿತ್ಯ ಜೀವನಕ್ಕೆ ಪರದಾಡುವಂತಾಯಿತು. ಆಹಾರ, ಇಂಧನ, ಶಿಕ್ಷಣ, ಆರೋಗ್ಯ, ಸಾರಿಗೆ ವೆಚ್ಚಗಳ ಏರಿಕೆಗಳಿಗೆ ಕಾರಣವಾಗಿ, ಜನರು ಇಂತಹಾ ಸ್ಥಿತಿಯಲ್ಲಿಯೇ ಎರಡು ದಶಕಗಳಿಂದ ನರಳಿದ್ದಾರೆ. ಇದೀಗ ಜನರಿಗೆ ಇವುಗಳೇ ಮುಖ್ಯ ಪ್ರಶ್ನೆಗಳಾಗಿವೆ. ಆದುದರಿಂದಲೇ, ಶಾಲಾ ವಿದ್ಯಾರ್ಥಿಗಳು ಆರಂಭಿಸಿದ ಈ ಹೋರಾಟ ಅಭಿಯಾನವಾಗಿ ದಮನಕಾರಿ ಸಂವಿಧಾನ ಕಸದ ಬುಟ್ಟಿ ಸೇರುವ ಹಂತದಲ್ಲಿದೆ.

ಇಲ್ಲಿನ ಹಿಂದಿನ ವಿದ್ಯಮಾನಗಳತ್ತವೇ ಭಾರತವೂ ಈಗ ಸಾಗುತ್ತಿದೆ. ಆದರೆ, ಅವರಿಗೆ ಮುಖ್ಯವಾದ ಜೀವನದ ಪ್ರಶ್ನೆಗಳು ನಮಗೆ ಮುಖ್ಯ ಪ್ರಶ್ನೆಗಳಾಗುವುದು ಯಾವಾಗ? ನಾವು ಜಾತಿ ಗಲಾಟೆ, ಕೋಮುವಾದ, ಪಾಕಿಸ್ತಾನದ ಬೆದರಿಕೆ, ವ್ಯಕ್ತಿಪೂಜೆ ಇತ್ಯಾದಿ ಕ್ಷುಲ್ಲಕ ವಿಷಯಗಳಿಂದ ಹೊರಬರುವುದು ಯಾವಾಗ? ನಾವು ಚಿಲಿ ಸೇರಿದಂತೆ ಇತರ ಲ್ಯಾಟಿನ್ ಅಮೆರಿಕಾ ದೇಶಗಳ ಪರಿಸ್ಥಿತಿಯನ್ನೂ, ಅವುಗಳಲ್ಲಿ ನಡೆಯುತ್ತಿರುವ ಹೋರಾಟಗಳನ್ನೂ ಹತ್ತಿರದಿಂದ ಗಮನಿಸಿ, ನಮ್ಮ ಹಾದಿಯನ್ನು ಕಂಡುಕೊಳ್ಳುವ ಅಗತ್ಯವಿದೆ.

-ನಿಖಿಲ್ ಕೋಲ್ಪೆ

(ಅತಿಥಿ ಲೇಖಕರ ಬರಹಗಳಲ್ಲಿನ ಅಭಿಪ್ರಾಯಗಳು ಅವರ ಸ್ವಂತದ್ದೇ ಹೊರತು, ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅನಿಸಿಕೆಗಳಾಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...