Homeಅಂತರಾಷ್ಟ್ರೀಯಚಿಲಿಯಿಂದ ನಾವು ಭಾರತೀಯರು ಕಲಿಯಬೇಕಾಗಿರುವುದು ಏನು?

ಚಿಲಿಯಿಂದ ನಾವು ಭಾರತೀಯರು ಕಲಿಯಬೇಕಾಗಿರುವುದು ಏನು?

- Advertisement -
- Advertisement -

ದಕ್ಷಿಣ ಅಮೆರಿಕದ ಚಿಲಿಯಲ್ಲಿ ಇದೇ ಅಕ್ಟೋಬರ್ ತಿಂಗಳಲ್ಲಿ ಸಾರ್ವಜನಿಕ ಸಾರಿಗೆ ದರ ಹೆಚ್ಚಳದ ವಿರುದ್ಧ ಆರಂಭವಾದ ವಿದ್ಯಾರ್ಥಿ ಪ್ರತಿಭಟನೆಯು ಕೆಲವೇ ದಿನಗಳಲ್ಲಿ ಆಂದೋಲನವಾಗಿ, ನವ ಉದಾರವಾದಿ ದಬ್ಬಾಳಿಕೆ ಮತ್ತು ಪ್ರತಿಗಾಮಿ ಸಂವಿಧಾನವನ್ನೇ ಕಿತ್ತೆಸೆಯುವ ಹಂತಕ್ಕೆ ಬೆಳೆದುಬಿಟ್ಟಿದೆ. ಲ್ಯಾಟಿನ್ ಅಮೆರಿಕಾ ದೇಶಗಳಲ್ಲಿ ನಡೆಯುತ್ತಿರುವ ವಿವಿಧ ಆಂದೋಲನಗಳು ನಮಗೆ ಭಾರತೀಯರಿಗೆ ಪಾಠವಾಗಬೇಕಾಗಿರುವ ಹೊತ್ತಲ್ಲಿ ಚಿಲಿಯಲ್ಲಿ ನಡೆಯುತ್ತಿರುವ ಈ ಆಂದೋಲನದ ಹಿನ್ನೆಲೆ ಕುರಿತು ಸ್ವಲ್ಪ ತಿಳಿಯೋಣ.
***
ಆಕ್ಟೋಬರ್ 2019ರಿಂದ ಚಿಲಿಯಲ್ಲಿ ಒಂದು ಭಾರೀ ಆಂದೋಲನ ನಡೆಯುತ್ತಿದೆ. ಸುಮಾರು 40 ಲಕ್ಷ ಜನರು ಅದರಲ್ಲಿ ಭಾಗವಹಿಸಿ, ದೇಶದ ನವ ಉದಾರೀಕರಣದ ಹಿನ್ನೆಲೆಯಿಂದ ಹೊರಬರಲು ಹೋರಾಡುತ್ತಿದ್ದಾರೆ. ಈ ಪ್ರತಿಭಟನೆಯು ಸಾರ್ವಜನಿಕ ಸಾರಿಗೆ ದರ ಹೆಚ್ಚಳದ ವಿರುದ್ಧ ಸಂಘಟಿತ ಶಾಲಾ ವಿದ್ಯಾರ್ಥಿಗಳ ಗುಂಪೊಂದರ ಪ್ರತಿಭಟನೆಯು ಜನಾಂದೋಲನವಾಗಿ, ದೇಶದಲ್ಲಿ ತುರ್ತು ಪರಿಸ್ಥಿತಿ ಘೋಷಣೆ, ಚಿಲಿಯ ದಮನಕಾರಿ ಸಂವಿಧಾನದ ಪತನದ ತನಕ ಬೆಳೆದುನಿಂತಿದೆ.

ಒಂದು ಕಲ್ಯಾಣ ರಾಜ್ಯ (Welfare State) ಆಗಿದ್ದ ಚಿಲಿ ಮಿಲಿಟರಿ ಸರ್ವಾಧಿಕಾರವಾಗಿ ಬದಲಾದ ದೇಶ. 1930ರಲ್ಲಿ ದೇಶದಲ್ಲಿ ಕ್ರಾಂತಿ ಭುಗಿಲೇಳುವ ಭಯದಿಂದ ಪ್ರತಿಷ್ಟಿತ ಆಳುವ ವರ್ಗವು ಆಧುನಿಕ ಕಲ್ಯಾಣ ರಾಜ್ಯ ಮಾದರಿಯ ಆರ್ಥಿಕತೆಯನ್ನು ಪ್ರೋತ್ಸಾಹಿಸಲು ಆರಂಭಿಸಿತು. ಚಿಲಿಯ ಸರಕಾರ ಒಂದು ಆಧುನಿಕ ಪ್ರಜಾಪ್ರಭುತ್ವವಾಯಿತು. ಆ ಹೊತ್ತಿಗೆ ಚಿಲಿಯಲ್ಲಿ ಸಮಾಜವಾದ ಜನಪ್ರಿಯಗೊಳ್ಳಲು ಆರಂಭವಾಯಿತು.

ಕ್ಯೂಬಾದ ಕ್ರಾಂತಿಯ ಬಳಿಕ ಪಶ್ಚಿಮ ಗೋಳದಲ್ಲಿ ಒಂದು ಸೋವಿಯತ್ ಒಕ್ಕೂಟದ ಮಿತ್ರ ರಾಷ್ಟ್ರ ಸ್ಥಾಪನೆಯಾಯಿತು. ಲ್ಯಾಟಿನ್ ಅಮೆರಿಕದ ಇನ್ನಷ್ಟು ದೇಶಗಳು ಅತ್ತ ವಾಲುವವು ಎಂದು ಯುಎಸ್‌ಎ ಆತಂಕಗೊಂಡಿತು. ಪರಿಣಾಮವಾಗಿ, 1960ರ ದಶಕದಲ್ಲಿ ಅನೇಕ ಪ್ರಜಾಪ್ರಭುತ್ವ ದೇಶಗಳಲ್ಲಿ ಮಿಲಿಟರಿ ಆಡಳಿತಗಳ ಸ್ಥಾಪನೆಯಾಯಿತು. ಇವೆಲ್ಲವೂ ನಡೆದುದು ‘ಮಹಾನ್ ಪ್ರಜಾಪ್ರಭುತ್ವ’ ಎಂದು ಕರೆದುಕೊಳ್ಳುವ ಯುಎಸ್‌ಎ ಪಿತೂರಿ ಮತ್ತು ಬೆಂಬಲದಿಂದ.

ಇದ‍ನ್ನೂ ಓದಿ: ಬ್ರೆಜಿಲ್ ಚುನಾವಣೆ ಮತ್ತು ಪಾಶ್ಚಾತ್ಯ ಪ್ರಜಾತಂತ್ರದ ಅನಾವರಣ

ಚಿಲಿಯಲ್ಲಿ ಸಮಾಜವಾದ ವಿರೋಧಿ ಅಭ್ಯರ್ಥಿಗಳಿಗೆ ಯುಎಸ್‌ಎ ಸರಕಾರ ಬೆಂಬಲ ನೀಡಿತು. ಸಮಾಜವಾದಿಗಳು ಒಂದು ಭಾರಿ ಅಪಪ್ರಚಾರ ಅಭಿಯಾನದ ವಿರುದ್ಧ ಕಾದಾಡಬೇಕಾಯಿತು. ಕೊನೆಗೂ 1970ರಲ್ಲಿ, ಹಲವು ವಿಫಲ ಯತ್ನಗಳ ನಂತರ, ಚಿಲಿಯನ್ ಸೋಷಿಯಲಿಸ್ಟ್ ಪಾರ್ಟಿಯ ಸಾಲ್ವದೊರ್ ಗಿಲೆರ್ಮೊ ಅಲ್ಲಂದೆ ಗೊಸೆನ್ಸ್ ಚಿಲಿಯ ಅಧ್ಯಕ್ಷರಾಗಿ ಆಯ್ಕೆಯಾದರು. ಆಯ್ಕೆಯಾದ ತಕ್ಷಣ ಅಲ್ಲಂದೆ, ಕನಿಷ್ಟ ವೇತನವನ್ನು ಹೆಚ್ಚಿಸಿದರು, ಸಾರ್ವಜನಿಕ ರಂಗದ ಉದ್ದಿಮೆಗಳನ್ನು ಹೆಚ್ಚಿಸಿದರು. ಆರೋಗ್ಯ ಮತ್ತು ಶಿಕ್ಷಣದ ಮೇಲಿನ ವೆಚ್ಚವನ್ನು ಹೆಚ್ಚಿಸಿದರು. ಇದು ಯುಎಸ್‌ಎ ಬಂಡವಾಳಿಗರ, ಆ ಮೂಲಕ ಅಲ್ಲಿನ ಸರಕಾರದ ಕೆಂಗಣ್ಣಿಗೆ ಗುರಿಯಾಯಿತು. ಅಲ್ಲಂದೆ ಜೀವವೇ ಅಪಾಯಕ್ಕೆ ಸಿಲುಕಿತು.

ಮರೆಯಾದ ನಾಯಕರು

ಅಲ್ಲಂದೆಯವರು ಚಿಲಿಯ ಗಣಿಗಾರಿಕೆ ಕ್ಷೇತ್ರವನ್ನು ರಾಷ್ಟ್ರೀಕರಣಗೊಳಿಸಿದಾಗ, ಆ ತನಕ ಚಿಲಿಯಲ್ಲಿ ಹೇರಳವಾಗಿ ದೊರೆಯುವ ತಾಮ್ರವನ್ನು ದೋಚುತ್ತಿದ್ದ ಯುಎಸ್‌ಎಯ ಕಂಪನಿಗಳು ನಷ್ಟ ಅನುಭವಿಸಿದವು. ಅಲ್ಲಂದೆ, ಶಾಂತಿಯುತ ಸಂಸದೀಯ ಹಾದಿಯ ಮೂಲಕ ಸಮಾಜವಾದದ ಸ್ಥಾಪನೆಯನ್ನು ಪ್ರತಿಪಾದಿಸುತ್ತಿದ್ದರು. ಆ ಕಾಲದಲ್ಲಿ ಸಮಾಜವಾದವನ್ನು ಹಿಂಸಾಚಾರದೊಂದಿಗೆ ತಳಕುಹಾಕಿ ಅಪಪ್ರಚಾರ ಮಾಡಲಾಗುತ್ತಿತ್ತು.

ಸಾಲ್ವದರ್ ಅಲ್ಲಂದೆ

ಇದ‍ನ್ನೂ ಓದಿ: ಅಮ್ನೆಸ್ಟಿ ಇಂಟರ್‌ ನ್ಯಾಷನಲ್‌ ಕಚೇರಿಯ ಮೇಲೆ ಸಿಬಿಐ ದಾಳಿ

ಈ ಶಾಂತಿಯುತ ಸಮಾಜವಾದದ ಪರಿಕಲ್ಪನೆ ಉಳಿದ ದೇಶಗಳಿಗೂ ಮಾದರಿಯಾಗಿ, ತನ್ನ ಬಂಡವಾಳಕ್ಕೆ ಕುತ್ತು ತರಲಿದೆ ಎಂದು ಭಯಗೊಂಡ ಯುಎಸ್ಎ, ನೇರವಾಗಿ ಚಿಲಿಯ ವ್ಯವಹಾರಗಳಲ್ಲಿ ತಲೆಹಾಕಿತು. ಮುಂದಿನ ಚುನಾವಣೆ ನಡೆಯುವುದಕ್ಕೆ ಬಹಳ ಮುಂಚೆಯೇ ಅಲ್ಲಂದೆ ವಿರೋಧಿ ಅಪಪ್ರಚಾರ ಆರಂಭಿಸಿತು. ಇದು ಚಿಲಿಯಲ್ಲಿ ಧ್ರುವೀಕರಣಕ್ಕೆ ಕಾರಣವಾಯಿತು. ಯುಎಸ್ಎ, ಚಿಲಿಯಲ್ಲಿ ಹಣದುಬ್ಬರ ಹೆಚ್ಚಿಸುವಂತಹ ಆರ್ಥಿಕ ತಂತ್ರಗಳ ಸರಣಿಯನ್ನೇ ಆರಂಭಿಸಿತು.ಅಲ್ಲಂದೆಯವರು ಕನಿಷ್ಟ ವೇತನವನ್ನು ಹೆಚ್ಚಿಸಿದ್ದರೂ, ಸರಾಸರಿ ವೇತನದಲ್ಲಿ ಇಳಿಕೆಯಾಯಿತು.

1973ರಲ್ಲಿ ಸೇನಾನಾಯಕರ ಕೂಟವೊಂದು ಸೇನಾಕ್ರಾಂತಿ ನಡೆಸಿತು. ಅದರ ನಾಯಕ, ಮುಂದೆ ಮರಿಹಿಟ್ಲರ್ ಅನಿಸಿಕೊಂಡ ಅಗಸ್ತೋ ಪಿನೋಷೆ ಅಧಿಕಾರಕ್ಕೆ ಬಂದ. ಅವನೊಂದಿಗೆ ಸಂಧಾನ ನಡೆಸಲು ಒಪ್ಪದ ಅಲ್ಲಂದೆ ಆತ್ಮಹತ್ಯೆ ಮಾಡಿಕೊಂಡರು. ಇದೊಂದು ಸಿಐಎ ಯೋಚಿತ ಹತ್ಯೆ ಎಂದೂ ಹೇಳಲಾಗುತ್ತದೆ. ಈ ಕ್ರಾಂತಿಯಲ್ಲಿ ಯುಎಸ್ಎಯ ನೇರ ಪಾತ್ರ ಇದೆಯೆಂದು ಸಾಬೀತಾಗಿಲ್ಲವಾದರೂ, ಅದರ ಬೆಂಬಲ ಇಲ್ಲದೇ, ಮಿಲಿಟರಿ ನಾಯಕತ್ವವು ಉಳಿಯುವ ಸಾಧ್ಯತೆ ಇರಲಿಲ್ಲ. ಇದಕ್ಕೆ ಸಾಕ್ಷ್ಯ ಹೇಳುವಂತೆ ಪಿನೋಷೆ ಮುಂದೆ ಕೈಗೊಂಡ ಕ್ರಮಗಳು ಯುಎಸ್‌ಎಗೆ ಅನುಕೂಲಕರವಾಗಿದ್ದವು.

ಪಿನೋಷೆ

ಆತ ತ್ವರಿತವಾಗಿ ಅಲ್ಲಂದೆಯವರ  ಸುಧಾರಣೆಗಳನ್ನು ಬದಿಗೆ ಸರಿಸಿ, ಚಿಲಿಯನ್ನು ಒಂದು ಅನಿಯಂತ್ರಿತ ಮಾರುಕಟ್ಟೆ ವ್ಯವಸ್ಥೆಯತ್ತ ನೂಕಿದ. ರಾಷ್ಟ್ರೀಕೃತ ಕೈಗಾರಿಕೆಗಳನ್ನು ಭಾರತದಲ್ಲಿ ಈಗ ನಡೆಯುತ್ತಿರುವಂತೆ ಖಾಸಗೀಕರಣಗೊಳಿಸಿದ. ಕಾರ್ಮಿಕ ಸಂಘಟನೆಗಳನ್ನು, ವಿದ್ಯಾರ್ಥಿಗಳನ್ನು ಚಿತ್ರಹಿಂಸೆ, ಸಾಮೂಹಿಕ ಹತ್ಯಾಕಾಂಡಗಳ ಮೂಲಕ ಹಿಂಸಾತ್ಮಕವಾಗಿ ದಮನಿಸಲಾಯಿತು. ಆತನ ಅತ್ಯಂತ ದೊಡ್ಡ ಫ್ಯಾಸಿಸ್ಟ್ ಕೃತ್ಯ ಎಂದರೆ, ಚಿಲಿಯ ರಾಜಧಾನಿ ಸಾಂತಿಯಾಗೊ ದಿ ಚಿಲಿಯ ‘ಎಸ್ಟೇಡಿಯೋ ನ್ಯಾಸಿಯೋನಲ್’ -ನ್ಯಾಷನಲ್ ಸ್ಟೇಡಿಯಂ-ರಾಷ್ಟ್ರೀಯ ಕ್ರೀಡಾಂಗಣವನ್ನು ಜೈಲು ಶಿಬಿರವನ್ನಾಗಿ ಪರಿವರ್ತಿಸಿದುದು. ಇಲ್ಲಿ ಸಾವಿರಾರು ಅಲ್ಲಂದೆ ಬೆಂಬಲಿಗರನ್ನು ಸರಪಳಿ ತೊಡಿಸಿ ಇರಿಸಲಾಯಿತು. ಅವರಿಗೆ ಚಿತ್ರಹಿಂಸೆ ನೀಡಲಾಯಿತು  ಮತ್ತು ಹತ್ಯೆ ಮಾಡಲಾಯಿತು.

 

ಯುಎಸ್ಎ ಅಂತರರಾಷ್ಟ್ರೀಯವಾಗಿ ಬಾಯ್ಮಾತಿನಲ್ಲಿ ಈ ಆಡಳಿತವನ್ನು ಟೀಕಿಸಿತಾದರೂ ಆರ್ಥಿಕ ಬದಲಾವಣೆಗಳನ್ನು ಬೆಂಬಲಿಸಿ ಖಾಗೀಕರಣದ ದುಷ್ಪರಿಣಾಮಗಳು ತಟ್ಟದಂತೆ ನೋಡಿಕೊಂಡಿತು. ಚಿಲಿಯು ಇದರಿಂದ ಹಣದುಬ್ಬರವನ್ನು ನಿಯಂತ್ರಿಸಲು ಸಾಧ್ಯವಾಯಿತು. ವೇತನಗಳು ಕಡಿಮೆಯಾದರೂ, ಸ್ಥಿರಗೊಂಡವು. ಆದರೆ, ಗ್ರಾಮೀಣ ಪ್ರದೇಶಗಳ ಸಂಕಷ್ಟ ಮುಂದುವರಿದು, ಅವುಗಳ ಅಭಿವೃದ್ಧಿ ಕುಂಠಿತವಾಯಿತು. ಅಸಮಾನತೆ ಹೆಚ್ಚಿತು. ಇದೆಲ್ಲ ಸಾಧ್ಯವಾದುದು ಹೇಗೆಂದರೆ, ಯುಎಸ್ಎ ನಿಯಂತ್ರಿತ ವಿಶ್ವಬ್ಯಾಂಕ್ ಸಾಲದ ಮೂಲಕ! ಇದು ಸಾಲ ಮಾಡಿ ತುಪ್ಪ ತಿಂದಂತಾಯಿತು. ಈ ಸಾಲದ ಪ್ರಮಾಣ ಬಿಕ್ಕಟ್ಟಿನ ಹಂತಕ್ಕೆ ತಲಪಿ ಪಿನೋಷೆಯ ಪತನಕ್ಕೆ ಕಾರಣವಾಯಿತು. 1980ರಲ್ಲಿ ಆತ ಕೆಳಗಿಳಿದು ಒಂದು ಸಮ್ಮಿಶ್ರ ಸರಕಾರ ಸ್ಥಾಪನೆಯಾಯಿತು. ಆಗ ದೇಶದ ಮುಂದಿನ ಸಂವಿಧಾನ ಎನಿಸಿದ ಒಂದು ಆಡಳಿತಾತ್ಮಕ ಚೌಕಟ್ಟನ್ನು ರೂಪಿಸಲಾಯಿತು.

ಹೊಸ ಸಂವಿಧಾನವನ್ನು ರೂಪಿಸಿದವರು ಪಿನೋಷೆಯ ಬೆಂಬಲಿಗರೇ ಆಗಿದ್ದರು. ಅದು ಮಿಲಿಟರಿಗೆ ಬಹಳಷ್ಟು ಅಧಿಕಾರವನ್ನು ಕೊಟ್ಟಿತ್ತು. ಸಂಘಟನೆಯನ್ನು ದೇಶಕ್ಕೆ ಬೆದರಿಕೆ ಎಂದು ಪರಿಗಣಿಸಿತ್ತು. ಚುನಾಯಿತ ಸದನಗಳ ಮೇಲೆ ಹಲವಾರು ನಿರ್ಬಂಧಗಳನ್ನು ಹೇರಿತ್ತು. ಆದರೂ, ಈ ಸಂವಿಧಾನವನ್ನು ಸೇನಾ ಉಸ್ತುವಾರಿಯಲ್ಲಿ  (ಬೆದರಿಕೆ, ಹಸ್ತಕ್ಷೇಪದಲ್ಲಿ) ನಡೆದ ಜನಮತಗಣನೆಯಲ್ಲಿ ಅಂಗೀಕರಿಸುವಂತೆ ಮಾಡಲಾಯಿತು. ಪರಿಣಾಮವಾಗಿ, ಪಿನೋಷೆ ಮತ್ತೆ ತನ್ನ ಬಲವನ್ನು ಹೆಚ್ಚಿಸಿಕೊಳ್ಳುತ್ತಿದ್ದಂತೆ, ಚಿಲಿಯು ಎಡ-ಮಧ್ಯ ರಾಜಕೀಯ ಗುಂಪುಗಳಲ್ಲಿ ಸಂಘಟಿತವಾಯಿತು. ಈ ಗುಂಪುಗಳು ಜನಮತಗಣನೆಯನ್ನು ವಿರೋಧಿಸುತ್ತಾ, ‘ಕಂಸೆರ್ಟೇಸಿಯೋನ್ ಪೊರ್ ಎಲ್ ನೋ”- ಕ್ಯಾಂಪೇನ್ ಫಾರ್ ನೋ- ‘ಬೇಡ’ ಅಭಿಯಾನದ ಹೆಸರಿನಲ್ಲಿ ಅಧಿಕಾರದಲ್ಲಿ ಪಾಲುದಾರರಾದವು.

1989ರಲ್ಲಿ ಈ ಕೂಟ ಪಿನೋಷೆಯನ್ನು ಸೋಲಿಸಿತು. 2010ರ ತನಕ ಪ್ರಬಲ ಶಕ್ತಿಯಾಗಿ ಉಳಿಯಿತು. ಆದು ಸಂವಿಧಾನದಲ್ಲಿ ಹಲವು ತಿದ್ದುಪಡಿಗಳನ್ನು ತಂದರೂ, ಹಿಂದಿನ ನವ ಉದಾರವಾದಿ/ಮಿಲಿಟರಿ ಚೌಕಟ್ಟು ಹಾಗೆಯೇ ಉಳಿಯಿತು. ಇದು ತೀವ್ರವಾದ ಅಸಮಾನತೆಗೆ ಕಾರಣವಾಗಿ, ಜನರು ನಿತ್ಯ ಜೀವನಕ್ಕೆ ಪರದಾಡುವಂತಾಯಿತು. ಆಹಾರ, ಇಂಧನ, ಶಿಕ್ಷಣ, ಆರೋಗ್ಯ, ಸಾರಿಗೆ ವೆಚ್ಚಗಳ ಏರಿಕೆಗಳಿಗೆ ಕಾರಣವಾಗಿ, ಜನರು ಇಂತಹಾ ಸ್ಥಿತಿಯಲ್ಲಿಯೇ ಎರಡು ದಶಕಗಳಿಂದ ನರಳಿದ್ದಾರೆ. ಇದೀಗ ಜನರಿಗೆ ಇವುಗಳೇ ಮುಖ್ಯ ಪ್ರಶ್ನೆಗಳಾಗಿವೆ. ಆದುದರಿಂದಲೇ, ಶಾಲಾ ವಿದ್ಯಾರ್ಥಿಗಳು ಆರಂಭಿಸಿದ ಈ ಹೋರಾಟ ಅಭಿಯಾನವಾಗಿ ದಮನಕಾರಿ ಸಂವಿಧಾನ ಕಸದ ಬುಟ್ಟಿ ಸೇರುವ ಹಂತದಲ್ಲಿದೆ.

ಇಲ್ಲಿನ ಹಿಂದಿನ ವಿದ್ಯಮಾನಗಳತ್ತವೇ ಭಾರತವೂ ಈಗ ಸಾಗುತ್ತಿದೆ. ಆದರೆ, ಅವರಿಗೆ ಮುಖ್ಯವಾದ ಜೀವನದ ಪ್ರಶ್ನೆಗಳು ನಮಗೆ ಮುಖ್ಯ ಪ್ರಶ್ನೆಗಳಾಗುವುದು ಯಾವಾಗ? ನಾವು ಜಾತಿ ಗಲಾಟೆ, ಕೋಮುವಾದ, ಪಾಕಿಸ್ತಾನದ ಬೆದರಿಕೆ, ವ್ಯಕ್ತಿಪೂಜೆ ಇತ್ಯಾದಿ ಕ್ಷುಲ್ಲಕ ವಿಷಯಗಳಿಂದ ಹೊರಬರುವುದು ಯಾವಾಗ? ನಾವು ಚಿಲಿ ಸೇರಿದಂತೆ ಇತರ ಲ್ಯಾಟಿನ್ ಅಮೆರಿಕಾ ದೇಶಗಳ ಪರಿಸ್ಥಿತಿಯನ್ನೂ, ಅವುಗಳಲ್ಲಿ ನಡೆಯುತ್ತಿರುವ ಹೋರಾಟಗಳನ್ನೂ ಹತ್ತಿರದಿಂದ ಗಮನಿಸಿ, ನಮ್ಮ ಹಾದಿಯನ್ನು ಕಂಡುಕೊಳ್ಳುವ ಅಗತ್ಯವಿದೆ.

-ನಿಖಿಲ್ ಕೋಲ್ಪೆ

(ಅತಿಥಿ ಲೇಖಕರ ಬರಹಗಳಲ್ಲಿನ ಅಭಿಪ್ರಾಯಗಳು ಅವರ ಸ್ವಂತದ್ದೇ ಹೊರತು, ನಾನುಗೌರಿ.ಕಾಂನ ಸಂಪಾದಕೀಯ ತಂಡದ ಅನಿಸಿಕೆಗಳಾಗಿರಬೇಕೆಂದೇನಿಲ್ಲ.)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...