Homeಅಂಕಣಗಳುಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

ಸನ್ಯಾಸಿಗಳೆಂದರೆ ನಿಮಗೇನು ಗೊತ್ತಯ್ಯಾ

- Advertisement -
- Advertisement -

ಅಧಿಕಾರಕ್ಕೆ ಆಸೆಪಡುವ ವಿಷಯದಲ್ಲಿ ನಮ್ಮ ರಾಜಕಾರಣಿಗಳು ’ನಾನೇನು ಸನ್ಯಾಸಿಯಲ್ಲ’ ಎಂಬ ಜನಪ್ರಿಯ ಮಾತನ್ನು ಸಲೀಸಾಗಿ ಬಳಸಿ ತಮ್ಮ ಅಜ್ಞಾನ ಪ್ರದರ್ಶಿಸುತ್ತಲೇ ಬಂದಿದ್ದಾರಲ್ಲಾ. ಸದರಿ ಮಾತನ್ನು ಮಾಧ್ಯಮದ ಕೆಲ ಮಂದಮತಿಗಳು ಬಿತ್ತರಿಸುತ್ತಿರುವಾಗ ಅವರ ಕಣ್ಣು ತೆರೆಸುವುದು ನಮ್ಮ ಜವಾಬ್ದಾರಿ ಅಲ್ಲವೆ.

ಸನ್ಯಾಸಿಯೆಂದರೆ ಸರ್ವಸಂಗ ಪರಿತ್ಯಾಗಿ, ಸಂಸಾರಕ್ಕೆ ಹೆದರಿದವನು, ಮೈಗಳ್ಳ, ದುಡಿದು ಬದುಕಲಾರದವನು, ಇತರರಿಗೆ ಅನ್ನ ಇಕ್ಕದವನು. ಸಂಸಾರಕ್ಕೆ ಹೆದರಿ ಸನ್ಯಾಸಿಯಾದವನನ್ನು ಪಾಪ ಸಂಸಾರಿಗಳೇ ಸಾಕಬೇಕು. ಹಾಗೆಂದು ಈತ ಲೈಂಗಿಕ ತೃಷೆಯಿಂದ ಮುಕ್ತನಾದವನೆಂದು ಹೇಳಲು ಬರುವುದಿಲ್ಲ. ಅವನ ಖಾಸಗಿ ವಿಷಯ ಅವನಿಗೆ ಗೊತ್ತು. ನಮ್ಮ ಪುರಾಣಗಳಲ್ಲಿ ಋಷಿಮುನಿಗಳಿಗೆ ಪತ್ನಿಯರಿದ್ದರು. ಅವರು ಋಷಿಗಳ ಯಜ್ಞಯಾಗದ ಪರಿಕರಗಳನ್ನ ಒದಗಿಸುತ್ತಾ, ಮುನಿಗಳಿಗೆ ನೀರು ತರುತ್ತ, ಗೆಡ್ಡೆಗೆಣಸು ಬೇಯಿಸಿಕೂಡುತ್ತ ಇದ್ದರು. ಗರ್ಮಿ ಪದಾರ್ಥ ತಿಂದ ಸನ್ಯಾಸಿ ಅರ್ಧರಾತ್ರಿಯಲ್ಲಿ ಹಠಾತ್ತನೆ ಎದ್ದುಬಂದು ಎರಗಿದರೆ ಯಾವ ಆಕ್ಷೇಪವನ್ನೂ ವ್ಯಕ್ತಪಡಿಸದೆ ಅರ್ಪಿಸಿಕೊಂಡು ಸೇವೆ ಮಾಡುತ್ತಿದ್ದರಂತಲ್ಲಾ, ಥೂತ್ತೇರಿ.

*****

ಈ ಪುರಾಣದ ಸನ್ಯಾಸಿಗಳ ಕತೆಯ ಮುಂದುವರಿಕೆ ನೋಡುವುದಾದರೆ: ಪುರಾಣದವರು ಆತ್ಮವಂಚಕರಾಗಿರಲಿಲ್ಲ. ನಯವಂಚಕರೂ ಆಗಿರಲಿಲ್ಲ. ಗಂಟುಗಳ್ಳರಾಗಿರಲಿಲ್ಲ. ತಾವು ಕಟ್ಟಿಕೊಂಡ ಕುಟೀರ ತಮ್ಮ ನಂತರ ನಾಶವಾಗುವಂತೆ ಮಾಡಿ ಸರಳವಾಗಿ ಬದುಕುತ್ತಿದ್ದರು. ಇಂತ ಸನ್ಯಾಸಿಗಳಿಗೆ ಇಂದಿನ ಸನ್ಯಾಸಿಗಳನ್ನ ಹೋಲಿಸುವುದಾದರೆ ಇವರಿಗೆ ಪತ್ನಿಯರಿಲ್ಲ ನಿಜ. ಆದರೆ ಪ್ರೇಯಸಿಯರಿದ್ದಾರೆ. ಆಕಸ್ಮಾತ್ ಮಗುವಾದರೆ ಅದನ್ನ ಫಾರಿನ್ನಿಗೆ ಕಳಿಸುವ ಪ್ರಭಾವಿಗಳು ಇವರು. ಲೈಂಗಿಕ ಹಗರಣದಲ್ಲಿ ಸಿಕ್ಕಿಬಿದ್ದರೆ ಒತ್ತಾಯದ ಸಂಭೋಗವನ್ನ ಒಪ್ಪಿತ ಸಂಭೋಗವೆಂದು ಬದಲಾಯಿಸಿ ತೀರ್ಪು ಪಡೆಯಬಲ್ಲರು. ಇವರು ಹಚ್ಚಿಕೊಳ್ಳುವ ಸೆಂಟುಗಳು ಮತ್ತು ಬರಿಸುವಂತಿರುತ್ತದೆ. ಕೆಲವು ಸನ್ಯಾಸಿಗಳು ಫೇರ್ ಅಂಡ್ ಲವ್ಲಿ ಹಚ್ಚದೆ ಸಭೆಗಳಿಗೆ ಬರುವುದಿಲ್ಲ. ಇನ್ನ ಕೈಯ್ಯ ಉಂಗರಗಳು ಕೊರಳ ಚೈನು ನೋಡಿದರೆ ಹೋರಿಯ ಶೃಂಗಾರ ನೋಡಿದಂತಾಗುತ್ತದೆ. ಇನ್ನ ನಾನೇ ದೇವರೆಂದು ಹೇಳಿಕೊಂಡು ಕಾಯಿಲೆಯಿಂದ ನರಳುತ್ತಿದ್ದ ದೇವಮಾನವನೊಬ್ಬ ತನ್ನ ಖಾಸಗಿ ಕೋಣೆಯಲ್ಲಿ ಚಿನ್ನದ ಕಮೋಡ್ ಹೊಂದಿದ್ದ. ಆದರೇನು ಪಾಯಿಖಾನೆ ವಾಸನೆ ಬದಲಿಸಲಾಗಲಿಲ್ಲವಂತಲ್ಲಾ, ಥೂತ್ತೇರಿ.

*****

’ನಾನು ಸನ್ಯಾಸಿಯಲ್ಲ’ ಎಂದು ಹೇಳುವ ರಾಜಕಾರಣಿಗಳಾಗಲಿ, ಅವರ ಮಾತನ್ನು ಕೊಂಡಾಡುತ್ತ ಪ್ರಕಟಿಸುವ ಕೆಲ ಮಾಧ್ಯಮದ ಮಂದಮತಿಗಳಾಗಲು, ಇನ್ನು ಮುಂದೆ ಆ ಮಾತುಗಳನ್ನು ಬಳಸುವ ಮುನ್ನ ಯೋಚಿಸಬೇಕಾಗುತ್ತದಲ್ಲ. ಸನ್ಯಾಸಿ ಎಂದು ಹೇಳಿಕೊಂಡು ಗದ್ದುಗೆ ಏರಿದವರು ಮಠದ ಸಂವಿಧಾನದಂತೆ ನಿವೃತ್ತಿ ಪಡೆಯದೆ ಹಠದಿಂದ ಮುಂದುವರೆಯುತ್ತಾರೆ. ಮಠದ ಆಸ್ತಿಯನ್ನ ಟ್ರಸ್ಟು ಮಾಡಿ ತಾವೇ ಅಧ್ಯಕ್ಷರಾಗುತ್ತಾರೆ. ಇದನ್ನ ದಕ್ಕಿಸಿಕೊಳ್ಳಲು ಗೂಂಡಾ ಪಡೆ ನಿರ್ಮಿಸುತ್ತಾರೆ. ಇವರ ನಿರ್ವಹಣೆಗೆ ತಾವೇ ತಾತ್ವಿಕವಾಗಿ ವಿರೋಧಿಸಿದ್ದ ಮದ್ಯವನ್ನ ಸರಬರಾಜು ಮಾಡುವಂತೆ ಆಜ್ಞಾಪಿಸುತ್ತಾರೆ. ತಮ್ಮ ಕಾಲಾನಂತರ ಭವ್ಯ ಸಮಾಧಿ ನಿರ್ಮಾಣದ ಬಗ್ಗೆ ಗಂಭೀರವಾಗಿ ಯೋಚಿಸುತ್ತಾರೆ. ಕಂಡುಕೇಳರಿಯದ ಇಂತಹ ಸವಲತ್ತು ನೋಡಿದ ರಾಜಕಾರಣಿಗಳು ಈ ಹಾಳು ರಾಜಕಾರಣಕ್ಕಿಂತ ಸನ್ಯಾಸಿಯಾಗಿದ್ದರೆ ಬದುಕು ಬಂಗಾರವಾಗುತಿತ್ತು ಎಂದು ಯೋಚಿಸಿ, ರಾಜಕಾರಣ ಬಿಟ್ಟು ಸನ್ಯಾಸಿಯಾದ ಉದಾಹರಣೆಯೂ ನಮ್ಮ ಮುಂದಿದೆ. ಇನ್ನ ಮದುವೆಯಾಗಿ ಮಕ್ಕಳು ಪಡೆದು ಸಂಸಾರ ಸಾಕಲಾರದೆ ರುಷಿಕುಮಾರರಾದ ಉದಾಹರಣೆಯೂ ನಮ್ಮ ಕಣ್ಣ ಮುಂದಿದೆ. ಬದುಕಲು ಚಿಕನ್ ಶಾಪ್ ಕೂಡ ತೆರೆಯಬಲ್ಲೆ ಎಂದು ಕೋಳಿ ಕಟ್ ಮಾಡಿದ ಅಹಿಂಸಾವಾದಿ ಸನ್ಯಾಸಿಯು ಇಲ್ಲೇ ಬದುಕಿದ್ದಾನಂತಲ್ಲಾ, ಥೂತ್ತೇರಿ.

*****

ಈ ಜಾಗತೀಕರಣದ ಬಂಡವಾಳಶಾಹಿ ಹೂಡೆತಕ್ಕೆ ಸಿಕ್ಕಿ ಭಾರತ ಅಲ್ಲೋಲಕಲ್ಲೋಲವಾಗುತ್ತ ಅದರಲ್ಲಿ ಸಂಸಾರಿಗಳು ಸನ್ಯಾಸಿಗಳಾಗುತ್ತ ಹೂರಟಿದ್ದಾರಂತಲ್ಲಾ. ಅದಕ್ಕಿಂತ ಮುಖ್ಯವಾಗಿ ಸ್ಥಾಪಿತ ಮೌಲ್ಯಗಳು ಪತನಗೊಂಡು ಜಾತಿ ಗಡಿರೇಖೆಗಳು ಅಳಿಸಿಹೋಗುತ್ತ ದುಡ್ಡಿದ್ದವರದೊಂದು ಜಾತಿ ಇಲ್ಲದವರದೊಂದು ಜಾತಿಯಾಗಿ ಬೇರ್ಪಡುತ್ತಿರುವಾಗ ಸನ್ಯಾಸಿ ಎಂಬ ಪದ ಸಮೃದ್ಧ ಪದವಾಗಿ ಕಾಣುತ್ತಿದೆಯಲ್ಲಾ. ಈ ಸಮೃದ್ಧತೆಯ ಬದುಕಿನ ಎಲ್ಲ ಐಭೋಗಗಳು ತುಂಬಿಕೊಂಡು ಅದು ಜನಸಾಮಾನ್ಯರಿಗೂ ಅರಿವಾಗಿ ಅವರ ಭಕ್ತಿಭಾವಗಳು ಮೊದಲಿಗಿಂತಲೂ ಇಮ್ಮಡಿಗೂಂಡಿವೆಯಂತಲ್ಲಾ. ಇದು ನಮ್ಮ ಪುರೋಹಿತಶಾಹಿಗಳಿಗೆ ಬಹು ಸಂತೋಷಕರ ಸಂಗತಿಯಾಗಿ ತಮ್ಮ ಅಜೆಂಡಾಗಳನ್ನೆಲ್ಲಾ ನಮ್ಮ ಬಹು ಸಂಸ್ಕೃತಿಯೊಳಕ್ಕೆ ತುರುಕುತ್ತ, ಮುಖ್ಯವಾಗಿ ಮಕ್ಕಳ ಮನಸ್ಸಿನ ಮೇಲೆ ಲಗ್ಗೆಯಿಟ್ಟಿದ್ದಾರಂತಲ್ಲಾ. ಈ ಪೈಕಿ ಗರ್ಭಗುಡಿಯಲ್ಲಿ ಕಸಹೊಡೆದು ಕ್ಲೀನ್ ಮಾಡಿ ಗಂಧದಕಡ್ಡಿ ಜೋಡಿಸಿ ಕರ್ಪೂರ ಹಚ್ಚಿ, ಹೂಗಳನ್ನ ವಿಂಗಡಿಸಿ ಕಟ್ಟಿ ಪ್ರಧಾನ ಅರ್ಚಕರು ಬರುವವರೆಗೆ ಕಾಯುತ್ತಿದ್ದಂತವನೊಬ್ಬ ಮಕ್ಕಳ ಶಿಕ್ಷಣ ಸಂಸ್ಥೆಯಲ್ಲಿ ಮಂಚೂಣಿಯಲ್ಲಿದ್ದಾನಂತಲ್ಲಾ, ಥೂತ್ತೇರಿ.

******

ನಮ್ಮ ಶಿಕ್ಷಣ ಸಂಸ್ಥೆಯೊಳಕ್ಕೆ ವಿಪ್ರೋತ್ತಮರು ಸೇರಿಕೂಂಡು ಮಾಡುತ್ತಿರುವ ಅನಾಹುತಕ್ಕೆ ಇಡೀ ಕರ್ನಾಟಕವೇ ಕೋಲಾಹಲಗೊಂಡಿರುವಾಗ ನಮ್ಮ ಮುಖ್ಯಮಂತ್ರಿ ಶಿಕ್ಷಣ ಇಲಾಖೆಯ ಪರಂಪರೆಯನ್ನ ಗ್ರಹಿಸಬೇಕಿತ್ತಲ್ಲಾ. ಅಲ್ಲಿ ಶಿಕ್ಷಣ ಸಚಿವರಾಗಿದ್ದ ಶಂಕರೇಗೌಡರ ಹೆಸರು ಚಿರಸ್ಥಾಯಿಯಾಗಿದೆ. ಗೋವಿಂದೇಗೌಡರ ಹೆಸರು ಅಜರಾಮರವಾಗಿದೆ. ಇನ್ನು ಕಳೆದ ಸರಕಾರದಲ್ಲಿ ಶಿಕ್ಷಣ ಸಚಿವರಾಗಿದ್ದ ಕಿಮ್ಮನೆ ರತ್ನಾಕರ್ ಪ್ರಾಮಾಣಿಕತೆಯಲ್ಲಿ ಗೋವಿಂದೇಗೌಡರನ್ನ ಸರಿಗಟ್ಟಿದ್ದಲ್ಲದೆ, ಅವರ ಬಳಿಹೋದ ಶಿಕ್ಷಕರಿಗೆ ಅವರ ಸಬ್ಜೆಕ್ಟ್‌ನ ಬಗ್ಗೆ ಪ್ರಶ್ನೆ ಕೇಳಿ ತಬ್ಬಿಬ್ಬುಗೇಳಿಸುತ್ತಿದ್ದು ಈಗ ಇತಿಹಾಸ. ಆದರೆ ಈಗಿನ ಶಿಕ್ಷಣ ಸಚಿವರ ತಲೆ ತುಂಬಾ ಪುರೋಹಿತಶಾಹಿ ಪ್ರಶ್ನೆಗಳೇ ತುಂಬಿಕೊಂಡು ಅವನ್ನೆಲ್ಲಾ ಜಾರಿಮಾಡಲು ಹೊರಟಿದ್ದಾರಲ್ಲಾ. ಇದಕ್ಕೆಲ್ಲಾ ಅಂತವರಿಗೆ ಶಿಕ್ಷಣ ಖಾತೆ ಕೂಟ್ಟ ಮುಖ್ಯಮಂತ್ರಿಗಳೆ ಹೊಣೆಗಾರರಾಗಬೇಕಾಗುತ್ತದೆ. ಆದರೇನು ಅವರ ಎಡ ಮಂಡಿ ನೋವಿನ ಮುಂದೆ ಇನ್ಯಾವ ಸಮಸ್ಯೆಗಳೂ ಇಲ್ಲ. ಅದಕ್ಕಿಂತ ಮುಖ್ಯವಾಗಿ ತಿಪಟೂರು ಶಾಲಾಮೈದಾನದಲ್ಲಿ ಅವುಡುಗಚ್ಚಿ ಲಾಠಿ ಬೀಸುತ್ತಿದ್ದ ಆಸಾಮಿಗೆ ಶಿಕ್ಷಣ ಖಾತೆ ಕೂಟ್ಟವರು ಮುಖ್ಯಮಂತ್ರಿಗಳಲ್ಲ. ಕೇಶವಕೃಪದಿಂದ ಬಂದ ಪಟ್ಟಿಯನ್ನು ಜಾರಿಮಾಡಿದರಂತಲ್ಲಾ, ಥೂತ್ತೇರಿ…


ಇದನ್ನೂ ಓದಿ: ದಶಕದ ನಂತರ ಗೆದ್ದ ಅಗ್ರಹಾರದ ಜಟ್ಟಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...