Homeಮುಖಪುಟ’ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು

’ಇವ ನಮ್ಮವ’ ಪರಂಪರೆ ನಮ್ಮದು: ನಿಜ ಆಧ್ಯಾತ್ಮಿಕ ಮಠಾಧೀಶರ ಮನದಾಳದ ಮಾತು

- Advertisement -
- Advertisement -

ಧರ್ಮದ ಹೆಸರಿನಲ್ಲಿ ನಿತ್ಯವೂ ಜನರನ್ನು ಒಡೆಯುತ್ತಿರುವ ಘಟನೆಗಳು ಸಾಲುಸಾಲಾಗಿ ನಡೆಯುತ್ತಿವೆ. ಸಂವಿಧಾನ ವಿರೋಧಿ ಶಕ್ತಿಗಳು ಬಹುತ್ವ ಭಾರತವನ್ನು ನಿರ್ನಾಮ ಮಾಡುವತ್ತ ಹೆಜ್ಜೆ ಇರಿಸಿರುವುದು ಸ್ಪಷ್ಟವಾಗತೊಡಗಿದೆ. ದ್ವೇಷ ಬಿತ್ತುವುದು, ಒಂದು ಜನಾಂಗಕ್ಕೆ ವ್ಯಾಪಾರವನ್ನು ನಿರ್ಬಂಧಿಸುವುದು ವೇಗವಾಗಿ ಬೆಳೆಯುತ್ತಿರುವ ಫ್ಯಾಸಿಸಂನ ಲಕ್ಷಣಗಳು. ಇಂತಹ ಪ್ರವೃತ್ತಿಗಳಿಗೆ ಆರಂಭದಲ್ಲೇ ಕಡಿವಾಣ ಹಾಕದಿದ್ದರೆ ನಿಜದ ಭಾರತ ಕಣ್ಮರೆಯಾಗುವ ಆತಂಕ ಎದುರಾಗಿದೆ. ನಿಜ ಆಧ್ಯಾತ್ಮಿಕ ಪರಂಪರೆ ಕಣ್ಮರೆಯಾಗಿ, ಮತ ದ್ವೇಷದಿಂದ ಅಪಾರ ಸಾವು, ನೋವಿನ ಮುನ್ಸೂಚನೆಗಳು ಕಾಣತೊಡಗಿವೆ.

ಚುನಾವಣೆಗಳು ಬರುತ್ತವೆ, ಚುನಾವಣೆಗಳು ಹೋಗುತ್ತವೆ. ಆದರೆ ಇಂತಹ ಮತೀಯ ಶಕ್ತಿಗಳಿಗೆ ಸರ್ಕಾರ ಪ್ರತ್ಯಕ್ಷವಾಗಿಯೋ ಪರೋಕ್ಷವಾಗಿಯೋ ಬೆಂಬಲ ನೀಡುವುದು ಅಕ್ಷಮ್ಯ. ಒಂದು ಜನಾಂಗದ ಮೇಲೆ ದ್ವೇಷ ಸಾಧಿಸು ಎಂದು ಯಾವ ಧರ್ಮವೂ ಹೇಳುವುದಿಲ್ಲ. ಕಾಲಧರ್ಮದ ಕಾರಣಕ್ಕೆ ಅಂತಹದ್ದು ಎಲ್ಲಾದರೂ ದಾಖಲೆಯಾಗಿದ್ದರೂ ಅದನ್ನು ಮೀರಿ ಭ್ರಾತೃತ್ವವನ್ನು, ಪ್ರೀತಿಯನ್ನು ಹಂಚುವತ್ತ ಧರ್ಮ ಬೆಳೆಯಬೇಕು. ಆ ನಿಟ್ಟಿನಲ್ಲಿ ಎಷ್ಟೋ ಧರ್ಮ ಸುಧಾರಕರು ಬಂದುಹೋಗಿದ್ದಾರೆ. ಮತ್ತು ಯಾವುದೇ ಮತಧರ್ಮಗಳ ಚೌಕಟ್ಟಿನಲ್ಲಿ ಅಂತಹ ಸುಧಾರಣೆಗಳನ್ನು-ಸುಧಾರಕರನ್ನು ಗುರುತಿಸಬಹುದಾಗಿದೆ. ಧರ್ಮದ ಹೆಸರಲ್ಲಿ ದ್ವೇಷ ಬಿತ್ತುವವರು ದೇಶಪ್ರೇಮಿಗಳೂ ಅಲ್ಲ, ಧರ್ಮ ಪಾಲಕರೂ ಅಲ್ಲ. ರಾಜಕೀಯ ಅಜೆಂಡಾಗಳಷ್ಟೇ ಅವರಿಗೆ ಮುಖ್ಯ. ಯಥಾಸ್ಥಿತಿವಾದವೇ ಅವರ ಸಿದ್ಧಾಂತ. ಆದರೆ ಈ ಜಾತ್ಯತೀತ ಭಾರತವನ್ನು ಒಡೆದು ಹಾಕುವುದು ಅಷ್ಟು ಸುಲಭವಲ್ಲ ಎಂದು ನಂಬಿರುವ ಧರ್ಮಗಳ ಸಾರವನ್ನು ತಿಳಿದಿರುವ, ಧರ್ಮಗಳ ಉದಾತ್ತತೆಯನ್ನು ಪ್ರತಿಪಾದಿಸುವ ಮನಸ್ಸುಗಳು, ಇಂದಿನ ದ್ವೇಷದ ವಾತಾವರಣವನ್ನು ವಿರೋಧಿಸಿ ಪ್ರತಿಕ್ರಿಯೆ ನೀಡುತ್ತಿರುವುದು ಆಶಾದಾಯಕ ಬೆಳವಣಿಗೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

’ನ್ಯಾಯಪಥ’ ಪತ್ರಿಕೆಯೊಂದಿಗೆ ಮಾತನಾಡಿರುವ ನಿಜ ಆಧ್ಯಾತ್ಮಿಕ ಪರಂಪರೆಯ ವಿವಿಧ ಮಠಗಳ ಸ್ವಾಮೀಜಿಗಳು ಸಾಂವಿಧಾನಿಕತೆ, ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಜಾತ್ಯತೀತತೆಯ ಕುರಿತು ಜಾಗೃತಿ ಮೂಡಿಸುವ ಮಾತುಗಳನ್ನು ಹಂಚಿಕೊಂಡಿದ್ದಾರೆ. ವಿಚ್ಛಿದ್ರಕಾರಿ ಬೆಳವಣಿಗೆಗಳನ್ನು ಮಟ್ಟಹಾಕುವಂತೆ ಜನಸಮುದಾಯಕ್ಕೆ ಕರೆ ನೀಡಿದ್ದಾರೆ. ಯಾವ ದಿಕ್ಕಿನಲ್ಲಿ ಸಮಾಜ ಸಾಗಬೇಕೆಂಬ ಮಾರ್ಗದರ್ಶನವನ್ನು ನೀಡಿದ್ದಾರೆ. ಬುದ್ಧ, ಬಸವ, ಅಂಬೇಡ್ಕರ್, ಗಾಂಧೀಜಿ, ಕುವೆಂಪು ರೀತಿಯ ಮಹನೀಯರು ಕಟ್ಟಿದ ’ಸರ್ವಜನಾಂಗದ ಶಾಂತಿಯ ತೋಟ’ದ ಉಳಿವಿಗಾಗಿ ದನಿ ಎತ್ತಿದ್ದಾರೆ.

******

ಸ್ವಾಮೀಜಿಗಳಾದವರು ಸಮಾಜದಲ್ಲಿ ತಾರತಮ್ಯ ಮಾಡುವುದಿಲ್ಲ: ಸಿದ್ಧರಾಮ ಸ್ವಾಮೀಜಿ

“ಶಾಂತಿ ಸೌಹಾರ್ದತೆಯನ್ನು ಎಲ್ಲರೂ ಕಾಯ್ದುಕೊಂಡು ಹೋಗಬೇಕು. ಪ್ರೀತಿಯಿಂದ ವರ್ತಿಸಿದಾಗ ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ದ್ವೇಷದಿಂದಾಗಿ ಮನುಷ್ಯ ಶಾಂತಿ, ಸಮಾಧಾನ ಕಳೆದುಕೊಳ್ಳುತ್ತಾನೆ. ದ್ವೇಷ, ಅಸೂಯೆಯನ್ನು ಬಿಟ್ಟು ಸೌಹಾರ್ದತೆಯಿಂದ, ಭ್ರಾತೃತ್ವ ಭಾವನೆಯಿಂದ ವರ್ತಿಸಿದಾಗ ಶಾಂತಿ ದೊರಕುತ್ತದೆ” ಎಂದು ಗದುಗಿನ ತೋಂಟದಾರ್ಯ ಮಠದ ಸಿದ್ಧರಾಮ ಸ್ವಾಮೀಜಿ ಎಂದು ತಿಳಿಸಿದರು.

“ದ್ವೇಷ ಸೃಷ್ಟಿಸುವ ಶಕ್ತಿಗಳನ್ನು ತಡೆಯುವ ಕೆಲಸ ಆಗಬೇಕು. ಈ ದಿಸೆಯಲ್ಲಿ ಸರ್ಕಾರ ಸೂಕ್ತ ಕ್ರಮ ಜರುಗಿಸಬೇಕು. ಜನಾಂಗೀಯ ತಾರತಮ್ಯವನ್ನು ಅಧಿಕಾರಕ್ಕಾಗಿ ಬಳಸಬಾರದು, ಚುನಾವಣೆಯ ವಿಷಯವಾಗಿಸಬಾರದು” ಎಂದು ಅವರು ಹೇಳಿದರು.

ಸಿದ್ಧರಾಮ ಸ್ವಾಮೀಜಿ

ಮುಂದುವರೆದು “ಸಂವಿಧಾನಕ್ಕೆ ಎಲ್ಲರೂ ಬೆಲೆ ಕೊಡಬೇಕು. ಸಂವಿಧಾನದ ಪ್ರಕಾರ ಸೇವೆ ಸಲ್ಲಿಸುವುದಾಗಿ ಪ್ರಮಾಣವಚನ ಸ್ವೀಕರಿಸಿದವರು, ಅದಕ್ಕೆ ಅನುಗುಣವಾಗಿ ನಡೆದುಕೊಳ್ಳಬೇಕು” ಎನ್ನುತ್ತಾರೆ.

“ನಮ್ಮ ಲಿಂಗಾಯತ ಮಠಗಳು ಕೋಮು ಸೌಹಾರ್ದತೆಗೆ ಹೆಸರಾಗಿವೆ” ಎಂದ ಸಿದ್ಧರಾಮ ಸ್ವಾಮಿಗಳು, “ಎಲ್ಲ ಸಮುದಾಯಗಳು, ಸಮಾನ ಭಾವದಿಂದ ನಮ್ಮ ಮಠಗಳಲ್ಲಿ ಪಾಲ್ಗೊಳ್ಳುತ್ತಾರೆ. ದಾಸೋಹಕ್ಕೆ, ಕೋಮುಸೌಹಾರ್ದತೆಗೆ ಲಿಂಗಾಯತ ಮಠಗಳು ಹೆಸರಾಗಿವೆ. ’ಇವನಾರವ ಎನ್ನದೆ ಇವ ನಮ್ಮವ ಎನ್ನುವ’ ಪರಂಪರೆ ನಮ್ಮದು” ಎಂದು ತಿಳಿಸಿದರು.

“ಬೇರೆ ದೇಶಗಳಲ್ಲಿರುವ ಹಿಂದೂಗಳಿಗೆ ಇದೇ ರೀತಿಯಲ್ಲಿ ಧಕ್ಕೆಯಾದರೆ ಇವರು ಏನು ಮಾಡುತ್ತಾರೆ? ಬೆಳಗಾವಿಯಲ್ಲಿ ಮರಾಠಿಗರಿಗೆ ತೊಂದರೆ ಕೊಟ್ಟರೆಂದು ಮಹಾರಾಷ್ಟ್ರದಲ್ಲಿ ಕನ್ನಡಿಗರಿಗೆ ಅಡ್ಡಿಪಡಿಸಿದ್ದನ್ನು ನೋಡಿದ್ದೇವೆ. ಹೀಗಾಗಿ ಸಮಾಜದಲ್ಲಿ ಸಂಘರ್ಷ ಇರಬಾರದು” ಎಂದು ಎಚ್ಚರಿಸಿದರು.

ಕಾವಿ ವೇಷದಲ್ಲಿರುವ, ಸ್ವಾಮೀಜಿಗಳೆನಿಸಿಕೊಂಡಿರುವ ಕೆಲವರು ದ್ವೇಷ ಭಾಷಣ ಮಾಡುತ್ತಿರುವ ಸಂಬಂಧ ಪ್ರತಿಕ್ರಿಯಿಸಿದ ಸಿದ್ದರಾಮ ಸ್ವಾಮೀಜಿಯವರು, “ಅಂಥವರನ್ನು ಸ್ವಾಮೀಜಿಗಳು ಎಂದು ಹೇಗೆ ಅನ್ನುತ್ತೀರಿ? ಸಮಾಜದಲ್ಲಿ ಕಲಹ ಉಂಟುಮಾಡೋರು ಸ್ವಾಮೀಜಿಗಳು ಹೇಗಾಗುತ್ತಾರೆ? ಎಲ್ಲರನ್ನು ಸಮಾನವಾಗಿ ಕಾಣುವವರು, ಎಲ್ಲರಿಗೂ ಪ್ರೀತಿಯನ್ನು ಹಂಚುವವರು ಸ್ವಾಮೀಜಿಗಳು. ಕೆಲವರಿಗೆ ಪ್ರೀತಿ, ಕೆಲವರಿಗೆ ದ್ವೇಷ ನೀಡೋರು ಸ್ವಾಮೀಜಿಗಳೇ ಅಲ್ಲ ಎಂದು ಸ್ಪಷ್ಟಪಡಿಸಿದರು.

“ಸರ್ಕಾರ, ಸಮಾಜ ವಿರೋಧಿ ಕೃತ್ಯಗಳಿಗೆ ಪ್ರತಿಬಂಧ ಹೇರಬೇಕು. ಜನರಿಗೆ ಉದ್ಯೋಗ ನೀಡಬೇಕು. ಕೆಲಸಗಳು ಇಲ್ಲದಿದ್ದಾಗ ಮನಸ್ಸು ಇಂತಹ ಕೃತ್ಯಗಳಲ್ಲಿ ತೊಡಗುತ್ತದೆ” ಎಂದು ಅಭಿಪ್ರಾಯಪಟ್ಟರು.

******

’ಇವ ನಮ್ಮವ, ಇವ ನಮ್ಮವ’ ಪರಂಪರೆ ನಮ್ಮದು: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

“ಕರ್ನಾಟಕ ಶಾಂತಿಯ ತವರೂರು. ಕುವೆಂಪು ಅವರು ಸರ್ವ ಜನಾಂಗದ ಶಾಂತಿಯ ತೋಟ ಎಂದಿದ್ದಾರೆ. 12ನೇ ಶತಮಾನದ ಶರಣರು ಸಾಮರಸ್ಯ ಮೂಡಿಸುವ ಹಿನ್ನೆಲೆಯಲ್ಲಿ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಜನರನ್ನು ಒಂದು ಕಡೆ ಸೇರಿಸಿದರು. ’ಇವನಾರವ, ಇವನಾರವ ಎನ್ನದೆ ಇವ ನಮ್ಮವ ಇವ ನಮ್ಮವ’ ಎನ್ನುತ್ತಾ ಸಂಘಟನೆ ಮಾಡಿದರು” ಎನ್ನುತ್ತಾರೆ ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ.

“ಬುದ್ಧ, ಬಸವ, ಗಾಂಧಿ, ಅಂಬೇಡ್ಕರ್ ಥರದ ದೊಡ್ಡ ಪರಂಪರೆಯೇ ನಮ್ಮ ಹಿಂದೆ ಇದೆ. ಆದರೆ ಇತ್ತೀಚಿನ ರಾಜಕೀಯ, ಸಾಮಾಜಿಕ ಸ್ಥಿತ್ಯಂತರಗಳು ಜನಾಂಗ ಜನಾಂಗಗಳಲ್ಲಿ ವಿಷ ಬೀಜ ಬಿತ್ತಿವೆ. ಇದರಲ್ಲಿ ಎರಡೂ ಕಡೆಯ ಪಟ್ಟಭದ್ರರ ಸಂಚು ಇರುವುದನ್ನು ನಾವು ಮರೆಯುವಂತಿಲ್ಲ. ಯಾರೇ ತಪ್ಪು ಮಾಡಿದರೂ ಆಯಾ ಜನಾಂಗದವರು ನಿಷ್ಠುರವಾಗಿ, ನೇರವಾಗಿ ಹೇಳುವಂತಹ ಮನಸ್ಥಿತಿಯನ್ನು ಬೆಳೆಸಿಕೊಳ್ಳಬೇಕು. ನಮ್ಮ ಮನೆತನದವನು, ನಮ್ಮ ಜನಾಂಗದವನು, ನಮ್ಮ ಬಂಧು, ಅವನು ಏನೇ ತಪ್ಪು ಮಾಡಿದರೂ ನಡೆಯುತ್ತದೆ, ಅವನಿಗೆ ಬೆಂಬಲಿಸಬೇಕು ಎಂಬ ಮನಸ್ಥಿತಿಯಿಂದ ಮೊದಲು ಹೊರಬರಬೇಕು. ಅಂಥವರಿಗೆ ಸರಿಯಾದ ತಿಳಿವಳಿಕೆ ನೀಡಿ ಪರಿವರ್ತನೆ ಮಾಡುವ ಕೆಲಸ ಎರಡು ವರ್ಗಗಳಲ್ಲೂ ನಡೆಯಬೇಕು” ಎನ್ನುತ್ತಾರೆ ಶಿವಾಚಾರ್ಯರು.

ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ

“ಈ ನಾಡಿನಲ್ಲಿ ಎಲ್ಲಾ ವರ್ಗದ ಜನರೂ ಇದ್ದಾರೆ. ಒಬ್ಬೊಬ್ಬರು ಒಂದೊಂದು ಉದ್ಯೋಗವನ್ನು ಮಾಡುತ್ತಾ ಬಂದಿದ್ದಾರೆ. ಬಟ್ಟೆ ಹೊಲೆಯೋನೇ ಬೇರೆ, ಕ್ಷೌರ ಮಾಡೋರೋ ಬೇರೆ, ವ್ಯವಸಾಯ ಮಾಡೋರೇ ಬೇರೆ… ವೃತ್ತಿಯನ್ನು ಜಾತಿಯ ದೃಷ್ಟಿಯಲ್ಲಿ ನೋಡಲು ಸಾಧ್ಯವಿಲ್ಲ. ಆದರೆ ಈಗ ಆ ವೃತ್ತಿಗೂ ಜಾತಿಗೂ ಸಂಪರ್ಕವನ್ನು ಕಲ್ಪಿಸಿ ಸಮಾಜದಲ್ಲಿ ಕೋಲಾಹಲವನ್ನು ಸೃಷ್ಟಿ ಮಾಡುತ್ತಿದ್ದಾರೆ. ಜನರ ಮನಸ್ಸನ್ನು ಪರಿವರ್ತನೆ ಮಾಡಿ, ಒಗ್ಗಟ್ಟಾಗಿ ಹೋಗಬೇಕಾದ ತುರ್ತು ಅಗತ್ಯವಿದೆ” ಎನ್ನುತ್ತಾರೆ.

“ನಾವೆಲ್ಲ ವಿಜ್ಞಾನ, ವೈಚಾರಿಕ, ತಂತ್ರಜ್ಞಾನ ಯುಗದಲ್ಲಿ ಇದ್ದೇವೆ. ಬಹಿಷ್ಕಾರ ಹಾಕೋದು, ದೂರ ಇಡುವುದು ಅಮಾನವೀಯ. ಈ ರೀತಿ ಕೃತ್ಯಗಳು ಯಾವ ಜನಾಂಗದಲ್ಲೂ ನಡೆಯಬಾರದು ಎಂದು ಎರಡೂ ವರ್ಗದ ಜನರಿಗೆ ತಿಳಿಸಬೇಕು. ನಮಗೆ ಬೇಕಾಗಿರುವುದು ಘರ್ಷಣೆಯಲ್ಲ. ಶಾಂತಿ, ಸಮಾಧಾನ, ಸಂಘಟನೆ” ಎಂದು ತಿಳಿಹೇಳಿದರು.

******

ಚುನಾವಣೆಯೇ ಪ್ರಜಾಪ್ರಭುತ್ವದ ನಿರ್ಣಾಯಕ ಯುದ್ಧ: ಜ್ಞಾನಪ್ರಕಾಶ ಸ್ವಾಮೀಜಿ

“ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಸಂವಿಧಾನದ ಆದರ್ಶಗಳನ್ನು ಧೂಳಿಪಟ ಮಾಡಿ ವಸ್ತ್ರದ ಹೆಸರಲ್ಲಿ, ಆಹಾರದ ಹೆಸರಲ್ಲಿ, ಧರ್ಮದ ಹೆಸರಲ್ಲಿ ದೇಶವನ್ನು ನುಚ್ಚುನೂರು ಮಾಡುವ ಕೋಮುಶಕ್ತಿಗಳು ದೇಶದಾದ್ಯಂತ ಬೀಡುಬಿಟ್ಟಿವೆ. ಇಂತಹ ಪ್ರಕ್ಷುಬ್ಧತೆಯಲ್ಲಿ ಭಾರತದ ಅಖಂಡತೆ ಹಾಗೂ ಸಂವಿಧಾನವನ್ನು ಉಳಿಸಿಕೊಳ್ಳುವುದು ಎಲ್ಲರ ಜವಾಬ್ದಾರಿಯಾಗಿದೆ” ಎನ್ನುತ್ತಾರೆ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ.

“ಧರ್ಮಕ್ಕಿಂತ ದೇಶ ಮುಖ್ಯ. ದೇಶವಿಲ್ಲದಿದ್ದರೆ ಯಾವುದೇ ಜಾತಿ, ಧರ್ಮಗಳಿಂದ ಪ್ರಯೋಜನವಾಗದು ಎಂಬ ಜಾಗೃತಿಯನ್ನು ಮೂಡಿಸುವ ಕೆಲಸ ಜರೂರಾಗಿ ಆಗಬೇಕಿದೆ. ಅಡುಗೆ ಮನೆಯಲ್ಲಿರಬೇಕಾದ ಮಾಂಸ, ಇಂದು ಬೀದಿಗೆ ಬಂದಿದೆ. ವಸ್ತ್ರದ ಹೆಸರಲ್ಲಿ ಇಡೀ ದೇಶವನ್ನೇ ನಾಶ ಮಾಡುತ್ತಿದ್ದಾರೆ. ಮತಬ್ಯಾಂಕ್ ರಾಜಕಾರಣದಲ್ಲಿ ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ನಿಷ್ಕ್ರಿಯವಾಗಿವೆ. ಭಾರತದ ಬಹುತ್ವವನ್ನು ಕಾಪಾಡಬೇಕು; ತಮಟೆ ಭಾರಿಸಿದರೆ, ಕರಪತ್ರ ಹಂಚಿದರೆ, ಮನವಿಗಳನ್ನು ಕೊಟ್ಟರೆ ಸಾಲದು. ಪ್ರಜಾಪ್ರಭುತ್ವದ ಮೂರು ಅಂಗಗಳನ್ನೂ ಅವರ ಕೈಗೆ ಕೊಟ್ಟುಬಿಟ್ಟಿದ್ದೇವೆ. ಈಗ ಅವರು ಒದೆಯುತ್ತಿದ್ದಾರೆ ಎಂದರೆ ನಗೆಪಾಟಲಿನ ವಿಷಯ. ನಾವು ಇಡೀ ಮೈದಾನವನ್ನೇ ಖಾಲಿ ಮಾಡಿರುವುದರಿಂದ ಅವರು ಗೇಮ್ ಶುರುಮಾಡಿದ್ದಾರೆ” ಎಂದು ವಿಶ್ಲೇಷಿಸಿದರು.

“ಚುನಾವಣೆಗಳೇ ಪ್ರಜಾಪ್ರಭುತ್ವದ ನಿರ್ಣಾಯಕ ಯುದ್ಧ. ಇದನ್ನು ಎದುರಿಸುವಲ್ಲಿ ನಾವು ವಿಫಲರಾಗಿದ್ದೇವೆ. ಮತೀಯ ಶಕ್ತಿಗಳು ಇಡೀ ಸಂಪತ್ತನ್ನು, ಸಂಪನ್ಮೂಲವನ್ನು ವೃದ್ಧಿ ಮಾಡಿಕೊಂಡು ಉಳ್ಳವರಿಗೆ ದೇಶವನ್ನು ಮಾರಾಟ ಮಾಡುತ್ತಿವೆ. ಇಂತಹ ಸಂದರ್ಭದಲ್ಲಿ ಹಿಜಾಬ್, ಹಲಾಲ್ ಎಂದು ವಿಷಬೀಜ ಬಿತ್ತಲಾಗುತ್ತಿದೆ. ಪ್ರಜಾಪ್ರಭುತ್ವದ ರಕ್ಷಣೆಗಾಗಿ, ಕುವೆಂಪು, ಬುದ್ಧ, ಬಸವಣ್ಣ, ಬಾಬಾ ಸಾಹೇಬರ ಆಶಯಗಳನ್ನು ಉಳಿಸುವುದಕ್ಕಾಗಿ ಹಳ್ಳಿಹಳ್ಳಿಗಳಲ್ಲಿ ಮತಜಾಗೃತಿ ಅಭಿಯಾನವನ್ನು ಶುರುಮಾಡಬೇಕಾಗಿದೆ” ಎಂದು ಅಭಿಪ್ರಾಯಪಟ್ಟರು.

ಜ್ಞಾನಪ್ರಕಾಶ ಸ್ವಾಮೀಜಿ

“ಈ ದೇಶದ ಕಾರ್ಯಾಂಗ, ನ್ಯಾಯಾಂಗ, ಶಾಸಕಾಂಗ ಒಬ್ಬರ ಕೈಗೆ ಸಿಲುಕಿಕೊಂಡರೆ ಇಡೀ ದೇಶ ಸರ್ವನಾಶವಾಗುತ್ತದೆ ಎಂದು ಬಾಬಾ ಸಾಹೇಬರು ಹೇಳಿದ್ದರು. ಅದು ನಿಜವಾಗುತ್ತಿದೆ. ಇಂತಹ ಸಂದರ್ಭದಲ್ಲಿ ಭಾಷಣ, ವಿಚಾರಸಂಕಿರಣ ಮಾಡಿದರೆ ಪ್ರಯೋಜನವಿಲ್ಲ. ಹಳ್ಳಿಹಳ್ಳಿಗಳಲ್ಲಿ ಬೀಡುಬಿಡಬೇಕಾಗಿದೆ” ಎಂದು ಸಲಹೆ ನೀಡುತ್ತಾರೆ ಜ್ಞಾನಪ್ರಕಾಶ ಸ್ವಾಮೀಜಿ.

“ಇಡೀ ದೇಶದ ಹಿತವನ್ನು ನಿಮ್ಮ ಮತ ಕಾಪಾಡುತ್ತದೆಯೇ ಹೊರತು ಗುಡಿ, ಚರ್ಚು, ಮಸೀದಿ, ಆಹಾರ, ವಸ್ತ್ರವಲ್ಲ. ನಮ್ಮ ಮತವನ್ನು ಮಾರಿಕೊಂಡರೆ ಈ ದೇಶದ ಹಿತವನ್ನು ಯಾರು ಕಾಪಾಡಿಕೊಳ್ಳುತ್ತಾರೆ? ನಾವು ಬದ್ಧತೆಯಿಂದ ಕೆಲಸ ಮಾಡದಿದ್ದರೆ ದೇಶಕ್ಕೆ ಭದ್ರತೆ ಇರುವುದಿಲ್ಲ” ಎಂದು ಎಚ್ಚರಿಸಿದರು.

******

ಧಾರ್ಮಿಕ ಅಶಾಂತಿ ಸೃಷ್ಟಿಸಲು ದುರುಳರು ಪ್ರಯತ್ನಿಸುತ್ತಿರುವಾಗ ಅವರನ್ನು ಸರಿದಾರಿಗೆ ತರುವ ಕೆಲಸವನ್ನು ಧಾರ್ಮಿಕ ಪರಂಪರೆಯನ್ನು ಮುಂದುವರೆಸುತ್ತಿರುವ ಮಠಮಾನ್ಯಗಳು ಮತ್ತು ಅವುಗಳ ವಾರಸುದಾರರು ಮಾಡುವ ಅಗತ್ಯವಿರುತ್ತದೆ. ಆದರೆ ಅಂತಹ ದ್ವೇಷಕ್ಕೆ ತುಪ್ಪ ಸುರಿಯುವ ಕೆಲಸವನ್ನು ಕೆಲವು ಮಠಾಧೀಶರು ಮಾಡುತ್ತಿದ್ದರೆ, ಇನ್ನೂ ಕೆಲವರು ಮೈಮರೆತು ಕೂತಿದ್ದಾರೆ. ಇಂತಹ ಸಮಯದಲ್ಲಿ ಸಿದ್ಧರಾಮ ಸ್ವಾಮೀಜಿ, ಜ್ಞಾನಪ್ರಕಾಶ ಸ್ವಾಮೀಜಿ, ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಗಳಂತಹ ಪ್ರಗತಿಪರ ಸ್ವಾಮಿಗಳು ದ್ವೇಷದ ವಿದ್ಯಮಾನಗಳಿಗೆ ಪ್ರತಿರೋಧ ತೋರಿಸಿ ವಿವೇಕ ತರಲು ಪ್ರಯತ್ನಿಸುತ್ತಿರುವುದು ಶ್ಲಾಘನೀಯವಾದದ್ದು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others


ಇದನ್ನೂ ಓದಿ: ಭಾರತದ ಭಾವೈಕ್ಯತೆಯ ’ತಕ್ಕಡಿ’ಯಲ್ಲಿ ಭಿನ್ನ-ಭೇದವ ಮಾಡಬೇಡಿರೋ….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...