Homeಮುಖಪುಟದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದರು.

- Advertisement -
- Advertisement -

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಅತ್ಯಾಚಾರ ಎಸಗಿದ ಸಂದರ್ಭದಲ್ಲಿ ಬಾಲಕಿ ಉಸಿರುಗಟ್ಟಿದ್ದರಿಂದ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದ್ದು, ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಧೇ ಶ್ಯಾಮ್‌ ಹೇಳಿಕೆಯನ್ನು ಪಡೆದಿರುವ ಪೊಲಿಸರು, “ರಾಧೇ ಶ್ಯಾಮ್‌ ಈ ಹಿಂದೆಯೂ ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದ” ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು (ಶ್ಯಾಮ್, ಕುಲ್‌ದೀಪ್‌ ಸಿಂಗ್, ಲಕ್ಷ್ಮಿನಾರಾಯಣ್ ಮತ್ತು ಸಲೀಂ ಅಹಮದ್‌) ಆಗಸ್ಟ್ 2ರಂದು ಪೊಲೀಸರು ಬಂದಿಸಿದ್ದರು. ಶ್ಯಾಮ್‌ ಪೂಜಾರಿಯಾಗಿದ್ದು, ಇನ್ನುಳಿದ ಆರೋಪಿಗಳು ಕೊಲೆಯಾದ ಬಾಲಕಿಯ ತಾಯಿಗೆ ಪರಿಚಯಸ್ಥರಾಗಿದ್ದರು.

ಅತ್ಯಾಚಾರ, ಕೊಲೆ ಹಾಗೂ ಸಾಕ್ಷ್ಯನಾಶ ಮಾಡಿದ್ದಾರೆ ಎಂದು ನಾಲ್ವರ ಮೇಲೂ ಜಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪರಿಶಿಷ್ಟರ ಮೇಲೆ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ದೋಷಾರೋಪ ಪಟ್ಟಿ ಮಾಡಲಾಗಿದೆ.

ಪೊಲೀಸರು ಆರೋಪಿಗಳ ಬಹಿರಂಗ ಹೇಳಿಕೆಗಳು, ಸಾರ್ವಜನಿಕ ಸಾಕ್ಷಿಗಳು ಮತ್ತು ಸಿಸಿಟಿವಿ ಕ್ಯಾಮೆರಾ ತುಣುಕನ್ನು ಅವಲಂಬಿಸಿ ಪೊಲೀಸರು ಜಾರ್ಜ್‌‌ಶೀಟ್ ರೂಪಿಸಿದ್ದಾರೆ.

ಇದನ್ನೂ ಓದಿ:  ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಸ್ಮಶಾನದಲ್ಲಿ ನೀರು ತರಲೆಂದು ಬಾಲಕಿ ಹೋದಾಗ ಅತ್ಯಾಚಾರ ನಡೆದಿದೆ. ಅತ್ಯಾಚಾರ ಎಸಗಿದಾಗ ಶ್ಯಾಮ್‌, ಬಾಲಕಿಯ ಬಾಯಿಯನ್ನು ಬಿಗಿಹಿಡಿದಿದ್ದರಿಂದ ಸಾವು ಸಂಭವಿಸಿದೆ. ಅತ್ಯಾಚಾರ ಎಸಗುವಾಗ ಕುಲದೀಪ್‌ ಸಿಂಗ್‌ ಬಾಲಕಿಯ ಕೈಗಳನ್ನು ಹಿಡಿದಿದ್ದನು. ಶ್ಯಾಮ್‌ ಮತ್ತು ಸಿಂಗ್‌ ಅತ್ಯಾಚಾರ ಎಸಗುವಾಗ ಅಹಮದ್‌ನನ್ನು ಜಿಲೇಬಿ ತರಲು ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯು ಉಸಿರಾಡುವುದನ್ನು ನಿಲ್ಲಿಸಿದ ನಂತರ ಆರೋಪಿಯು ಗಲಿಬಿಲಿಗೊಂಡನು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದು, ‘ವಿದ್ಯುತ್ ತಂತಿ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಪೋಷಕರು ನಂಬುವಂತೆ ಮಾಡಲು ಆರೋಪಿಗಳು ಬಾಲಕಿಯ ದೇಹದ ಮೇಲೆ ನೀರು ಸುರಿದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್‌ ತಾನು ಪೋರ್ನ್‌ ವಿಡಿಯೊಗಳನ್ನು ನೋಡಲು ಬಳಸುತ್ತಿದ್ದ ಮೊಬೈಲ್‌ ಹಾಗೂ ಅತ್ಯಾಚಾರಕ್ಕೆ ಬಳಕೆಯಾಗಿದ್ದ ಬೆಡ್‌ಶೀಟ್‌ಅನ್ನು ಸ್ಮಶಾನದಲ್ಲಿ ಬೆಂಕಿ ಹಾಕುವ ಮೂಲಕ ಸಾಕ್ಷ್ಯಾನಾಶಕ್ಕೆ ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯ ಪೋಷಕರನ್ನು ಬೆದರಿಸಿದ್ದಾರೆ. ಅವರ ಬಡತನ, ಅನಕ್ಷರತೆ, ಜಾತಿಯ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಬಾಲಕಿಯನ್ನು ಬಲವಂತವಾಗಿ ಸುಟ್ಟಿದ್ದಾನೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸೆ.29ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...