Homeಮುಖಪುಟದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದರು.

- Advertisement -
- Advertisement -

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಅತ್ಯಾಚಾರ ಎಸಗಿದ ಸಂದರ್ಭದಲ್ಲಿ ಬಾಲಕಿ ಉಸಿರುಗಟ್ಟಿದ್ದರಿಂದ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದ್ದು, ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಧೇ ಶ್ಯಾಮ್‌ ಹೇಳಿಕೆಯನ್ನು ಪಡೆದಿರುವ ಪೊಲಿಸರು, “ರಾಧೇ ಶ್ಯಾಮ್‌ ಈ ಹಿಂದೆಯೂ ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದ” ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು (ಶ್ಯಾಮ್, ಕುಲ್‌ದೀಪ್‌ ಸಿಂಗ್, ಲಕ್ಷ್ಮಿನಾರಾಯಣ್ ಮತ್ತು ಸಲೀಂ ಅಹಮದ್‌) ಆಗಸ್ಟ್ 2ರಂದು ಪೊಲೀಸರು ಬಂದಿಸಿದ್ದರು. ಶ್ಯಾಮ್‌ ಪೂಜಾರಿಯಾಗಿದ್ದು, ಇನ್ನುಳಿದ ಆರೋಪಿಗಳು ಕೊಲೆಯಾದ ಬಾಲಕಿಯ ತಾಯಿಗೆ ಪರಿಚಯಸ್ಥರಾಗಿದ್ದರು.

ಅತ್ಯಾಚಾರ, ಕೊಲೆ ಹಾಗೂ ಸಾಕ್ಷ್ಯನಾಶ ಮಾಡಿದ್ದಾರೆ ಎಂದು ನಾಲ್ವರ ಮೇಲೂ ಜಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪರಿಶಿಷ್ಟರ ಮೇಲೆ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ದೋಷಾರೋಪ ಪಟ್ಟಿ ಮಾಡಲಾಗಿದೆ.

ಪೊಲೀಸರು ಆರೋಪಿಗಳ ಬಹಿರಂಗ ಹೇಳಿಕೆಗಳು, ಸಾರ್ವಜನಿಕ ಸಾಕ್ಷಿಗಳು ಮತ್ತು ಸಿಸಿಟಿವಿ ಕ್ಯಾಮೆರಾ ತುಣುಕನ್ನು ಅವಲಂಬಿಸಿ ಪೊಲೀಸರು ಜಾರ್ಜ್‌‌ಶೀಟ್ ರೂಪಿಸಿದ್ದಾರೆ.

ಇದನ್ನೂ ಓದಿ:  ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಸ್ಮಶಾನದಲ್ಲಿ ನೀರು ತರಲೆಂದು ಬಾಲಕಿ ಹೋದಾಗ ಅತ್ಯಾಚಾರ ನಡೆದಿದೆ. ಅತ್ಯಾಚಾರ ಎಸಗಿದಾಗ ಶ್ಯಾಮ್‌, ಬಾಲಕಿಯ ಬಾಯಿಯನ್ನು ಬಿಗಿಹಿಡಿದಿದ್ದರಿಂದ ಸಾವು ಸಂಭವಿಸಿದೆ. ಅತ್ಯಾಚಾರ ಎಸಗುವಾಗ ಕುಲದೀಪ್‌ ಸಿಂಗ್‌ ಬಾಲಕಿಯ ಕೈಗಳನ್ನು ಹಿಡಿದಿದ್ದನು. ಶ್ಯಾಮ್‌ ಮತ್ತು ಸಿಂಗ್‌ ಅತ್ಯಾಚಾರ ಎಸಗುವಾಗ ಅಹಮದ್‌ನನ್ನು ಜಿಲೇಬಿ ತರಲು ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯು ಉಸಿರಾಡುವುದನ್ನು ನಿಲ್ಲಿಸಿದ ನಂತರ ಆರೋಪಿಯು ಗಲಿಬಿಲಿಗೊಂಡನು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದು, ‘ವಿದ್ಯುತ್ ತಂತಿ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಪೋಷಕರು ನಂಬುವಂತೆ ಮಾಡಲು ಆರೋಪಿಗಳು ಬಾಲಕಿಯ ದೇಹದ ಮೇಲೆ ನೀರು ಸುರಿದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್‌ ತಾನು ಪೋರ್ನ್‌ ವಿಡಿಯೊಗಳನ್ನು ನೋಡಲು ಬಳಸುತ್ತಿದ್ದ ಮೊಬೈಲ್‌ ಹಾಗೂ ಅತ್ಯಾಚಾರಕ್ಕೆ ಬಳಕೆಯಾಗಿದ್ದ ಬೆಡ್‌ಶೀಟ್‌ಅನ್ನು ಸ್ಮಶಾನದಲ್ಲಿ ಬೆಂಕಿ ಹಾಕುವ ಮೂಲಕ ಸಾಕ್ಷ್ಯಾನಾಶಕ್ಕೆ ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯ ಪೋಷಕರನ್ನು ಬೆದರಿಸಿದ್ದಾರೆ. ಅವರ ಬಡತನ, ಅನಕ್ಷರತೆ, ಜಾತಿಯ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಬಾಲಕಿಯನ್ನು ಬಲವಂತವಾಗಿ ಸುಟ್ಟಿದ್ದಾನೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸೆ.29ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...

ಕೊಲ್ಕತ್ತಾದ 26 ಲಕ್ಷ ಮತದಾರರ ಹೆಸರು 2002 ರ ಪಟ್ಟಿಗೆ ಹೊಂದಿಕೆಯಾಗುತ್ತಿಲ್ಲ: ಮುಖ್ಯ ಚುನಾವಣಾ ಅಧಿಕಾರಿ

ಕೋಲ್ಕತ್ತಾ ಮತ್ತು ಸುತ್ತಮುತ್ತಲಿನ ಹಲವಾರು ವಿಧಾನಸಭಾ ಕ್ಷೇತ್ರಗಳ ಮತದಾರರ ಹೆಸರುಗಳು 2002 ರ ಮತದಾರರ ಪಟ್ಟಿಯಲ್ಲಿರುವ ನಮೂದುಗಳಿಗೆ ಹೊಂದಿಕೆಯಾಗುತ್ತಿಲ್ಲ ಎಂದು ಮುಖ್ಯ ಚುನಾವಣಾ ಅಧಿಕಾರಿ ಮನೋಜ್ ಕುಮಾರ್ ಅಗರ್ವಾಲ್ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ...