Homeಮುಖಪುಟದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದರು.

- Advertisement -
- Advertisement -

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಅತ್ಯಾಚಾರ ಎಸಗಿದ ಸಂದರ್ಭದಲ್ಲಿ ಬಾಲಕಿ ಉಸಿರುಗಟ್ಟಿದ್ದರಿಂದ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದ್ದು, ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಧೇ ಶ್ಯಾಮ್‌ ಹೇಳಿಕೆಯನ್ನು ಪಡೆದಿರುವ ಪೊಲಿಸರು, “ರಾಧೇ ಶ್ಯಾಮ್‌ ಈ ಹಿಂದೆಯೂ ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದ” ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು (ಶ್ಯಾಮ್, ಕುಲ್‌ದೀಪ್‌ ಸಿಂಗ್, ಲಕ್ಷ್ಮಿನಾರಾಯಣ್ ಮತ್ತು ಸಲೀಂ ಅಹಮದ್‌) ಆಗಸ್ಟ್ 2ರಂದು ಪೊಲೀಸರು ಬಂದಿಸಿದ್ದರು. ಶ್ಯಾಮ್‌ ಪೂಜಾರಿಯಾಗಿದ್ದು, ಇನ್ನುಳಿದ ಆರೋಪಿಗಳು ಕೊಲೆಯಾದ ಬಾಲಕಿಯ ತಾಯಿಗೆ ಪರಿಚಯಸ್ಥರಾಗಿದ್ದರು.

ಅತ್ಯಾಚಾರ, ಕೊಲೆ ಹಾಗೂ ಸಾಕ್ಷ್ಯನಾಶ ಮಾಡಿದ್ದಾರೆ ಎಂದು ನಾಲ್ವರ ಮೇಲೂ ಜಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪರಿಶಿಷ್ಟರ ಮೇಲೆ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ದೋಷಾರೋಪ ಪಟ್ಟಿ ಮಾಡಲಾಗಿದೆ.

ಪೊಲೀಸರು ಆರೋಪಿಗಳ ಬಹಿರಂಗ ಹೇಳಿಕೆಗಳು, ಸಾರ್ವಜನಿಕ ಸಾಕ್ಷಿಗಳು ಮತ್ತು ಸಿಸಿಟಿವಿ ಕ್ಯಾಮೆರಾ ತುಣುಕನ್ನು ಅವಲಂಬಿಸಿ ಪೊಲೀಸರು ಜಾರ್ಜ್‌‌ಶೀಟ್ ರೂಪಿಸಿದ್ದಾರೆ.

ಇದನ್ನೂ ಓದಿ:  ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಸ್ಮಶಾನದಲ್ಲಿ ನೀರು ತರಲೆಂದು ಬಾಲಕಿ ಹೋದಾಗ ಅತ್ಯಾಚಾರ ನಡೆದಿದೆ. ಅತ್ಯಾಚಾರ ಎಸಗಿದಾಗ ಶ್ಯಾಮ್‌, ಬಾಲಕಿಯ ಬಾಯಿಯನ್ನು ಬಿಗಿಹಿಡಿದಿದ್ದರಿಂದ ಸಾವು ಸಂಭವಿಸಿದೆ. ಅತ್ಯಾಚಾರ ಎಸಗುವಾಗ ಕುಲದೀಪ್‌ ಸಿಂಗ್‌ ಬಾಲಕಿಯ ಕೈಗಳನ್ನು ಹಿಡಿದಿದ್ದನು. ಶ್ಯಾಮ್‌ ಮತ್ತು ಸಿಂಗ್‌ ಅತ್ಯಾಚಾರ ಎಸಗುವಾಗ ಅಹಮದ್‌ನನ್ನು ಜಿಲೇಬಿ ತರಲು ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯು ಉಸಿರಾಡುವುದನ್ನು ನಿಲ್ಲಿಸಿದ ನಂತರ ಆರೋಪಿಯು ಗಲಿಬಿಲಿಗೊಂಡನು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದು, ‘ವಿದ್ಯುತ್ ತಂತಿ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಪೋಷಕರು ನಂಬುವಂತೆ ಮಾಡಲು ಆರೋಪಿಗಳು ಬಾಲಕಿಯ ದೇಹದ ಮೇಲೆ ನೀರು ಸುರಿದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್‌ ತಾನು ಪೋರ್ನ್‌ ವಿಡಿಯೊಗಳನ್ನು ನೋಡಲು ಬಳಸುತ್ತಿದ್ದ ಮೊಬೈಲ್‌ ಹಾಗೂ ಅತ್ಯಾಚಾರಕ್ಕೆ ಬಳಕೆಯಾಗಿದ್ದ ಬೆಡ್‌ಶೀಟ್‌ಅನ್ನು ಸ್ಮಶಾನದಲ್ಲಿ ಬೆಂಕಿ ಹಾಕುವ ಮೂಲಕ ಸಾಕ್ಷ್ಯಾನಾಶಕ್ಕೆ ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯ ಪೋಷಕರನ್ನು ಬೆದರಿಸಿದ್ದಾರೆ. ಅವರ ಬಡತನ, ಅನಕ್ಷರತೆ, ಜಾತಿಯ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಬಾಲಕಿಯನ್ನು ಬಲವಂತವಾಗಿ ಸುಟ್ಟಿದ್ದಾನೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸೆ.29ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...