Homeಮುಖಪುಟದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

ದಲಿತ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ದೆಹಲಿ ಪೊಲೀಸರ ಚಾರ್ಜ್‌ಶೀಟ್‌‌ ಹೇಳುವುದೇನು?

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದರು.

- Advertisement -
- Advertisement -

9 ವರ್ಷದ ದಲಿತ ಬಾಲಕಿಯ ಮೇಲೆ ಭೀಕರವಾಗಿ ಅತ್ಯಾಚಾರ ನಡೆಸಿ, ಬಾಲಕಿಯನ್ನು ಸಾಯಿಸಿದ್ದಷ್ಟೇ ಅಲ್ಲದೇ, ಅತ್ಯಾಚಾರದ ಆರೋಪಿಗಳು ಬಲವಂತವಾಗಿ ಅಂತ್ಯಸಂಸ್ಕಾರ ನಡೆಸಿದ್ದ ಘಟನೆಗೆ ದೇಶದ ರಾಜಧಾನಿ ದೆಹಲಿ ಸಾಕ್ಷಿಯಾಗಿತ್ತು. ದೆಹಲಿಯ ಕಂಟೋನ್ಮೇಟ್‌ ಪ್ರದೇಶದಲ್ಲಿ, ಆಗಸ್ಟ್‌ 1ರಂದು ಘಟನೆ ನಡೆದಿತ್ತು. ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಂಡಿದ್ದ ದೆಹಲಿ ಪೊಲೀಸರು, ಇದೇ ಮೊದಲ ಬಾರಿಗೆ ಬಾಲಕಿಯ ಸಾವಿನ ಕಾರಣವನ್ನು ನ್ಯಾಯಾಲಯಕ್ಕೆ ತಿಳಿಸಿದ್ದು, ಚಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ.

ಅತ್ಯಾಚಾರ ಎಸಗಿದ ಸಂದರ್ಭದಲ್ಲಿ ಬಾಲಕಿ ಉಸಿರುಗಟ್ಟಿದ್ದರಿಂದ ಸಾವನ್ನಪ್ಪಿರುವುದಾಗಿ ಪೊಲೀಸರು ತಿಳಿಸಿದ್ದಾರೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಲಾಗಿದ್ದು, ಮುಖ್ಯ ಆರೋಪಿ, ಪೂಜಾರಿ ರಾಧೆ ಶ್ಯಾಮ್ ಈ ಹಿಂದೆಯೂ ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ರಾಧೇ ಶ್ಯಾಮ್‌ ಹೇಳಿಕೆಯನ್ನು ಪಡೆದಿರುವ ಪೊಲಿಸರು, “ರಾಧೇ ಶ್ಯಾಮ್‌ ಈ ಹಿಂದೆಯೂ ಬಾಲಕಿಗೆ ಲೈಂಗಿಕ ಸಂದೇಶಗಳನ್ನು ಕಳುಹಿಸಿದ್ದ, ಅಶ್ಲೀಲ ವಿಡಿಯೋಗಳನ್ನು ತೋರಿಸಿ ಪ್ರಚೋದಿಸಲು ಯತ್ನಿಸಿದ್ದ” ಎಂದು ದೋಷಾರೋಪ ಪಟ್ಟಿಯಲ್ಲಿ ಹೇಳಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು (ಶ್ಯಾಮ್, ಕುಲ್‌ದೀಪ್‌ ಸಿಂಗ್, ಲಕ್ಷ್ಮಿನಾರಾಯಣ್ ಮತ್ತು ಸಲೀಂ ಅಹಮದ್‌) ಆಗಸ್ಟ್ 2ರಂದು ಪೊಲೀಸರು ಬಂದಿಸಿದ್ದರು. ಶ್ಯಾಮ್‌ ಪೂಜಾರಿಯಾಗಿದ್ದು, ಇನ್ನುಳಿದ ಆರೋಪಿಗಳು ಕೊಲೆಯಾದ ಬಾಲಕಿಯ ತಾಯಿಗೆ ಪರಿಚಯಸ್ಥರಾಗಿದ್ದರು.

ಅತ್ಯಾಚಾರ, ಕೊಲೆ ಹಾಗೂ ಸಾಕ್ಷ್ಯನಾಶ ಮಾಡಿದ್ದಾರೆ ಎಂದು ನಾಲ್ವರ ಮೇಲೂ ಜಾರ್ಜ್‌‌ಶೀಟ್‌ ಸಲ್ಲಿಕೆಯಾಗಿದೆ. ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಪರಿಶಿಷ್ಟರ ಮೇಲೆ ಜಾತಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲೂ ದೋಷಾರೋಪ ಪಟ್ಟಿ ಮಾಡಲಾಗಿದೆ.

ಪೊಲೀಸರು ಆರೋಪಿಗಳ ಬಹಿರಂಗ ಹೇಳಿಕೆಗಳು, ಸಾರ್ವಜನಿಕ ಸಾಕ್ಷಿಗಳು ಮತ್ತು ಸಿಸಿಟಿವಿ ಕ್ಯಾಮೆರಾ ತುಣುಕನ್ನು ಅವಲಂಬಿಸಿ ಪೊಲೀಸರು ಜಾರ್ಜ್‌‌ಶೀಟ್ ರೂಪಿಸಿದ್ದಾರೆ.

ಇದನ್ನೂ ಓದಿ:  ದಲಿತರ ಮಗಳು ಕೂಡ ದೇಶದ ಮಗಳು: ದೆಹಲಿ ಅತ್ಯಾಚಾರ ಕೊಲೆಗೆ ರಾಹುಲ್ ಗಾಂಧಿ ಆಕ್ರೋಶ

ಸ್ಮಶಾನದಲ್ಲಿ ನೀರು ತರಲೆಂದು ಬಾಲಕಿ ಹೋದಾಗ ಅತ್ಯಾಚಾರ ನಡೆದಿದೆ. ಅತ್ಯಾಚಾರ ಎಸಗಿದಾಗ ಶ್ಯಾಮ್‌, ಬಾಲಕಿಯ ಬಾಯಿಯನ್ನು ಬಿಗಿಹಿಡಿದಿದ್ದರಿಂದ ಸಾವು ಸಂಭವಿಸಿದೆ. ಅತ್ಯಾಚಾರ ಎಸಗುವಾಗ ಕುಲದೀಪ್‌ ಸಿಂಗ್‌ ಬಾಲಕಿಯ ಕೈಗಳನ್ನು ಹಿಡಿದಿದ್ದನು. ಶ್ಯಾಮ್‌ ಮತ್ತು ಸಿಂಗ್‌ ಅತ್ಯಾಚಾರ ಎಸಗುವಾಗ ಅಹಮದ್‌ನನ್ನು ಜಿಲೇಬಿ ತರಲು ಕಳುಹಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಮಶಾನದಲ್ಲಿ ವಾಟರ್ ಕೂಲರ್‌ನಿಂದ ನೀರು ತರುವಾಗ ವಿದ್ಯುತ್ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಯು ಬಾಲಕಿಯ ತಾಯಿಗೆ ಹೇಳಿ‍ದ್ದನು. ಆದಾಗ್ಯೂ, ವಾಟರ್ ಕೂಲರ್‌ನಲ್ಲಿ “ವಿದ್ಯುತ್ ಪ್ರವಾಹ” ಇಲ್ಲದ ಕಾರಣ ವಿದ್ಯುತ್ ಆಘಾತಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಬಾಲಕಿಯು ಉಸಿರಾಡುವುದನ್ನು ನಿಲ್ಲಿಸಿದ ನಂತರ ಆರೋಪಿಯು ಗಲಿಬಿಲಿಗೊಂಡನು ಎಂದು ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದ್ದು, ‘ವಿದ್ಯುತ್ ತಂತಿ ತಗುಲಿ ಆಕೆ ಸಾವನ್ನಪ್ಪಿದ್ದಾಳೆ ಎಂದು ಆಕೆಯ ಪೋಷಕರು ನಂಬುವಂತೆ ಮಾಡಲು ಆರೋಪಿಗಳು ಬಾಲಕಿಯ ದೇಹದ ಮೇಲೆ ನೀರು ಸುರಿದಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ಯಾಮ್‌ ತಾನು ಪೋರ್ನ್‌ ವಿಡಿಯೊಗಳನ್ನು ನೋಡಲು ಬಳಸುತ್ತಿದ್ದ ಮೊಬೈಲ್‌ ಹಾಗೂ ಅತ್ಯಾಚಾರಕ್ಕೆ ಬಳಕೆಯಾಗಿದ್ದ ಬೆಡ್‌ಶೀಟ್‌ಅನ್ನು ಸ್ಮಶಾನದಲ್ಲಿ ಬೆಂಕಿ ಹಾಕುವ ಮೂಲಕ ಸಾಕ್ಷ್ಯಾನಾಶಕ್ಕೆ ಯತ್ನಿಸಿದ್ದಾನೆ.

ಆರೋಪಿಯು ಬಾಲಕಿಯ ಪೋಷಕರನ್ನು ಬೆದರಿಸಿದ್ದಾರೆ. ಅವರ ಬಡತನ, ಅನಕ್ಷರತೆ, ಜಾತಿಯ ಸ್ಥಿತಿಯನ್ನು ದುರ್ಬಳಕೆ ಮಾಡಿಕೊಂಡು ಬಾಲಕಿಯನ್ನು ಬಲವಂತವಾಗಿ ಸುಟ್ಟಿದ್ದಾನೆ ಎಂದು ಆರೋಪ ಪಟ್ಟಿಯಲ್ಲಿ ತಿಳಿಸಲಾಗಿದೆ ಎಂದು ಇಂಡಿಯನ್‌ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಸೆ.29ರಂದು ಕೋರ್ಟ್‌ ವಿಚಾರಣೆ ನಡೆಸಲಿದೆ.


ಇದನ್ನೂ ಓದಿ: ಹೆಣ್ಣು ಮಕ್ಕಳ ಆಕ್ರಂದನ ಕೇಳುತ್ತಿಲ್ಲವೇ? ದೆಹಲಿಯ ದಲಿತ ಬಾಲಕಿ ಮೇಲಿನ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...