HomeಮುಖಪುಟNPR ಕುರಿತು ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖ್ಯಾತ ಚಿಂತಕ ಶಿವಸುಂದರ್ ಏನು ಹೇಳುತ್ತಾರೆ??

NPR ಕುರಿತು ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖ್ಯಾತ ಚಿಂತಕ ಶಿವಸುಂದರ್ ಏನು ಹೇಳುತ್ತಾರೆ??

"ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ" ಎಂಬ ಗೃಹಮಂತ್ರಿಗಳ ಹೇಳಿಕೆ ಹೇಗಾದರೂ ಮಾಡಿ ಜನರನ್ನು NPRಗೆ ಒಪ್ಪಿಸಿ "ಪೌರತ್ವ ಪರಿಶೀಲನೆಯ" ಉರುಳಿಗೆ ತಾವೇ ಸಿಕ್ಕಿಹಾಕಿಕೊಳ್ಳುವಂತೆ ಮಾಡುವ ದುರುದ್ದೇಶವನ್ನು ಹೊಂದಿದೆ..

- Advertisement -
- Advertisement -

ನಿನ್ನೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾರವರು NPRಗೆ ದಾಖಲೆ ತೋರಿಸಬೇಕಿಲ್ಲ. ನಿಮಗೆ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ. ನಿಮ್ಮನ್ನು ಡೌಟ್‌ಫುಲ್‌ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಹಲವು ವಯಲಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಖ್ಯಾತ ಚಿಂತಕ ಮತ್ತು ಹೋರಾಟಗಾರ ಶಿವಸುಂದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಪೌರತ್ವ ನೊಂದಣಿ ಹಾಗು ಎನ್ ಪಿ ಆರ್ ಬಗ್ಗೆ ಗೃಹಮಂತ್ರಿ ಅಮಿತ್ ಷಾ ರಾಜ್ಯ ಸಭೆಯಲ್ಲಿ ಗಳಹಿದ ಸುಳ್ಳುಗಳ ಕುರಿತು :

NPR-NRC- CAAಗಳ ವಿರುದ್ಧ ದೇಶಾದ್ಯಂತ ಜನರು ರಾಜಿಯಿಲ್ಲದ ಹೋರಾಟ ನಡೆಸುತ್ತಿರುವುದರಿದ ಕಂಗೆಟ್ಟಿರುವ ಮೊ-ಷಾ ಸರ್ಕಾರ ಸುಳ್ಳುಗಳನ್ನು ಹೇಳುವ ಮೂಲಕ ಹೋರಾಟವನ್ನು ದಾರಿ ತಪ್ಪಿಸುವ ಹುನ್ನಾರ ನಡೆಸಿದೆ. ನಿನ್ನೆ ರಾಜ್ಯಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ ನೀಡಿರುವ ಹೇಳಿಕೆಗಳು ಅದಕ್ಕೆ ತಾಜಾ ಉದಾಹರಣೆ. ಆದ್ದರಿಂದ ದೇಶದ ಜನತೆ ಗೃಹಮಂತ್ರಿಯವರ ಹೇಳಿಕೆಯಲ್ಲಿರುವ ಈ ಕೆಳಗಿನ ಸುಳ್ಳುಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

ಸುಳ್ಳು-1- NPR ಮಾಹಿತಿ ಸಂಗ್ರಹಣೆ ಹಂತದಲ್ಲಿ ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ.

ವಾಸ್ತವ : NPR ಮಾಡುತ್ತಿರುವುದೇ ದೇಶದ ಎಲ್ಲಾ ಜನರ ಪೌರತ್ವವನ್ನು ಪರೀಕ್ಷಿಸಲು. ಅದ್ಕಕೆಂದೇ ಪ್ರತಿಯೊಬ್ಬ ಪೌರನ ತಂದೆ ಮತ್ತು ತಾಯಿಯರ ಹುಟ್ಟಿದ ದಿನ ಹಾಗು ಸ್ಥಳದ ಮಾಹಿತಿಯನ್ನು ನಿರ್ದಿಷ್ಟವಾಗಿ ಕೇಳಲಾಗುತ್ತದೆ. ಅದಕ್ಕೆ ಕೊಟ್ಟ ಉತ್ತರವನ್ನು ಆಧರಿಸಿಯೇ ದೇಶದ ಜನರ ಪೌರತ್ವವು ಪರೀಕ್ಷೆಗೆ ಒಳಪಡುತ್ತದೆ.

NPR ಮತ್ತು NRC ಗಳ ಹುಟ್ಟಿಗೆ ಕಾರಣವಾದ Citizenship (Registration Of Citizens and Issue Of National Identity Cards) Rules 2003ದ ಉಪನಿಯಮ 4 (1)ರ ಪ್ರಕಾರ – ಕೇಂದ್ರ ಸರ್ಕಾರವು ಒಂದು ರಾಷ್ಟ್ರೀಯ ಪೌರತ್ವ ನೊಂದಣಿ ಪಟ್ಟಿಯನ್ನು ತಯಾರಿಸುವ ಸಲುವಾಗಿ ದೇಶದಲ್ಲಿ ವಾಸಿಸುತ್ತಿರುವ ಎಲ್ಲಾ ವ್ಯಕ್ತಿಗಳ ಮತ್ತು ಕುಟುಂಬಗಳ ಪೌರತ್ವ ವಿವರಗಳನ್ನೂ ಒಳಗೊಂಡಂತೆ ಅಗತ್ಯವಿರುವ ಎಲ್ಲಾ ವಿವರಗಳನ್ನು ದೇಶಾದ್ಯಂತ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬಹುದು .

ಉಪನಿಯಮ 4 (3) ರ ಪ್ರಕಾರ – ಸ್ಥಳೀಯ ಮಟ್ಟದ ರಾಷ್ಟ್ರೀಯ ನಾಗರಿಕರ ಪಟ್ಟಿಯನ್ನು ತಯಾರಿಸುವ ಸಲುವಾಗಿ NPR ನಲ್ಲಿ ಸಂಗ್ರಹಿಸಲಾದ ವ್ಯಕ್ತಿಗಳ ಮತ್ತು ಕುಟುಂಬಗಳ ವಿವರಗಳನ್ನು ಸ್ಥಳೀಯ ನಾಗರಿಕ ನೊಂದಣಿ ರಿಜಿಸ್ಟ್ರಾರ್ (ಅಂದರೆ ಸ್ಥಳೀಯ ತಹಸೀಲ್ದಾರರು) VERIFY AND SCRUTINIZE ಅಂದರೆ ಪರೀಕ್ಷಿಸಿ ಪರಿಶೀಲಿಸುತ್ತಾರೆ.

ಉಪನಿಯಮ 4 (4) ರ ಪ್ರಕಾರ – ಈ ಪರಿಶೀಲನಾ ಹಂತದಲ್ಲಿ ಯಾವುದಾದರೂ ವ್ಯಕ್ತಿಯ ಪೌರತ್ವ ಸಂಬಂಧಿ ವಿವರಗಳು ಸಂಶಯಾಸ್ಪದವಾಗಿ ಕಂಡುಬಂದಲ್ಲಿ ಮತ್ತಷ್ಟು ಪರಿಶೀಲನೆ ಮಾಡಲು NPR ಪಟ್ಟಿಯಲ್ಲಿರುವ ಆ ವ್ಯಕ್ತಿಯ ಹೆಸರಿನ ಮುಂದೆ ಸ್ಥಳೀಯ ರಿಜಿಸ್ಟ್ರಾರ್ ಅವರು ಸೂಕ್ತ ಟಿಪ್ಪಣಿಗಳನ್ನು ದಾಖಲಿಸುತ್ತಾರೆ ಮತ್ತು ಪರಿಶೀಲನೆ ಪೂರ್ಣಗೊಂಡ ನಂತರ ಅನುಮಾನಾಸ್ಪದವಾದ ಪೌರತ್ವವೆಂದು ಕಂಡುಬಂದಲ್ಲಿ ಸೂಕ್ತವಾದ ನಮೂನೆಯಲ್ಲಿ ಆ ವ್ಯಕ್ತಿಗಳಿಗೆ ಅಥವಾ ಕುಟುಂಬಗಳಿಗೆ ತಿಳಿಸುತ್ತಾರೆ.

ಉಪನಿಯಮ 7 ((2) ರ ಪ್ರಕಾರ- ತನ್ನ ಕುಟುಂಬಕ್ಕೆ ಸಂಬಂಧಪಟ್ಟ NPR ಪ್ರಶ್ನಾವಳಿಗಳಿಗೆ ಸರಿಯಾದ ಉತ್ತರ ಕೊಡುವುದು ಕುಟುಂಬದ ಮುಖ್ಯಸ್ಥನ ಜವಾಬ್ದಾರಿಯಾಗಿದೆ.

ಇದು ಹಾಲಿ ಇರುವ ನಿಯಮಾವಳಿಗಳು. ಇದಕ್ಕೆ ಈವರೆಗೆ ಸರ್ಕಾರ ಯಾವುದೇ ತಿದ್ದುಪಡಿ ಮಾಡಿಲ್ಲ.

ಹಾಗೂ NPR ಪ್ರಕ್ರಿಯೆಯಲ್ಲಿ ಉತ್ತರ ಇಲ್ಲದಿರುವುದು ಮತ್ತು ಕೊಡದಿರುವುದು ನಮ್ಮ ಪೌರತ್ವವನ್ನೇ ಪ್ರಶ್ನೆಗೊಳಪಡಿಸುತ್ತದೆ.

ಆದ್ದರಿಂದ “ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ” ಎಂಬ ಗೃಹಮಂತ್ರಿಗಳ ಹೇಳಿಕೆ ಹೇಗಾದರೂ ಮಾಡಿ ಜನರನ್ನು NPRಗೆ ಒಪ್ಪಿಸಿ “ಪೌರತ್ವ ಪರಿಶೀಲನೆಯ” ಉರುಳಿಗೆ ತಾವೇ ಸಿಕ್ಕಿಹಾಕಿಕೊಳ್ಳುವಂತೆ ಮಾಡುವ ದುರುದ್ದೇಶವನ್ನು ಹೊಂದಿದೆ.

ಎಲ್ಲಿಯತನಕ Citizenship (Registration Of Citizens and Issue Of National Identity Cards) Rules 2003 ನಿಮಯದ ಮೇಲಿನ ಉಪನಿಯಮಾವಳಿಗಳನ್ನು ರದ್ದುಮಾಡುವುದಿಲ್ಲವೋ / ತಿದ್ದುಪಡಿ ಮಾಡುವುದಿಲ್ಲವೋ ಅಲ್ಲಿಯವರೆಗೆ ಗೃಹಮಂತ್ರಿಯವರ ಹೇಳಿಕೆ ಕೇವಲ ದಾರಿ ತಪ್ಪಿಸುವ ಹೇಳಿಕೆಯಷ್ಟೇ ಆಗಿರುತ್ತದೆ.

ಹಾಗೊಂದು ವೇಳೆ ಈ ನಿಯಮಗಳನ್ನು ರದ್ದು ಮಾಡಿಬಿಟ್ಟರೆ ಅಥವಾ ತಿದ್ದುಪಡಿಯಾದರೆ ನಿರ್ದಿಷ್ಟ ಜನಸಮುದಾಯಗಳ ಪೌರತ್ವ ಪರಿಶೀಲನೆ ಮಾಡಬೇಕೆಂಬ ಬಿಜೆಪಿ ಸರ್ಕಾರದ ಉದ್ದೇಶವೇ ಈಡೇರುವುದಿಲ್ಲ.

ಆದ್ದರಿಂದಲೇ ಯಾವ ತಿದ್ದುಪಡಿಯನ್ನು ಮಾಡದೆ ಕೇವಲ ಹೇಳಿಕೆಯನ್ನು ನೀಡುತ್ತಾ ಜನರನ್ನು NPR ಗೆ ಒಪ್ಪಿಸುವ ಹಾಗು NPR-NRC- CAA ಗಳ ವಿರುದ್ಧದ ಹೋರಾಟವನ್ನು ಹಾದಿತಪ್ಪಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ.

ಆದ್ದರಿಂದ ಎಲ್ಲಿಯ ತನಕ ಸರ್ಕಾರವು ದೇಶದ ಜನರ ಪೌರತ್ವ ವನ್ನೇ ಅನುಮಾನಿಸುವ ಹಾಗು ಇಡೀ ಜನಕೋಟಿಯನ್ನು ಪೌರತ್ವ ಸಾಬೀತು ಪಡಿಸುವ ಅಸಾಧ್ಯ ಪರೀಕ್ಷೆಗೆ ಒಡ್ಡುವ

1. ಭಾರತದ ಪೌರತ್ವ ಕಾಯಿದೆ-1955ಕ್ಕೆ ವಾಜಪೇಯಿ ಸರ್ಕಾರ ತಂದ 14-A ತಿದ್ದುಪಡಿಯನ್ನು ಹಾಗು
2. Citizenship (Registration Of Citizens and Issue Of National Identity Cards) Rules 2003 ಗಳನ್ನುರದ್ದುಗೊಳಿಸುವುದಿಲ್ಲವೋ ಅಲ್ಲಿಯತನಕ ಜನರು ಹಾಗು ವಿರೋಧ ಪಕ್ಷಗಳು ಸರ್ಕಾರದ ಯಾವುದೇ ದುರುದ್ದೇಶದ ಮಾತುಗಳು ಮತ್ತು ಹೇಳಿಕೆಗಳಿಗೆ ಬಲಿಯಾಗಬಾರದು.

ಸುಳ್ಳು-2- NPR ಹಂತದಲ್ಲಿ ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ.

ವಾಸ್ತವ- ಇದು ಅರ್ಧ ಸತ್ಯ . ಕೇಂದ್ರ ಸರ್ಕಾರ ಈ ವರ್ಷದ ಜನವರಿಯಲ್ಲಿ ಬಿಡುಗಡೆ ಮಾಡಿರುವ NPR Training Manual ಪ್ರಕಾರ NPR ಮಾಹಿತಿ ಸಂಗ್ರಹ ಮಾಡಲು ಬರುವ ಅಧಿಕಾರಿಗಳಿಗೆ ಆಧಾರ್, ಡ್ರೈವಿಂಗ್ ಲೈಸೆನ್ಸ್ , ಮೊಬೈಲ್ ನಂಬರ್, ವೋಟರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ದಾಖಲೆಗಳನ್ನು ತೋರಿಸಬೇಕು.
– ಈ ನಿಯಮವನ್ನು ಸರ್ಕಾರ ಈ ಕ್ಷಣದವರೆಗೂ ಹಿಂತೆಗೆದುಕೊಂಡಿಲ್ಲ.

ಸುಳ್ಳು – 3- CAA ಪೌರತ್ವ ಕೊಡುವ ಕಾಯಿದೆಯೇ ಹೊರತು ಪೌರತ್ವವನ್ನು ಕಿತ್ತುಕೊಳ್ಳುವ ಕಾಯಿದೆಯಲ್ಲ

ವಾಸ್ತವ: ಇದು ಸುಳ್ಳು ಮತ್ತು ಅರ್ಧಸತ್ಯದಿಂದ ಕೂಡಿರುವ ಹೇಳಿಕೆಯಾಗಿದೆ.
CAA ಕಾಯಿದೆ ಬಾಂಗ್ಲಾದೇಶ, ಪಾಕಿಸ್ತಾನ ಹಾಗು ಅಫ್ಘಾಅನಿಸ್ತಾನ ಗಳಿಂದ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗಿ ಅಥವಾ ದೌರ್ಜನ್ಯಗಳ ಭಯದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬರುವ ಹಿಂದು,ಸಿಖ್ಖ, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿಗಳಿಗೆ ಆಶ್ರಯ ಮತ್ತು ಪೌರತ್ವವನ್ನು ಕೊಡುವ ಕಾಯಿದೆಯಾಗಿದೆ.

ಅಷ್ಟರಮಟ್ಟಿಗೆ ಅದು ಪೌರತ್ವವನ್ನು ಕೊಡುವ ಕಾಯಿದೆ. ಆದರೆ ಅದೇ ದೇಶಗಳಲ್ಲಿ ಅಹ್ಮದೀಯರು, ಹಜಾರಗಳು ಹಾಗು ಶಿಯಾಗಳು ಸಹ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆಂದು ಮೋದಿ ಸರ್ಕಾರವೇ 2018ರ ಸೆಪ್ಟೆಂಬರ್ ನಲ್ಲಿ ವಿಶ್ವಸಂಸ್ಥೆಗೆ ದೂರಿತ್ತಿದೆ. ಆದರೆ CAA ಕಾಯಿದೆ ಅದೇ ದೇಶಗಳಿದ ಅದೇ ಬಗೆಯ ಧಾರ್ಮಿಕ ದೌರ್ಜನ್ಯಗಳಿಗೆ ತುತ್ತಾಗಿ ವಲಸೆ ಬರುವ ಈ ಸಮುದಾಯಗಳಿಗೆ ಬಾಗಿಲನ್ನು ಮುಚ್ಚುತ್ತದೆ.

ಆ ಅರ್ಥದಲ್ಲಿ CAA ಕಾಯಿದೆ ಉಳಿದ ಧರ್ಮಿಯರಿಗೆ ಪೌರತ್ವವನ್ನು ನಿರಾಕರಿಸುವ ಕಾಯಿದೆಯೇ ಆಗಿದೆ.

ಅಲ್ಲದೆ CAA ಕಾಯಿದೆಯ ನಿಮಿತ್ತವಿಲ್ಲದೆ ಈವರೆಗೆ ಯಾವುದೇ ದೇಶದಿಂದ ಯಾವುದೇ ಬಗೆಯ ದೌರ್ಜನ್ಯಗಳಿಗೆ ತುತ್ತಾಗಿ ಆಶ್ರಯ ಕೋರಿ ಬರುತ್ತಿದ್ದವರಿಗೆ ಭಾರತ ಆಶ್ರಯ ಕೊಡುವಂತಹ ಮತ್ತು ಅವರು ಕೋರಿದಲ್ಲಿ 7-11 ವರ್ಶಗಳ ನಂತರ ಪೌರತ್ವ ಕೊಡುವಂತ ಅವಕಾಶ 1955ರಲ್ಲಿ ರಚಿಸಲಾದ ಕಾಯಿದೆಯಲ್ಲೇ ಅಂತರ್ಗತವಾಗಿದೆ.

ಅಲ್ಲದೆ, CAA ಮೂಲಕ NRC ಪ್ರಕ್ರಿಯೆಯಲ್ಲಿ ದಾಖಲೆಗಳನ್ನು ತೋರಿಸಲಾಗದೆ ಅನುಮಾನಾಸ್ಪದರೆಂದು ಘೋಷಿತರಾಗುವ ಹಿಂದುಗಳಿಗೆ ಪೌರತ್ವ ಕೊಡಲಾಗುವುದೆಂಬ ಸರ್ಕಾರದ ಮತ್ತು ಬಿಜೆಪಿಯ ಗುಪ್ತ ಪ್ರಚಾರವು ಸಹ ಹಸಿಸುಳ್ಳಿನದಾಗಿದೆ.

ಏಕೆಂದರೆ CAA ಮೂಲಕ ಪೌರತ್ವ ಪಡೆಯಲು NRC ಯಿಂದ ಹೊರಬೀಳುವ ಭಾರತೀಯ ಹಿಂದುಗಳು ಮೊದಲು ತಾವು ಬಾಂಗ್ಲಾದೇಶೀಯರೊ ಅಥವಾ ಪಾಕಿಸ್ತಾನಿಯರೋ ಎಂದು ಸಾಬೀತು ಮಾಡಿಕೊಳ್ಳಬೇಕಾಗುತ್ತದೆ.

ಏಕೆಂದರೆ CAA ಸೌಲಭ್ಯ ಸಿಗುವುದು ಬಾಂಗ್ಲಾದೇಶ ಅಥವಾ ಪಾಕಿಸ್ತಾನಗಳಿಂದ ವಲಸೆ ಬಂದ ಹಿಂದುಗಳಿಗೆ ಹೊರತು ದಾಖಲೆಗಳಿಲ್ಲವೆಂಬ ಕಾರಣಕ್ಕೆ ಪೌರತ್ವ ಕಳೆದುಕೊಳ್ಳುವ ಭಾರತೀಯ ಹಿಂದುಗಳಿಗಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...