HomeಮುಖಪುಟNPR ಕುರಿತು ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖ್ಯಾತ ಚಿಂತಕ ಶಿವಸುಂದರ್ ಏನು ಹೇಳುತ್ತಾರೆ??

NPR ಕುರಿತು ಗೃಹ ಸಚಿವ ಅಮಿತ್ ಷಾ ಹೇಳಿಕೆಗೆ ಖ್ಯಾತ ಚಿಂತಕ ಶಿವಸುಂದರ್ ಏನು ಹೇಳುತ್ತಾರೆ??

"ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ" ಎಂಬ ಗೃಹಮಂತ್ರಿಗಳ ಹೇಳಿಕೆ ಹೇಗಾದರೂ ಮಾಡಿ ಜನರನ್ನು NPRಗೆ ಒಪ್ಪಿಸಿ "ಪೌರತ್ವ ಪರಿಶೀಲನೆಯ" ಉರುಳಿಗೆ ತಾವೇ ಸಿಕ್ಕಿಹಾಕಿಕೊಳ್ಳುವಂತೆ ಮಾಡುವ ದುರುದ್ದೇಶವನ್ನು ಹೊಂದಿದೆ..

- Advertisement -
- Advertisement -

ನಿನ್ನೆ ರಾಜ್ಯಸಭೆಯಲ್ಲಿ ಗೃಹ ಸಚಿವ ಅಮಿತ್‌ ಶಾರವರು NPRಗೆ ದಾಖಲೆ ತೋರಿಸಬೇಕಿಲ್ಲ. ನಿಮಗೆ ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ. ನಿಮ್ಮನ್ನು ಡೌಟ್‌ಫುಲ್‌ ಎಂದು ಪರಿಗಣಿಸುವುದಿಲ್ಲ ಎಂದು ಹೇಳಿದ್ದಾರೆ. ಆದರೆ ಈ ಹೇಳಿಕೆಗೆ ಹಲವು ವಯಲಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದ ಖ್ಯಾತ ಚಿಂತಕ ಮತ್ತು ಹೋರಾಟಗಾರ ಶಿವಸುಂದರ್‌ ಪ್ರತಿಕ್ರಿಯೆ ನೀಡಿದ್ದಾರೆ. ಅದರ ಪೂರ್ಣಪಾಠ ಕೆಳಗಿನಂತಿದೆ.

ಪೌರತ್ವ ನೊಂದಣಿ ಹಾಗು ಎನ್ ಪಿ ಆರ್ ಬಗ್ಗೆ ಗೃಹಮಂತ್ರಿ ಅಮಿತ್ ಷಾ ರಾಜ್ಯ ಸಭೆಯಲ್ಲಿ ಗಳಹಿದ ಸುಳ್ಳುಗಳ ಕುರಿತು :

NPR-NRC- CAAಗಳ ವಿರುದ್ಧ ದೇಶಾದ್ಯಂತ ಜನರು ರಾಜಿಯಿಲ್ಲದ ಹೋರಾಟ ನಡೆಸುತ್ತಿರುವುದರಿದ ಕಂಗೆಟ್ಟಿರುವ ಮೊ-ಷಾ ಸರ್ಕಾರ ಸುಳ್ಳುಗಳನ್ನು ಹೇಳುವ ಮೂಲಕ ಹೋರಾಟವನ್ನು ದಾರಿ ತಪ್ಪಿಸುವ ಹುನ್ನಾರ ನಡೆಸಿದೆ. ನಿನ್ನೆ ರಾಜ್ಯಸಭೆಯಲ್ಲಿ ಗೃಹಮಂತ್ರಿ ಅಮಿತ್ ಶಾ ನೀಡಿರುವ ಹೇಳಿಕೆಗಳು ಅದಕ್ಕೆ ತಾಜಾ ಉದಾಹರಣೆ. ಆದ್ದರಿಂದ ದೇಶದ ಜನತೆ ಗೃಹಮಂತ್ರಿಯವರ ಹೇಳಿಕೆಯಲ್ಲಿರುವ ಈ ಕೆಳಗಿನ ಸುಳ್ಳುಗಳನ್ನು ಅರ್ಥಮಾಡಿಕೊಳ್ಳುವುದು ಅತ್ಯಗತ್ಯವಾಗಿದೆ.

ಸುಳ್ಳು-1- NPR ಮಾಹಿತಿ ಸಂಗ್ರಹಣೆ ಹಂತದಲ್ಲಿ ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ.

ವಾಸ್ತವ : NPR ಮಾಡುತ್ತಿರುವುದೇ ದೇಶದ ಎಲ್ಲಾ ಜನರ ಪೌರತ್ವವನ್ನು ಪರೀಕ್ಷಿಸಲು. ಅದ್ಕಕೆಂದೇ ಪ್ರತಿಯೊಬ್ಬ ಪೌರನ ತಂದೆ ಮತ್ತು ತಾಯಿಯರ ಹುಟ್ಟಿದ ದಿನ ಹಾಗು ಸ್ಥಳದ ಮಾಹಿತಿಯನ್ನು ನಿರ್ದಿಷ್ಟವಾಗಿ ಕೇಳಲಾಗುತ್ತದೆ. ಅದಕ್ಕೆ ಕೊಟ್ಟ ಉತ್ತರವನ್ನು ಆಧರಿಸಿಯೇ ದೇಶದ ಜನರ ಪೌರತ್ವವು ಪರೀಕ್ಷೆಗೆ ಒಳಪಡುತ್ತದೆ.

NPR ಮತ್ತು NRC ಗಳ ಹುಟ್ಟಿಗೆ ಕಾರಣವಾದ Citizenship (Registration Of Citizens and Issue Of National Identity Cards) Rules 2003ದ ಉಪನಿಯಮ 4 (1)ರ ಪ್ರಕಾರ – ಕೇಂದ್ರ ಸರ್ಕಾರವು ಒಂದು ರಾಷ್ಟ್ರೀಯ ಪೌರತ್ವ ನೊಂದಣಿ ಪಟ್ಟಿಯನ್ನು ತಯಾರಿಸುವ ಸಲುವಾಗಿ ದೇಶದಲ್ಲಿ ವಾಸಿಸುತ್ತಿರುವ ಎಲ್ಲಾ ವ್ಯಕ್ತಿಗಳ ಮತ್ತು ಕುಟುಂಬಗಳ ಪೌರತ್ವ ವಿವರಗಳನ್ನೂ ಒಳಗೊಂಡಂತೆ ಅಗತ್ಯವಿರುವ ಎಲ್ಲಾ ವಿವರಗಳನ್ನು ದೇಶಾದ್ಯಂತ ಮನೆಮನೆಗೆ ತೆರಳಿ ಮಾಹಿತಿ ಸಂಗ್ರಹಿಸಬಹುದು .

ಉಪನಿಯಮ 4 (3) ರ ಪ್ರಕಾರ – ಸ್ಥಳೀಯ ಮಟ್ಟದ ರಾಷ್ಟ್ರೀಯ ನಾಗರಿಕರ ಪಟ್ಟಿಯನ್ನು ತಯಾರಿಸುವ ಸಲುವಾಗಿ NPR ನಲ್ಲಿ ಸಂಗ್ರಹಿಸಲಾದ ವ್ಯಕ್ತಿಗಳ ಮತ್ತು ಕುಟುಂಬಗಳ ವಿವರಗಳನ್ನು ಸ್ಥಳೀಯ ನಾಗರಿಕ ನೊಂದಣಿ ರಿಜಿಸ್ಟ್ರಾರ್ (ಅಂದರೆ ಸ್ಥಳೀಯ ತಹಸೀಲ್ದಾರರು) VERIFY AND SCRUTINIZE ಅಂದರೆ ಪರೀಕ್ಷಿಸಿ ಪರಿಶೀಲಿಸುತ್ತಾರೆ.

ಉಪನಿಯಮ 4 (4) ರ ಪ್ರಕಾರ – ಈ ಪರಿಶೀಲನಾ ಹಂತದಲ್ಲಿ ಯಾವುದಾದರೂ ವ್ಯಕ್ತಿಯ ಪೌರತ್ವ ಸಂಬಂಧಿ ವಿವರಗಳು ಸಂಶಯಾಸ್ಪದವಾಗಿ ಕಂಡುಬಂದಲ್ಲಿ ಮತ್ತಷ್ಟು ಪರಿಶೀಲನೆ ಮಾಡಲು NPR ಪಟ್ಟಿಯಲ್ಲಿರುವ ಆ ವ್ಯಕ್ತಿಯ ಹೆಸರಿನ ಮುಂದೆ ಸ್ಥಳೀಯ ರಿಜಿಸ್ಟ್ರಾರ್ ಅವರು ಸೂಕ್ತ ಟಿಪ್ಪಣಿಗಳನ್ನು ದಾಖಲಿಸುತ್ತಾರೆ ಮತ್ತು ಪರಿಶೀಲನೆ ಪೂರ್ಣಗೊಂಡ ನಂತರ ಅನುಮಾನಾಸ್ಪದವಾದ ಪೌರತ್ವವೆಂದು ಕಂಡುಬಂದಲ್ಲಿ ಸೂಕ್ತವಾದ ನಮೂನೆಯಲ್ಲಿ ಆ ವ್ಯಕ್ತಿಗಳಿಗೆ ಅಥವಾ ಕುಟುಂಬಗಳಿಗೆ ತಿಳಿಸುತ್ತಾರೆ.

ಉಪನಿಯಮ 7 ((2) ರ ಪ್ರಕಾರ- ತನ್ನ ಕುಟುಂಬಕ್ಕೆ ಸಂಬಂಧಪಟ್ಟ NPR ಪ್ರಶ್ನಾವಳಿಗಳಿಗೆ ಸರಿಯಾದ ಉತ್ತರ ಕೊಡುವುದು ಕುಟುಂಬದ ಮುಖ್ಯಸ್ಥನ ಜವಾಬ್ದಾರಿಯಾಗಿದೆ.

ಇದು ಹಾಲಿ ಇರುವ ನಿಯಮಾವಳಿಗಳು. ಇದಕ್ಕೆ ಈವರೆಗೆ ಸರ್ಕಾರ ಯಾವುದೇ ತಿದ್ದುಪಡಿ ಮಾಡಿಲ್ಲ.

ಹಾಗೂ NPR ಪ್ರಕ್ರಿಯೆಯಲ್ಲಿ ಉತ್ತರ ಇಲ್ಲದಿರುವುದು ಮತ್ತು ಕೊಡದಿರುವುದು ನಮ್ಮ ಪೌರತ್ವವನ್ನೇ ಪ್ರಶ್ನೆಗೊಳಪಡಿಸುತ್ತದೆ.

ಆದ್ದರಿಂದ “ಜನರು ಗೊತ್ತಿಲ್ಲದ ಪ್ರಶ್ನೆಗಳಿಗೆ ಉತ್ತರಿಸಬೇಕಿಲ್ಲ” ಎಂಬ ಗೃಹಮಂತ್ರಿಗಳ ಹೇಳಿಕೆ ಹೇಗಾದರೂ ಮಾಡಿ ಜನರನ್ನು NPRಗೆ ಒಪ್ಪಿಸಿ “ಪೌರತ್ವ ಪರಿಶೀಲನೆಯ” ಉರುಳಿಗೆ ತಾವೇ ಸಿಕ್ಕಿಹಾಕಿಕೊಳ್ಳುವಂತೆ ಮಾಡುವ ದುರುದ್ದೇಶವನ್ನು ಹೊಂದಿದೆ.

ಎಲ್ಲಿಯತನಕ Citizenship (Registration Of Citizens and Issue Of National Identity Cards) Rules 2003 ನಿಮಯದ ಮೇಲಿನ ಉಪನಿಯಮಾವಳಿಗಳನ್ನು ರದ್ದುಮಾಡುವುದಿಲ್ಲವೋ / ತಿದ್ದುಪಡಿ ಮಾಡುವುದಿಲ್ಲವೋ ಅಲ್ಲಿಯವರೆಗೆ ಗೃಹಮಂತ್ರಿಯವರ ಹೇಳಿಕೆ ಕೇವಲ ದಾರಿ ತಪ್ಪಿಸುವ ಹೇಳಿಕೆಯಷ್ಟೇ ಆಗಿರುತ್ತದೆ.

ಹಾಗೊಂದು ವೇಳೆ ಈ ನಿಯಮಗಳನ್ನು ರದ್ದು ಮಾಡಿಬಿಟ್ಟರೆ ಅಥವಾ ತಿದ್ದುಪಡಿಯಾದರೆ ನಿರ್ದಿಷ್ಟ ಜನಸಮುದಾಯಗಳ ಪೌರತ್ವ ಪರಿಶೀಲನೆ ಮಾಡಬೇಕೆಂಬ ಬಿಜೆಪಿ ಸರ್ಕಾರದ ಉದ್ದೇಶವೇ ಈಡೇರುವುದಿಲ್ಲ.

ಆದ್ದರಿಂದಲೇ ಯಾವ ತಿದ್ದುಪಡಿಯನ್ನು ಮಾಡದೆ ಕೇವಲ ಹೇಳಿಕೆಯನ್ನು ನೀಡುತ್ತಾ ಜನರನ್ನು NPR ಗೆ ಒಪ್ಪಿಸುವ ಹಾಗು NPR-NRC- CAA ಗಳ ವಿರುದ್ಧದ ಹೋರಾಟವನ್ನು ಹಾದಿತಪ್ಪಿಸುವ ಪ್ರಯತ್ನವನ್ನು ಸರ್ಕಾರ ಮಾಡುತ್ತಿದೆ.

ಆದ್ದರಿಂದ ಎಲ್ಲಿಯ ತನಕ ಸರ್ಕಾರವು ದೇಶದ ಜನರ ಪೌರತ್ವ ವನ್ನೇ ಅನುಮಾನಿಸುವ ಹಾಗು ಇಡೀ ಜನಕೋಟಿಯನ್ನು ಪೌರತ್ವ ಸಾಬೀತು ಪಡಿಸುವ ಅಸಾಧ್ಯ ಪರೀಕ್ಷೆಗೆ ಒಡ್ಡುವ

1. ಭಾರತದ ಪೌರತ್ವ ಕಾಯಿದೆ-1955ಕ್ಕೆ ವಾಜಪೇಯಿ ಸರ್ಕಾರ ತಂದ 14-A ತಿದ್ದುಪಡಿಯನ್ನು ಹಾಗು
2. Citizenship (Registration Of Citizens and Issue Of National Identity Cards) Rules 2003 ಗಳನ್ನುರದ್ದುಗೊಳಿಸುವುದಿಲ್ಲವೋ ಅಲ್ಲಿಯತನಕ ಜನರು ಹಾಗು ವಿರೋಧ ಪಕ್ಷಗಳು ಸರ್ಕಾರದ ಯಾವುದೇ ದುರುದ್ದೇಶದ ಮಾತುಗಳು ಮತ್ತು ಹೇಳಿಕೆಗಳಿಗೆ ಬಲಿಯಾಗಬಾರದು.

ಸುಳ್ಳು-2- NPR ಹಂತದಲ್ಲಿ ಯಾವುದೇ ದಾಖಲೆಗಳನ್ನು ಕೇಳುವುದಿಲ್ಲ.

ವಾಸ್ತವ- ಇದು ಅರ್ಧ ಸತ್ಯ . ಕೇಂದ್ರ ಸರ್ಕಾರ ಈ ವರ್ಷದ ಜನವರಿಯಲ್ಲಿ ಬಿಡುಗಡೆ ಮಾಡಿರುವ NPR Training Manual ಪ್ರಕಾರ NPR ಮಾಹಿತಿ ಸಂಗ್ರಹ ಮಾಡಲು ಬರುವ ಅಧಿಕಾರಿಗಳಿಗೆ ಆಧಾರ್, ಡ್ರೈವಿಂಗ್ ಲೈಸೆನ್ಸ್ , ಮೊಬೈಲ್ ನಂಬರ್, ವೋಟರ್ ಕಾರ್ಡ್ ಮತ್ತು ಪಾಸ್ ಪೋರ್ಟ್ ದಾಖಲೆಗಳನ್ನು ತೋರಿಸಬೇಕು.
– ಈ ನಿಯಮವನ್ನು ಸರ್ಕಾರ ಈ ಕ್ಷಣದವರೆಗೂ ಹಿಂತೆಗೆದುಕೊಂಡಿಲ್ಲ.

ಸುಳ್ಳು – 3- CAA ಪೌರತ್ವ ಕೊಡುವ ಕಾಯಿದೆಯೇ ಹೊರತು ಪೌರತ್ವವನ್ನು ಕಿತ್ತುಕೊಳ್ಳುವ ಕಾಯಿದೆಯಲ್ಲ

ವಾಸ್ತವ: ಇದು ಸುಳ್ಳು ಮತ್ತು ಅರ್ಧಸತ್ಯದಿಂದ ಕೂಡಿರುವ ಹೇಳಿಕೆಯಾಗಿದೆ.
CAA ಕಾಯಿದೆ ಬಾಂಗ್ಲಾದೇಶ, ಪಾಕಿಸ್ತಾನ ಹಾಗು ಅಫ್ಘಾಅನಿಸ್ತಾನ ಗಳಿಂದ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗಿ ಅಥವಾ ದೌರ್ಜನ್ಯಗಳ ಭಯದಿಂದ ಭಾರತಕ್ಕೆ ಅಕ್ರಮವಾಗಿ ವಲಸೆ ಬರುವ ಹಿಂದು,ಸಿಖ್ಖ, ಜೈನ, ಬೌದ್ಧ, ಕ್ರಿಶ್ಚಿಯನ್ ಮತ್ತು ಪಾರ್ಸಿಗಳಿಗೆ ಆಶ್ರಯ ಮತ್ತು ಪೌರತ್ವವನ್ನು ಕೊಡುವ ಕಾಯಿದೆಯಾಗಿದೆ.

ಅಷ್ಟರಮಟ್ಟಿಗೆ ಅದು ಪೌರತ್ವವನ್ನು ಕೊಡುವ ಕಾಯಿದೆ. ಆದರೆ ಅದೇ ದೇಶಗಳಲ್ಲಿ ಅಹ್ಮದೀಯರು, ಹಜಾರಗಳು ಹಾಗು ಶಿಯಾಗಳು ಸಹ ಧಾರ್ಮಿಕ ದೌರ್ಜನ್ಯಕ್ಕೆ ತುತ್ತಾಗುತ್ತಿದ್ದಾರೆಂದು ಮೋದಿ ಸರ್ಕಾರವೇ 2018ರ ಸೆಪ್ಟೆಂಬರ್ ನಲ್ಲಿ ವಿಶ್ವಸಂಸ್ಥೆಗೆ ದೂರಿತ್ತಿದೆ. ಆದರೆ CAA ಕಾಯಿದೆ ಅದೇ ದೇಶಗಳಿದ ಅದೇ ಬಗೆಯ ಧಾರ್ಮಿಕ ದೌರ್ಜನ್ಯಗಳಿಗೆ ತುತ್ತಾಗಿ ವಲಸೆ ಬರುವ ಈ ಸಮುದಾಯಗಳಿಗೆ ಬಾಗಿಲನ್ನು ಮುಚ್ಚುತ್ತದೆ.

ಆ ಅರ್ಥದಲ್ಲಿ CAA ಕಾಯಿದೆ ಉಳಿದ ಧರ್ಮಿಯರಿಗೆ ಪೌರತ್ವವನ್ನು ನಿರಾಕರಿಸುವ ಕಾಯಿದೆಯೇ ಆಗಿದೆ.

ಅಲ್ಲದೆ CAA ಕಾಯಿದೆಯ ನಿಮಿತ್ತವಿಲ್ಲದೆ ಈವರೆಗೆ ಯಾವುದೇ ದೇಶದಿಂದ ಯಾವುದೇ ಬಗೆಯ ದೌರ್ಜನ್ಯಗಳಿಗೆ ತುತ್ತಾಗಿ ಆಶ್ರಯ ಕೋರಿ ಬರುತ್ತಿದ್ದವರಿಗೆ ಭಾರತ ಆಶ್ರಯ ಕೊಡುವಂತಹ ಮತ್ತು ಅವರು ಕೋರಿದಲ್ಲಿ 7-11 ವರ್ಶಗಳ ನಂತರ ಪೌರತ್ವ ಕೊಡುವಂತ ಅವಕಾಶ 1955ರಲ್ಲಿ ರಚಿಸಲಾದ ಕಾಯಿದೆಯಲ್ಲೇ ಅಂತರ್ಗತವಾಗಿದೆ.

ಅಲ್ಲದೆ, CAA ಮೂಲಕ NRC ಪ್ರಕ್ರಿಯೆಯಲ್ಲಿ ದಾಖಲೆಗಳನ್ನು ತೋರಿಸಲಾಗದೆ ಅನುಮಾನಾಸ್ಪದರೆಂದು ಘೋಷಿತರಾಗುವ ಹಿಂದುಗಳಿಗೆ ಪೌರತ್ವ ಕೊಡಲಾಗುವುದೆಂಬ ಸರ್ಕಾರದ ಮತ್ತು ಬಿಜೆಪಿಯ ಗುಪ್ತ ಪ್ರಚಾರವು ಸಹ ಹಸಿಸುಳ್ಳಿನದಾಗಿದೆ.

ಏಕೆಂದರೆ CAA ಮೂಲಕ ಪೌರತ್ವ ಪಡೆಯಲು NRC ಯಿಂದ ಹೊರಬೀಳುವ ಭಾರತೀಯ ಹಿಂದುಗಳು ಮೊದಲು ತಾವು ಬಾಂಗ್ಲಾದೇಶೀಯರೊ ಅಥವಾ ಪಾಕಿಸ್ತಾನಿಯರೋ ಎಂದು ಸಾಬೀತು ಮಾಡಿಕೊಳ್ಳಬೇಕಾಗುತ್ತದೆ.

ಏಕೆಂದರೆ CAA ಸೌಲಭ್ಯ ಸಿಗುವುದು ಬಾಂಗ್ಲಾದೇಶ ಅಥವಾ ಪಾಕಿಸ್ತಾನಗಳಿಂದ ವಲಸೆ ಬಂದ ಹಿಂದುಗಳಿಗೆ ಹೊರತು ದಾಖಲೆಗಳಿಲ್ಲವೆಂಬ ಕಾರಣಕ್ಕೆ ಪೌರತ್ವ ಕಳೆದುಕೊಳ್ಳುವ ಭಾರತೀಯ ಹಿಂದುಗಳಿಗಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...