Homeಕರ್ನಾಟಕಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗ ದಳ ಮತ್ತು ವಿಎಚ್‌ಪಿ ವಿರುದ್ಧದ ವಾಗ್ದಾಳಿಯನ್ನು ಮತ್ತೆ ಮುಂದುವರೆಸಿದ್ದು, “ಜನರನ್ನು ಒಡೆಯುವುದಕ್ಕೆ ಮಾತ್ರ ಬಜರಂಗದಳ ಮತ್ತು ವಿಹೆಚ್‌ಪಿಯವರು ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, “ಡೀಸೆಲ್-ಪೆಟ್ರೋಲ್ ಬೆಲೆ ಪ್ರತಿನಿತ್ಯ ಷೇರು ಬೆಲೆಯಂತೆ ಏರುತ್ತಲೇ ಇದೆ. ದೇಶವನ್ನೇ ಬಂಡವಾಳಶಾಹಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಭಜರಂಗದಳ ಮತ್ತು ವಿಹೆಚ್‌ಪಿಯವರು ಕೇಸರಿ ಟವೆಲ್ ಹಾಕಿಕೊಂಡು ರಸ್ತೆಗಿಳಿದು ಜನರ ಪರ ಹೋರಾಟ ನಡೆಸಿದ್ದನ್ನು ಒಂದೇ ಒಂದು ದಿನವೂ ನಾನು ಕಂಡಿಲ್ಲ. ಜನರ ಪರ ದನಿ ಎತ್ತುವುದಿಲ್ಲ, ಜನರನ್ನು ಒಡೆಯುವುದಕ್ಕೆ ಮಾತ್ರ ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಹೇಳಿದ್ದಾರೆ.

“ಬೆಲೆ ಏರಿಕೆಯಿಂದ ಜನ ನರಳುತ್ತಿದ್ದಾರೆ. ನೀವು ಬೆಲೆ ಏರಿಕೆ ವಿರುದ್ಧ ಹೋರಾಡಿ. ನಿಮಗೆ ಬೆಂಬಲ ನೀಡುತ್ತೇನೆ. ಜನಪರ ಹೋರಾಟ ಮಾಡುವುದಿಲ್ಲ ಎಂದರೆ ನೀವೇ ನಿಜವಾದ ದೇಶದ್ರೋಹಿಗಳು ಅಲ್ಲವೆ?” ಎಂದು ಕುಮಾರಸ್ವಾಮಿ ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಕರಾವಳಿಯ ಒಂದು ಶಾಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಹಲಾಲ್ ಮಾಂಸ, ಮುಸ್ಲಿಮರ ವಿರುದ್ಧ ಆರ್ಥಿಕ ಜಿಹಾದ್, ಆಜಾನ್ ಬ್ಯಾನ್‌ವರೆಗೆ ಬಂದು ನಿಂತಿದೆ. ನಾಡಿನ ಕೋಮು ಸಾಮರಸ್ಯ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್‌ಗಾಗಿ ಉರಿವ ಮನೆಯ ಗಳ ಹಿರಿಯಬೇಡಿ. ನಿಮ್ಮ ಚುನಾವಣಾ ರಾಜಕಾರಣಕ್ಕೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ದ್ವೇಷವನ್ನು ಬಿತ್ತಿ ಸಾಮರಸ್ಯ ಕೆಡಿಸಬೇಡಿ” ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವು ಕಿಡಿಕಾರಿರುವ ಕುಮಾರಸ್ವಾಮಿ, “ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಹಿಜಾಬ್ ವಿವಾದವನ್ನು ಒಂದೇ ದಿನದಲ್ಲಿ ಮುಗಿಸಬಹುದಿತ್ತು. ಹಲಾಲ್ ವಿಚಾರ ವಿವಾದವಾಗದಂತೆ ತಡೆಯಬಹುದಿತ್ತು. ಆದರೆ, ಬಿಜೆಪಿ ನಾಯಕರು ಕೋಮು ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸ್ವತಃ ಹಿಂದೆ ನಿಂತು ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ಮೂಲಕ ಸಮಾಜವನ್ನೇ ಒಡೆಯುವ ಹೇಯ ರಾಜಕಾರಣ ಮಾಡುತ್ತಿದೆ. ಯಾವ ಸರ್ಕಾರವೂ ತನ್ನ ಸ್ವಯಂ ಲಾಭಕ್ಕಾಗಿ ಈ ಹಂತಕ್ಕೆ ಇಳಿಬಾರದಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಲ್ಲಿ ಮಕ್ಕಳ ಬಾಯಲ್ಲಿ ನಾಡಗೀತೆ ಹಾಡಿಸಿ ಶಾಲೆಯ ಹೊರಗೆ ಕೋಮು ಪ್ರಚೋದನೆ ಮಾಡುವುದು ಎಷ್ಟು ಸರಿ? ದಯವಿಟ್ಟು ನಾಡಿನಲ್ಲಿ ಕುವೆಂಪು ಆಶಯವನ್ನು ಕಾಪಾಡಿ ಇಲ್ಲವೇ ನಾಡಗೀತೆಯನ್ನೇ ತೆಗೆದುಬಿಡಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪೊಲೀಸರು ನಟ ಚೇತನ್ ಟ್ವೀಟ್ ಮಾಡಿದರು ಎಂಬ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸುತ್ತಾರೆ. ಆದರೆ, ಮಟನ್ ಸ್ಟಾಲ್‌ಗಳಿಗೆ ಹೋಗಿ ಮುಸ್ಲಿಂ ಬಾಂಧವರ ಮೇಲೆ ಹಲ್ಲೆ ಮಾಡುವ, ಮುಸ್ಲಿಮರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಮಾಜ ವಿರೋಧಿಗಳನ್ನು ಏಕೆ ಬಂಧಿಸುವುದಿಲ್ಲ? ರಾಜ್ಯ ಪೊಲೀಸರಿಗೆ ತಾಕತ್ ಇದ್ದರೆ ಇಂಥವರನ್ನು ಬಂಧಿಸಲಿ” ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಹಲಾಲ್‌ ಕಟ್ ವಿರುದ್ಧ ಆರಂಭವಾಗಿರುವ ಅಭಿಯಾನದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, “ಹಲಾಲ್ ಕಟ್ಟೋ-ಜಟ್ಕಾ ಕಟ್ಟೋ? ಜನ ಏನ್ ತಿಂದ್ರೆ ನಿಮಗೇನು? ಮೊನ್ನೆ ಮೊನ್ನೆ ಯಾರೋ ಜಟ್ಕಾ ಕಟ್ ಮಾಡ್ತೀನಿ ಅಂತ ಕುರಿ ಹಿಡಿದವನ ತಲೆಗೆ ಮಚ್ಚು ಬೀಸಿದ್ದರು. ಈಗ ಜಟ್ಕಾ ಕಟ್ ಎಂದು ಮಾತನಾಡುತ್ತಿರುವವರ ತಲೆ ಹುಷಾರು. ಇಷ್ಟಕ್ಕೂ ಜನ ಏನ್ ತಿಂದರೆ ನಿಮಗೇನು?” ಎಂದು ಹೇಳಿದ್ದಾರೆ.

“ಹಳ್ಳಿ-ನಗರಗಳಲ್ಲಿ ಈಗಲೂ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಈ ಹಿಂದುತ್ವವಾದಿಗಳಿಗೆ ಸಮಸ್ಯೆ ಎದುರಾದಾಗ ಮಾತ್ರ ನಾವು ಹಿಂದುಗಳು ಎಂಬುದು ನೆನಪಾಗುತ್ತಾ? ಶ್ರೀಕೃಷ್ಣ ಮಠದಲ್ಲಿ ಕನಕದಾಸರನ್ನು ಇವರು ಹೇಗೆ ನಡೆಸಿಕೊಂಡರು ಎಂಬುದನ್ನು ಇತಿಹಾಸ ಇನ್ನೂ ಮರೆತಿಲ್ಲ. ಸಮಸ್ಯೆ ಎದುರಾದಾಗ ’ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಎನ್ನುವುದು. ಕೆಲಸ ಮುಗಿದ ಮೇಲೆ ದಲಿತನೆಂದು ಜರಿಯುವುದು ಯಾವ ಸೀಮೆಯ ರಾಜಕಾರಣ” ಎಂದು ಅವರು ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಮಾತೆತ್ತಿದರೆ ’ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್’ ಎಂದು ಹೇಳುತ್ತಾರೆ. ಆದರೆ, ಬಿಜೆಪಿಯವರು ಸಮಾಜದಲ್ಲಿ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಬಿತ್ತುತ್ತಿದ್ದಾಗ ಕಾಂಗ್ರೆಸ್ಸಿನವರೇಕೆ ಮೌನವಾಗಿದ್ದರು ಎಂಬುದು ಜಗತ್ತಿಗೆ ಗೊತ್ತಿದೆ. ಹಿಂದೂಗಳ ಮತಗಳು ಎಲ್ಲಿ ಕೈಬಿಟ್ಟು ಹೋಗುತ್ತವೋ? ಎಂಬ ಭಯದಲ್ಲಿ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು” ಎಂದು ಹೇಳಿದ್ದಾರೆ.

“ಸ್ವತಃ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ’ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮಾತನಾಡಬೇಕಿದೆ’ ಎಂದು ಹೇಳುವವರೆಗೆ ಇವರುಗಳು ಬಾಯಿಗೆ ಬೀಗ ಜಡಿದು ಕೂತಿದ್ದರು. ಈಗ ಈ ಬಗ್ಗೆ ಸರಣಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಜೆಡಿಎಸ್ ಈ ರೀತಿ ಎಂದೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮೈಸೂರು: ಬಿಜೆಪಿ ಬೆಂಬಲಿತ ಸಂಘಟನೆಗಳ ಕರೆ ಬಹಿಷ್ಕರಿಸಿ ಮುಸ್ಲಿಮರ ಅಂಗಡಿಯ ಹಲಾಲ್‌‌ ಮಾಂಸ ಖರೀದಿಸಿದ ಸಾಹಿತಿ ದೇವನೂರ ಮಹದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....