Homeಕರ್ನಾಟಕಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗ ದಳ ಮತ್ತು ವಿಎಚ್‌ಪಿ ವಿರುದ್ಧದ ವಾಗ್ದಾಳಿಯನ್ನು ಮತ್ತೆ ಮುಂದುವರೆಸಿದ್ದು, “ಜನರನ್ನು ಒಡೆಯುವುದಕ್ಕೆ ಮಾತ್ರ ಬಜರಂಗದಳ ಮತ್ತು ವಿಹೆಚ್‌ಪಿಯವರು ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, “ಡೀಸೆಲ್-ಪೆಟ್ರೋಲ್ ಬೆಲೆ ಪ್ರತಿನಿತ್ಯ ಷೇರು ಬೆಲೆಯಂತೆ ಏರುತ್ತಲೇ ಇದೆ. ದೇಶವನ್ನೇ ಬಂಡವಾಳಶಾಹಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಭಜರಂಗದಳ ಮತ್ತು ವಿಹೆಚ್‌ಪಿಯವರು ಕೇಸರಿ ಟವೆಲ್ ಹಾಕಿಕೊಂಡು ರಸ್ತೆಗಿಳಿದು ಜನರ ಪರ ಹೋರಾಟ ನಡೆಸಿದ್ದನ್ನು ಒಂದೇ ಒಂದು ದಿನವೂ ನಾನು ಕಂಡಿಲ್ಲ. ಜನರ ಪರ ದನಿ ಎತ್ತುವುದಿಲ್ಲ, ಜನರನ್ನು ಒಡೆಯುವುದಕ್ಕೆ ಮಾತ್ರ ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಹೇಳಿದ್ದಾರೆ.

“ಬೆಲೆ ಏರಿಕೆಯಿಂದ ಜನ ನರಳುತ್ತಿದ್ದಾರೆ. ನೀವು ಬೆಲೆ ಏರಿಕೆ ವಿರುದ್ಧ ಹೋರಾಡಿ. ನಿಮಗೆ ಬೆಂಬಲ ನೀಡುತ್ತೇನೆ. ಜನಪರ ಹೋರಾಟ ಮಾಡುವುದಿಲ್ಲ ಎಂದರೆ ನೀವೇ ನಿಜವಾದ ದೇಶದ್ರೋಹಿಗಳು ಅಲ್ಲವೆ?” ಎಂದು ಕುಮಾರಸ್ವಾಮಿ ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಕರಾವಳಿಯ ಒಂದು ಶಾಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಹಲಾಲ್ ಮಾಂಸ, ಮುಸ್ಲಿಮರ ವಿರುದ್ಧ ಆರ್ಥಿಕ ಜಿಹಾದ್, ಆಜಾನ್ ಬ್ಯಾನ್‌ವರೆಗೆ ಬಂದು ನಿಂತಿದೆ. ನಾಡಿನ ಕೋಮು ಸಾಮರಸ್ಯ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್‌ಗಾಗಿ ಉರಿವ ಮನೆಯ ಗಳ ಹಿರಿಯಬೇಡಿ. ನಿಮ್ಮ ಚುನಾವಣಾ ರಾಜಕಾರಣಕ್ಕೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ದ್ವೇಷವನ್ನು ಬಿತ್ತಿ ಸಾಮರಸ್ಯ ಕೆಡಿಸಬೇಡಿ” ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವು ಕಿಡಿಕಾರಿರುವ ಕುಮಾರಸ್ವಾಮಿ, “ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಹಿಜಾಬ್ ವಿವಾದವನ್ನು ಒಂದೇ ದಿನದಲ್ಲಿ ಮುಗಿಸಬಹುದಿತ್ತು. ಹಲಾಲ್ ವಿಚಾರ ವಿವಾದವಾಗದಂತೆ ತಡೆಯಬಹುದಿತ್ತು. ಆದರೆ, ಬಿಜೆಪಿ ನಾಯಕರು ಕೋಮು ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸ್ವತಃ ಹಿಂದೆ ನಿಂತು ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ಮೂಲಕ ಸಮಾಜವನ್ನೇ ಒಡೆಯುವ ಹೇಯ ರಾಜಕಾರಣ ಮಾಡುತ್ತಿದೆ. ಯಾವ ಸರ್ಕಾರವೂ ತನ್ನ ಸ್ವಯಂ ಲಾಭಕ್ಕಾಗಿ ಈ ಹಂತಕ್ಕೆ ಇಳಿಬಾರದಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಲ್ಲಿ ಮಕ್ಕಳ ಬಾಯಲ್ಲಿ ನಾಡಗೀತೆ ಹಾಡಿಸಿ ಶಾಲೆಯ ಹೊರಗೆ ಕೋಮು ಪ್ರಚೋದನೆ ಮಾಡುವುದು ಎಷ್ಟು ಸರಿ? ದಯವಿಟ್ಟು ನಾಡಿನಲ್ಲಿ ಕುವೆಂಪು ಆಶಯವನ್ನು ಕಾಪಾಡಿ ಇಲ್ಲವೇ ನಾಡಗೀತೆಯನ್ನೇ ತೆಗೆದುಬಿಡಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪೊಲೀಸರು ನಟ ಚೇತನ್ ಟ್ವೀಟ್ ಮಾಡಿದರು ಎಂಬ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸುತ್ತಾರೆ. ಆದರೆ, ಮಟನ್ ಸ್ಟಾಲ್‌ಗಳಿಗೆ ಹೋಗಿ ಮುಸ್ಲಿಂ ಬಾಂಧವರ ಮೇಲೆ ಹಲ್ಲೆ ಮಾಡುವ, ಮುಸ್ಲಿಮರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಮಾಜ ವಿರೋಧಿಗಳನ್ನು ಏಕೆ ಬಂಧಿಸುವುದಿಲ್ಲ? ರಾಜ್ಯ ಪೊಲೀಸರಿಗೆ ತಾಕತ್ ಇದ್ದರೆ ಇಂಥವರನ್ನು ಬಂಧಿಸಲಿ” ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಹಲಾಲ್‌ ಕಟ್ ವಿರುದ್ಧ ಆರಂಭವಾಗಿರುವ ಅಭಿಯಾನದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, “ಹಲಾಲ್ ಕಟ್ಟೋ-ಜಟ್ಕಾ ಕಟ್ಟೋ? ಜನ ಏನ್ ತಿಂದ್ರೆ ನಿಮಗೇನು? ಮೊನ್ನೆ ಮೊನ್ನೆ ಯಾರೋ ಜಟ್ಕಾ ಕಟ್ ಮಾಡ್ತೀನಿ ಅಂತ ಕುರಿ ಹಿಡಿದವನ ತಲೆಗೆ ಮಚ್ಚು ಬೀಸಿದ್ದರು. ಈಗ ಜಟ್ಕಾ ಕಟ್ ಎಂದು ಮಾತನಾಡುತ್ತಿರುವವರ ತಲೆ ಹುಷಾರು. ಇಷ್ಟಕ್ಕೂ ಜನ ಏನ್ ತಿಂದರೆ ನಿಮಗೇನು?” ಎಂದು ಹೇಳಿದ್ದಾರೆ.

“ಹಳ್ಳಿ-ನಗರಗಳಲ್ಲಿ ಈಗಲೂ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಈ ಹಿಂದುತ್ವವಾದಿಗಳಿಗೆ ಸಮಸ್ಯೆ ಎದುರಾದಾಗ ಮಾತ್ರ ನಾವು ಹಿಂದುಗಳು ಎಂಬುದು ನೆನಪಾಗುತ್ತಾ? ಶ್ರೀಕೃಷ್ಣ ಮಠದಲ್ಲಿ ಕನಕದಾಸರನ್ನು ಇವರು ಹೇಗೆ ನಡೆಸಿಕೊಂಡರು ಎಂಬುದನ್ನು ಇತಿಹಾಸ ಇನ್ನೂ ಮರೆತಿಲ್ಲ. ಸಮಸ್ಯೆ ಎದುರಾದಾಗ ’ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಎನ್ನುವುದು. ಕೆಲಸ ಮುಗಿದ ಮೇಲೆ ದಲಿತನೆಂದು ಜರಿಯುವುದು ಯಾವ ಸೀಮೆಯ ರಾಜಕಾರಣ” ಎಂದು ಅವರು ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಮಾತೆತ್ತಿದರೆ ’ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್’ ಎಂದು ಹೇಳುತ್ತಾರೆ. ಆದರೆ, ಬಿಜೆಪಿಯವರು ಸಮಾಜದಲ್ಲಿ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಬಿತ್ತುತ್ತಿದ್ದಾಗ ಕಾಂಗ್ರೆಸ್ಸಿನವರೇಕೆ ಮೌನವಾಗಿದ್ದರು ಎಂಬುದು ಜಗತ್ತಿಗೆ ಗೊತ್ತಿದೆ. ಹಿಂದೂಗಳ ಮತಗಳು ಎಲ್ಲಿ ಕೈಬಿಟ್ಟು ಹೋಗುತ್ತವೋ? ಎಂಬ ಭಯದಲ್ಲಿ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು” ಎಂದು ಹೇಳಿದ್ದಾರೆ.

“ಸ್ವತಃ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ’ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮಾತನಾಡಬೇಕಿದೆ’ ಎಂದು ಹೇಳುವವರೆಗೆ ಇವರುಗಳು ಬಾಯಿಗೆ ಬೀಗ ಜಡಿದು ಕೂತಿದ್ದರು. ಈಗ ಈ ಬಗ್ಗೆ ಸರಣಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಜೆಡಿಎಸ್ ಈ ರೀತಿ ಎಂದೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮೈಸೂರು: ಬಿಜೆಪಿ ಬೆಂಬಲಿತ ಸಂಘಟನೆಗಳ ಕರೆ ಬಹಿಷ್ಕರಿಸಿ ಮುಸ್ಲಿಮರ ಅಂಗಡಿಯ ಹಲಾಲ್‌‌ ಮಾಂಸ ಖರೀದಿಸಿದ ಸಾಹಿತಿ ದೇವನೂರ ಮಹದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...