Homeಕರ್ನಾಟಕಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗ ದಳ ಮತ್ತು ವಿಎಚ್‌ಪಿ ವಿರುದ್ಧದ ವಾಗ್ದಾಳಿಯನ್ನು ಮತ್ತೆ ಮುಂದುವರೆಸಿದ್ದು, “ಜನರನ್ನು ಒಡೆಯುವುದಕ್ಕೆ ಮಾತ್ರ ಬಜರಂಗದಳ ಮತ್ತು ವಿಹೆಚ್‌ಪಿಯವರು ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, “ಡೀಸೆಲ್-ಪೆಟ್ರೋಲ್ ಬೆಲೆ ಪ್ರತಿನಿತ್ಯ ಷೇರು ಬೆಲೆಯಂತೆ ಏರುತ್ತಲೇ ಇದೆ. ದೇಶವನ್ನೇ ಬಂಡವಾಳಶಾಹಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಭಜರಂಗದಳ ಮತ್ತು ವಿಹೆಚ್‌ಪಿಯವರು ಕೇಸರಿ ಟವೆಲ್ ಹಾಕಿಕೊಂಡು ರಸ್ತೆಗಿಳಿದು ಜನರ ಪರ ಹೋರಾಟ ನಡೆಸಿದ್ದನ್ನು ಒಂದೇ ಒಂದು ದಿನವೂ ನಾನು ಕಂಡಿಲ್ಲ. ಜನರ ಪರ ದನಿ ಎತ್ತುವುದಿಲ್ಲ, ಜನರನ್ನು ಒಡೆಯುವುದಕ್ಕೆ ಮಾತ್ರ ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಹೇಳಿದ್ದಾರೆ.

“ಬೆಲೆ ಏರಿಕೆಯಿಂದ ಜನ ನರಳುತ್ತಿದ್ದಾರೆ. ನೀವು ಬೆಲೆ ಏರಿಕೆ ವಿರುದ್ಧ ಹೋರಾಡಿ. ನಿಮಗೆ ಬೆಂಬಲ ನೀಡುತ್ತೇನೆ. ಜನಪರ ಹೋರಾಟ ಮಾಡುವುದಿಲ್ಲ ಎಂದರೆ ನೀವೇ ನಿಜವಾದ ದೇಶದ್ರೋಹಿಗಳು ಅಲ್ಲವೆ?” ಎಂದು ಕುಮಾರಸ್ವಾಮಿ ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಕರಾವಳಿಯ ಒಂದು ಶಾಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಹಲಾಲ್ ಮಾಂಸ, ಮುಸ್ಲಿಮರ ವಿರುದ್ಧ ಆರ್ಥಿಕ ಜಿಹಾದ್, ಆಜಾನ್ ಬ್ಯಾನ್‌ವರೆಗೆ ಬಂದು ನಿಂತಿದೆ. ನಾಡಿನ ಕೋಮು ಸಾಮರಸ್ಯ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್‌ಗಾಗಿ ಉರಿವ ಮನೆಯ ಗಳ ಹಿರಿಯಬೇಡಿ. ನಿಮ್ಮ ಚುನಾವಣಾ ರಾಜಕಾರಣಕ್ಕೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ದ್ವೇಷವನ್ನು ಬಿತ್ತಿ ಸಾಮರಸ್ಯ ಕೆಡಿಸಬೇಡಿ” ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವು ಕಿಡಿಕಾರಿರುವ ಕುಮಾರಸ್ವಾಮಿ, “ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಹಿಜಾಬ್ ವಿವಾದವನ್ನು ಒಂದೇ ದಿನದಲ್ಲಿ ಮುಗಿಸಬಹುದಿತ್ತು. ಹಲಾಲ್ ವಿಚಾರ ವಿವಾದವಾಗದಂತೆ ತಡೆಯಬಹುದಿತ್ತು. ಆದರೆ, ಬಿಜೆಪಿ ನಾಯಕರು ಕೋಮು ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸ್ವತಃ ಹಿಂದೆ ನಿಂತು ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ಮೂಲಕ ಸಮಾಜವನ್ನೇ ಒಡೆಯುವ ಹೇಯ ರಾಜಕಾರಣ ಮಾಡುತ್ತಿದೆ. ಯಾವ ಸರ್ಕಾರವೂ ತನ್ನ ಸ್ವಯಂ ಲಾಭಕ್ಕಾಗಿ ಈ ಹಂತಕ್ಕೆ ಇಳಿಬಾರದಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಲ್ಲಿ ಮಕ್ಕಳ ಬಾಯಲ್ಲಿ ನಾಡಗೀತೆ ಹಾಡಿಸಿ ಶಾಲೆಯ ಹೊರಗೆ ಕೋಮು ಪ್ರಚೋದನೆ ಮಾಡುವುದು ಎಷ್ಟು ಸರಿ? ದಯವಿಟ್ಟು ನಾಡಿನಲ್ಲಿ ಕುವೆಂಪು ಆಶಯವನ್ನು ಕಾಪಾಡಿ ಇಲ್ಲವೇ ನಾಡಗೀತೆಯನ್ನೇ ತೆಗೆದುಬಿಡಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪೊಲೀಸರು ನಟ ಚೇತನ್ ಟ್ವೀಟ್ ಮಾಡಿದರು ಎಂಬ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸುತ್ತಾರೆ. ಆದರೆ, ಮಟನ್ ಸ್ಟಾಲ್‌ಗಳಿಗೆ ಹೋಗಿ ಮುಸ್ಲಿಂ ಬಾಂಧವರ ಮೇಲೆ ಹಲ್ಲೆ ಮಾಡುವ, ಮುಸ್ಲಿಮರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಮಾಜ ವಿರೋಧಿಗಳನ್ನು ಏಕೆ ಬಂಧಿಸುವುದಿಲ್ಲ? ರಾಜ್ಯ ಪೊಲೀಸರಿಗೆ ತಾಕತ್ ಇದ್ದರೆ ಇಂಥವರನ್ನು ಬಂಧಿಸಲಿ” ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಹಲಾಲ್‌ ಕಟ್ ವಿರುದ್ಧ ಆರಂಭವಾಗಿರುವ ಅಭಿಯಾನದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, “ಹಲಾಲ್ ಕಟ್ಟೋ-ಜಟ್ಕಾ ಕಟ್ಟೋ? ಜನ ಏನ್ ತಿಂದ್ರೆ ನಿಮಗೇನು? ಮೊನ್ನೆ ಮೊನ್ನೆ ಯಾರೋ ಜಟ್ಕಾ ಕಟ್ ಮಾಡ್ತೀನಿ ಅಂತ ಕುರಿ ಹಿಡಿದವನ ತಲೆಗೆ ಮಚ್ಚು ಬೀಸಿದ್ದರು. ಈಗ ಜಟ್ಕಾ ಕಟ್ ಎಂದು ಮಾತನಾಡುತ್ತಿರುವವರ ತಲೆ ಹುಷಾರು. ಇಷ್ಟಕ್ಕೂ ಜನ ಏನ್ ತಿಂದರೆ ನಿಮಗೇನು?” ಎಂದು ಹೇಳಿದ್ದಾರೆ.

“ಹಳ್ಳಿ-ನಗರಗಳಲ್ಲಿ ಈಗಲೂ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಈ ಹಿಂದುತ್ವವಾದಿಗಳಿಗೆ ಸಮಸ್ಯೆ ಎದುರಾದಾಗ ಮಾತ್ರ ನಾವು ಹಿಂದುಗಳು ಎಂಬುದು ನೆನಪಾಗುತ್ತಾ? ಶ್ರೀಕೃಷ್ಣ ಮಠದಲ್ಲಿ ಕನಕದಾಸರನ್ನು ಇವರು ಹೇಗೆ ನಡೆಸಿಕೊಂಡರು ಎಂಬುದನ್ನು ಇತಿಹಾಸ ಇನ್ನೂ ಮರೆತಿಲ್ಲ. ಸಮಸ್ಯೆ ಎದುರಾದಾಗ ’ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಎನ್ನುವುದು. ಕೆಲಸ ಮುಗಿದ ಮೇಲೆ ದಲಿತನೆಂದು ಜರಿಯುವುದು ಯಾವ ಸೀಮೆಯ ರಾಜಕಾರಣ” ಎಂದು ಅವರು ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಮಾತೆತ್ತಿದರೆ ’ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್’ ಎಂದು ಹೇಳುತ್ತಾರೆ. ಆದರೆ, ಬಿಜೆಪಿಯವರು ಸಮಾಜದಲ್ಲಿ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಬಿತ್ತುತ್ತಿದ್ದಾಗ ಕಾಂಗ್ರೆಸ್ಸಿನವರೇಕೆ ಮೌನವಾಗಿದ್ದರು ಎಂಬುದು ಜಗತ್ತಿಗೆ ಗೊತ್ತಿದೆ. ಹಿಂದೂಗಳ ಮತಗಳು ಎಲ್ಲಿ ಕೈಬಿಟ್ಟು ಹೋಗುತ್ತವೋ? ಎಂಬ ಭಯದಲ್ಲಿ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು” ಎಂದು ಹೇಳಿದ್ದಾರೆ.

“ಸ್ವತಃ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ’ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮಾತನಾಡಬೇಕಿದೆ’ ಎಂದು ಹೇಳುವವರೆಗೆ ಇವರುಗಳು ಬಾಯಿಗೆ ಬೀಗ ಜಡಿದು ಕೂತಿದ್ದರು. ಈಗ ಈ ಬಗ್ಗೆ ಸರಣಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಜೆಡಿಎಸ್ ಈ ರೀತಿ ಎಂದೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮೈಸೂರು: ಬಿಜೆಪಿ ಬೆಂಬಲಿತ ಸಂಘಟನೆಗಳ ಕರೆ ಬಹಿಷ್ಕರಿಸಿ ಮುಸ್ಲಿಮರ ಅಂಗಡಿಯ ಹಲಾಲ್‌‌ ಮಾಂಸ ಖರೀದಿಸಿದ ಸಾಹಿತಿ ದೇವನೂರ ಮಹದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...