Homeಕರ್ನಾಟಕಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

ಬಜರಂಗದಳವನ್ನು ‘ದೇಶದ್ರೋಹಿ ಸಂಘಟನೆ’ ಅನ್ನದೆ ಮತ್ತೇನು ಹೇಳಬೇಕು?: ಕುಮಾರಸ್ವಾಮಿ

- Advertisement -
- Advertisement -

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಬೆಂಬಲಿತ ಸಂಘಟನೆಗಳಾದ ಬಜರಂಗ ದಳ ಮತ್ತು ವಿಎಚ್‌ಪಿ ವಿರುದ್ಧದ ವಾಗ್ದಾಳಿಯನ್ನು ಮತ್ತೆ ಮುಂದುವರೆಸಿದ್ದು, “ಜನರನ್ನು ಒಡೆಯುವುದಕ್ಕೆ ಮಾತ್ರ ಬಜರಂಗದಳ ಮತ್ತು ವಿಹೆಚ್‌ಪಿಯವರು ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಅವರು ಹೇಳಿದ್ದಾರೆ.

ಬೆಂಗಳೂರಿನ ಜೆಡಿಎಸ್ ಕಚೇರಿ, ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕುಮಾರಸ್ವಾಮಿ, “ಡೀಸೆಲ್-ಪೆಟ್ರೋಲ್ ಬೆಲೆ ಪ್ರತಿನಿತ್ಯ ಷೇರು ಬೆಲೆಯಂತೆ ಏರುತ್ತಲೇ ಇದೆ. ದೇಶವನ್ನೇ ಬಂಡವಾಳಶಾಹಿಗಳಿಗೆ ಮಾರಾಟ ಮಾಡಲಾಗುತ್ತಿದೆ. ಆದರೆ, ಭಜರಂಗದಳ ಮತ್ತು ವಿಹೆಚ್‌ಪಿಯವರು ಕೇಸರಿ ಟವೆಲ್ ಹಾಕಿಕೊಂಡು ರಸ್ತೆಗಿಳಿದು ಜನರ ಪರ ಹೋರಾಟ ನಡೆಸಿದ್ದನ್ನು ಒಂದೇ ಒಂದು ದಿನವೂ ನಾನು ಕಂಡಿಲ್ಲ. ಜನರ ಪರ ದನಿ ಎತ್ತುವುದಿಲ್ಲ, ಜನರನ್ನು ಒಡೆಯುವುದಕ್ಕೆ ಮಾತ್ರ ಬೀದಿಗೆ ಬರುತ್ತಾರೆ. ಹಾಗಾಗಿ ಅವರನ್ನು ದೇಶದ್ರೋಹಿಗಳು ಎಂದು ಹೇಳದೆ, ಮತ್ತೇನು ಹೇಳಲು ಸಾಧ್ಯ” ಎಂದು ಹೇಳಿದ್ದಾರೆ.

“ಬೆಲೆ ಏರಿಕೆಯಿಂದ ಜನ ನರಳುತ್ತಿದ್ದಾರೆ. ನೀವು ಬೆಲೆ ಏರಿಕೆ ವಿರುದ್ಧ ಹೋರಾಡಿ. ನಿಮಗೆ ಬೆಂಬಲ ನೀಡುತ್ತೇನೆ. ಜನಪರ ಹೋರಾಟ ಮಾಡುವುದಿಲ್ಲ ಎಂದರೆ ನೀವೇ ನಿಜವಾದ ದೇಶದ್ರೋಹಿಗಳು ಅಲ್ಲವೆ?” ಎಂದು ಕುಮಾರಸ್ವಾಮಿ ಸಂಘಪರಿವಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಬಜರಂಗದಳ, VHPಯವರು ಸಮಾಜಘಾತುಕರು: ಎಚ್.ಡಿ ಕುಮಾರಸ್ವಾಮಿ

“ಕರಾವಳಿಯ ಒಂದು ಶಾಲೆಯಲ್ಲಿ ಆರಂಭವಾದ ಹಿಜಾಬ್ ವಿವಾದ ಇಂದು ಹಲಾಲ್ ಮಾಂಸ, ಮುಸ್ಲಿಮರ ವಿರುದ್ಧ ಆರ್ಥಿಕ ಜಿಹಾದ್, ಆಜಾನ್ ಬ್ಯಾನ್‌ವರೆಗೆ ಬಂದು ನಿಂತಿದೆ. ನಾಡಿನ ಕೋಮು ಸಾಮರಸ್ಯ ಸಂಪೂರ್ಣವಾಗಿ ಹದಗೆಟ್ಟಿದೆ. ಮತ ಬ್ಯಾಂಕ್‌ಗಾಗಿ ಉರಿವ ಮನೆಯ ಗಳ ಹಿರಿಯಬೇಡಿ. ನಿಮ್ಮ ಚುನಾವಣಾ ರಾಜಕಾರಣಕ್ಕೆ ಸಮಾಜದಲ್ಲಿ ಹಿಂದೂ-ಮುಸ್ಲಿಂ ದ್ವೇಷವನ್ನು ಬಿತ್ತಿ ಸಾಮರಸ್ಯ ಕೆಡಿಸಬೇಡಿ” ಎಂದು ಅವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧವು ಕಿಡಿಕಾರಿರುವ ಕುಮಾರಸ್ವಾಮಿ, “ರಾಜ್ಯ ಸರ್ಕಾರ ಮನಸ್ಸು ಮಾಡಿದರೆ ಹಿಜಾಬ್ ವಿವಾದವನ್ನು ಒಂದೇ ದಿನದಲ್ಲಿ ಮುಗಿಸಬಹುದಿತ್ತು. ಹಲಾಲ್ ವಿಚಾರ ವಿವಾದವಾಗದಂತೆ ತಡೆಯಬಹುದಿತ್ತು. ಆದರೆ, ಬಿಜೆಪಿ ನಾಯಕರು ಕೋಮು ದ್ವೇಷ ಬಿತ್ತಿ ಚಳಿ ಕಾಯಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಸ್ವತಃ ಹಿಂದೆ ನಿಂತು ಭಜರಂಗದಳ ಮತ್ತು ವಿಹೆಚ್‌ಪಿ ಸಂಘಟನೆಗಳ ಮೂಲಕ ಸಮಾಜವನ್ನೇ ಒಡೆಯುವ ಹೇಯ ರಾಜಕಾರಣ ಮಾಡುತ್ತಿದೆ. ಯಾವ ಸರ್ಕಾರವೂ ತನ್ನ ಸ್ವಯಂ ಲಾಭಕ್ಕಾಗಿ ಈ ಹಂತಕ್ಕೆ ಇಳಿಬಾರದಿತ್ತು” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಶಾಲೆಗಳಲ್ಲಿ ಮಕ್ಕಳ ಬಾಯಲ್ಲಿ ನಾಡಗೀತೆ ಹಾಡಿಸಿ ಶಾಲೆಯ ಹೊರಗೆ ಕೋಮು ಪ್ರಚೋದನೆ ಮಾಡುವುದು ಎಷ್ಟು ಸರಿ? ದಯವಿಟ್ಟು ನಾಡಿನಲ್ಲಿ ಕುವೆಂಪು ಆಶಯವನ್ನು ಕಾಪಾಡಿ ಇಲ್ಲವೇ ನಾಡಗೀತೆಯನ್ನೇ ತೆಗೆದುಬಿಡಿ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.

“ಪೊಲೀಸರು ನಟ ಚೇತನ್ ಟ್ವೀಟ್ ಮಾಡಿದರು ಎಂಬ ಕಾರಣಕ್ಕೆ ಬಂಧಿಸಿ ಜೈಲಿಗೆ ಕಳುಹಿಸುತ್ತಾರೆ. ಆದರೆ, ಮಟನ್ ಸ್ಟಾಲ್‌ಗಳಿಗೆ ಹೋಗಿ ಮುಸ್ಲಿಂ ಬಾಂಧವರ ಮೇಲೆ ಹಲ್ಲೆ ಮಾಡುವ, ಮುಸ್ಲಿಮರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಸಮಾಜ ವಿರೋಧಿಗಳನ್ನು ಏಕೆ ಬಂಧಿಸುವುದಿಲ್ಲ? ರಾಜ್ಯ ಪೊಲೀಸರಿಗೆ ತಾಕತ್ ಇದ್ದರೆ ಇಂಥವರನ್ನು ಬಂಧಿಸಲಿ” ಎಂದು ಕುಮಾರಸ್ವಾಮಿ ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಲಖಿಂಪುರ್ ಖೇರಿ ಹತ್ಯಾಕಾಂಡದ ಆರೋಪಿ ವಿದೇಶಕ್ಕೆ ಪರಾರಿಯಾಗುವ ಸಾಧ್ಯತೆಯಿಲ್ಲವೆಂದ ಯುಪಿ ಸರ್ಕಾರ

ಹಲಾಲ್‌ ಕಟ್ ವಿರುದ್ಧ ಆರಂಭವಾಗಿರುವ ಅಭಿಯಾನದ ವಿರುದ್ಧವೂ ಕಿಡಿಕಾರಿರುವ ಕುಮಾರಸ್ವಾಮಿ, “ಹಲಾಲ್ ಕಟ್ಟೋ-ಜಟ್ಕಾ ಕಟ್ಟೋ? ಜನ ಏನ್ ತಿಂದ್ರೆ ನಿಮಗೇನು? ಮೊನ್ನೆ ಮೊನ್ನೆ ಯಾರೋ ಜಟ್ಕಾ ಕಟ್ ಮಾಡ್ತೀನಿ ಅಂತ ಕುರಿ ಹಿಡಿದವನ ತಲೆಗೆ ಮಚ್ಚು ಬೀಸಿದ್ದರು. ಈಗ ಜಟ್ಕಾ ಕಟ್ ಎಂದು ಮಾತನಾಡುತ್ತಿರುವವರ ತಲೆ ಹುಷಾರು. ಇಷ್ಟಕ್ಕೂ ಜನ ಏನ್ ತಿಂದರೆ ನಿಮಗೇನು?” ಎಂದು ಹೇಳಿದ್ದಾರೆ.

“ಹಳ್ಳಿ-ನಗರಗಳಲ್ಲಿ ಈಗಲೂ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದೆ. ಈ ಹಿಂದುತ್ವವಾದಿಗಳಿಗೆ ಸಮಸ್ಯೆ ಎದುರಾದಾಗ ಮಾತ್ರ ನಾವು ಹಿಂದುಗಳು ಎಂಬುದು ನೆನಪಾಗುತ್ತಾ? ಶ್ರೀಕೃಷ್ಣ ಮಠದಲ್ಲಿ ಕನಕದಾಸರನ್ನು ಇವರು ಹೇಗೆ ನಡೆಸಿಕೊಂಡರು ಎಂಬುದನ್ನು ಇತಿಹಾಸ ಇನ್ನೂ ಮರೆತಿಲ್ಲ. ಸಮಸ್ಯೆ ಎದುರಾದಾಗ ’ನಾವೆಲ್ಲಾ ಹಿಂದೂ ನಾವೆಲ್ಲಾ ಒಂದು’ ಎನ್ನುವುದು. ಕೆಲಸ ಮುಗಿದ ಮೇಲೆ ದಲಿತನೆಂದು ಜರಿಯುವುದು ಯಾವ ಸೀಮೆಯ ರಾಜಕಾರಣ” ಎಂದು ಅವರು ಬಿಜೆಪಿ ಬೆಂಬಲಿತ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.

ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ, “ಕಾಂಗ್ರೆಸ್ ನಾಯಕರು ಮಾತೆತ್ತಿದರೆ ’ಜೆಡಿಎಸ್ ಬಿಜೆಪಿ ಪಕ್ಷದ ಬಿ ಟೀಮ್’ ಎಂದು ಹೇಳುತ್ತಾರೆ. ಆದರೆ, ಬಿಜೆಪಿಯವರು ಸಮಾಜದಲ್ಲಿ ಮುಸ್ಲಿಂ ಸಮುದಾಯದವರ ವಿರುದ್ಧ ದ್ವೇಷ ಬಿತ್ತುತ್ತಿದ್ದಾಗ ಕಾಂಗ್ರೆಸ್ಸಿನವರೇಕೆ ಮೌನವಾಗಿದ್ದರು ಎಂಬುದು ಜಗತ್ತಿಗೆ ಗೊತ್ತಿದೆ. ಹಿಂದೂಗಳ ಮತಗಳು ಎಲ್ಲಿ ಕೈಬಿಟ್ಟು ಹೋಗುತ್ತವೋ? ಎಂಬ ಭಯದಲ್ಲಿ ಕಾಂಗ್ರೆಸ್ ಮೌನಕ್ಕೆ ಶರಣಾಗಿತ್ತು” ಎಂದು ಹೇಳಿದ್ದಾರೆ.

“ಸ್ವತಃ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿ ’ಮುಸ್ಲಿಮರ ವಿರುದ್ಧ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮಾತನಾಡಬೇಕಿದೆ’ ಎಂದು ಹೇಳುವವರೆಗೆ ಇವರುಗಳು ಬಾಯಿಗೆ ಬೀಗ ಜಡಿದು ಕೂತಿದ್ದರು. ಈಗ ಈ ಬಗ್ಗೆ ಸರಣಿ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಜೆಡಿಎಸ್ ಈ ರೀತಿ ಎಂದೂ ಮತಕ್ಕಾಗಿ ರಾಜಕಾರಣ ಮಾಡಿಲ್ಲ” ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹50 ₹100 ₹500 ₹1000 Others

ಇದನ್ನೂ ಓದಿ: ಮೈಸೂರು: ಬಿಜೆಪಿ ಬೆಂಬಲಿತ ಸಂಘಟನೆಗಳ ಕರೆ ಬಹಿಷ್ಕರಿಸಿ ಮುಸ್ಲಿಮರ ಅಂಗಡಿಯ ಹಲಾಲ್‌‌ ಮಾಂಸ ಖರೀದಿಸಿದ ಸಾಹಿತಿ ದೇವನೂರ ಮಹದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...