Homeನ್ಯಾಯ ಪಥರೈತರಿಗೆ ಬೇಕಿರುವುದು ನೀರು, ಬೆಲೆ - ಸಾಲ, ವಿಮೆ

ರೈತರಿಗೆ ಬೇಕಿರುವುದು ನೀರು, ಬೆಲೆ – ಸಾಲ, ವಿಮೆ

- Advertisement -
- Advertisement -

ಈ ಹೊತ್ತಿನ ಸುದ್ದಿ ಏನೆಂದರೆ ದೆಹಲಿ ಹಾಗೂ ಬೆಂಗಳೂರಿನಲ್ಲಿರುವ ಘನ ಸರಕಾರಗಳು ಪ್ರವಾಹಪೀಡಿತ ರೈತರ ಹಸಿದ ಹೊಟ್ಟೆಗೆ ತಣ್ಣೀರು ಬಟ್ಟೆ ಹಾಕೋದಕ್ಕಿಂತ `ಪೀಕು ವಿಮೆ’ (ಅಗ್ರಿಕಲ್ಚರ್ ಇನ್ಷುರನ್ಸ್) ನ ಮೊರೆ ಹೊಗತಾರಂತ.

ಇದು ಹೆಂಗ ಅಂದರ, “ಮೂರು ದಿನದಿಂದ ಕೂಳು ಕಂಡಿಲ್ಲ ಯಪ್ಪಾ, ನಮ್ಮ ಗೋಳು ಕಳಿಯೋ ದೊರಿಯೇ” ಅಂತ ರಾಜಾನ್ನ ಕೇಳಾಕ ಹೋದರ, “ನಿಮ್ಮೂರ ಸಾವುಕಾರನ ಮನಿ ಮಗಳ ಲಗ್ನ ಐತಿ, ಅಲ್ಲಿ ಉಣ್ಣು ಹೋಗರಿ” ಅಂದರಂತ, ಹಂಗ. ನಮ್ಮಿಂದ ಗೆದ್ದ ಹೋದ ಸರಕಾರ ಅನ್ನೋದು ತನ್ನ ಜವಾಬುದಾರಿ ನಿಭಾಯಿಸೋದು ಬಿಟ್ಟು ಬ್ಯಾರೆಯವರ ಮ್ಯಾಲೆ ಹಾಕಿದರ ಮಾಡೋದೇನು? ಏನು ಮಾಡಲಿಕ್ಕೆ ಆಗತೆತಿ? ಏನು ಬರತದ ಅದನ್ನ ನೋಡಿಕೋತ ಹೋಗೋದು, ಅಷ್ಟ.

ಕನ್ನಡಮ್ಮನ ಮೆಚ್ಚಿನ ಮಗನಾಗಿದ್ದ ಡಾ.ಡಿ.ಎಂ. ನಂಜುಂಡಪ್ಪ ಅವರು “ರಾಜ್ಯದ ರೈತನಿಗೆ ಬೇಕಾಗಿದ್ದು ಎರಡೇ- ಒಂದು ನೀರು ಮತ್ತೊಂದು ಬೆಲೆ. ಇಷ್ಟು ಸಿಕ್ಕರೆ ಅವನು ಬೇರೆ ಎಲ್ಲ ನೋಡಿಕೊಳ್ಳುತ್ತಾನೆ”, ಅಂತ ಹೇಳುತ್ತಿದ್ದರು. ಈ ಕಾಲದ ಅಗತ್ಯಗಳಿಗೆ ತಕ್ಕಂಗ ಅದಕ್ಕ ನಾವು `ಸುಲಭ ಸಾಲ’ ಹಾಗೂ `ಬೆಳೆ ವಿಮೆ’ ಅಂತ ಸೇರಿಸಿಗೋಬಹುದು.

ಈ ನಾಲ್ಕನ್ನ ರೈತರಿಗೆ ಕೊಡಲಿಕ್ಕೆ ಯಾವುದಾದರೂ ಬಣ್ಣದ, ಝಂಡಾದ, ಘೋಷಣೆಯ, ಪಕ್ಷದ ಸರಕಾರ ಪ್ರಯತ್ನ ಮಾಡ್ಯಾವೇನು? ಅನ್ನುವ ಪ್ರಶ್ನೆಗೆ ಜೋರು ದನಿಯಿಂದ `ಇಲ್ಲ’ ಅನ್ನೋದ ಉತ್ತರ. ಇವಿಷ್ಟರ ಒಳಗ ರಾಜಕಾರಣಿಗಳ ಹೃದಯಕ್ಕ ಹತ್ತಿರವಾಗಿರೋ ವಿಷಯ ಅಂದರ ನೀರು ಕೊಡುವುದು ಅರ್ಥಾತ್ ನೀರಾವರಿ. ಹಿಂಗಾಗಿ ಅದನ್ನ ಕಡೀಕೆ ನೋಡೋಣ. (ರಾಜಕಾರಣಿಗಳಿಗೆ ಹೃದಯ ಅದ ಏನು ಅಂತ ಕೇಳಬ್ಯಾಡಿರಿ, ಅದು ಬ್ಯಾರೆ ವಿಷಯ).

ಮೊದಲಿಗೆ ಬೆಲೆ. ಇದು ಜಾಗತಿಕ ಸಮಸ್ಯೆ. ದೇಶದಿಂದ ದೇಶಕ್ಕ ಸಾಮಾನು ಹಾಗೂ ಸೇವೆ ತಡೆ ಇಲ್ಲದ ಓಡಾಡಬಹುದು ಅಂತ ಹೇಳಿದ ಮ್ಯಾಲೆ ಇದು ಹೆಚ್ಚಾತು.

ಅದರಾಗೂನು ನಮ್ಮ ದೇಶದಾಗ ಮನಮೋಹನಾಮಿಕ್ಸ್ ಶುರು ಆದಮ್ಯಾಲೆ ಅಂತೂ ಇದು ಇನ್ನೂ ಹೆಚ್ಚಾಗೇದ. ಒಂದು ಕಡೆ ಸಮಸ್ಯೆ ಆದರ ಇನ್ನೊಂದು ಕಡೆನೂ ಹಬ್ಬೋ ಹಂಗ. ಒಂದು ಕಡೆ ಗಾಯ ಆದರ ಅದರ ರಸಾ ಸೋರಿ ಇನ್ನೊಂದು ಕಡೆ ಹುಣ್ಣು ಆಗತದಲ್ಲಾ ಹಂಗ. ಇವೆಲ್ಲಾ ನಮ್ಮ ಬಡ ಬೋರೇಗೌಡನಿಗೆ ತಿಳಿಯಂಗಿಲ್ಲಾ. ಯಾವ ದೇಶದಾಗ ಚುನಾವಣೆಗೆ ಮುಂಚೆ ಹುದ್ದರಿಗಳು ನಮ್ಮ ಚಿನ್ನೆ ಕೈ, ಹೂವು ಅಲ್ಲ. ನಮ್ಮ ಕೈ ಹುಲ್ಲಿನ ಹೊರೆ ಹೊತ್ತ ನಿಮ್ಮಂತಾ ಮಹಿಳೆ, ಕೈ ಅಲ್ಲಾ, ಅಂತ ಪ್ರತಿ ಐದು ವರ್ಷಕ್ಕೊಮ್ಮೆ ಹೇಳಿ ಕೊಡಬೇಕಾಗತದೋ, ಆ ದೇಶದಾಗ “ದಕ್ಷಿಣ ಅಮೇರಿಕಾದಾಗ ಬಹಳ ಸೋಯಾ ಬೆಳದಿದ್ದಕ್ಕ ನಮ್ಮಲ್ಲಿ ರೇಟು ಬಿದ್ದದ” ಅಂತ ಹೇಳಲಿಕ್ಕೆ ಆಗತದೇನು?

ಬ್ಯಾರೆ ಬ್ಯಾರೆ ದೇಶದಾಗ ಇದಕ್ಕ ಬ್ಯಾರೆ ಬ್ಯಾರೆ ಉತ್ತರ ಕಂಡುಕೊಂಡಾರ. ನಮ್ಮಲಿನೂ ಪ್ರಯತ್ನ ನಡದಾವು. ಆದರ ಅವು ಲಾಟರಿ ಇದ್ದಂಗ. ಬಂದರ ಬಂತು, ಹೋದರ ಹೋತು. ಬೀಜ ಬಿತ್ತೋಕ್ಕಿಂತಾ ಮುಂಚೆ ಬೆಳೀ ಬೆಲೆ ತಿಳಕೊಳ್ಳೋ ಹಂಗ ಏನಾದರೂ ಮಾಡಲಿಕ್ಕೆ ಸಾಧ್ಯ ಆದರ ಅದರಂಥಾದು ಮತ್ತೊಂದಿಲ್ಲ. ಇಡೀ ಜಗತ್ತಿಗೇ ಹೊಸ ತಂತ್ರಜ್ಞಾನ ಕೊಡೋ ಐಟೀ ಘಟಗಳು, ಇಪ್ಪತ್ತು- ಮೂವತ್ತು ಉಪಗ್ರಹ ಒಟ್ಟಿಗೇ ಹಾರಿಸುವ ಇಸ್ರೋ, ಹತ್ತು ಸಾವಿರ ಜನ ನೂರು ವರ್ಷದೊಳಗ ಮಾಡೋ ಲೆಕ್ಕಾ ಒಂದು ಕ್ಷಣದಾಗ ಮಾಡೋ ಸುಪರ್ ಕಂಪ್ಯೂಟರ್ ತಯಾರು ಮಾಡಿದ ನಮ್ಮ ವಿಜ್ಞಾನಿಗಳು ಇದನ್ನ ಮಾಡಲಾರರೇನು? ಇಂತಹ ದೊಡ್ಡ ಪ್ರಶ್ನೆಗೆ ಉತ್ತರವನ್ನ ದೊಡ್ಡ ಸ್ಥಾನದಾಗ ಇರೋರು ತಮಗ ತಾವ ಕೇಳಿಕೊಳ್ಳಬೇಕು.

ಇನ್ನು ಸಾಲ. ಯಾವ ದೇಶದಲ್ಲಿ 8.5 ಲಕ್ಷ ಸಹಕಾರಿ ಸಂಸ್ಥೆಗಳು ಮತ್ತ 2,000 ಕ್ಕೂ ಹೆಚ್ಚು ಬ್ಯಾಂಕುಗಳು ಇದ್ದಾವೋ ಆ ದೇಶದಲ್ಲಿ ಸಾಲ ಸುಲಭವಾಗಿರದೇ ಕಷ್ಟವಾಗಿರಬಾರದಿತ್ತು. ಆದರ ಅದು ಹಂಗಿಲ್ಲ. ಯಾಕ? ಎಲ್ಲೆ ತಪ್ಪ ಐತಿ? ಸಹಕಾರಿಗಳ ರಾಜಕೀಕರಣ ಅಥವಾ ರಾಜಕಾರಣಿಗಳ ಸಹಕಾರೀಕರಣದಿಂದಾಗಿ ತಪ್ಪಾಗೇತಿ ಅಂತ ಕೆಲವರು ವಾದಸಾಕ ಹತ್ಯಾರ. ಹೌದೇನು? ಇದರಿಂದ ರೈತರು ದಲ್ಲಾಳಿಗಳ ಕೈಯೊಳಗ ಸಿಗಲಾರದ ಹಂಗ ಮಾಡಿ, ರೈತರಿಗೆ ಬೆಲೆ ಸಿಗಬಹುದು ಅನ್ನೋ ಉದ್ದೇಶದಿಂದ ಶುರು ಮಾಡಿದ ಭಾರತೀಯ ಸರಕು ವಿನಿಮಯ ಕೇಂದ್ರ (ಕಮಾಡಿಟಿಸ್ ಎಕ್ಸಚೇಂಜ್) ಯಾಕ ಬೇಕಾಗಿದ ಕೆಲಸ ಮಾಡವಲ್ಲತು? ಅದು ಭಾರತದ ಸರ್ವ ದಲ್ಲಾಳಿಗಳ ಶಕ್ತಿ ಕೇಂದ್ರ ಆಗಿಬಿಟ್ಟಿದ್ದು ಹೆಂಗ ಅಂತ ಯಾರರ ವಿಚಾರ ಮಾಡಾಕ ಹತ್ಯಾರೇನು?

ಭಾರತದಿಂದ ಹೋದ ತಜ್ಞರು ಇಡೀ ವಿಶ್ವಕ್ಕೆ ಇಂಥಾ ವಿಷಯಗಳ ಬಗ್ಗೆ ಸಲಹೆ ಕೊಡಲಿಕ್ಕೆ ಹತ್ಯಾರ. ಹಂಗಾರ ನಮಗ ಯಾಕ ಕೊಟ್ಟಿಲ್ಲ? ಅವರು ನಮ್ಮ ದೇಶದಾಗ ಯಾಕ ನಿಲ್ಲವಲ್ಲರು? ಇಲ್ಲೇ ನಿಂತವರು ಯಾಕ ನಮಗೇನೂ ಹೇಳವಲ್ಲರು? ಇದರ ಬಗ್ಗೆ ಸಹ ಚರ್ಚೆ ಆಗಬೇಕಾಗೇದ.

ಇನ್ನು ಬೆಳೆ ವಿಮೆ, ಕೃಷಿ ವಿಮೆ ಅಥವಾ ಪೀಕು ವಿಮೆ. ಬೆಳೆ ವಿಮೆ ಅಂತಿದ್ದದ್ದನ್ನ ಕೇಂದ್ರದ ಅಧಿಕಾರಿಗಳು ಕೃಷಿ ವಿಮೆ ಅಂತ ಮಾಡ್ಯಾರ. ಯಾಕೋ ಗೊತ್ತಿಲ್ಲ. ಹಂಗ ಜನತಾ ಜನಾ ಆರ್ ದನಾ ರಿಗೆ ಗೊತ್ತಾಗದಂಥಾವು ಈ ಸರಕಾರದಾಗ ಭಾಳ ಅವ. ಹೋಗಲಿ ಬಿಡರಿ.

ಖರೆ ಅಂದರೆ ಅದು ಪೀಕು ವಿಮೆ. ಅಂದರ ರೈತರ ಹತ್ತರ ರೊಕ್ಕ ಪೀಕಿ ಆಮ್ಯಾಲೆ ಕೇಳಾಕ ಹೋದರ ತೊಗೋರಿ ಈ ಪೀಪೀ, ಊದರಿ ಪುಂಗಿ ಅಂತ ಕೊಡತಾರಲ್ಲಾ ಅದಕ್ಕ.

ರೈತರ ಕಲ್ಯಾಣ ಆಗಬೇಕು ಅಂತ ಮಾಡಿದ ಈ ಸಂಸ್ಥಾ ರೈತರನ್ನು ಬಿಟ್ಟು ವಿಮಾ ಕಂಪನಿಗಳ ಕಲ್ಯಾಣ ಕ್ಕ ನಿಂತು ಬಿಟ್ಟದ್ದು ಯಾಕ?

ಮೊದಲನೇದಾಗಿ ನೂರರಾಗ ಬರೇ ಮೂವತ್ತು ಮಂದಿ ಅಷ್ಟ ವಿಮಾದಾಗ ಬರತಾರ. ಅದೂ ಅವರು ಶೇಕಡಾ ಒಂದು ರೊಕ್ಕ ಕೊಟ್ಟಿದ್ದರ. ಇಲ್ಲಾ ಸಾಲಾ ತೊಗೊಂಡಿದ್ದರ. ಇನ್ನ ಅದರ ಪರಿಹಾರ ಅವರ ನಷ್ಟ ಭರ್ತಿಗೆ ಸಾಕಾಗಂಗಿಲ್ಲ. ಮುಂದಿನ ಪೀಕಿನ ಖರ್ಚು ಕಳಿಲಿಕ್ಕೆ ಅವರಿಗೆ ಸಾಕಾಗತದ ಅಷ್ಟ. ವಿಮಾ ಕಂಪನಿಗಳು ನೂರು ರೂಪಾಯಿ ರೈತರು ಹಾಗೂ ಸರಕಾರದ ಕಡೆ ಇಸಗೊಂಡು 73 ರೂಪಾಯಿ ರೈತರಿಗೆ ಕೊಟ್ಟಾವು. ಅತ್ಯಂತ ಘೋರ ಬರಗಾಲ, ಪ್ರವಾಹದಾಗ ಸಹ ಅವರು ಕೊಡೋ ಮೊತ್ತ ಹೆಚ್ಚಾಗಿಲ್ಲ. ಇನ್ನ ನಮ್ಮ ಸರಕಾರ ಕಣ್ಣೀರಿನ್ಯಾಗ ಕೈ ತೊಳಕೊಂಡು ಗೋವಾಕ್ಕ ದುಡೀಲಿಕ್ಕೆ ಹೊಂಟಿರೋ ನಮ್ಮ ಉತ್ತರ ಕರ್ನಾಟಕದವರಿಗೆ ಅವರ ಬೆಳೆ ನಷ್ಟ ಪರಿಹಾರ ಮಾಡದೇ ಕಂಪನಿಗಳಿಗೆ ಹೇಳಿದರ ಯಾರನ್ನು ಅನ್ನೋಣು, ಯಾರನ್ನ ಬಿಡೋಣು?

ನೀರಾವರಿಯ ಬಗ್ಗೆ ಹೇಳಿದಷ್ಟೂ ಉಳೀತದ. ಅರವತ್ತರ ದಶಕದಾಗ ಇರೋ ಸಂಪನ್ಮೂಲ ಎಲ್ಲಾ ಡ್ಯಾಮುಗಳಿಗೆ ಹಾಕ್ರಿ. ಒಂದು ಸತೆ ನೀರಾವರಿ ಬಂತೂ ಅಂದರ ರೈತರು ಸುಬಧ್ರರಾಗತಾರ, ನಾಡು ಸುಭಿಕ್ಷ ಆಗತದ, ಬಡತನ ಹೋಗಿರತದ, ನಮ್ಮ ಆದಾಯನೂ ಹೆಚ್ಚು ಆಗತದ, ಇದ್ದ ಸಂಪನ್ಮೂಲ ಬ್ಯಾರೆ ಕಡೆ ಹಾಕಬಹುದು, ಅಂತ ನಮ್ಮ ದೇಶದ ಆರ್ಥಿಕ ತಜ್ಞರು ಹಾಗೂ ಪಂಚವಾರ್ಷಿಕ ಯೋಜನೆಗಳ ಕರ್ತಾರರು ನಿರ್ಧಾರ ಮಾಡಿದರಂತ. ಅದಕ್ಕ ಇತರ ಮೂಲಸೌಕರ್ಯಗಳಿಗಿಂತ ನೀರಾವರಿಗೆ ಹೆಚ್ಚಿನ ಬಜೆಟ್ಟಿನ ಬೆಂಬಲ ಸಿಗ್ತು. ಲಗೂ ನಿರ್ಣಯ ತಗೋಳೋ ಅನುಕೂಲ ಇರಲಿ ಅಂತ ಹೇಳಿ ನೀರಾವರಿ ಇಲಾಖೆ ವಿಕೇಂದ್ರೀಕರಣ ಆಗಲಿಲ್ಲ. ಆದರ 50 ವರ್ಷಗಳ ಅಂಧಾದುಂದಿ ಖರ್ಚಿನ ನಂತರ ಏನಾಗೇದ? ನೀರಾವರಿ ಪ್ರದೇಶ ಕೇವಲ 10 ಶೇಕಡಾ ಹೆಚ್ಚಾಗೇದ. ದೊಡ್ಡ ನೀರಾವರಿ ಯೋಜನೆಗಳಿಂದ ಮುಳುಗಡೆ, ಪ್ರವಾಹ ಮುಂತಾದ ಸಮಸ್ಸೆಗಳು ಹೆಚ್ಚಾಗ್ಯಾವು. ಬಡವರ ಬಸಿದ ಸುಂಕದಿಂದ ಕಟ್ಟಿಡ ಡ್ಯಾಮಿನ್ಯಾಗ ಹೂಳು ಹಾಗೂ ಸ್ಥಳೀಯ ರಾಜಕಾರಣಿ ರಾಜ್ಯ- ರಾಷ್ಟ್ರಮಟ್ಟಕ್ಕೆ ಬೆಳೆದ ರಹಸ್ಯದ ಧೂಳು ಮಾತ್ರ ತುಂಬೇದ. ರೈತರು ಅಭದ್ರರಾಗಿ, ನಾಡು ದುರ್ಭಿಕ್ಷ ವಾಗೇ ಉಳಿದದ.

ಸಾವಿರಾರು ಎಕರೆ ಮುಳುಗಿಸಿ ನೂರಾರು ಎಕರೆಗೆ ನೀರು ಹರಿಸುವ ದೊಡ್ಡ ಯೋಜನೆಗಳ ಮೇಲೆ ಕಣ್ಣು ಹರಿಸದೇ ಜಪಾನು ದೇಶದಂಗ ಕಮ್ಮೀ ಖರ್ಚಿನ ಸಣ್ಣಸಣ್ಣ ಯೋಜನೆಗಳನ್ನ, ಸ್ಥಳೀಯ ರೈತರ ಮೆಹರಬಾನಿಕೆಯೊಳಗ ನೀಟಾಗಿ ಮಾಡಿದ್ದರ ಹಳ್ಳೀ ಆರ್ಥಿಕತೆ ಕುಂಡದಾಗ ಹೂಬೆಳೆಸಿದಂಗ ನೀಟಾಗಿ ಇರ್ತಿತ್ತು. ಮರಿ ಪುಢಾರಿಗಳು ತಿಮಿಂಗಿಲುಗಳಾಗುವ ಸಾಧ್ಯತೆ ಕಮ್ಮಿ ಇರ್ತಿತ್ತು. ಆ ಅವಕಾಶ ಕಳಕೊಂಡೇವಿ ಅನ್ನಸಂಗಿಲ್ಲೇನು, ಮನೋಲ್ಲಾಸಿನಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...